ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆ ಎಲ್ಲಾ ಬಸ್ಗಳು ಫುಲ್ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ ಒಳಪಡುವ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಹಾವೇರಿ ಸೇರಿ 9 ಜಿಲ್ಲೆಯ ಸಾರಿಗೆ ವಿಭಾಗದಲ್ಲಿ ಮಹಿಳೆಯರ ಪ್ರಯಾಣಿಕರ ಸಂಖ್ಯೆ ಕೋಟಿ ದಾಟಿದೆ. ಹೌದು ಜೂನ್ 11ರಿಂದ 27ರವರೆಗೆ ಬರೊಬ್ಬರಿ 2,14,75,000 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರ ಟಿಕೆಟ್ ಮೌಲ್ಯ 54 ಕೋಟಿ ರೂಪಾಯಿಗೂ ಅಧಿಕವಾಗಿದೆ. ಜೂ.27 ರ ಒಂದೇ ದಿನ 14,88,000 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳಸಿದ್ದಾರೆ. ಇನ್ನು ಮಹಿಳೆಯರ...
Top Stories
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಬಸವನಕಟ್ಟಿ ಕರಡಿ ದಾಳಿ ಕೇಸ್: ಪ್ರತಿದಾಳಿ ಮಾಡಿ ಪತಿ ಹಾಗೂ ತಮ್ಮನ ಪ್ರಾಣ ಉಳಿಸಿದ ಸಬೀನಾ..! ಗಾಯಗೊಂಡವರ ಸ್ಥಿತಿ ಹೇಗಿದೆ ಗೊತ್ತಾ..?
ಮುಂಡಗೋಡ ಸಮೀಪದ ಶಿಗ್ಗಾವಿ ತಾಲೂಕಿನ ಬಸವನಕಟ್ಟಿಯಲ್ಲಿ, ನಿನ್ನೆ ನಡೆದಿದ್ದ ಕರಡಿ ದಾಳಿಯಲ್ಲಿ ಗಾಯಗೊಂಡಿದ್ದವರು ಹುಬ್ನಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಭೀಕರ ಕರಡಿ ದಾಳಿಯಿಂದ ತನ್ನ ಪತಿ ಹಾಗೂ ಸಹೋದರನನ್ನು ದಿಟ್ಟತನದಿಂದ ಹೋರಾಡಿ ರಕ್ಷಿಸಿಕೊಂಡ ಮಹಿಳೆ ಈಗ ಭಾರೀ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅಂದಹಾಗೆ, ಬಸವನಕಟ್ಟಿ ಗ್ರಾಮದ ಸಬೀನಾ ಎಂಬುವ ಮಹಿಳೆ ನಿನ್ನೆ ಶನಿವಾರ ತನ್ನ ಪತಿ ಹಾಗೂ ಸಹೋದರನ ಜೊತೆ ಗದ್ದೆಗೆ ತೆರಳಿದ್ದರು. ಈ ವೇಳೆ ತನ್ನ ಮರಿಗಳೊಂದಿಗೆ ಬಂದಿದ್ದ ಕರಡಿ, ತನ್ನ ಮರಿಗಳಿಗೆ ಇವ್ರು ಸಮಸ್ಯೆ ಮಾಡಬಹುದು ಅಂತಾ ಭಾವಿಸಿ ಏಕಾಏಕಿ ಮೂವರ ಮೇಲೂ ದಾಳಿ ಮಾಡಿತ್ತು. ಭಯಾನಕ ಪ್ರತಿದಾಳಿ..! ಈ ವೇಳೆ ಕರಡಿ ದಾಳಿ ನಡೆಸಿ ಬಸೀರ್ ಸಾಬ್ ಹಾಗೂ ರಜಾಕ್ ಗೆ ತೀವ್ರ ಗಾಯಗೊಳಿಸಿತ್ತು. ಅಲ್ಲದೇ ಇದೇ ವೇಳೆ ಸಬೀನಾ ಮೇಲೂ ದಾಳಿ ಮಾಡಿದ ಕರಡಿಯ ಜೊತೆ ಕಾದಾಡಿದ ಸಬೀನಾ ಕೊಡಲಿಯಿಂದ ಕರಡಿ ಮೇಲೆ ಪ್ರತಿದಾಳಿ ಮಾಡಿದ್ದಳು. ಹೀಗಾಗಿ, ಕರಡಿ ಮೇಲೆ ಪ್ರತಿ ದಾಳಿ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್ ಸಂಪೂರ್ಣ ಆ್ಯಕ್ಟಿವ್ ಆಗಿರೋ ಎಲ್ಲಾ ಸೂಚನೆ ಸಿಕ್ಕಿದೆ. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಯಂ ಆಗಿ ಮುಂಡಗೋಡ ಭಾಗದ ಕೆಲವು ಕಡೆ ನಿರಂತರ ಅರಣ್ಯಗಳ್ಳತನ ಮಾಡುತ್ತಿದ್ದಾರಾ..? ಅನ್ನೊ ಅನುಮಾನಕ್ಕೆ ಕಾರಣವಾಗಿದ್ದು, ಸದ್ಯ ಗುಂಜಾವತಿ ಕಟ್ಟಿಗೆ ಕಳ್ಳತನದ ವಿಫಲ ಯತ್ನದ ಕೇಸಿನಲ್ಲಿ ಶಿರಾಳಕೊಪ್ಪದ ಇಬ್ಬರು ಅಂದರ್ ಆಗಿದ್ದಾರೆ. ಶಿಖಾರಿಪುರ ತಾಲೂಕಿನ ಇನಾಮ್ ಮುತ್ತಳ್ಳಿ ಗ್ರಾಮದ ಕರೆಪ್ಪ ದುಗ್ಗಪ್ಪ ಹುಬ್ಬಳ್ಳಿ ಹಾಗೂ ಏಕಾಂತ್ ಲಕ್ಷಪ್ಪ ಹುಲ್ಲತ್ತಿ ಎಂಬುವವರು...
ಕೋಣನಕೇರಿ ಸಮೀಪದ ಬಸವನಕಟ್ಟಿ ಗ್ರಾಮದಲ್ಲಿ ಮೂವರ ಮೇಲೆ ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ..!
ಶಿಗ್ಗಾವಿ: ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರ ಮೇಲೆ ಭೀಕರವಾಗಿ ಕರಡಿ ದಾಳಿ ಮಾಡಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಸಮೀಪದ ಕೋಣನಕೇರಿ ರಸ್ತೆಯಲ್ಲಿರೋ ಬಸವನಕಟ್ಟಿ ಗ್ರಾಮದ ಬಸಿರಸಾಬ್ ಸವದತ್ತಿ ಹಾಗೂ ಶಬಿನಾಬಾನು ಸವದತ್ತಿ, ರಜಾಕ್ ನಾಲವತ್ತಿ ಎಂಬುವ ಮೂವರ ಮೇಲ ಕರಡಿ ದಾಳಿ ಮಾಡಿದೆ. ಶನಿವಾರ ಮದ್ಯಾಹ್ನ ಜಮೀನಿಗೆ ಕೆಲಸಕ್ಕೆ ಎಂದು ಹೋದ ವೇಳೆ ಕರಡಿ ದಾಳಿ ಮಾಡಿದ್ದು, ಗಾಯಗೊಂಡಿರೋ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.
ಚಿಗಳ್ಳಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಗೆ ರವಾನೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಯುವಕನೊರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಂದಹಾಗೆ, ಫಕ್ಕಿರಸ್ವಾಮಿ ಪಾಂಡು ರಾಣೋಜಿ ಎಂಬುವವನೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಅಂತಾ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ ಆರೋಪಿಯೂ ಸೇರಿ ಐವರು ಅಂದರ್..!
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ ಒಟ್ಟೂ ಐವರು ಹಂತಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ ಕುಮಟಾ ಪೊಲೀಸರು. ಕ್ರೂಸರ್ ಚಾಲಕ ಇಂದೂರಿನವನು..! ಅಂದಹಾಗೆ, ಈ ಪ್ರಕರಣದಲ್ಲಿ 5 ನೇ ಆರೋಪಿಯಾಗಿರೋ ಮುಂಡಗೋಡ ತಾಲೂಕಿನ ಇಂದೂರಿನ ಅಮಿತ್ ಅಶೋಕ ಗೋಕಲೆ (26) ಕೂಡ ಆರೆಸ್ಟ್ ಆಗಿದ್ದಾನೆ. ಇನ್ನು ಪ್ರಕರಣದ ಪ್ರಮುಖ ಆರೋಪಿ ಕೊಲೆಯಾದ ಯಲ್ಲಮ್ಮಳ ಪತಿಯ ಸಹೋದರ, ಶಿಗ್ಗಾವಿ ತಾಲೂಕಿನ ಚಿಕ್ಕ ಮಲ್ಲೂರು ಗ್ರಾಮದ ಮಹೇಶ ಶಿವಪ್ಪ ದೊಡ್ಡಮನಿ (36), ಇಂದೂರಿನ...
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ ಅದು ಹೇಗಪ್ಪ ತಗಲಾಕ್ಕೊಂಡ ಅಂತಾ ಆ ಗ್ರಾಮದ ಮಂದಿ ತಲೆ ಕೆರೆದುಕೊಳ್ತಿದಾರಂತೆ. ಅದು ದೇವಿಮನೆ ಘಟ್ಟ..! ಅಸಲು, ಜೂನ್ 17 ರಂದು ಕುಮಟಾದ ಕತಗಾಲ್ ಸಮೀಪದ ದೇವಿಮನೆ ಘಟ್ಟದಲ್ಲಿ ಅದೊಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ಅಂದಾಜು ಮೂವತ್ತರ ಆಸುಪಾಸಿನ ನೀಲಿ ಬಣ್ಣದ ಚೂಡಿ ತೊಟ್ಟಿದ್ದ ಆ ಮಹಿಳೆ ಹೆಣವಾಗಿ ಸಿಕ್ಕಿದ್ದಳು. ಹೀಗಾಗಿ, ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ರು. ಸತ್ಯ ಅಂದ್ರೆ,...
ಸೊಂಟ ನೋವಿಗೆ ಪ್ಯಾರಾಲಿಸಿಸ್ ಇಂಜೆಕ್ಷನ್ ಕೊಟ್ಟ ವೈದ್ಯ ಮಹಾಶಯ..! ಕಾರವಾರದ ಹಳಗಾದಲ್ಲಿ ಪ್ಯಾರಾಲಿಸಿಸ್ ಇಂಜೆಕ್ಷನ್ ಪಡೆದ ಮಹಿಳೆ ಸಾವು..!
ಕಾರವಾರ : ಹಳಗಾದ ಪ್ಯಾರಾಲಿಸೀಸ್ ಇಂಜೆಕ್ಷನ್ ತೆಗೆದುಕೊಳ್ಳಲು ಹೋಗುವವರೇ ಹುಶಾರ್..! ಪ್ಯಾರಾಲಿಸೀಸ್ ಆಗದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತೆಗೆದುಕೊಂಡ ಮಹಿಳೆಯೋರ್ವಳು ಇವತ್ತು ಸಾವನ್ನಪ್ಪಿದ್ದಾಳೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಎಂಬುವ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಇಂದು ತನ್ನ ತಂದೆಗೆ ಪ್ಯಾರಾಲಿಸಿಸ್ ಚಿಕಿತ್ಸೆ ಕೊಡಿಸಲೆಂದು ಕೊಪ್ಪಳದಿಂದ ಕಾರವಾರದ ಹಳಗಾ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ತನಗೆ ಬ್ಯಾಕ್ ಪೇನ್, ಅಂದ್ರೆ ಸೊಂಟ ನೋವು ಬಾಧಿಸುತ್ತಿರೋ ಹಿನ್ನೆಲೆಯಲ್ಲಿ ವೈದ್ಯರಿಗೆ ಹೇಳಿದ್ದಾಳೆ. ಮುಂಜಾಗ್ರತೆಗಾಗಿ..! ಹೀಗಾಗಿ, ವೈದ್ಯರು ಪ್ಯಾರಾಲಿಸಿಸ್ ಬರದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತಕ್ಕೊಳ್ಳಿ ಅಂತಾ ಸಲಹೆ ಮಾಡಿದ್ದಾರೆ ಎನ್ನಲಾಗಿದೆ. ವೈದ್ಯರು ಹೇಳಿದ ಕೂಡಲೇ ಮಹಿಳೆ ಪ್ಯಾರಾಲಿಸಿಸ್ ಗೆ ಸಂಬಂಧಿಸಿದ ಇಂಜೆಕ್ಷನ್ ಅದೇ ಆಸ್ಪತ್ರೆಯಲ್ಲಿ ವೈದ್ಯರ ಸೂಚನೆಯಂತೆ ಪಡೆದಿದ್ದಾಳೆ ಎನ್ನಲಾಗಿದೆ. ಯಾವಾಗ ಇಂಜೆಕ್ಷನ್ ಪಡೆದಳೋ ಕೆಲವೇ ಹೊತ್ತಲ್ಲಿ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಅದು ಸೆಂಟ್ ಇಗ್ನೇಸಿಯಸ್ ಆಸ್ಪತ್ರೆ..! ಅಸಲು, ಈಕೆಗೆ ಪ್ಯಾರಾಲಿಸೀಸ್ ಬಾರದೆ ಇದ್ದರೂ ಸಹ ಮುಂದಿನ ದಿನದಲ್ಲಿ ಅದು ಬಾರದಿರಲಿ, ಎನ್ನುವ ಕಾರಣಕ್ಕೆ ಇಂಜೆಕ್ಷನ್...
ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.
ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ ಕರೆಮಾಡಿ ಮಾಹಿತಿ ನೀಡಿ..!
ಕುಮಟಾ: ತಾಲೂಕಿನ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು, 26 ರಿಂದ 30 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಕೈ ಮೇಲೆ ಟ್ಯಾಟೂಗಳು ಇವೆ. ಬಹುಶಃ ಕೊಲೆ ಮಾಡಿ ಬೀಸಾಡಿರೋ ಶಂಕೆ ಇದೆ. ಸದ್ಯ ಕುಮಟಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಿಳೆಯ ಗುರುತು ಪತ್ತೆಗೆ ಇಳಿದಿದ್ದಾರೆ. ತಮಗೇನಾದ್ರೂ ಈ ಮಹಿಳೆಯ ಗುರುತು ಸಿಕ್ಕರೆ ತಕ್ಷಣವೇ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಿದ್ದಾರೆ. ಕುಮಟಾ ಪೋಲಿಸ್ ಠಾಣೆಯ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು. ದೂರವಾಣಿ ಸಂಖ್ಯೆ: 08386 222333