ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದ ಡಾ.ಅಂಜಲಿ ನಿಂಬಾಳ್ಕರ್, ಈಗಾಗಲೇ ಬ್ಲಾಕ್ ಮಟ್ಟದ ಸಭೆಗಳನ್ನ ಪೂರ್ಣಗೊಳಿಸಿ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ನಡೆಸುತ್ತಿದ್ದಾರೆ. ಸತತವಾಗಿ ವಿರಾಮವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ವೈದ್ಯಕೀಯ ತಪಾಸಣೆಗೆ ಒಳಗಾಗಿ ವೈದ್ಯಕೀಯ ಉಪಚಾರ ಪಡೆದಿರುವ ಅವರು, ವಾಸ್ತವ್ಯ ಹೂಡುವ ಸ್ಥಳದಲ್ಲೇ ಸಲೈನ್ (ಡ್ರಿಪ್ಸ್) ಹಚ್ಚಿಕೊಂಡು ಪ್ರಚಾರ ಕಾರ್ಯಗಳನ್ನ ಮುಂದುವರಿಸಿದ್ದಾರೆ. ಕೈನಲ್ಲಿ ಸಲೈನ್ನ ಕ್ಯಾನುಲಾ (ಸೂಜಿ) ಇಟ್ಟುಕೊಂಡೇ ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದಿರುವ ಡಾ.ಅಂಜಲಿಯವರ ಬದ್ಧತೆ ಕಾರ್ಯಕರ್ತರಲ್ಲೂ ಹುರುಪು ತಂದಿದೆ. ಕೆಲವೆಡೆ ಕಾರ್ಯಕರ್ತರೇ ‘ತಾವು ವಿಶ್ರಾಂತಿ ಪಡೆಯಿರಿ. ತಮಗಾಗಿ ನಾವು ಪ್ರಚಾರ ನಡೆಸುತ್ತೇವೆ’ ಎನ್ನುತ್ತಿದ್ದಾರೆ. ‘ನನ್ನ ಜನರಿಗಾಗಿ ಈ ಚುನಾವಣೆ ನಡೆಯುತ್ತಿದೆ. ನನ್ನೆಲ್ಲ ಕಾರ್ಯಕರ್ತರು, ನಾಯಕರು ನಮಗಾಗಿ ದುಡಿಯುತ್ತಿರುವಾಗ...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ..! ಸಲೈನ್ ಹಚ್ಚಿಕೊಂಡೇ ಪ್ರಚಾರಕ್ಕಿಳಿದಿರೋ ಕೈ ಅಭ್ಯರ್ಥಿ..!!
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ “ಕೈ”ಪಡೆಯಲ್ಲಿ ಬದಲಾವಣೆ ಬಿರುಗಾಳಿ, ಹೆಬ್ಬಾರ್ “ಬೆಂ”ಬಲದ ಅಲೆಯಲ್ಲಿ ಕೊಚ್ಚಿ ಹೋಗುವವರೇಷ್ಟು..?
ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಪಡೆ ಸದ್ಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಜಂಪ್ ಮಾಡಿದೆ. ಹೀಗಾಗಿ, ವಿಧಾನಸಭೆ ಚುನಾವಣೆ ಬಳಿಕ ಬಹುತೇಕ ಕೊಸರಾಟದಲ್ಲೇ ತೊಡಗಿದ್ದ ಮುಂಡಗೋಡ ಕಾಂಗ್ರೆಸ್ ಗೆ ಹೆಬ್ಬಾರ್ ಪಡೆಯ ಆಗಮನ ಆನೆ ಬಲ ತಂದಿದ್ದು, ಒಳಗೊಳಗಿನ ಅಸಮಾಧಾನ, ಕಚ್ಚಾಟಗಳಿಗೆ “ಪವರ್ ಬ್ರೇಕ್” ಬೀಳೋ ಸಾಧ್ಯತೆ ಇದೆ. ಹೀಗಾಗಿ, ಸೋತ ಮನೆಯಲ್ಲಿ ನಾ ಹೆಚ್ಚು ನೀ ಹೆಚ್ಚು ಅಂತಾ ಕತ್ತಿ ಮಸೆಯುತ್ತಿದ್ದ “ಐರನ್ನು” ಮುಖಂಡರುಗಳಿಗೆ ಈಗ ತಮ್ಮ ಸ್ಥಾನಮಾನಗಳದ್ದೇ ಚಿಂತೆ ಹೆಚ್ಚಾಗಿದೆ. ಅವ್ರ ಕತೆಯೇನು..? ಇನ್ನು, ಪಕ್ಷದ ಪ್ರಮುಖ ಜವಾಬ್ದಾರಿ ಹೊತ್ತಿದ್ದ ಕೆಲವರು, ಸದ್ಯ ಅದೇಲ್ಲೇಲ್ಲೋ ಚೇಳು ಕಡಿದವರಂತೆ ಓಡಾಡುತ್ತಿದ್ದಾರಂತೆ. ತಮ್ಮ ಸ್ಥಾನಗಳಿಗೆ ಬರಬಹುದಾದ ಸಂಚಕಾರ ತಪ್ಪಿಸಿಕೊಳ್ಳಲು ಯಲ್ಲಾಪುರದ ಕಡೆ ಮುಖ ಮಾಡಿ ಕುಳಿತಿದ್ದಾರಂತೆ. ಯಾಕಂದ್ರೆ, ಕೆಲವರ ಬಗ್ಗೆ ಈಗಾಗಲೇ ಪಕ್ಷದಲ್ಲಿ ಸಾಕಷ್ಟು ವಿರೋಧಗಳು ಇದ್ದರೂ, ಎಲೆಕ್ಷನ್ ಮುಗಿಯೋವರೆಗೂ ಹೇಗಾದ್ರೂ ಸಹಿಸಿಕೊಳ್ಳಿ ಅಂತಾ ಜಿಲ್ಲಾ ಮುಖಂಡರು ತಾಮಣಿ ಮಾಡಿದ್ದರು. ಆದ್ರೆ, ಇವಾಗ ಹೆಬ್ಬಾರ್ ಬಳಗದ...
ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪದ ಕೆರೆ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಪಘಾತವಾಗಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದೆ. ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಕೊಪ್ಪ ಇಂದಿರಾನಗರದ ಲಕ್ಷ್ಮಣ ರಾಮಣ್ಣ ಬೋವಿವಡ್ಡರ (36), ಬಸವರಾಜ್ ಹನ್ಮಂತಪ್ಪ ಕುಂಕೂರ್ (36), ಮುಂಡಗೋಡಿನ ಸಾದಿಕ್ ಜಲಾಲ್ ಸಾಬ್ ಹುಬ್ಬಳ್ಳಿ(36) ಗಂಭೀರ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಗ್ರಾಮಸ್ಥರು ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ “ಕೈ” ಸೇರ್ಪಡೆ ಕಾರ್ಯಕ್ರಮದಲ್ಲಿ ಮುಂಡಗೋಡ ಪಟ್ಟಣ ಪಂಚಾಯತಿಯ ಬರೋಬ್ಬರಿ ಆರು ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಅಸಲು, ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಈಗಾಗಲೇ 10 ಬಿಜೆಪಿ ಸದಸ್ಯರಿದ್ದು, ಅದ್ರಲ್ಲಿ 6 ಜನ ಸದಸ್ಯರು ಹೆಬ್ಬಾರ್ ಹಿಂಬಾಲಿಸೋದು ಫಿಕ್ಸ್ ಆಗಿದೆ ಎನ್ನಲಾಗಿದೆ. ಇನ್ನುಳಿದ ನಾಲ್ವರು ಸದಸ್ಯರು ಪಕ್ಷದಲ್ಲೇ ಉಳಿತಾರೋ ಅಥವಾ ಅವ್ರೂ ಕೂಡ ಕೈ ಸೇರ್ತಾರೊ ಸ್ಪಷ್ಟನೆ ಇಲ್ಲ. ಗ್ರಾಪಂ ಮಟ್ಟದಲ್ಲಿ..!...
ನಂದಿಕಟ್ಟಾದಲ್ಲಿ ನೀರು ಅರಸಿ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳ ದಾಳಿ, ರಕ್ಷಿಸಿದ ಗ್ರಾಮಸ್ಥರು..!
ಮುಂಡಗೋಡ: ತೀವ್ರ ಬರದ ಎಫೇಕ್ಟ್ ಕಾಡು ಪ್ರಾಣಿಗಳಿಗೂ ತಟ್ಟಿದೆ. ಜಿಂಕೆಯೊಂದು ಕುಡಿಯುವ ನೀರು ಅರಸಿ ಕಾಡಿನಿಂದ ನಾಡಿಗೆ ಬಂದು ನಾಯಿಗಳ ದಾಳಿಗೆ ಒಳಗಾಗಿದೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಜಿಂಕೆ ನಾಯಿಗಳ ದಾಳಿಯಿಂದ ಬಚಾವಾಗಿದ್ದು ರಕ್ಷಣೆಯಾಗಿದೆ. ಅಂದಹಾಗೆ, ನಂದಿಕಟ್ಟಾ ಗ್ರಾಮದ ಅರಣ್ಯದಂಚಿನಿಂದ ಜಿಂಕೆ, ಕುಡಿಯುವ ನೀರು ಅರಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿತ್ತು. ಈ ವೇಳೆ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಿದ್ದವು. ಹೀಗಾಗಿ, ತೀವ್ರವಾಗಿ ಗಾಬರಿಗೊಂಡಿದ್ದ ಜಿಂಕೆಗೆ ನಾಯಿಗಳಿಂದ ರಕ್ಷಣೆ ಮಾಡಿದ ಯುವಕರು, ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಜಿಂಕೆಗೆ ಸೂಕ್ತ ಚಿಕಿತ್ಸೆಯ ನಂತರ ಕಾಡಿಗೆ ಮರಳಿಸಿದ್ದಾರೆ.
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್ ಗಳು ಜಖಂ ಆಗಿವೆ. ಏಯರ್ ಕಾಂಪ್ರೆಶರ್ ಗೆ ಹಾನಿಯಾಗಿದೆ. ಅಲ್ದೆ ಗ್ಯಾರೇಜ್ ಎದುರಿಗೆ ನಿಲ್ಲಿಸಿದ್ದ ಹೊಸ ಬೈಕ್ ಜಖಂಗೊಂಡಿದೆ.
ಕೇಸ್ ದಾಖಲಾದ ಮೇಲೆ ‘ನಮ್ಮವರಲ್ಲ’ವೆಂದ ಬಿಜೆಪಿ, ಬಿಜೆಪಿ ವಿರುದ್ಧ ಸ್ವಪಕ್ಷಿಗರಿಂದಲೇ ಅಸಮಾಧಾನ
ಕುಮಟಾ: ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ನಿಂದನಾತ್ಮಕವಾಗಿ ಕಮೆಂಟ್ ಮಾಡಿದವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ‘ಅವರು ನಮ್ಮ ಪಕ್ಷದವರಲ್ಲ’ ಎಂದಿದ್ದ ಬಿಜೆಪಿ ವಿರುದ್ಧ ಇದೀಗ ಸ್ವಪಕ್ಷದವರಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತ ಎನ್ನಲಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎನ್ನುವವರು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಮರಾಠ ಜಾತಿಗೆ ನಿಂದಿಸಿ ಫೇಸ್ಬುಕ್ ನಲ್ಲಿ ಕಾಂಗ್ರೆಸ್ಸಿಗರ ಪೋಸ್ಟ್ ವೊಂದಕ್ಕೆ ಕಮೆಂಟ್ ಮಾಡಿದ್ದರು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಅವರು ಪೊಲೀಸ್ ದೂರು ದಾಖಲಿಸಿ, ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇದಕ್ಕೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಬಿಜೆಪಿ ವಕ್ತಾರರು, ಕಮೆಂಟ್ ಹಾಕಿದ್ದ ವ್ಯಕ್ತಿ ತಮ್ಮ ಪಕ್ಷದವನೇ ಅಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಬಿಜೆಪಿಗರಲ್ಲೇ ಇದೀಗ ಅಸಮಾಧಾನದ ಹೊಗೆಯಾಡಲಾರಂಭಿಸಿದೆ. ದೂರು ದಾಖಲಾದ ಕಾರ್ಯಕರ್ತನಿಗೆ ಧೈರ್ಯ ತುಂಬುವುದನ್ನ ಬಿಟ್ಟು ‘ನಮ್ಮವನಲ್ಲ’ ಎಂದು ಜಾರಿಕೊಂಡ ಬಿಜೆಪಿ ನಾಯಕರ ವರ್ತನೆಯ...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ ಮಾಹಿತಿ ಬರಬೇಕಿದೆ.
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!
ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ ಸ್ವಭಾವದಿಂದ ಸಹಸ್ರಾರು ಅಭಿಮಾನಿಗಳನ್ನು ಹೊಂದಿತ್ತು. ಅಭಿಮಾನಿಗಳ ಪಾಲಿನ ಮೆಚ್ಚಿನ ಕೊಬ್ಬರಿಹೋರಿಯಾಗಿದ್ದ ರಾಕ್ ಸ್ಟಾರ್ ಹೋರಿಯ ಓಟದ ಖ್ಯಾತಿ ಹೊರರಾಜ್ಯಗಳಿಗೂ ಹಬ್ಬಿತ್ತು. ರಾಜ್ಯದ ವಿವಿಧಕಡೆಗಳಲ್ಲಿ ನಡೆಯುವ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಾಕ್ ಸ್ಟಾರ್ ಭಾಗವಹಿಸಿದ್ದು ವಿಶೇಷ. ರಾಕ್ ಸ್ಟಾರ್ ಹೋರಿ ಸಿನೇಮಾ ದಲ್ಲಿಯು ಸಹ ಪಾತ್ರವನ್ನು ನಿರ್ವಹಿಸಿತ್ತು. ಗ್ರಾಮೀಣ ಹಾಗೂ ಶಹರ ಪ್ರದೇಶಗಳಲ್ಲಿ ಮಹಿಳೆಯರು, ಮಕ್ಕಳು, ಎಲ್ಲಾ ವಯೋಮಾನದವರು ಈ ಹೋರಿಯಲ್ಲಿ ದೈವತ್ವವನ್ನು ಕಂಡು...