ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!

ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!

ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು. ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.

ಯಲ್ಲಾಪುರದ ತುಡುಗುಣಿ ಕಾಡು ಮನೆಯಲ್ಲಿ ಮಹಿಳೆಯ ಭೀಕರ ಹತ್ಯೆ..! ಅಷ್ಟಕ್ಕೂ ಹಂತಕನ ನೆರಳು ಅದೇನಾ..?

ಯಲ್ಲಾಪುರದ ತುಡುಗುಣಿ ಕಾಡು ಮನೆಯಲ್ಲಿ ಮಹಿಳೆಯ ಭೀಕರ ಹತ್ಯೆ..! ಅಷ್ಟಕ್ಕೂ ಹಂತಕನ ನೆರಳು ಅದೇನಾ..?

ಯಲ್ಲಾಪುರ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೀಕರ ಹತ್ಯೆಯಾಗಿದೆ. ಮಹಿಳೆಯೋರ್ವಳನ್ನ ಆಗಂತುಕರು ಭೀಕರವಾಗಿ ಹತ್ಯೆ ಮಾಡಿ ಹೋಗಿದ್ದಾರೆ. ಯಲ್ಲಾಪುರ-ಶಿರಸಿ ಗಡಿಭಾಗದ ತುಡುಗುಣಿಯಲ್ಲಿ ಇಂತಹದ್ದೊಂದು ಹತ್ಯೆ ನಡೆದಿದ್ದು, ಇಡೀ ಯಲ್ಲಾಪುರ ತಾಲೂಕೇ ಬೆಚ್ಚಿ ಬೀಳುವಂತೆ ಮಾಡಿದೆ. ಅಂದಹಾಗೆ, ಇಲ್ಲಿ ಹೀಗೆ ಭೀಕರ ಹತ್ಯೆಯಾಗಿ ಬಿದ್ದವಳ ಹೆಸರು, ಸರೋಜಾ ನಾಯರ್, ವಯಸ್ಸು ಈಗಿನ್ನು 35 ರ ಆಸು ಪಾಸು. ತುಡುಗುಣಿಯ ಕಾಡಿನಲ್ಲಿರೋ ಮನೆಯಲ್ಲಿ ವಾಸವಿದ್ದ ಈಕೆಯನ್ನ ನಿನ್ನೆ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ನಿಮಗೆ ಗೊತ್ತಿರಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಕ್ಷ ಪೊಲೀಸ್ ಪಡೆ ಇದೆ‌. ಕೊಲೆಯ ರಹಸ್ಯ ಕೆಲವೇ ಗಂಟೆಗಳಲ್ಲಿ ಬಟಾಬಯಲಾಗಲಿದೆ. ಅದ್ಯಾವನೇ ಇರಲಿ, ಅದೇಂತವನೇ ಹಂತಕ ಇದ್ರೂ ಕೆಲವೇ ಗಂಟೆಗಳಲ್ಲಿ ಹೆಡೆಮುರಿ ಕಟ್ಟೋದು ಮಾತ್ರ ಪಕ್ಕಾ. ಅನೈತಿಕ ಮರ್ಡರಾ.‌? ಹಾಗೆ, ಕಾಡಿನಲ್ಲಿರೋ ಮನೆಯಲ್ಲಿ ಮಹಿಳೆಯೊಬ್ಬಳ ಭೀಕರ ಹತ್ಯೆಯಾಗಿದೆ ಅಂದ್ರೆ, ಅದರ ಹಿಂದೆ ಅದ್ಯಾವನೋ ಎಡಬಿಡಂಗಿ, ಪಾಗಲ್ ಪ್ರೇಮಿಯ ಹುಚ್ಚುತನ ಕೆಲಸ...

ಕಟ್ಟಿಗೆ ತುಂಬಿದ್ದ ಲಾರಿ ಪಲ್ಟಿ, ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ..!

ಕಟ್ಟಿಗೆ ತುಂಬಿದ್ದ ಲಾರಿ ಪಲ್ಟಿ, ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ..!

ಯಲ್ಲಾಪುರ: ಕಟ್ಟಿಗೆ ತುಂಬಿದ್ದ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿ, ವಾಹನ ದಟ್ಟಣೆ ಹೆಚ್ಚಿದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾದ ಘಟನೆ, ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ. ಅಂಕೋಲಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಲಾರಿ, ಘಟ್ಟದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಗೆ ಪಲ್ಟಿಯಾದ ಲಾರಿ ಎದುರಲ್ಲೇ ಮತ್ತೊಂದು ಲಾರಿ, ಕೆಟ್ಟು ನಿಂತಿದೆ‌. ಪರಿಣಾಮ, ಅರಬೈಲ್ ಘಟ್ಟದಲ್ಲಿ ಸರಕು ಸಾಗಣೆ ಲಾರಿಗಳು ಸಾಲುಗಟ್ಟಿ ನಿಂತಿವೆ. ಮಳೆಯ ಅಬ್ಬರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಂಕೋಲಾ ಯಲ್ಲಾಪುರ ಮಾರ್ಗವಾಗಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ.

ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!

ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!

ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ. ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ‌. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು‌ ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!

ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!

ಕುಮಟಾ: ನಾಯಿ ಬೇಟೆಯಾಡಲು ಬಂದ ಚಿರತೆಯೊಂದು, ತಾನೆ ನಾಯಿ ಬಲೆಯಲ್ಲಿ ಸಿಲಕಿದ ಘಟನೆ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ‌. ರಾತ್ರಿ ಮನೆಯ ಹತ್ತಿರ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ಚಿರತೆ, ನಾಯಿಯ ಬೋನಿನೋಳಗೆ ಹೋಗಿದೆ. ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲೀಕರು, ತಕ್ಷಣ ಬೋನ್ ಲಾಕ್ ಮಾಡಿದ್ದಾರೆ. ಹೀಗಾಗಿ, ನಾಯಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಲು ಬಂದಿದ್ದ ಚಿರತೆ ಈಗ ನಾಯಿ ಬೋನಲ್ಲೇ ಬಲೆ ಬಿದ್ದಿದೆ‌. ಹೀಗಾಗಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ‌. ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭವಾಗಿದೆ.

ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!

ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!

ಕಾರವಾರ: ನಿಫಾ ವೈರಸ್ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಯುವಕ ಸದ್ಯ ರಿಲೀಫ್ ಆಗಿದ್ದಾನೆ. ಯಾಕಂದ್ರೆ, ನಿಫಾ ಆತಂಕಿತ ಯುವಕನ ನಿಫಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇದ್ರಿಂದ ನಿಫಾ ಆತಂಕಕ್ಕಿಡಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಯುವಕ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಂತ, ದಕ್ಷಿಣಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ, ಕಾರವಾರ ಮೂಲದ ಯುವಕನ ಬ್ಲಡ್, ಯುರಿನ್ ಮತ್ತು ಸ್ವಾಬ್ ಸ್ಯಾಂಪಲನ್ನು ಟೆಸ್ಟ್ ಗೆ ಕಳಿಸಿತ್ತು. ಗೋವಾದಲ್ಲಿ ನಿಫಾ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡ್ತಿದ್ದ ಯುವಕ, ರಜೆಯಲ್ಲಿ ಕಾರವಾರಕ್ಕೆ ಬಂದ ಮೇಲೆ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಕಳೆದ ಶನಿವಾರ ಸಂಜೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಯುವಕ ದಾಖಲಾಗಿದ್ದ. ಈ ಕಾರಣಕ್ಕಾಗಿ, ನಿಫಾ ಆತಂಕದಿಂದ ಸ್ಯಾಂಪಲ್ ಟೆಸ್ಟ್ ಗೆ ಕಳುಹಿಸಿದ್ದ ಆರೋಗ್ಯ‌ ಇಲಾಖೆಗೆ, ಇಂದು ಪುಣೆಯ ಲ್ಯಾಬ್ ನಿಂದ ವರದಿ ಬಂದಿದ್ದಿ, ನೆಗೆಟಿವ್ ಅಂತಾ ದಾಖಲಾಗಿದೆ.

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು..!

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು..!

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಕಣ್ಣುಗಳನ್ನು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!

ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!

ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.

ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

  ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..

error: Content is protected !!