ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು ತಕ್ಷಣವೇ ವಾಹನದ ಮೂಲಕ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ  ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳ‌ರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ ರವೀಂದ್ರನಾಥ ನಾಯ್ಕ ಹಾಗೂ ಸಿದ್ದಾಪುರ ಮೂಲದ ಕಾರವಾರದಲ್ಲಿ ನ್ಯಾಯವಾದಿಗಳಾಗಿರೋ ಜಿ ಟಿ ನಾಯ್ಕ ಸೇರಿದಂತೆ ಪ್ರಮುಖರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.ಆದರೆ ಪಕ್ಷದ ಹೈಕಮಾಂಡ ಅಂಜಲಿ ನಿಂಬಾಳ್ಳರ್‌ ಅವರನ್ನ ಕಣಕ್ಕಿಳಿಸಿದೆ. ಸದ್ಯ ಕೆನರಾ ಲೋಕಸಭಾಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರೆ ಇರುವುದು ಅಭ್ಯರ್ಥಿಗೆ ಗೆಲುವಿನ ದಡ ಸೇರಿಸತ್ತಾ..? ಜೂನ್ 4 ರಂದೇ ತಿಳಿಯಲಿದೆ.

ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!

ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!

ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ‌ ಮಾಹಿತಿ ಪ್ರಕಾರ ಇವತ್ತಿನ ಮೊದಲ ದಿನದ ಮಾರಿಕಾಂಬಾ ಜಾತ್ರೆಯಲ್ಲಿ ಏನಿಲ್ಲವೆಂದರೂ 10ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಾಗಿವೆ. ಆದ್ರೆ, ಅವೇಲ್ಲ ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ಕೆಲವು ಮಾತ್ರ ಪೊಲೀಸರ ಗಮನಕ್ಕೆ ಬಂದಿದೆ. ಅದ್ರಲ್ಲಿ, ನಾಲ್ಕೈದು ಚಿನ್ನದ ಸರಗಳ್ಳತನ, ಮೊಬೈಲ್ ಕಳ್ಳತನ ನಡೆದು ಹೋಗಿದೆ ಎನ್ನಲಾಗ್ತಿದೆ. ಆದ್ರೆ, ರಾಜ್ಯದ ಪ್ರಸಿದ್ಧ ಜಾತ್ರೆಯೊಂದರಲ್ಲಿ ಮೊದಲ ದಿನವೇ ಇಂತಹ ಘಟನೆಗಳು ಈ ಪರಿಯಲ್ಲಿ ನಡೆದಿದೆ ಅಂದ್ರೆ ಏನಯ್ಯಾ ಗತಿ ಅಂತಾ ಭಕ್ತರು ಪ್ರಶ್ನಿಸ್ತಿದಾರೆ....

ಮುಂಡಗೋಡಿಗೆ ನೂತನ ಸಿಪಿಐ ಯಾರು ಗೊತ್ತಾ..? ಇವತ್ತೇ ಅಧಿಕಾರ ಸ್ವೀಕಾರ ಫಿಕ್ಸ್..!

ಮುಂಡಗೋಡಿಗೆ ನೂತನ ಸಿಪಿಐ ಯಾರು ಗೊತ್ತಾ..? ಇವತ್ತೇ ಅಧಿಕಾರ ಸ್ವೀಕಾರ ಫಿಕ್ಸ್..!

ಮುಂಡಗೋಡ ನೂತನ ಸಿಪಿಐ ಆಗಿ ರಂಗನಾಥ್ ನೀಲಮ್ಮನವರ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತಿಚೆಗಷ್ಟೇ ಪದೋನ್ನತಿ ಹೊಂದಿ ಇಲ್ಲಿಂದ ವರ್ಗಾವಣೆಗೊಂಡ ಬಿ.ಎಸ್.ಲೋಕಾಪುರ ಸ್ಥಾನಕ್ಕೆ ರಂಗನಾಥ್ ನೀಲಮ್ಮನವರ್ ನೇಮಕಗೊಂಡಿದ್ದಾರೆ. ಅಂದಹಾಗೆ, ಈ ಮೊದಲು ಯಲ್ಲಾಪುರ ಠಾಣೆಯಲ್ಲಿಯೂ ಕಾರ್ಯನಿರ್ವಹಿಸಿದ್ದ ನೀಲಮ್ಮನವರ್, ಕಾರವಾರದ ಸೈಬರ್ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಮುಂಡಗೋಡ ಠಾಣೆಗೆ ನಿಯುಕ್ತಿಗೊಂಡು ಆಗಮಿಸಲಿದ್ದಾರೆ. ಇವತ್ತು ಬಹುತೇಕ ಮುಂಡಗೋಡ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..!  ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?

ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?

ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ ಬಡಕೊಂಡ್ರೂ ಪಾಪ ಆ ಪತಿಯ ಆತ್ಮದ ಮೂಕ ರೋಧನ ಯಾರಂದ್ರೆ ಯಾರಿಗೂ ಕೇಳಿಸಿರಲೇ ಇಲ್ಲವಂತೆ, ಆದ್ರೆ, ಸದ್ಯ ಅದೊಂದು ಸಮಾಜದ ಮುಖಂಡರೇ ನಿಂತು ಭಯಾನಕ ಕೇಸನ್ನು ಬಟಾಬಯಲು ಮಾಡಿದ್ದಾರೆ ಅಂತಾ ಜನ ಮಾತಾಡಿಕೊಳ್ತಿದಾರೆ. ಈ ಮೂಲಕ ನಮ್ಮ ಮುಂಡಗೋಡ ಪೊಲೀಸರೂ ಕೂಡ ತಲೆ ಕೆಡಿಸಿಕೊಳ್ಳದೇ ಸಹಜ ಸಾವು ಅಂತ ಕೈ ತೊಳೆದುಕೊಂಡಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಕೊಟ್ಟಿದ್ದಾರಂತೆ. ಅಷ್ಟಕ್ಕೂ ಏನಾಯ್ತು..? ಈಗ್ಗೆ ಸುಮಾರು...

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟೂ ಇಡೀ ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದ್ರಲ್ಲಿ ಕರ್ನಾಟಕದಲ್ಲಿ ಎಪ್ರಿಲ್ 26 ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಮೇ 7 ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಸುದ್ದಿಗೋಷ್ಟಿಯ ಮೂಲಕ ಹೊರಬಿದ್ದಿದೆ.

ಬಸಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ಆಸ್ಪತ್ರೆಗೆ ದಾಖಲು..!

ಬಸಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಸಾಪುರ ಗ್ರಾಮದ ಅರುಣ್ ಸಿಂಗ್ ರಜಪೂತ್ (24) ಎಂಬುವ ಯುವಕನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಯುವಕನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ

ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ ಬರದ ಹಿನ್ನೆಲೆ ಸಾಲ ತೀರಿಸುವ ಚಿಂತೆ ಶುರುವಾಗಿತ್ತು. ಹೀಗಾಗಿ, ತನ್ನ ಗದ್ದೆಯಲ್ಲೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಹಾರವಳ್ಳಿ‌‌ ಗ್ರಾಮದ ಹತ್ತಿರ ಮಾಜಿ ಶಾಸಕ‌ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ‌ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಹೆಚ್ಚು ಗಾಯ- ನೋವುವಾಗಿಲ್ಲ. ತಕ್ಷಣವೇ ಮಾಜಿ ಶಾಸಕರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗನ‌ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಮಂಗನ‌ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಶಿರಸಿ: ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಾಸಗಿ ಸಂಸ್ಥೆಗಳು ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

error: Content is protected !!