ಧಾರವಾಡ ತಾಲೂಕಿನ ಗರಗ ಠಾಣಾ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ನಡೆದಿದ್ದ ವಿವಾದಿತ ಸ್ಟೇಟಸ್ ಗಲಾಟೆ ವಿಚಾರವಾಗಿ ಗರಗ ಠಾಣೆ ಪಿಎಸ್ಐ ತಲೆದಂಡವಾಗಿದೆ. ಪಿಎಸ್ಐ ಪ್ರಕಾಶ ಡಿ. ಅಮಾನತು ಮಾಡಿ ಉತ್ತರ ವಲಯ ಐಜಿ ವಿಕಾಸ ಕುಮಾರ್ ಆದೇಶ ಹೊರಡಿಸಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ತಡಕೋಡದಲ್ಲಿ ರಾಮಮಂದಿರ ವಿರುದ್ಧ ಸ್ಟೇಟಸ್ ಹಾಕಿದ್ದ ಸದ್ದಾಂ ಹುಸೇನ್ ಬಂಧನದ ಬಳಿಕ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಘಟನೆಯಲ್ಲಿ ಸದ್ದಾಂ ಮನೆಯ ಎದುರು ಜಮಾಯಿಸಿದ್ದ ಜನರು ಗಲಾಟೆ ಮಾಡಿದ್ದರು. ಗಲಾಟೆ ಬಳಿಕ ಗ್ರಾಮದಲ್ಲಿ ಉಂಟಾಗಿದ್ದ ಅಶಾಂತಿ ಸಂಬಂಧ, ಮುಂಜಾಗ್ರತೆ ತೆಗೆದುಕೊಳ್ಳದೇ ಕರ್ತವ್ಯ ಲೋಪ ಎಸಗಿರೋ ಆರೋಪ ಪಿಎಸ್ ಐ ತಲೆಗೆ ಕಟ್ಟಲಾಗಿದೆ. ಎಸ್ಪಿ ವರದಿ ಆಧರಿಸಿ ಅಮಾನತ್ತು ಆದೇಶ ಹೊರಡಿಸಲಾಗಿದೆ.
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಂದೂರಿನ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿಯೇ ಸಾವಿಗೆ ಕಾರಣವಾಯ್ತಾ..?
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಕಳೆದ ರವಿವಾರ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಅಂತಾ ಕುಟುಂಬದ ಮೂಲಗಳು ತಿಳಿಸಿವೆ. ಪವನ್ ಕಬನೂರ್(ಸುತಗಟ್ಟಿ)(23) ಎಂಬುವವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈತ ಕಳೆದ ರವಿವಾರ ಮನೆಯಲ್ಲೇ ಕಳೆನಾಶಕ ಸೇವಿಸಿದ್ದ. ಹೀಗಾಗಿ, ತಕ್ಷಣವೇ ಈತನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಪ್ರೀತಿಗೆ ಬಲಿಯಾಯ್ತಾ ಜೀವ..? ಅಂದಹಾಗೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದ್ರೂ, ಯುವತಿಯೋರ್ವಳ ಪ್ರೀತಿಯಲ್ಲಿ ಬಿದ್ದಿದ್ದ ಮೃತನಿಗೆ ಯುವತಿಯ ತಾಯಿ ಬುದ್ದಿವಾದ ಹೇಳಿದ್ದಳು ಎನ್ನಲಾಗಿದೆ. ಈ ಕಾರಣಕ್ಕಾಗೇ ಯುವಕ ಆತ್ಮಹತ್ಯೆ ಮಾಡಿಕೊಂಡನಾ..? ಗೊತ್ತಿಲ್ಲ, ಇನ್ನಷ್ಟೇ ತಿಳಿದು ಬರಬೇಕಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!
ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿಂದೆ, ಅಂದ್ರೆ, 16.05. 2022 ರಂದು, ಮುಂಡಗೋಡ ಪಟ್ಟಣದ SBI ಬ್ಯಾಂಕ್ ಬಳಿ ಅನಾಮತ್ತಾಗಿ 49 ಸಾವಿರ ರೂಪಾಯಿಗಳನ್ನು ಓರ್ವ ಯುವತಿ ಕಳೆದುಕೊಂಡು ಗೋಳಾಡುತ್ತಿದ್ದಳು. ಚಿಗಳ್ಳಿ ಗ್ರಾಮದ ಕುಮಾರಿ ಶೃತಿ ಬಶೆಟ್ಟೆಪ್ಪ ಅರಳಿಕಟ್ಟಿ ಎಂಬುವ ಯುವತಿ ಅವತ್ತು ಬ್ಯಾಂಕಿನಿಂದ 49 ಸಾವಿರ ಹಣ ಡ್ರಾ ಮಾಡಿಕೊಂಡು ಇನ್ನೇನು ತನ್ನ ಊರಿಗೆ ಹೋಗಬೇಕು ಅನ್ನುವಷ್ಟರಲ್ಲೇ ಈ ಖತರ್ನಾಕ ಕಳ್ಳಿಯರು ಹಣವನ್ನು ಎಗರಿಸಿ ಬಿಟ್ಟಿದ್ದರು. ಹೀಗಾಗಿ, ಅವತ್ತೇ ಮುಂಡಗೋಡ...
ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!
ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ ಜೊತೆ ನಂಟು ಹೊಂದಿರುವ ಮಹಾರಾಷ್ಟ್ರ ನಾಸಿಕ್ ಮೂಲದ ಯುವಕನನ್ನು ಮುಂಬೈ ಎಟಿಎಸ್ ತಂಡ ಬಂಧಿಸಿತ್ತು. ಆತನ ಜೊತೆ ಸಂಪರ್ಕದಲ್ಲಿದ್ದ ಮುಂಬೈನ ಓರ್ವ ಮಹಿಳೆಯ ಸಂಪರ್ಕದಲ್ಲಿ ಈ ಭಟ್ಕಳದ ಮಹಿಳೆ ಇದ್ದಳು ಎನ್ನಲಾಗಿದೆ. ಈಕೆಯ ಪತಿ ಮರಣಹೊಂದಿದ್ದು, ತಂದೆ ತಾಯಿ ಮಕ್ಕಳ ಜೊತೆ ವಾಸವಾಗಿದ್ದಾಳೆ. ಸ್ಥಳೀಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಈಕೆ ಹೆಣ್ಣು ಮಕ್ಕಳಿಗೆ ಧರ್ಮಶಿಕ್ಷಣ ಬೋಧಿಸುತ್ತಿದ್ದಳು. ಬಂಧಿತ ಉಗ್ರನಿಗೆ ಹಣ...
ಕಾತೂರು ಬಳಿ ಶಿರಸಿ ಹುಬ್ಬಳ್ಳಿ ರಸ್ತೆ ಮೇಲೆ ಬಿದ್ದ ಬೃಹತ್ ಮರ, ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಮೂಡಸಾಲಿ ಕಾತೂರು ಬಳಿ ಬೃಹತ್ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ಶಿರಸಿ ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಕಾತೂರು ಸಮೀಪದಲ್ಲಿ ಘಟನೆ ನಡೆದಿದ್ದು, ರಸ್ತೆಯ ಮೇಲೆಯೇ ಮರ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದ್ರೆ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.
ಎಂಟು ದಿನಗಳ ನಂತ್ರ, ಕೊನೆಗೂ ತಾಯಿ ಮಡಿಲು ಸೇರಿದ ಚಿರತೆ ಮರಿಗಳು, ನಿಟ್ಟುಸಿರು ಬಿಟ್ಟ ಮುಂಡಗೋಡ ಅರಣ್ಯ ಅಧಿಕಾರಿಗಳು..!
ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಎಂಟು ದಿನಗಳಿಂದ ತಾಯಿ ಮಡಿಲಿಗಾಗಿ ಕಾಯುತ್ತಿದ್ದ ಎರಡು ಚಿರತೆ ಮರಿಗಳನ್ನು ಕೊನೆಗೂ ಹೆತ್ತಮ್ಮನ ಮಡಿಲು ಸೇರಿಸಿದ್ದಾರೆ. ಆದ್ರೆ, ಹಾಗೆ ಎರಡೂ ಪುಟ್ಟ ಕಂದಮ್ಮಗಳನ್ನು ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಸಿಬ್ಬಂದಿಗಳ ಕರ್ತವ್ಯ ಮತ್ತು ಸಮಯ ಪ್ರಜ್ಞೆ ನಿಜಕ್ಕೂ ಶ್ಲಾಘನೀಯ..! ಅದು ಕಬ್ಬಿನ ಗದ್ದೆ..! ಅಂದಹಾಗೆ, ಕಳೆದ ದಿನಾಂಕ 12.01.2024ರಂದು ಮುಂಡಗೋಡ ಅರಣ್ಯ ವಲಯ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಶಿವಾನಂದ ಕೆಂಗಾಪುರ್ ಅವರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಸಿಕ್ಕೊದ್ದವು. ಗದ್ದೆಯಲ್ಲಿ ಹುಲುಸಾಗಿ ಬೆಳೆದಿದ್ದ ಕಬ್ಬನ್ನು ಕಟಾವು ಮಾಡುತ್ತಿದ್ದ ಕಾರ್ಮಿಕರು, ಸ್ಥಳದಲ್ಲಿ ಸಿಕ್ಕ ಚಿರತೆ ಮರಿಗಳನ್ನು ಅನತಿ ದೂರದಲ್ಲಿಟ್ಟು ಇಲಾಖೆಗೆ ವಿಷಯವನ್ನು ತಿಳಿಸಿದ್ದರು. ಅಲ್ಲಿ ಸಿಕ್ಕಿದ್ದು ಎರಡು ಮರಿಗಳು..! ವಿಷಯ ತಿಳಿದು ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮರಿಗಳನ್ನು ಸಿಕ್ಕ ಸ್ಥಳದಲ್ಲಿಯೇ ಬಿಟ್ಟು ತಾಯಿ ಚಿರತೆ ತನ್ನ ಮರಿಗಳನ್ನು ತೆಗೆದುಕೊಂಡು ಹೋಗುತ್ತದೆ ಅಂತಾ ಗ್ರಾಮಸ್ಥರಲ್ಲಿ ತಿಳಿಸಿದ್ದರು. ಅದ್ರಂತೆ...
ನಿತ್ರಾಣಗೊಂಡು ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ಕಾರ್ಮಿಕ, ಗಾಯಾಳುವಿಗೆ ಆಸ್ಪತ್ರೆಗೆ ಸೇರಿಸಿ, ಮಾನವೀಯತೆ ಮೆರೆದ ನೂತನ ಪಿಎಸ್ಐ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಸಮೀಪ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನೋರ್ವ ತಲೆಸುತ್ತು ಬಂದು ಬಿದ್ದು ಗಾಯಗೊಂಡಿರೋ ಘಟನೆ ನಡೆದಿದೆ. ಹಾಗೆ ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದಾಗ ಮುಂಡಗೋಡಿನ ನೂತನ ಪಿಎಸ್ ಐ ಪರಶುರಾಮ್, ಖುದ್ದಾಗಿ ನಿಂತು ಗಾಯಾಳುವಿಗೆ ಆಸ್ಪತ್ರೆಗೆ ಸಾಗಿಸಿ ಮಾನವೀಯ ಕಾರ್ಯ ಮಾಡಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಾರ್ನಳ್ಳಿ ಗ್ರಾಮದ ನಾಗರಾಜ್ ವಡ್ಡರ(47) ಎಂಬುವ ಕಾರ್ಮಿಕ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ನಿತ್ರಾಣಗೊಂಡು ಕುಸಿದು ಬಿದ್ದಿದ್ದಾರೆ. ಹೀಗಾಗಿ ಕಾರ್ಮಿಕ ನಾಗರಾಜ್ ಗೆ ತಲೆಗೆ ಗಾಯವಾಗಿದ್ದು, ಅಕ್ಷರಶಃ ನಿತ್ರಾಣ ಸ್ಥಿತಿಯಲ್ಲಿ ರಸ್ತೆಯಲ್ಲೇ ನರಳಾಡುತ್ತಿದ್ದರು. ಆ ಹೊತ್ತಲ್ಲಿ ಅದೇ ಮಾರ್ಗದಿಂದ ಬೇರೊಂದು ಪ್ರಕರಣದ ಸಲುವಾಗಿ ಹೊರಟಿದ್ದ ನೂತನ ಪಿಎಸ್ ಐ ಪರಶುರಾಮ್, ನಿತ್ರಾಣಗೊಂಡು ಬಿದ್ದಿದ್ದ ಕಾರ್ಮಿಕನಿಗೆ ಉಪಚರಿಸಿ, ತಕ್ಷಣವೇ 108 ಅಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ. ಅಲ್ದೆ ಕಾರ್ಮಿಕ ನಿಗೆ ಒಂದಿಷ್ಟು ಹಣ ನೀಡಿ ದೈರ್ಯ ತುಂಬಿ ಕಳಿಸಿದ್ದಾರೆ. ಈ ಕಾರಣಕ್ಕಾಗಿ...
ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಸಿಪಿಐ, ಹಾಗೂ ಕಾನಸ್ಟೇಬಲ್ ತಲೆದಂಡವಾಗಿದೆ. ಹಾನಗಲ್ ಠಾಣೆಯ ಸಿಪಿಐ ಶ್ರೀಧರ್ ಸಸ್ಪೆಂಡ್ ಆಗಿದ್ದಾರೆ. ಜೊತೆಗೆ ಕಾನಸ್ಟೇಬಲ್ SB ಡ್ಯೂಟಿಯ ಇಲಿಯಾಜ್ ಶೇತ್ ಸನದಿ ಕೂಡ ಅಮಾನತ್ತಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಾಗೂ FIR ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಭ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಹಾವೇರಿ ಎಸ್ಪಿ ಆದೇಶಿಸಿದ್ದಾರೆ.
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!
ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ ತಾಯಿಯ ಕಂಗಳಲ್ಲಿ ಪ್ರಜ್ವಲಿಸುತ್ತದೆ. ಭಕ್ತರ ಪಾಲಿನ ದೈವ..! ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ತಾಯಿ ಎಂದೇ ಪ್ರಸಿದ್ದಿಯಾಗಿರುವ ನೂರಾರು ವರ್ಷಗಳ ಇತಿಹಾಸವುಳ್ಳ ತಾಲೂಕಿನ ಸಾಲಗಾಂವ್ ಗ್ರಾಮದ ಶಿರಸಿ- ಹುಬ್ಬಳ್ಳಿ ಹೆದ್ದಾರಿಯಲ್ಲಿರುವ ಬಾಣಂತಿದೇವಿ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿವರ್ಷ ಮಕರ ಸಂಕ್ರಮಣ ದಿನದಂದು ನಡೆಯುವ ಬಾಣಂತಿದೇವಿ ಜಾತ್ರೆಗೆ ಪಟ್ಟಣ ಸೇರಿದಂತೆ ಸಾಲಗಾಂವ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಗಳು ಆಗಮಿಸಿದ್ದು, ದೇವಿಯ...
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ ನೀಡಿದ್ದಾರೆ. ಅಂದಹಾಗೆ, ಈ ಆಟದ ಹೆಸರು ನಮಗಂತೂ ಗೊತ್ತಿಲ್ಲ. ಆದ್ರೆ, ಇಲ್ಲಿ ಹಣ ಅನ್ನೋದು ಹೊಳೆಯಂತೆ ಹರಿಯುತ್ತಿದೆ. ಪವಾಡಗಳ ಸನ್ನಿಧಾನ..! ನಿಮಗೆ ನೆನಪಿರಲಿ, ಬಾಣಂತಿದೇವಿಯ ಸನ್ನಿಧಾನದಲ್ಲಿ ಬಹುತೇಕ ಮುಂಡಗೋಡ ತಾಲೂಕಿನ ಸುತ್ತ ಮುತ್ತಲಿನ ಭಕ್ತರು ಬಂದಿರ್ತಾರೆ. ಬಾಣಂತಿದೇವಿಗೆ ಹರಕೆ ಹೊತ್ತು ತೆಪ್ಪದ ತೇರಿನ ದರ್ಶನ ಪಡೀತಾರೆ. ಅಲ್ದೆ ಪುಟ್ಟ ಪುಟ್ಟ ಕಂದಮ್ಮಗಳನ್ನು ಕೆರೆಯಲ್ಲಿ ತೇಲಿ ಬಿಟ್ಟು ಹರಕೆ ತೀರಿಸ್ತಾರೆ. ಅಸಲು, ಬಾಣಂತಿದೇವಿಯ ಚಮತ್ಕಾರ,...