ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ  ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

  ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು‌. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಯಲ್ಲಾಪುರ, ಮುಂಡಗೋಡ, ಬನವಾಸಿ ಭಾಗದ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ರು.

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌ ಟಿ ಪಾಟೀಲ್‌, ಯುವ ನಾಯಕ ವಿವೇಕ್‌ ಹೆಬ್ಬಾರ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಲಿಸಾ ಥಾಮಸ್‌, ಪ್ರಮುಖರಾದ ರಾಮು ಲಮಾಣಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌. ಇವ್ರೊಂದಿಗೆ ಇಬ್ಬರು ಗ್ರಾಪಂ ಸದಸ್ಯೆಯರು, ಸೊಸೈಟಿ ಸದಸ್ಯರುಗಳು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಇದ್ರಿಂದ ಈ ಭಾಗದಲ್ಲಿ ಬಿಜೆಪಿಗೆ ಭಾರಿ‌ ಮರ್ಮಾಘಾತ ನೀಡಿದ್ದಾರೆ. ಅಸಲು, ಮುಂಡಗೋಡ ತಾಲೂಕಿನಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವವರು ಸಂಖ್ಯೆಗಿಂತ, ಬಿಜೆಪಿ ತೊರೆದು ಕಾಂಗ್ರೆಸ್ ಸೇರುವವರ ಸಂಖ್ಯೆಯೇ ಹೆಚ್ಚಾಗಿದೆ. ಇತ್ತಿಚೆಗಷ್ಟೇ ಬೆಡಸಗಾಂವ್ ನಲ್ಲಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್...

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ರು. ಬಿಜೆಪಿ ಮುಖಂಡ, ಶ್ರೀಕಾಂತ ದುಂಡಿಗೌಡ್ರ ಮಾತನಾಡಿ ಪಕ್ಷದಿಂದ ಟಿಕೆಟ ನೀಡಲಿಲ್ಲಾ ಎಂಬ ಕಾರಣಕ್ಕೆ ವಿಕೃತ ಮನಸ್ಸಿನ, ಹೀನ ಮನಸ್ಥಿತಿಯಿಂದ, ಮಾತನಾಡಿರುವ ಓಲೆಕಾರ ಅವರು ಶಿಗ್ಗಾವಿ, ಸವಣೂರು ಜನತೆಗೆ ಅವಮಾನ ಮಾಡಿದ್ದಾರೆ, ತಾಯಂದಿರಿಗೆ ಅವಮಾನ ಮಾಡಿದ್ದಾರೆ. ಗೌರವಾನ್ವಿತ ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅವಾಚ್ಯ ಶಬ್ಧಗಳಿಂದ ಮಾತನಾಡಿ ಅವಮಾನ ಮಾಡಿರುವ ಅವರ ವಿರುದ್ದ ಸರಕಾರವು ಕಾನೂನು ರೀತಿ ಕ್ರಮ ಜರುಗಿಸಿ ಜಿಲ್ಲೆಯಿಂದ...

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

 ಶಿಕಾರಿಪುರ: ಯಡಿಯೂರಪ್ಪ ಅವರ ಮಗ ವಿಜಯೇಂದ್ರರವರು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದಾಗ ತಾಂಡಾದ ಜನರಿಂದ ಬಹಿಷ್ಕರಿಸಲಾಯಿತು, ಹಾಗೂ ತಾಂಡಾ ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಲಾಯಿತು. ಪ್ರಚಾರಕ್ಕೆಂದು ತಾಂಡಾಕ್ಕೆ ಬಂದಿದ್ದ ಬಿ.ವೈ. ವಿಜಯೇಂದ್ರರವರಿಗೆ ತಾಂಡಾದಲ್ಲಿ ಮಹಿಳೆಯರೂ ಸೇರಿದಂತೆ ಯುವಕರು ಧಿಕ್ಕಾರಗಳ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳಲ್ಲೂ ಈ ರೀತಿ ಮಾಡಿದರೆ ಮಾತ್ರ ನಮ್ಮ ಬಂಜಾರರ ಒಗ್ಗಟ್ಟು ಏನೆಂಬುದನ್ನು ಅರ್ಥೈಸಬಹುದು. ನಮ್ಮ ಏಳಿಗೆಗೆ ಮುಂದಿನ ಪೀಳಿಗೆಗೆ ಕೊಳ್ಳಿ ಇಟ್ಟ ಸರ್ಕಾರಕ್ಕೆ ಗೊತ್ತಾಗುವುದು ಅಂತಾ ಆಕ್ರೋಶ ಹೊರಹಾಕಿದ್ರು. ಒಗ್ಗಟ್ಟು ಪ್ರದರ್ಶನ ಮಾಡಿ ಪ್ರಚಾರ ಮಾಡದಂತೆ ತಡೆ ನೀಡಿದ್ರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಅಂತಾ ತಿಳಿಸಿದ್ದಾರೆ.  ಸ್ಪರ್ಧೆ ಖಚಿತ..! ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ....

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರ ಅಸ್ವಸ್ಥಗೊಂಡಿದ್ದರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರ;  ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ. ಹೀಗಾಗಿ, ಮೊದಲೇ ಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿರೋ ಜೆಡಿಎಸ್ ಇದ್ದವರಲ್ಲೇ ಒಡೆದು ಹೋಳಾಗಿದ್ದಾರೆ. ಇನ್ನು ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸಂತೋಷ ರಾಯ್ಕರ್ ಮಳಗಿ ಮುಂದಿನ ನಡೆ ಏನು ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸದ್ಯ ಘಟಪ್ರಭಾದ KHA ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಮೃತ ಯುವಕರು ಘಟಪ್ರಭಾದಲ್ಲಿ ಬಾರ್ ನಲ್ಲಿ ಕೆಲಸಕ್ಕೆಂದು ಹೋಗಿದ್ದರು ಎನ್ನಲಾಗಿದೆ. ಇಂದು ಸ್ನಾನಕ್ಕೆ ನದಿಗೆ ಇಳಿದಾಗ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್ ಬೆಂಬಲಿಗರನ್ನು ಪೊಲೀಸರು ತಡೆಯಲು ಮುಂದಾಗಿದ್ದಾರೆ. ಆದ್ರೆ, ಆಕ್ರೋಶಗೊಂಡಿರೋ ಬೆಂಬಲಿಗರು ರೆಬೆಲ್ ಶಾಸಕ ನೆಹರೂ ಓಲೇಕಾರ್ ನೇತೃತ್ವದಲ್ಲಿ ಬಿಜೆಪಿ ವಿರಿದ್ಧ ಕಿಡಿ ಕಾರಿದ್ದಾರೆ. ಹಾವೇರಿ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನಲೆ. ಬುಗಿಲೆದ್ದಿರುವ ನೇಹರು ಓಲೇಕಾರ ಅಸಮಾಧಾನಗೊಂಡಿದ್ದಾರೆ, ಅನ್ಯಾಯ ಅನ್ಯಾಯ ನೆಹರು ಓಲೇಕಾರ ಗೆ ಅನ್ಯಾಯ ಎಂದು ಘೋಷಣೆ ಕೂಗುತ್ತ, ಬೇಕೆ ಬೇಕೆ ಟಿಕೆಟ್ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ‌. ಹಿಗಾಗಿ, ಸಿಎಂ ಭಾವಚಿತ್ರಕ್ಕೆ ಚಪ್ಪಲಿ...

error: Content is protected !!