ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ನ್ಯಾಸರ್ಗಿ ಕ್ರಾಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ, ತನ್ನ ಅಂಗಡಿಯಲ್ಲೆ ಮದ್ಯ ಕುಡಿಯಲು ಅನುವು ಮಾಡಿಕೊಟ್ಟು ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಚಣಕಿ ಗ್ರಾಮದ ನಾಗರಾಜ್ ದೊಡ್ಡ ಹನ್ಮಂತಪ್ಪ ವಡ್ಡರ ಎಂಬುವವನೇ ಆರೋಪಿಯಾಗಿದ್ದಾನೆ.. ಈತ ತನ್ನ ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ, ಅಲ್ಲದೇ ಅಲ್ಲಿಯೇ ಮಧ್ಯ ಕುಡಿಯಲು ಜನರಿಗೆ ಅವಕಾಶ ನೀಡುತ್ತಿದ್ದ. ಹೀಗಾಗಿ ಮುಂಡಗೋಡ ಕ್ರೈಂ ಪಿಎಸ್ ಐ ಎನ್.ಡಿ.ಜಕ್ಕಣ್ಣವರ್ ದಾಳಿ ನಡೆಸಿ ಚಹಾ ಅಂಗಡಿಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ವಿವಿಧ ಕಂಪನಿಯ ಮದ್ಯ ಹಾಗೂ 215 ರೂ ನಗದು ಜಪ್ತಿ ಮಾಡಿ, ಪ್ರಕರಣ ದಾಖಲಿಸಿದ್ದಾರೆ.
Top Stories
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮೃತಪಟ್ಟ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಫರ್ಧಾ ಹೋರಿ..!
ಮುಂಡಗೋಡ-ತಾಲೂಕಿನ ಹೆಮ್ಮೆಯ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಅನಾರೋಗ್ಯದ ಹಿನ್ನೆಲೆ ನಿನ್ನೆ ತಡರಾತ್ರಿ ಮೃತಪಟ್ಟಿದೆ. ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಎಂದೇ ಖ್ಯಾತಿಯಾಗಿರುವ ಹೋರಿ, ತೀವ್ರ ಅನಾರೋಗ್ಯದಿಂದ ಬಳಲಿ ಮೃತಪಟ್ಟಿದೆ. ರಾಜ್ಯದ ನಾನಾ ಭಾಗಗಳಲ್ಲಿ ನಡೆದಿದ್ದ ಅನೇಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿತ್ತು. ಅದ್ರಲ್ಲೂ ಹಾನಗಲ್, ಬೆಟ್ಟದಕುರ್ಲಿ ಹಾಗೂ ಖಚವಿ ಹೀಗೆ ಅನೇಕ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ಯಲ್ಲಿ ಪಾಲ್ಗೊಂಡು ಭಾರೀ ಬಹುಮಾನಗಳನ್ನು ಬಾಚಿ ಕೊಂಡಿತ್ತು.. ಹೀಗೆ ಅನೇಕ ಜನರ ಮನಸ್ಸನ್ನು ಗೆದ್ದು ತನ್ನದೇ ಆದ ಅಭಿಮಾನಿ ಬಳಗ ಹೊಂದಿದ್ದ ತಾಲೂಕಿನ ಮೊಟ್ಟ ಮೊದಲ ಪೀ ಪೀ ಹೋರಿ ಎಂದು ಖ್ಯಾತಿ ಪಡೆದಿತ್ತು. ಹೀಗಾಗಿ ಅಪಾರ ಅಭಿಮಾನಗಳು ಹೋರಿಯ ನಿಧನದಕ್ಕೆ ಕಂಬನಿ ಮಿಡಿದಿದ್ದಾರೆ.
10 ವರ್ಷದಿಂದ ನಾಪತ್ತೆ, ಇದ್ದಕ್ಕಿದ್ದಂತೆ ಪತ್ತೆ..! ಕೊರೋನಾ ಮಾಡಿದ ಪವಾಡ..!!
ಕೊಪ್ಪಳ- ಹತ್ತು ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಇನ್ನಿಲ್ಲ ಎನ್ನುವ ಕೊರಗಿನಲ್ಲೇ ಹತ್ತು ವರ್ಷಗಳಿಂದ ದಿನದೂಡುತ್ತಿದ್ದ ಪೋಷಕರಿಗೆ ಅಚ್ಚರಿ ಎಂಬಂತೆ ಮಗ ಪ್ರತ್ಯಕ್ಷವಾಗಿದ್ದು ಕಂಡು ಇಡೀ ಗ್ರಾಮದ ಜನರಿಗೆ ಅಚ್ಚರಿಯಾಗಿದೆ. ಹೌದು! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ದೇವಮ್ಮ ಗಂಡ ಗುರಬಸಪ್ಪ ಮಾಸ್ತರ ದಂಪತಿಯ ಮೂರು ಮಕ್ಕಳಲ್ಲಿ ಒರ್ವ ಮಗ ದೇವರಾಜ ಮಾಸ್ತರ ಹತ್ತು ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿ ಸಂಪರ್ಕದಲ್ಲೇ ಇರಲಿಲ್ಲ. ಕೊರೊನಾ ಭೀತಿಯಿಂದ ಕಂಪನಿ ಒಂದರಲ್ಲಿ ಕಾರ್ಮಿಕನಾಗಿರುವ ದೇವರಾಜ ಪಕ್ಕದ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟದ ಸ್ನೇಹಿತರ ಸಹಾಯದಿಂದ ಸ್ವಗ್ರಾಮಕ್ಕೆ ಹಿಂತಿರುಗಿ ಬಂದಿದ್ದಾನೆ. ದೇವರಾಜು 2008-09ರಲ್ಲಿ ಬೆಂಗಳೂರಿಗೆ ದುಡಿಯಲೆಂದು ಹೋದವನು ನಾಪತ್ತೆಯಾಗಿದ್ದ, ಮಗ ಕಾಣೆಯಾದ ಹಿನ್ನೆಲೆಯಲ್ಲಿ ಹೆತ್ತವರು ಕಣ್ಣೀರಿನಲ್ಲಿಯೇ ದಿನಗಳನ್ನು ನೂಕುತ್ತಿದ್ದರು. ಕಳದೆರಡು ದಿನದ ಹಿಂದೆ ಜುಮಲಾಪೂರ ಗ್ರಾಮಕ್ಕೆ ಬಂದಿದ್ದಾನೆ. ಪಾಂಡುರಂಗ ದೇವಾಲಯಕ್ಕೆ ಬಂದು ನಮಸ್ಕರಿಸುವ ಮುನ್ನ ತನ್ನ ಪರಿಚಯವನ್ನು ಹೇಳಿಕೊಂಡಾಗ ಸ್ಥಳದಲ್ಲಿದ್ದವರಿಗೆ ಆಶ್ಚರ್ಯವಾಗಿದೆ. ಈ ವಿಷಯವನ್ನು ತಾಯಿ ದೇವಮ್ಮ, ಗುರಬಸಪ್ಪ ಮಾಸ್ತರ ದಂಪತಿಗೆ ಗ್ರಾಮಸ್ಥರು...
ಮುಂಡಗೋಡ ಪಿಡ್ಬ್ಲೂಡಿ ಇಂಜಿನೀಯರ್ ಸುಭಾಸ್ ವಡ್ಡತ್ತಿ ನಿಧನ..!
ಮುಂಡಗೋಡ- ಲೋಕೊಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನೀಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸುಭಾಸ್ ವಡ್ಡತ್ತಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ರವಿವಾರ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೃತರ ಸ್ವಗ್ರಾಮದಲ್ಲಿ ನಡೆಯಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ. ಇನ್ನು, ಸುಭಾಸ್ ವಡ್ಡತ್ತಿ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಝಂಡೂ ಮೆಣಸಿನಕಾಯಿ ಬೆಳೆದ ರೈತರಿಗೆ ಸಂಕಷ್ಟ..!
ಮುಂಡಗೋಡ-ತಾಲೂಕಿನಲ್ಲಿ ಲಾಕ್ ಡೌನ್ ತಂದಿರೋ ಸಂಕಷ್ಟ ಒಂದಾ ಎರಡಾ.. ಬಡ ವ್ಯಾಪಾರಿಗಳು, ಕೂಲಿ ಕಾರ್ಮಿಕರ ಗೋಳು ಒಂದೆಡೆಯಾದ್ರೆ, ಕೃಷಿಯನ್ನೇ ನಂಬಿ ಬದುಕುತ್ತಿರೊ ರೈತರ ಗೋಳು ಮತ್ತೊಂದೆಡೆಯಾಗಿದೆ. ಹೌದು, ಮುಂಡಗೋಡ ತಾಲೂಕಿನಲ್ಲಿ ಬೇಸಿಗೆ ಬೆಳೆಯಾಗಿ ಬೆಳೆಯಲಾಗಿರೊ ಝಂಡೂ ಮೆಣಸಿನಕಾಯಿ ಬರಪೂರ ಬೆಳೆದಿದ್ದರೂ ಸೂಕ್ತ ಬೆಲೆ ಸಿಗದೆ ರೈತನ ಕನಸಿಗೆ ಕೊಳ್ಳೆ ಇಟ್ಟಿದೆ. ಲಾಕ್ ಡೌನ್ ಆಗುವ ಮುನ್ನ ಪ್ರತೀ ಕ್ವಿಂಟಲ್ ಗೆ 4 ಸಾವಿರದ ವರೆಗೂ ಇದ್ದ ಝಂಡೂ ಮೆಣಸಿನಕಾಯಿ ಬೆಲೆ, ಈಗ 2 ಸಾವಿರ ರೂ. ಆಸುಪಾಸಿಗೆ ಬಂದು ನಿಂತಿದೆ. ಹೀಗಾಗಿ, ಈ ಹಣ ಮೆಣಸಿನಕಾಯಿ ಕೀಳಲು ಕೂಲಿ ಕೊಡುವುದಕ್ಕೂ ಸಾಕಾಗುವುದಿಲ್ಲ ಅಂತಾ ರೈತರು ಅಳಲು ತೋಡಿಕೊಂಡಿದ್ದಾರೆ.
ಕೊರೋನಾ ಕುರಿತು ಕುಂಚಗಳಲ್ಲೇ ಜಾಗ್ರತಿ ಮುಡಿಸುತ್ತಿರೊ ಕಲಾವಿದ
ವಿಶೇಷ ವರದಿ: ಮುಂಡಗೋಡ: ಆತ ಓರ್ವ ಚಿತ್ರ ಕಲಾವಿದ, ಪೇಂಟಿಂಗ್ ಮಾಡಿಕೊಂಡು ತನ್ನ ಬದುಕು ಕಟ್ಟಿಕೊಂಡಿದ್ದವ, ಆದ್ರೆ ಸದ್ಯ ಕೊರೋನಾ ಮಹಾಮಾರಿ ಜನರ ಜೀವ ಹಿಂಡುತ್ತಿರೋ ಸಂದರ್ಭದಲ್ಲಿ ಆತನೂ ಬಸವಳಿದು ಹೋಗಿದ್ದ.. ಕೊರೋನಾ ಮಹಾಮಾರಿಯಿಂದ ಅದೇಷ್ಟೋ ಸ್ನೇಹಿತರಿಗೆ ಆಗುತ್ತಿರೋ ತೊಂದರೆ, ಸಂಕಷ್ಟಗಳನ್ನು ಕಣ್ಣಾರೆ ಕಂಡಿದ್ದ, ಹೀಗಾಗಿ ಕೊರೋನಾ ವಿರುದ್ಧ ತಾನೂ ಯುದ್ಧ ಸಾರಬೇಕು ಅಂತಾ ನಿರ್ಧಾರ ಮಾಡಿದ್ದ.. ಯಸ್, ಹೀಗೆ ಕೊರೋನಾ ಹಿಮ್ಮೆಟ್ಟಿಸಲು ಆ ಕಲಾವಿದನಿಗೆ ಹೊಳೆದದ್ದು ಬೇರೆ ಏನೂ ಅಲ್ಲ.. ಜನ್ರಿಗೆ ಜಾಗ್ರತಿ ಮೂಡಿಸುವ ಮಹತ್ಕಾರ್ಯ.. ಹೀಗಾಗಿ, ತನ್ನ ಬತ್ತಳಿಕೆಯಲ್ಲಿದ್ದ ಕುಂಚಗಳನ್ನೇ ಆಯುಧಗಳನ್ನಾಗಿ ಮಾಡಿಕೊಂಡು ಫಿಲ್ಡಿಗಿಳಿದುಬಿಟ್ಟ.. ಪರಿಣಾಮ, ಹಳ್ಳಿ ಹಳ್ಳಿಗಳಲ್ಲಿ ಕೊರೋನಾ ಕುರಿತು ಚಿತ್ರಗಳ ಮೂಲಕವೇ ಜಾಗ್ರತಿ ಮೂಡಿಸುತ್ತಿದ್ದಾನೆ.. ಆತನ ಹೆಸ್ರು ಚಿದಾನಂದ್ ಬಡಿಗೇರ್.. ಮುಂಡಗೋಡಿನ ಹಳೂರು ನಿವಾಸಿ. ಚಿತ್ರನಟ ಉಪೇಂದ್ರರ ಬಹುದೊಡ್ಡ ಫ್ಯಾನ್. ಉಪೇಂದ್ರರವರ ಸಾಮಾಜಿಕ ಜವಾಬ್ದಾರಿಯ ಕಾರ್ಯದಂತೆಯೇ ಅವ್ರ ಅಭಿಮಾನಿಯಾದ ಚಿದಾನಂದ ಕೂಡ ತನ್ನ ಕೈಲಾದ ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ.. ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ ತೆರಳಿ,...
ಸನವಳ್ಳಿ ಗ್ರಾಮದಲ್ಲಿ ಗಟಾರದ ಕೊಳಚೆ ನೀರು ರಸ್ತೆ ಮೇಲೆ: ಕಣ್ಣಿದ್ದು ಕುರುಡಾದ ಅಧಿಕಾರಿಗಳು..!
ಮುಂಡಗೋಡ- ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸನವಳ್ಳಿ ಗ್ರಾಮದಲ್ಲಿ ಇದುವರೆಗೂ ಗ್ರಾಮದ ಮುಖ್ಯರಸ್ತೆಯಲ್ಲಿ ಪಕ್ಕಾಗಟಾರ ಇಲ್ಲದೆ ಚರಂಡಿ ನೀರು ರಸ್ತೆಯ ಮೇಲೆ ಹರಿದು ಸಾರ್ವಜನಿಕರಿಗೆ ಇನ್ನಿಲ್ಲದ ಪಜೀತಿ ತಂದಿಡುತ್ತಿದೆ..! ಗಟಾರದ ಕಲುಷಿತ ನೀರು ಸಂಪೂರ್ಣವಾಗಿ ಮುಖ್ಯ ರಸ್ತೆಯ ಮೇಲೆ ಬಂದು ಸಾರ್ವಜನಿಕರ ಓಡಾಟಕ್ಕೆ, ವಾಹನ ಸವಾರರಿಗೆ ತೊಂದರೆಯಾಗಿದೆ. ವಾಹನ ಸವಾರರು ಪ್ರತಿದಿನವೂ ಈ ರಸ್ತೆಯಲ್ಲಿ ಜಾರಿಬಿದ್ದು ಗಾಯಗೊಂಡಿರೋ ಸಾಕಷ್ಟು ಪ್ರಕರಣಗಳಿವೆ. ನಿತ್ಯವೂ ಹೀಗೆ ಈ ರಸ್ತೆಯಲ್ಲಿ ಎದ್ದು ಬಿದ್ದು ಅಂಗೈಯಲ್ಲಿ ಜೀವ ಹಿಡಿದು ಓಡಾಡುವುದು ಅನಿವಾರ್ಯ ಎಂಬಂತಾಗಿದೆ. ಚರಂಡಿ ನೀರು ಗ್ರಾಮದಲ್ಲಿ ಸುಮಾರು ಎರಡು ಕಿಲೋಮೀಟರ್ ವರೆಗೆ ಹರಿಯುತ್ತದೆ. ಸಾಂಕ್ರಾಮಿಕ ರೋಗಗಳಿಗೆ ಕಾರ್ಖಾನೆಯಂತಾಗಿದೆ. ನಿತ್ಯವೂ ಈ ರಸ್ತೆಯಲ್ಲಿ ಸಂಚರಿಸುವ ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ. ಆದ್ರೆ ಇದುವರೆಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಗಾಲಿ, ಚುನಾಯಿತ ಜನಪ್ರತಿನಿಧಿಳಗಾಲಿ ಈ ಗ್ರಾಮದ ಸಮಸ್ಯೆಯ ಬಗ್ಗೆ ಗಮನ ಹರಿಸಿಲ್ಲ.. ಕೊಳಚೆ ನೀರಿಗೆ ಸಮರ್ಪಕವಾದ ಗಟಾರ ನಿರ್ಮಿಸಿ ಸಾರ್ವಜನಿಕರಿಗೆ ಆಗುವ ಸಮಸ್ಯೆಗೆ ಪರಿಹಾರ ನೀಡುತ್ತಿಲ್ಲ ಅನ್ನೋದು ಗ್ರಾಮಸ್ಥರ...
ಮುಂಡಗೋಡ ತಾಲೂಕಾಸ್ಪತ್ರೆಗೆ, ಅಂಬ್ಯುಲೆನ್ಸ್, ಕೋವಿಡ್ ಕೇರ್ ಕಿಟ್ ವಿತರಿಸಿದ ಹೆಬ್ಬಾರ್..!
ಮುಂಡಗೋಡ- ತಾಲೂಕಾಸ್ಪತ್ರೆಯ ಆವರಣದಲ್ಲಿ ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮುಂಡಗೋಡ ತಾಲೂಕಾ ಆಸ್ಪತ್ರೆಗೆ 2 ಹೊಸ ಅಂಬ್ಯುಲೆನ್ಸ್ ಹಸ್ತಾಂತರ ಹಾಗೂ ಕೋವಿಡ್ ಶಂಕಿತರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸಿರು ನಿಶಾನೆ ತೋರಿಸುವ ಮೂಲಕ ಅಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್, ಕೋವಿಡ್ ಶಂಕಿತರಿಗೆ ನೀಡಲಾಗುವ ಕೋವಿಡ್ ಕೇರ್ ಕಿಟ್ ಬಿಡುಗಡೆಗೊಳಿಸಿದ್ರು. ಈ ವೇಳೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯಿತಿ ಸಿಇಓ ಪ್ರಿಯಾಂಗ್, ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಧರ್ ಮುಂದಲಮನಿ, ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಿಎಂ ಬದಲಾವಣೆ ಯಾವ ಕಾರಣಕ್ಕೂ ಇಲ್ಲ: ಸಿ.ಪಿ.ಯೋಗೀಶ್ವರ್ ಗೆ ಸಚಿವ ಹೆಬ್ಬಾರ್ ಟಾಂಗ್..!
ಯಲ್ಲಾಪುರ: ಮುಖ್ಯಮಂತ್ರಿ ಬದಲಾವಣೆ ಯಾವ ಕಾರಣಕ್ಕೂ ಇಲ್ಲ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್, ಸಿಎಂ ಬದಲಾವಣೆ ವಿಚಾರವಾಗಿ, ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆಗೆ ನನ್ನ ಸಹಮತ ಇಲ್ಲ ಅಂತಾ ಖಡಕ್ಕಾಗಿ ಅಭಿಪ್ರಾಯ ವ್ಯಕ್ತ ಪಡಿಸಿದ್ರು. ಸರಕಾರದಲ್ಲಿ ಇದ್ದುಕೊಂಡು ಈ ರೀತಿಯ ಹೇಳಿಕೆ ನೀಡುವುದು ಯೋಗೀಶ್ವರಗೆ ಶೋಭೆ ತರುವುದಿಲ್ಲ ಅಂತಾ ಹೆಬ್ಬಾರ್ ಕಿಡಿ ಕಾರಿದ್ರು. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದ್ದಾಗಿ ಸಚಿವ ಅಶೋಕ್ ಹೇಳಿದ್ದು ನಿಜ, ಆದ್ರೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಅಂತಾ ಹೇಳಿಲ್ಲ. ಮುಂದಿನ ಚುನಾವಣೆ ಕೂಡಾ ಯಡಿಯೂರಪ್ಪ ನೇತೃತ್ವದಲ್ಲಿಯೇ ನಡೆಯಲಿದೆ ಅಂತಾ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು.
ಮುಂಡಗೋಡ ತಾಲೂಕಾಸ್ಪತ್ರೆಗೆ 1.33 ಲಕ್ಷ ರೂ. ವೈದ್ಯಕೀಯ ಸಲಕರಣೆ ನೀಡಿದ, ಟಿಬೇಟಿಗರ ಕರ್ಮಾ ಪೌಂಡೇಶನ್..!
ಮುಂಡಗೋಡ-ತಾಲೂಕಿನಲ್ಲಿ ನೊಂದವರ ಕಣ್ಣೀರು ಒರೆಸುತ್ತಿರೋ ಟಿಬೇಟಿಗರ ಕರ್ಮಾ ಪೌಂಡೇಶನ್ ಈಗ ಮತ್ತೊಂದು ಮಹತ್ತರ ಕಾರ್ಯ ಮಾಡಿ ಆದರ್ಶ ತೋರಿದೆ. ಬುದ್ದ ಪೂರ್ಣಿಮೆಯ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಗೆ ಒಟ್ಟೂ 1,33,280 ರೂ. ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ್ದಾರೆ. ಅದ್ರಲ್ಲಿ, 49280 ರೂ.ಮೌಲ್ಯದ NIBP patient monitor machine, 84,000 ರೂ. ಮೌಲ್ಯದ oxygen concentrator ಸೆರಿದ್ದು ಮುಂಡಗೋಡ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆಯವರಿಗೆ ಶುಕ್ರವಾರ ಹಸ್ತಾಂತರಿಸಿದ್ದಾರೆ. ಇನ್ನು ಟಿಬೇಟಿಯನ್ ಕಾಲೋನಿಯ ಡಿಟಿಆರ್ ಆಸ್ಪತ್ರೆಗೂ ಕೂಡ 84 ಸಾವಿರ ರೂ. ಮೌಲ್ಯದ oxygen concetratore machine ನೀಡಿದ್ದಾರೆ. ಅಂದಹಾಗೆ, ಅಮೇರಿಕದಲ್ಲಿ ವಾಸವಾಗಿರೋ ಯೊಂಗಚೆನ್ ಕುಟುಂಬ ಹಾಗೂ ಲೋಬ್ಚಾಂಗ್ ಚೋದೇನ್ ಕುಟುಂಬ ಕರ್ಮಾ ಪೌಂಡೇಶನ್ ಗೆ ಈ ವೈದ್ಯಕೀಯ ಸಲಕರಣೆಗಳನ್ನು ದೇಣಿಗೆ ನೀಡಿತ್ತು, ಹೀಗಾಗಿ ಕರ್ಮಾ ಪೌಂಡೇಶನ್ ತಾಲೂಕಾಸ್ಪತ್ರೆಗೆ ಹಾಗೂ ಡಿಟಿಆರ್ ಆಸ್ಪತ್ರೆಗೆ ಹಸ್ತಾಂತರಿಸಿದೆ