ಮುಂಡಗೋಡ-ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಇಂದಿರಾನಗರದಲ್ಲಿ ಕೊರೋನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚಿದೆ. ಅಂದಹಾಗೆ, ಇದುವರೆಗೂ ಒಂದೇ ಒಂದು ಪಾಸಿಟಿವ್ ಪ್ರಕರಣ ದಾಖಲಾಗದೇ ಸುರಕ್ಷಿತವಾಗಿದ್ದ ಹಳ್ಳಿಯಲ್ಲಿ ಈಗ ಕೊರೋನಾದಿಂದಲೇ ಒಂದು ಸಾವು ಸಂಭವಿಸಿದೆ. ನಿನ್ನೆ ಈ ಹಳ್ಳಿಯ 76 ವರ್ಷ ವಯಸ್ಸಿನ ವೃದ್ದ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವದ್ದನನ್ನು ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಮೃತಪಟ್ಟಿದ್ದಾನೆ. ಹೀಗಾಗಿ, ಸೋಂಕಿತ ವೃದ್ಧನ ಅಂತಿಮ ಸಂಸ್ಕಾರ ಕೋವಿಡ್ ನಿಯಮಾನುಸಾರ, ಇಂದಿರಾನಗರದಲ್ಲಿ ನೆರವೇರಿಸಲಾಯಿತು. ಪಿಪಿಇ ಕಿಟ್ ಧರಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
Top Stories
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಇಂದಿರಾನಗರಕ್ಕೂ ವಕ್ಕರಿಸಿದ ಕೊರೋನಾ..! ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತಿಮ ಸಂಸ್ಕಾರ..!!
ಮುಂಡಗೋಡ ಕೋವಿಡ್ ಕೇರ್ ಸೆಂಟರ್ನಲ್ಲೇ ಕೊರೋನಾ ಸೋಂಕಿತನ ಡ್ಯಾನ್ಸ್..!
ಮುಂಡಗೋಡ: ಕೊರೋನಾ ಅನ್ನೋದು ಈಗ ಇಡೀ ದೇಶದ ಜನರ ಜೀವ ಹಿಂಡ್ತಿದೆ. ಅದ್ರಲ್ಲೂ ಕೊರೋನಾ ಸೋಂಕು ದೃಢಪಟ್ಟರೆ ಮುಗಿತು ಎಷ್ಟೊ ಸೋಂಕಿತರು ಭಯದಿಂದಲೇ ಪ್ರಾಣ ಕಳೆದುಕೊಳ್ತಿದಾರೆ. ಆದ್ರೆ ಇಲ್ಲೊಬ್ಬ ಸೋಂಕಿತ ಯುವಕ ಕೋವಿಡ್ ಕೇರ್ ಸೆಂಟರ್ ನಲ್ಲೇ ಕುಣಿದು ಕುಪ್ಪಳಿಸ್ತಿದಾನೆ. ಕೋವಿಡ್ ಅಂದ್ರೆ ಭಯ ಪಡೋ ಜನ್ರಿಗೆ ಧೈರ್ಯ ತುಂಬಿದ್ದಾನೆ. ತನ್ನ ಜೊತೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಡ್ಮಿಟ್ ಆಗಿದ್ದ ಇನ್ನಿತರ ರೋಗಿಗಳಿಗೂ ಆತ್ಮ ಸ್ಥೈರ್ಯ ತುಂಬಿದ್ದಾನೆ. ನಕ್ಕು ನಲಿಸಿದ್ದಾನೆ. ಕೊರೋನಾ ಅಂದ್ರೆ ಯಾರೂ ಭಯ ಪಡಬೇಡಿ ಅಂತಾ ಎಲ್ರಿಗೂ ತಿಳಿ ಹೇಳಿದ್ದಾನೆ.. ಅಂದಹಾಗೆ, ಈತನ ಹೆಸ್ರು ಮಹೇಂದ್ರ ಬಾಬು ಪಾಟೀಲ್ ಅಂತಾ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದವನು.. ಕಳೆದ ನಾಲ್ಕು ದಿನದ ಹಿಂದೆ ಕೊರೋನಾ ಸೋಂಕು ಪೀಡಿತನಾಗಿ ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದಾನೆ.. ಆದ್ರೆ ಈತ ಇಲ್ಲಿ ಅಡ್ಮಿಟ್ ಆದ ನಂತರ ಇಲ್ಲಿನ ಇನ್ನಿತರ ಸೋಂಕಿತರಿಗೂ ಮನರಂಜನೆ ನೀಡ್ತಿದಾನೆ. ನಕ್ಕು ನಗಿಸ್ತಿದಾನೆ. ಈ ಮೂಲಕ ಸೋಂಕಿತರ...
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!
ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು. ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು. ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಅಭೂಬಕರ ನದಾಪ ತಿಳಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂಚಾಯತ ಸದಸ್ಯರಾದ ಶ್ರೀಮತಿ ಇಮಾಂಬಿ ನದಾಫ, ಗ್ರಾ.ಪಂ ಕಾರ್ಯದರ್ಶಿ ಷಣ್ಮುಖ ಸುಳಗೇಕರ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು , ಬಸವರಾಜ ಇನಾಮದಾರ್, ದಾವಲ್, ತಹಶೀಲ್ದಾರ ಮಲ್ಲಿಕಾರ್ಜುನ ಕಲ್ಲೂರ, ಜಮಾಲ ಮುನವಳ್ಳಿ ಸದ್ದಾಂ ಬೋಗುರ, ಇಸ್ಮಾಯಿಲ್ ಪಠಾಣ್, ಶಕೀಲ್ ಗೌಂಡಿ, ಸಂತೋಷ ಹರಿಜನ, ಶಿಂದಬಹಾದ, ಹುಸೇನ್ ಹಾಜರಿದ್ದರು.
ಸೋಂದಾ ಸ್ವರ್ಣವಲ್ಲಿ ಮಠದಿಂದ ಅಶಕ್ತರಿಗೆ ದಿನಸಿ ಕಿಟ್ ವಿತರಣೆ..!
ಶಿರಸಿ: ಆಧ್ಯಾತ್ಮ ಸಾಧನೆಯ ಜೊತೆಗೆ ಸಮಾಜಮುಖಿ ಮಠವಾಗಿಯೂ ಗುರುತಿಸಿಕೊಂಡಿರೋ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನವು ಮಠದ ಸುತ್ತಲಿನ ಅಗತ್ಯವುಳ್ಳ ಜನರಿಗೆ ಉಚಿತವಾಗಿ ದಿನಸಿ ಸಾಮಗ್ರಿ ವಿತರಿಸಿತು. ಲಾಕ್ ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರೋ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದವನ್ನ ಕೂಡ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿದರು. ಇದೇ ವೇಳೆ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ ಧಾರಣೆ ಮಾಡಬೇಕು. ಆಂತರಿಕ ಧೈರ್ಯಕ್ಕಾಗಿ ದೇವರ ಜಪ ಧ್ಯಾನ ಮಾಡಬೇಕು ಅಂತ ಸ್ವಾಮೀಜಿ ಆಶಿಸಿದರು. ಈ ವೇಳೆ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ, ಸೋಂದಾ ಗ್ರಾ.ಪಂ.ಅಧ್ಯಕ್ಷೆ ಮಮತಾ ಜೈನ್, ಮಠದ ವ್ಯವಸ್ಥಾಪಕ ಎಸ್.ಎನ್. ಗಾಂವಕರ ಇತರರು ಇದ್ದರು.
ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿ ಭರಾಟೆ ಜೋರು..!
ಮುಂಡಗೋಡ- ಪಟ್ಟಣದಲ್ಲಿ ಇಂದಿನಿಂದ ವಾರದ 4 ದಿನಗಳ ಕಾಲ ಬೆಳಿಗ್ಗೆ 8 ಗಂಟೆಯಿಂದ ಮದ್ಯಾನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಿರೋ ಹಿನ್ನೆಲೆಯಲ್ಲಿ ತಾಲೂಕಿನೆಲ್ಲೆಡೆಯಿಂದ ಪಟ್ಟಣಕ್ಕೆ ಬೆಳಗಿನಿಂದಲೇ ಜನ ಬಂದಿದ್ರು. ಅಗತ್ಯ ವಸ್ತುಗಳ ಖರೀಧಿಗೆ ಬಂದ ಜನ ಅಗತ್ಯ ವಸ್ತಗಳಿಗಾಗಿ ಮುಗಿಬೀಳುತ್ತಿರೊ ದೃಷ್ಯಗಳು ಸಾಮಾನ್ಯವಾಗಿತ್ತು. ಹೀಗಾಗಿ ಪೊಲೀಸ್ರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸಿದ್ರು. ಇನ್ನು ದಿನಸಿ ಅಂಗಡಿಗಳ ಮಾಲೀಕರಿಗೂ ಅಂಗಡಿಗಳ ಮುಂದೆ ಗ್ರಾಹಕರಿಗೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸುವಂತೆ ಸೂಚಿಸಲು ಎಚ್ಚರಿಸಿದ್ರು.
ಮುಂಡಗೋಡ ಪಟ್ಟಣದಲ್ಲಿ ಅನಗತ್ಯ ತಿರುಗಾಡುವವರ ವಿರುದ್ಧ ಪೊಲೀಸರ ಕಠಿಣ ಕ್ರಮ..!
ಮುಂಡಗೋಡ- ಪಟ್ಟಣದಲ್ಲಿ ಅನಗತ್ಯ ತಿರುಗಾಡುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪರಿಶೀಲನೆಗೆ ಇಳಿದಿರೋ ಪೊಲೀಸ್ರು ಅನಗತ್ಯವಾಗಿ ತಿರುಗಾಡುವ ವಾಹನಗಳ ಬಗ್ಗೆ ಕಣ್ಣಿಟ್ಟಿದ್ರು. ಬೈಕ್ ಸವಾರರು, ಕಾರ್ ಸವಾರರು ಪಟ್ಟಣದ ಒಳಗೆ ಅಥವಾ ಪಟ್ಟಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಂತವರನ್ನು ಪೊಲೀಸರು ಪರಿಶೀಲಿಸುತ್ತಿದ್ದರು. ಇನ್ನು ಮಾಸ್ಕ್ ಧರರಿಸದೇ ತಿರುಗಾಡುವ ಸವಾರರ ವಿರುದ್ಧ ಸಮರ ಸಾರಿರೋ ಪೊಲೀಸ್ರು, ಮಾಸ್ಕ್ ಧರಿಸದವರನ್ನು ತಡೆದು ಕ್ಲಾಸ್ ತೆಗೆದುಕೊಂಡರು, ಅಲ್ದೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ರು.
ಮುಂಡಗೋಡದ ಶಿವಾಜಿ ಸರ್ಕಲ್ ನಲ್ಲಿ ಜನವೋ ಜನ..! ಸಾಮಾಜಿಕ ಅಂತರ ಮಾಯ..!!
ಮುಂಡಗೋಡ- ಪಟ್ಟಣದಲ್ಲಿ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ, ಮುಂಡಗೋಡ ಪಟ್ಟಣದ ಹೃದಯಭಾಗ ಶಿವಾಜಿ ಸರ್ಕಲ್ ನಲ್ಲಿ ಜನಸಂದಣಿ ಸೇರಿತ್ತು. ಅಗತ್ಯ ವಸ್ತುಗಳ ಖರೀಧಿಗೆ ತಾಲೂಕಿನ ಗ್ರಾಮೀಣ ಭಾಗಗಳಿಂದ ಬಂದಿದ್ದ ಜನ ಅಗತ್ಯ ವಸ್ತುಗಳ ಖರೀಧಿಯಲ್ಲಿ ಮುಳುಗಿದ್ರು. ಪಟ್ಟಣದ ಬಹುತೇಕ ದಿನಸಿ ಅಂಗಡಿಗಳು ಫುಲ್ ಆಗಿದ್ದವು. ಹೀಗಾಗಿ ಕೆಲವು ಕಡೆ ಸಾಮಾಜಿಕ ಅಂತರ ಅನ್ನೋದು ಮಂಗಮಾಯವಾಗಿತ್ತು. ಪೊಲೀಸರು ಎಷ್ಟೇ ಎಚ್ಚರಿಸಿದ್ರೂ ಜನ ಕ್ಯಾರೇ ಅನ್ನದೇ ಸಾಮಾಜಿಕ ಅಂತರ ಮರೆತು ಖರೀಧಿಯಲ್ಲಿ ಬ್ಯುಸಿಯಾಗಿದ್ರು.
LVK ಯಿಂದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಕಿಟ್, ದಿನಸಿ ಕಿಟ್ ವಿತರಣೆ..!
ಮುಂಡಗೋಡ- ತಾಲೂಕಿನ ಹುನಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ LVK ಮುಂಡಗೋಡ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸ್ಯಾನಿಟೈಸ್, ಮಾಸ್ಕ್ ಸೇರಿ ಆರೋಗ್ಯ ರಕ್ಷಕ ಕಿಟ್ ವಿತರಣೆ ಮಾಡಲಾಯಿತು. ಹಾಗೇ ಆಶಾ ಕರ್ಯಕರ್ತರಿಗೆ ದಿನಸಿ ಸಾಮಗ್ರಿಗಳ ಕಿಟ್ ನೀಡಲಾಯಿತು. ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿಯ ಕಾರ್ಯಗಳನ್ನು ಮಾಡುತ್ತಿರೋ LVK ತಾಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಇಂತಹದ್ದೊಂದು ಸೇವೆ ಮಾಡುತ್ತಿದೆ. ಇನ್ನು ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಸ್.ವಿ. ಸುಳ್ಳದ, LVK ಸಂಚಾಲಕರು, ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ, ನಡೆಯತ್ತಾ..? ರದ್ದಾಗತ್ತಾ..? ಸುಪ್ರೀಂ ನಲ್ಲಿ ಇಂದು ಭವಿಷ್ಯ..!!
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಅಬ್ಬರ ಜೋರಾಗಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಗೊಂದಲ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿಂದು ಸುಪ್ರೀಂ ಕೋರ್ಟ್ ಪರೀಕ್ಷೆಯ ಭವಿಷ್ಯ ನಿರ್ಧಾರ ಮಾಡಲಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ ಬೇಡವೇ ಅನ್ನೋ ಕುರಿತು ಕೇಂದ್ರ ಸರಕಾರ ಕಳೆದ ವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಇಲಾಖೆ ಜೂನ್ ತಿಂಗಳಿನಲ್ಲಿಯೇ ಸಿಬಿಎಸ್ಇ ಹಾಗೂ ಐಸಿಎಸ್ಇ ಸಿಲೆಬಸ್ ನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಘೋಷಣೆಯನ್ನು ಮಾಡಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಮಿತಿಮೀರಿರುವ ಹೊತ್ತಲ್ಲೇ ಪರೀಕ್ಷೆ ನಡೆಸುವುದಕ್ಕೆ ಕೇಂದ್ರ ಸರಕಾರ ಮುಂದಾಗುತ್ತಿದ್ದಂತೆಯೇ ವಕೀಲರಾದ ಮಮತಾ ಶರ್ಮಾ ಎಂಬವರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಮುಂಡಗೋಡ ತಾಲೂಕಿನಲ್ಲಿಂದು 53 ಕೊರೋನಾ ಪಾಸಿಟಿವ್, 18 ಗುಣಮುಖ, ಓರ್ವ ಸಾವು..!
ಮುಂಡಗೋಡ ತಾಲೂಕಿನಲ್ಲಿ ಇಂದು 53 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 18 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ, ಹಾಗೇ 68 ವರ್ಷದ ಇಂದೂರಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಅಂತಾ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಶ್ಚಾರ್ಜ್ ಆದವರಿಗೆ ಕೋವಿಡ್ ಕೇರ್ ಸೆಂಟರ್ ನ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಶುಭ ಹಾರೈಸಿ ಬಿಳ್ಕೊಟ್ಟರು..