ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಈ ವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಈಗ್ಗೆ ಕೆಲವೇ ಹೊತ್ತಿನಲ್ಲಿ ಸಂಜೆ 5 ಗಂಟೆ ವೇಳೆಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್ಯಾಕ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳಗೆ ಇನ್ನು ಹಲವರ ಶವಗಳು ಇರಬಹುದು ಎಂದು ಶಂಕಿಸಲಾಗಿದೆ. ಪರಿಶೀಲನೆಯ ಕಾರ್ಯ ಮುಂದುವರೆದಿದ್ದು, ಗೋದಾಮಿನ ಒಳಗಡೆ ನಾಲ್ವರ ಇದ್ದರೆಂದು ಹೇಳಲಾಗುತ್ತಿದೆ. ಭೀಕರ ಘಟನೆಯಲ್ಲಿ ಸಾವನ್ನಪ್ಪಿದವರನ್ನು ತಾಲೂಕಿನ ಕಾಟೇನಹಳ್ಳಿ ಗ್ರಾಮದ ಕಾರ್ಮಿಕರೆಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರ ಶೋಕಸಾಗರದಲ್ಲಿದ್ದಾರೆ. ಮೂವರ ಶವಗಳನ್ನು ಸದ್ಯಕ್ಕೆ ಹಾವೇರಿಯ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಗೋದಾಮಿನ ಪೂರ್ಣಪ್ರಮಾಣದ ಪರಿಶೀನೆ ಮುಕ್ತಾಯದ ನಂತರ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಷ್ಟು...
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ: ಮೂವರ ಜೀವಂತ ದಹನ, ಇನ್ನೂ ಹಲವರು ಸಾವು ಶಂಕೆ..!
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ ಹೆಬ್ಬಾರ್ ಪಡೆಯ ಅಂಗಳದಲ್ಲಿ ನಾಜೂಕಿನ ಪ್ರತ್ಯುತ್ತರಗಳು ಸಿಗುತ್ತಿವೆ. ಇಂತಹದ್ದೊಂದು ರೂಮರ್ರುಗಳು ಹೆಚ್ಚೆಚ್ಚು ಹರಡಿದಷ್ಟು ಹೆಬ್ಬಾರ್ ಪಡೆಗೆ ಕ್ಷೇತ್ರದ ಜನರ ಮನಸ್ಥಿತಿ ಅರಿಯಲು ಸಾಧನವಾಗುವಂತಿದೆ ಅಷ್ಟೆ. ಆದ್ರೆ, ಅದರಾಚೆಗಿನ ಹಕೀಕತ್ತುಗಳು, ಲಾಭ ನಷ್ಟಗಳ ಗುಣಾಕಾರಗಳು, ಭಾಗಾಕಾರಗಳು ಒಳಗೊಳಗೇ ಸಮೀಕರಣಗೊಳ್ಳುತ್ತಿವೆ. ರಾಜಕೀಯ ಚಾಣಾಕ್ಷತೆಯಲ್ಲಿ ಲೆಕ್ಕ ಹಾಕ್ತಿರೋ ಶಿವರಾಮ್ ಹೆಬ್ಬಾರ್ ತಮ್ಮದೇ ಆದ ದಾರಿಯಲ್ಲಿ ಈಗಾಗಲೇ ಎಲ್ಲ ಮಜಲುಗಳ ಬ್ಲ್ಯೂ ಪ್ರಿಂಟ್ ರೆಡಿ ಮಾಡಿಕೊಂಡು ಆಗಿದೆಯಂತೆ. ಡಿಸೆಂಬರ್...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು. ಆ ಹೊತ್ತಲ್ಲಿ ಮತ್ತೋರ್ವ ಅಡುಗೆ ಸಹಾಯಕಿ ಪಾರ್ವತಿ ಎಂಬುವರ ಜೊತೆ ಸೇರಿ ಸಾಂಬಾರ ಪಾತ್ರೆ ತರುವಾಗ ಅನ್ನಪೂರ್ಣ ಕಾಲು ಜಾರಿ ಬಿದ್ದಿದ್ದಳು. ಹೀಗಾಗಿ, ಬಿಸಿ ಸಾಂಬಾರ ಅವರ ಮೈ ಮೇಲೆ ಬಿದ್ದಿತ್ತು. ಪರಿಣಾಮ, ಅವರ ದೇಹವು ತೀವ್ರ ಸುಟ್ಟು ಗಾಯವಾಗಿತ್ತು. ತಕ್ಷಣವೇ ಗಾಯಗೊಂಡ ಅಡುಗೆ ಸಹಾಯಕಿಯನ್ನು ತಾಲೂಕಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ,...
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!
ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಅಳವಡಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಮರ್ಪಕ ಸಿಸಿಟಿವಿಗಳನ್ನು ಅಳವಡಿಸುವುದು, ಅಲ್ಲದೇ, ದಿನದ 24 ಗಂಟೆಯೂ ಕಾವಲುಗಾರರನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಜಾಗೃತ ಗಂಟೆಗಳನ್ನು ಅಳವಡಿಸಿ, ರಾತ್ರಿ ಹೊತ್ತಿನಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡುವ ಕುರಿತು ತಿಳಿಸಿದ್ದಾರೆ. ಇದರಿಂದ ಕಳ್ಳರ ಕೈಚಳಕ ತಡೆಗಟ್ಟುವಲ್ಲಿ ಮಹತ್ತರ ಕ್ರಮ ಕೈಗೊಳ್ಳುವಂತಾಗುತ್ತದೆ ಅಂತಾ ಜಾಗ್ರತಿ ಮೂಡಿಸಿದ್ದಾರೆ. ಜ್ಯುವೇಲ್ಲರ್ಸ್ ಗೆ ಸೂಚನೆ..! ಇನ್ನು ಬಹುತೇಕ ಕಳ್ಳರ ಕೈಚಳಕಕ್ಕೆ...
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!
ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ ಹತ್ತಿರ, ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪರಿಣಾಮ, ಬರೋಬ್ಬರಿ 12 ಜನರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ, ನಾಲ್ಕು ಆರೋಪಿಗಳು ಮಾತ್ರ ಪೊಲೀಸರಿಗೆ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ. ಇನ್ನು ಆಟದಲ್ಲಿ ಬಳಸಿದ್ದ ಬರೋಬ್ಬರಿ 10,940 ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಹಳೂರಿನಲ್ಲಿ..! ಇನ್ನು, ಮುಂಡಗೋಡ ಪಟ್ಟಣದ ಹಳೂರಿನ ಲಕ್ಷ್ಮೀದೇವಿ ದೇವಸ್ಥಾನದ ಪಕ್ಕದಲ್ಲಿ ಇಸ್ಪೀಟ ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು...
ಮುಂಡಗೋಡ ಲೊಯೊಲಾ ಶಾಲೆಯ ಬಳಿ ಸರಣಿ ಅಪಘಾತ, ಚಿಟಗೇರಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೋಲಾ ಶಾಲೆಯ ಬಳಿ ಸರಣಿ ಅಪಘಾತವಾಗಿದೆ. ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಸಿದ್ದಪ್ಪ ಯಮುನಪ್ಪ ನಾಯ್ಕರ್ (45), ಎಂಬುವವನೇ ಗಂಭೀರ ಗಾಯಗೊಂಡಿ ವ್ಯಕ್ತಿಯಾಗಿದ್ದಾನೆ. ಮುಂಡಗೋಡಿನಿಂದ ಬೈಕ್ ಮೇಲೆ ಶಿರಸಿ ಮಾರ್ಗವಾಗಿ ಚಿಟಗೇರಿಗೆ ಹೋಗುತ್ತಿದ್ದ ವೇಳೆ, ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕಿಗೆ ಗುದ್ದಿ, ಆ ನಂತರ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಇನ್ನು, ಮಾಹಿತಿ ತಿಳಿದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ, ಗಾಯಾಳುವಿಗೆ ಮಾರ್ಗ ಮಧ್ಯೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆ ಗೆ 108 ಅಂಬ್ಯುಲೆನ್ಸ್ ಮುಖಾಂತರ ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ ಬೇಡಿಕೆಗಳನ್ನ ಒಪ್ಪಿಕೊಳ್ಳತ್ತಾ..? ಹಾಗಿದ್ರೆ, ಬರುವ ಲೋಕಸಭಾ ಚುನಾವಣೆ ಹೊತ್ತಿಗೆ ಇಡೀ ಕ್ಷೇತ್ರದ ಚಿತ್ರಣವೇ ಬದಲಾಗಿ ಬಿಡತ್ತಾ..? ಒಳಗೊಳಗಿನ ಬಾತ್ಮಿಗಳು ಏನಿದೆ..? ಇದೇಲ್ಲದರ ಕುರಿತಾಗಿ ವರದಿ ಇದು. ಭವಿಷ್ಯದ ಚಿಂತೆಯಾ..? ಯಸ್, ಸದ್ಯ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಗೆ ಮುಂದಿನ ರಾಜಕೀಯ ಭವಿಷ್ಯದ ಚಿಂತೆ ಶುರುವಾಗಿದೆ. ತಮ್ಮ ಜೊತೆ, ತಮ್ಮ ಸುಪುತ್ರನ ರಾಜಕೀಯ ಕಣ ಹದಗೊಳಿಸುವ ಯೋಚನೆ ತಲೆ ಹೊಕ್ಕಿದೆ. ಹೀಗಾಗಿನೇ ಬಹುತೇಕ...
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!
ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿರೋ ಮುಂಡಗೋಡ ಪೊಲೀಸರು ಶವ ಹೊರತೆಗೆದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ. ನಿಜಕ್ಕೂ ಸಾಧ್ಯವಾ..? ಅಸಲು, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಸದ್ಯ ಪ್ರಬಲವಾಗಿಯೇ ಮುನ್ನಡೆಸ್ತಿರೋ ಶಾಸಕ ಶಿವರಾಮ್ ಹೆಬ್ಬಾರ್, ಇಂತಹದ್ದೊಂದು ಪಕ್ಷಾಂತರದ ತೀರ್ಮಾನ ಕೈಗೊಳ್ಳೊಕೆ ಸಾಧ್ಯವಾ..? ಇಂತಹ ಪ್ರಶ್ನೆಗಳು ಸಹಜವಾಗೇ ಕಾಡ್ತಿವೆ. ಇಡೀ ರಾಜ್ಯದಲ್ಲೇ ಕಾಂಗ್ರೆಸ್ ಗಾಳಿ ಬೀಸಿ, ಗೆಲ್ಲೋದೇ ಅನುಮಾನ ಅನ್ನೊ ವಾತಾವರಣ ಇದ್ದಾಗಲೇ ಗೆದ್ದು ಬಂದವರು ಹೆಬ್ಬಾರ್. ಕ್ಷೇತ್ರದಲ್ಲಿ ಅದೇಂತದ್ದೇ ವಾತಾವರಣ ಇದ್ರೂ ನಾನು ಗೆಲ್ಲೋದೇ ಫಿಕ್ಸು ಅಂತ ಎದೆ ತಟ್ಟಿ ಹೇಳುವ...