ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಹಸಿಮೇವು ತಿಂದು ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇವು ತಿಂದ ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುನಗುಂದ ಗ್ರಾಮದ ಬಸವರಾಜ್ ಗುರುಸಿದ್ದಪ್ಪ ಚಬ್ಬಿ ಎಂಬುವವರಿಗೆ ಸೇರಿದ ಸುಮಾರು 37 ಸಾವಿರ ರೂ. ಮೌಲ್ಯದ ಆಕಳು ಮತ್ತು ಕರು ದಾರುಣ ಸಾವು ಕಂಡಿದ್ದು ಆಘಾತ ತಂದಿದೆ. ಇನ್ನು ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಸಾವಿಗೆ ಕಾರಣವೇನು ಅಂತ ಪರಿಶೀಲನೆ ನಡೆಸಿದ್ದಾರೆ.
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಹಸಿಮೇವು ತಿಂದ ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ದಾರುಣ ಸಾವು, ಹುನಗುಂದದಲ್ಲಿ ಘಟನೆ..!
ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಬಿಜೆಪಿಗೆ ಭಾರೀ ಮುಖಭಂಗ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಸೊಸೈಟಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ. ನಿಚ್ಚಳ ಬಹುಮತವಿದ್ದರೂ ಬಿಜೆಪಿಗೆ ಅಧಿಕಾರ ಅಕ್ಷರಶಃ ಕೈತಪ್ಪಿದೆ. ಬದಲಾಗಿ, ಕಾಂಗ್ರೆಸ್ ಬೆಂಬಲಿತರು ಸೊಸೈಟಿಯಲ್ಲಿ ಜಯದ ಝಂಡಾ ಹಾರಿಸಿದ್ದಾರೆ. ಇದ್ರೊಂದಿಗೆ ಇಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಆದಂತಾಗಿದೆ. ಅಂದಹಾಗೆ, ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಧರ್ಮಣ್ಣ ಬಸಪ್ಪ ಅರೆಗೊಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಬಿಜೆಪಿಯ ರಾಜವ್ವ ದೇವಿಂದ್ರಪ್ಪ ಹಾನಗಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ಸದಸ್ಯ ಬಲದ ಚೌಡಳ್ಳಿ ಸೊಸೈಟಿಯಲ್ಲಿ ಕೇವಲ 7 ಸದಸ್ಯರ ಅಧ್ಯಕ್ಷರ ಪರವಾಗಿ ಮತ ಚಲಾಯಿಸಿದ್ದಾರೆ. ಹಾಗೆನೇ, ಉಪಾಧ್ಯಕ್ಷ ಸ್ಥಾನಕ್ಕಾಗಿ ಕಣದಲ್ಲಿದ್ದ ಬಿಜೆಪಿ ಬೆಂಬಲಿತ ಸದಸ್ಯೆಗೆ 7 ಸದಸ್ಯರು ಮತ ಚಲಾಯಿಸಿದ್ದಾರೆ. ಹೀಗಾಗಿ, ಅಧ್ಯಕ್ಷ ಸ್ಥಾನ ಬಿಜೆಪಿಗೆ ತಪ್ಪಿ ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ.
ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ ಕೊಲೆಯ ಆರೋಪಿಯಾಗಿದ್ದಾನೆ. ಘಟನೆ ಏನು..? ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ರಾತ್ರಿ ಕೊಲೆಯಾದ ವ್ಯಕ್ತಿ Jamyang Dakpa @ Lobsang S/o Tenzin Yeshi ತನ್ನ ಮನೆಯ ಸಮೀಪವೇ ಇರುವ ಮಾಜಿ ಸೈನಿಕನ ಮನೆಗೆ ಕೈಯಲ್ಲಿ ಚಾಕು ಹಿಡಿದುಕೊಂಡು ಹೋಗಿದ್ದ ಎನ್ನಲಾಗಿದೆ. ಆ ಹೊತ್ತಲ್ಲಿ, ಬಾಗಿಲು ಬಡಿದಾಗ ಬಾಗಿಲು ತೆರೆದ ಮಾಜಿ ಸೈನಿಕನ ಮೇಲೆ ಏಕಾಏಕಿ ದಾಳಿ ಮಾಡಿದ್ದ...
ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ 1 ಲಕ್ಷ ರೂ. ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಅನುದಾನ 1 ಲಕ್ಷ ರೂ. ಮೊತ್ತದ ಡಿ ಡಿ ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಹಾಗೂ ಯೋಜನಾಧಿಕಾರಿ ಗಳು DD ಯನ್ನು ಬಸವೇಶ್ವರ ಟ್ರಸ್ಟ ಕಮಿಟಿ ಅಧ್ಯಕ್ಷರಿಗೆ, ಸರ್ವ ಸದ್ಯಸರಿಗೆ ಹಸ್ತಾಂತರಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದ್ಯಸ್ಯರು, ಹಾಗೂ ಸಮಿತಿಯ ಸದಸ್ಯರು, ಗಣ್ಯರು ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?
ಮುಂಡಗೋಡ ತಾಲೂಕಿನ ಬಸಾಪುರ, ನಂದಿಕಟ್ಟಾ, ಅಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮರಿಯೊಂದಿಗೆ ತಾಯಿ ಚಿರತೆ ಇಲ್ಲಿ ಓಡಾಡುತ್ತಿದೆ ಅನ್ನೋದು ಕನ್ಫರ್ಮ್ ಆಗಿದೆ. ಹಾಗಂತ ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಬಸಾಪುರದ ಕಾಂಡಚಿನ ಗದ್ದೆಗಳಲ್ಲಿ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸಾರ್ವಜನಿಕರಿಗೆ ಅರಣ್ಯ ಇಲಾಖೆಯಿಂದ ಎಚ್ಚರಿಕೆಯ ಸಂದೇಶಗಳನ್ನು ಡಂಗುರದ ಮೂಲಕ ರವಾನಿಸಲಾಗುತ್ತಿದೆ. ನಾಯಿ ಕೊಂಡೊಯ್ದ ಚಿರತೆ..! ಅಂದಹಾಗೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬಸಾಪುರ ಸಮೀಪದ ಕಾಡಂಚಿನ ಗದ್ದೆಯಲ್ಲಿ ಗೋವಿನಜೋಳ ಕಾಯಲು ಹೋಗಿದ್ದ ರೈತನಿಗೆ ಚಿರತೆ ಇರುವುದು ಕಂಡು ಬಂದಿದೆ. ಗದ್ದೆ ಕಾಯಲು ಜೊತೆಯಿದ್ದ ನಾಯಿಯನ್ನು ಚಿರತೆ ಎತ್ತಿಕೊಂಡು ಹೋಗಿ ತಿಂದು ಹಾಕಿತ್ತು. ನಂತರದಲ್ಲಿ, ಎಚ್ಚೆತ್ತುಕೊಂಡಿದ್ದ ಆ ಭಾಗದ ರೈತರು, ಸಾರ್ವಜನಿಕರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಚಿರತೆ ಹೆಜ್ಜೆ ಗುರುತು ಪತ್ತೆ..! ಇನ್ನು, ಚಿರತೆ ಬಂದಿದೆ ಅನ್ನೋ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆ ಬಂದಿರೋ...
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ: ಮೂವರ ಜೀವಂತ ದಹನ, ಇನ್ನೂ ಹಲವರು ಸಾವು ಶಂಕೆ..!
ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಈ ವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಈಗ್ಗೆ ಕೆಲವೇ ಹೊತ್ತಿನಲ್ಲಿ ಸಂಜೆ 5 ಗಂಟೆ ವೇಳೆಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್ಯಾಕ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳಗೆ ಇನ್ನು ಹಲವರ ಶವಗಳು ಇರಬಹುದು ಎಂದು ಶಂಕಿಸಲಾಗಿದೆ. ಪರಿಶೀಲನೆಯ ಕಾರ್ಯ ಮುಂದುವರೆದಿದ್ದು, ಗೋದಾಮಿನ ಒಳಗಡೆ ನಾಲ್ವರ ಇದ್ದರೆಂದು ಹೇಳಲಾಗುತ್ತಿದೆ. ಭೀಕರ ಘಟನೆಯಲ್ಲಿ ಸಾವನ್ನಪ್ಪಿದವರನ್ನು ತಾಲೂಕಿನ ಕಾಟೇನಹಳ್ಳಿ ಗ್ರಾಮದ ಕಾರ್ಮಿಕರೆಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರ ಶೋಕಸಾಗರದಲ್ಲಿದ್ದಾರೆ. ಮೂವರ ಶವಗಳನ್ನು ಸದ್ಯಕ್ಕೆ ಹಾವೇರಿಯ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಗೋದಾಮಿನ ಪೂರ್ಣಪ್ರಮಾಣದ ಪರಿಶೀನೆ ಮುಕ್ತಾಯದ ನಂತರ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಷ್ಟು...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ ಹೆಬ್ಬಾರ್ ಪಡೆಯ ಅಂಗಳದಲ್ಲಿ ನಾಜೂಕಿನ ಪ್ರತ್ಯುತ್ತರಗಳು ಸಿಗುತ್ತಿವೆ. ಇಂತಹದ್ದೊಂದು ರೂಮರ್ರುಗಳು ಹೆಚ್ಚೆಚ್ಚು ಹರಡಿದಷ್ಟು ಹೆಬ್ಬಾರ್ ಪಡೆಗೆ ಕ್ಷೇತ್ರದ ಜನರ ಮನಸ್ಥಿತಿ ಅರಿಯಲು ಸಾಧನವಾಗುವಂತಿದೆ ಅಷ್ಟೆ. ಆದ್ರೆ, ಅದರಾಚೆಗಿನ ಹಕೀಕತ್ತುಗಳು, ಲಾಭ ನಷ್ಟಗಳ ಗುಣಾಕಾರಗಳು, ಭಾಗಾಕಾರಗಳು ಒಳಗೊಳಗೇ ಸಮೀಕರಣಗೊಳ್ಳುತ್ತಿವೆ. ರಾಜಕೀಯ ಚಾಣಾಕ್ಷತೆಯಲ್ಲಿ ಲೆಕ್ಕ ಹಾಕ್ತಿರೋ ಶಿವರಾಮ್ ಹೆಬ್ಬಾರ್ ತಮ್ಮದೇ ಆದ ದಾರಿಯಲ್ಲಿ ಈಗಾಗಲೇ ಎಲ್ಲ ಮಜಲುಗಳ ಬ್ಲ್ಯೂ ಪ್ರಿಂಟ್ ರೆಡಿ ಮಾಡಿಕೊಂಡು ಆಗಿದೆಯಂತೆ. ಡಿಸೆಂಬರ್...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು. ಆ ಹೊತ್ತಲ್ಲಿ ಮತ್ತೋರ್ವ ಅಡುಗೆ ಸಹಾಯಕಿ ಪಾರ್ವತಿ ಎಂಬುವರ ಜೊತೆ ಸೇರಿ ಸಾಂಬಾರ ಪಾತ್ರೆ ತರುವಾಗ ಅನ್ನಪೂರ್ಣ ಕಾಲು ಜಾರಿ ಬಿದ್ದಿದ್ದಳು. ಹೀಗಾಗಿ, ಬಿಸಿ ಸಾಂಬಾರ ಅವರ ಮೈ ಮೇಲೆ ಬಿದ್ದಿತ್ತು. ಪರಿಣಾಮ, ಅವರ ದೇಹವು ತೀವ್ರ ಸುಟ್ಟು ಗಾಯವಾಗಿತ್ತು. ತಕ್ಷಣವೇ ಗಾಯಗೊಂಡ ಅಡುಗೆ ಸಹಾಯಕಿಯನ್ನು ತಾಲೂಕಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ,...
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!
ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಅಳವಡಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಮರ್ಪಕ ಸಿಸಿಟಿವಿಗಳನ್ನು ಅಳವಡಿಸುವುದು, ಅಲ್ಲದೇ, ದಿನದ 24 ಗಂಟೆಯೂ ಕಾವಲುಗಾರರನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಜಾಗೃತ ಗಂಟೆಗಳನ್ನು ಅಳವಡಿಸಿ, ರಾತ್ರಿ ಹೊತ್ತಿನಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡುವ ಕುರಿತು ತಿಳಿಸಿದ್ದಾರೆ. ಇದರಿಂದ ಕಳ್ಳರ ಕೈಚಳಕ ತಡೆಗಟ್ಟುವಲ್ಲಿ ಮಹತ್ತರ ಕ್ರಮ ಕೈಗೊಳ್ಳುವಂತಾಗುತ್ತದೆ ಅಂತಾ ಜಾಗ್ರತಿ ಮೂಡಿಸಿದ್ದಾರೆ. ಜ್ಯುವೇಲ್ಲರ್ಸ್ ಗೆ ಸೂಚನೆ..! ಇನ್ನು ಬಹುತೇಕ ಕಳ್ಳರ ಕೈಚಳಕಕ್ಕೆ...
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!
ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ ಹತ್ತಿರ, ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪರಿಣಾಮ, ಬರೋಬ್ಬರಿ 12 ಜನರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ, ನಾಲ್ಕು ಆರೋಪಿಗಳು ಮಾತ್ರ ಪೊಲೀಸರಿಗೆ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ. ಇನ್ನು ಆಟದಲ್ಲಿ ಬಳಸಿದ್ದ ಬರೋಬ್ಬರಿ 10,940 ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಹಳೂರಿನಲ್ಲಿ..! ಇನ್ನು, ಮುಂಡಗೋಡ ಪಟ್ಟಣದ ಹಳೂರಿನ ಲಕ್ಷ್ಮೀದೇವಿ ದೇವಸ್ಥಾನದ ಪಕ್ಕದಲ್ಲಿ ಇಸ್ಪೀಟ ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು...