ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕೋತಿಗಳ ಸಾಮ್ರಾಜ್ಯ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕೋತಿಗಳ ಸಾಮ್ರಾಜ್ಯ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನಿತ್ಯವೂ ಮಂಗಗಳ ತುಂಟಾಟ ಮಿತಿ ಮೀರಿದೆ.. ಯಾರ ಭಯವೂ ಇಲ್ಲದೇ ಮಂಗಗಳು ಇಲ್ಲಿ ಮಾಡೋ ಕೀಟಲೆಗಳು ಕೆಲವೊಮ್ಮೆ ಸಾರ್ವಜನಿಕರಿಗೆ ಫಜೀತಿ ತಂದಿಡುತ್ತಿವೆ. ಶಿವಾಜಿ ಸರ್ಕಲ್ ಬಳಿಯ ಬಿಲ್ಡಿಂಗ್ ಗಳ‌ ಮೇಲೆ ವಾನರ ಸೇನೆ ಜಿಗಿದಾಡುತ್ತಿವೆ. ವಿದ್ಯುತ್ ಲೈನ್ ಗಳು ಮಂಗಗಳ ಜಿಗಿದಾಟಕ್ಕೆ ಹರಿದು ಹೋಗುತ್ತಿವೆ‌. ಇನ್ನು ಸರ್ಕಲ್ ನಲ್ಲಿ ಕಟ್ಟಿರೋ ವಿವಿಧ ಬ್ಯಾನರ್ ಗಳನ್ನು ಹರಿದು ಹಾಕುತ್ತಿವೆ. ಹೀಗಾಗಿ, ಸಾರ್ವಜನಿಕರಿಗೆ ಮಂಗಗಳ ಕೀಟಲೆಗಳದ್ದೇ ಸಮಸ್ಯೆಯಾಗಿದೆ‌.

ನಂದಿಕಟ್ಟಾದಲ್ಲಿ ಮೆಕ್ಕೆಜೋಳ ಬೆಳೆದ ಅನ್ನದಾತರಿಗೆ ಸನ್ಮಾನ ಕಾರ್ಯ..

ನಂದಿಕಟ್ಟಾದಲ್ಲಿ ಮೆಕ್ಕೆಜೋಳ ಬೆಳೆದ ಅನ್ನದಾತರಿಗೆ ಸನ್ಮಾನ ಕಾರ್ಯ..

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಖಾಸಗಿ ಮೆಕ್ಕೆಜೋಳ ಬೀಜ ಬಿತ್ತಿ ಉತ್ತಮ‌ ಫಸಲು ಪಡೆದ ರೈತರಿಗೆ ಕಂಪನಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉತ್ತಮವಾಗಿ ಫಸಲು ಬೆಳೆದ ನಂದಿಕಟ್ಟಾದ ರೈತ ಶಿವಾಜಿ ರಾಧಾಪುರ ಹಾಗೂ ಹುಲಿಹೊಂಡ ಗ್ರಾಮದ ರೈತ ಸಿದ್ದಣ್ಣ ವಾಲೀಕಾರ್ ಗೆ ಸನ್ಮಾನಿಸಲಾಯಿತು. ಈ ವೇಳೆ ನಂದಿಕಟ್ಟಾ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು, ಮುಖಂಡರು ಭಾಗಿಯಾಗಿದ್ರು.

ಪೆಟ್ರೊಲ್ ಹಾಕಿಸಿಕೊಳ್ಳುವಾಗ ಬೈಕ್ ಗೆ ತಗುಲಿದ ಬೆಂಕಿ, ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಚಾವ್..!

ಪೆಟ್ರೊಲ್ ಹಾಕಿಸಿಕೊಳ್ಳುವಾಗ ಬೈಕ್ ಗೆ ತಗುಲಿದ ಬೆಂಕಿ, ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಚಾವ್..!

ಧಾರವಾಡ: ತಾಲೂಕಿನ ಮುಮ್ಮಿಗಟ್ಟಿ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಬೆಂಕಿ ಅವಘಡವಾಗಿದೆ. ಪೆಟ್ರೋಲ್ ಹಾಕಿಸಿಕೊಳ್ಳುವಾಗಲೇ ಬೈಕ್ ಗೆ ತಗುಲಿದ ಬೆಂಕಿಯಿಂದ, ಪೆಟ್ರೊಲ್ ಬಂಕ್ ನಲ್ಲಿ ಬೆಂಕಿ ಆವರಿಸಿಕೊಂಡಿದೆ. ಬೈಕ್ ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಬಂಕ್ ನ ಸಿಬ್ಬಂದಿಗಳು ಸಮಯಪ್ರಜ್ಞೆಯಿಂದ ಬೆಂಕಿ ನಂದಿಸಿದ್ದಾರೆ. ಇದ್ರಿಂದ ಭಾರೀ ಬೆಂಕಿ ದುರಂತ ಅದೃಷ್ಟವಶಾತ್ ತಪ್ಪಿದೆ. ಘಟನೆಯ ಸಂಪೂರತಣ ದೃಷ್ಯ ಸಿಸಿಟಿಯಲ್ಲಿ ಸೆರೆಯಾಗಿದೆ‌‌.

ಗಬ್ಬೇದ್ದು ಹೋಗಿದೆ ಹುನಗುಂದ ಬಸವಣ್ಣ ಹೊಂಡ, ಪಿಡಿಓ ಸಾಹೇಬ್ರೇ ಒಂದಿಷ್ಟು ಗಮನಿಸಿ..!

ಗಬ್ಬೇದ್ದು ಹೋಗಿದೆ ಹುನಗುಂದ ಬಸವಣ್ಣ ಹೊಂಡ, ಪಿಡಿಓ ಸಾಹೇಬ್ರೇ ಒಂದಿಷ್ಟು ಗಮನಿಸಿ..!

ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರೇ ಒಮ್ಮೆಯಾದ್ರೂ ನೀವು ಗ್ರಾಮದಲ್ಲಿರೋ ಬಸವಣ್ಣ ದೇವರ ಹೊಂಡ ಕಣ್ತುಂಬ ನೋಡಿದ್ದೀರಾ..? ಅಧ್ಯಕ್ಷರೇ, ನೀವಾದ್ರೂ ಈ ಹೊಂಡದ ಅವ್ಯವಸ್ಥೆ, ಗಬ್ಬೇದ್ದು ಹೋಗಿರೋ ಪರಿಯನ್ನ ಕಂಡಿದ್ದೀರಾ.. ದಯವಿಟ್ಟು ಒಮ್ಮೆ ಬಂದು ದರ್ಶನ ಮಾಡ್ಕೊಳ್ಳಿ, ಹಾಗಂತ, ಬಸವಣ್ಣ ಹೊಂಡದ ಅಕ್ಕಪಕ್ಕದ ಜನ ಹಿಡಿಶಾಪ ಹಾಕ್ತಿದಾರೆ. ಆದ್ರೆ, ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರು ಮಾತ್ರ ಗಪ್ ಚುಪ್ ಆಗಿದ್ದಾರೆ. ಈಗ ಈ ದೃಷ್ಯದಲ್ಲಿ ನೀವು ನೋಡಿರೋ ಈ ಹೊಂಡ ಒಂದು ಕಾಲದಲ್ಲಿ ಇಡೀ ಊರಿನ ಜನರ ಆರಾಧ್ಯತೆಗೆ ಸಾಕ್ಷಿಯಾಗಿತ್ತು. ಈ ಹೊಂಡದ ನೀರು ಗೃಹಬಳಕೆಗೆ, ಜಾನುವಾರುಗಳಿಗೆ ಜೀವಜಲವಾಗಿತ್ತು. ಆದ್ರೆ, ಹುನಗುಂದ ಗ್ರಾಮ ಪಂಚಾಯತಿಯ ಬೇಜವಾಬ್ದಾರಿಗೆ ಈ ಹೊಂಡ ಈಗ ಈ ಸ್ಥಿತಿಗೆ ಬಂದು ತಲುಪಿದೆ. ಹೊಂಡದಲ್ಲಿ ಬರಪೂರ ನೀರಿದೆ. ಆದ್ರೂ ಕೂಡ ನೀರಿನ ದರ್ಶನವೇ ಅಗಲ್ಲ. ಯಾಕಂದ್ರೆ, ಇಡೀ ಹೊಂಡದಲ್ಲಿ ಗಿಡಗಂಟಿಗಳು, ಕಸದ ರಾಶಿ ಆವರಿಸಿಕೊಂಡಿದೆ. ಹೀಗಾಗಿ, ಪವಿತ್ರವಾಗಿದ್ದ ಹೊಂಡವೀಗ ಕೊಳಚೆ ಗುಂಡಿಯಂತಾಗಿದೆ. ರಾತ್ರಿಯಾದ್ರೆ ಭಯ..! ಇನ್ನು, ಈ...

ಮುಂಡಗೋಡ ತಾಲೂಕಿನಲ್ಲಿ ಶೇ‌. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!

ಮುಂಡಗೋಡ ತಾಲೂಕಿನಲ್ಲಿ ಶೇ‌. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!

ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ‌ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ‌ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ‌ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು ಆಯಾ ಗ್ರಾಮಗಳಲ್ಲಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಮತದಾನಕ್ಕೆ ತೆರಳಿದ್ದು ವಿಶೇಷವಾಗಿತ್ತು. ಮತಪೆಟ್ಟಿಗೆ ಕಾರವಾರಕ್ಕೆ..! ಇನ್ನು ಸಂಜೆಯ ವೇಳೆಗೆ ಸಂಪೂರ್ಣಗೊಂಡ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಯಶಸ್ವಿಯಾಗಿ‌ ಮುಗಿಸಿದ್ರು. ನಂತರ ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ವಾಹನದಲ್ಲಿ ಕಾರವಾರಕ್ಕೆ ರವಾನಿಸಲಾಗಿದೆ. ಈ ವೇಳೆ ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ನೇತೃತ್ವದಲ್ಲಿ ಮತಪೆಟ್ಟಿಗೆಗಳನ್ನು ವಾಹನದಲ್ಲಿ ಭರ್ತಿ‌ಮಾಡಿ ಕಾರವಾರಕ್ಕೆ ರವಾನಿಸಲಾಗಿದೆ.

ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ‌ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ ರೈತರು ತಂತ್ರಗಳ ಮೊರೆ ಹೋಗಿದ್ದಾರೆ..

ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!

ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೂ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಗ್ರಾಮ‌ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಸದಸ್ಯರೇಲ್ಲರೂ ಒಂದೆಡೆ ಸೇರಿ ಸಭೆ ಮಾಡಿದ್ರು. ಮತದಾನ ಪ್ರಕ್ರಿಯೆಯ ಕುರಿತು ಚರ್ಚಿಸಿದ್ರು. ಮತದಾನ‌ ಮಾಡುವ ವಿಧಾನಗಳ ಬಗ್ಗೆ ತಿಳುವಳಿಕೆ ಹಂಚಿಕೊಂಡ್ರು.. ಆನಂತರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ರು. ಅಂದಹಾಗೆ, ಮತದಾನ ಕೇಂದ್ರದಲ್ಲಿ ಸುಗಮ‌ ಮತದಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ.

ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!

ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!

ಮುಂಡಗೋಡ: ತಾಲೂಕಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಳಗಿನಿಂದಲೂ ಭರ್ಜರಿಯಾಗೇ ನಡೆದಿದೆ. ತಾಲೂಕಿನ ಹುನಗುಂದದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಹುನಗುಂದದ ಶ್ರೀ ವಿಠಲ ರುಕ್ಮಾಯಿ ಹರಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸದಸ್ಯರು, ಅಲ್ಲೇ ಸಭೆ ನಡೆಸಿದ್ರು. ಆ ನಂತರದಲ್ಲಿ ಇಲ್ಲಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು. ಅದ್ರಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರೂ ಕೂಡ ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮತದಾನ ಮಾಡಿದ್ರು.

ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಮುಂಡಗೋಡ ಕಾಂಗ್ರೆಸ್..! ಅಷ್ಟಕ್ಕೂ ಬಿಜೆಪಿ ಒಳಗುದಿಗೆ ಹೊರಬಿದ್ದ ಹುದ್ದರಿಗಳೆಷ್ಟು..?

ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಮುಂಡಗೋಡ ಕಾಂಗ್ರೆಸ್..! ಅಷ್ಟಕ್ಕೂ ಬಿಜೆಪಿ ಒಳಗುದಿಗೆ ಹೊರಬಿದ್ದ ಹುದ್ದರಿಗಳೆಷ್ಟು..?

ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಟವಾಗ್ತಿದೆಯಾ..? ಹೌದು ಅಂತಿದೆ ಇತ್ತಿಚಿನ ಬೆಳವಣಿಗೆಗಳು. ಪ್ರಶಾಂತ್ ದೇಶಪಾಂಡೆ ಇಡಿ ಇಡಿಯಾಗಿ ಫಿಲ್ಡಿಗಿಳಿದ ಬಳಿಕ ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅದೇಲ್ಲಿಂದಲೋ ಶಕ್ತಿ ತುಂಬಿಕೊಂಡಂಗಿದೆ. ಹೀಗಾಗಿನೇ ಕಾಂಗ್ರೆಸ್ ಗೆ ಹಿಂಡುಗಟ್ಟಲೇ ಬಿಜೆಪಿಯ ಕಾರ್ಯಕರ್ತರು ಸೇರಿಕೊಳ್ತಿದಾರೆ. ಫಿನಿಕ್ಸ್ ನಂತೆ..! ಅಷ್ಟಕ್ಕೂ ಬಿಜೆಪಿ ಅನ್ನೋ ಆಡಳಿತಾರೂಢ ಪಕ್ಷದ ಅಂಗಳದಿಂದ ಕಾಂಗ್ರೆಸ್ ಪಡಸಾಲೆಗೆ ಯಾಕೆ ಈ ರೀತಿಯ ಜಿಗಿತಗಳಾಗ್ತಿವೆ..? ಇದನ್ನೇಲ್ಲ ಬಹುಶಃ ಹೆಬ್ಬಾರ್ ಪಡೆಗೆ ಯೋಚಿಸಲು ಪುರುಸೋತ್ತೇ ಇಲ್ಲವೆನೊ. ಅಸಲು, ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಗಿಯೇ ಹೋಯ್ತು ಅಂತಾ ಎಲ್ಲೆಂದರಲ್ಲಿ ಎದೆಯುಬ್ಬಿಸಿ ಹೇಳಕೊಂಡು ತಿರುಗಾಡ್ತಿದ್ದ ಮಂದಿಗೇಲ್ಲ ಈಗ ಅದೇ ಕಾಂಗ್ರೆಸ್ ಹೊಚ್ಚಹೊಸ ಖದರ್ರಿನಲ್ಲಿ ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಅಂತಾ ಅರ್ಥವೂ ಆಗಿಲ್ಲವಾ..? “ಮಾನೆ” ಪವಾಡ..!                                    ಅಂದಹಾಗೆ, ಎರಡು ದಿನದ ಹಿಂದೆ ತಾಲೂಕಿನಲ್ಲಿ ಹಾನಗಲ್ ನೂತನ ಶಾಸಕ...

ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!

ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!

ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..!                          ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ ಕಾಲೇಜು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸದ್ಯಕ್ಕೆ ತಜ್ಞರು ನೀಡುತ್ತಿರುವ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಯವರು, ತಾಂತ್ರಿಕ ಸಲಹಾ ಸಮಿತಿ...

error: Content is protected !!