ಜಿಲ್ಲೆಯಲ್ಲಿ ಇನ್ಮೇಲೆ ಅಕ್ರಮಿಗಳು ಬಾಲ ಬಿಚ್ಚಂಗಿಲ್ಲ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿವಿ : ನೂತನ ಎಸ್ಪಿ ನಾರಾಯಣ್ ಮೊದಲ ಮಾತು

ಜಿಲ್ಲೆಯಲ್ಲಿ ಇನ್ಮೇಲೆ ಅಕ್ರಮಿಗಳು ಬಾಲ ಬಿಚ್ಚಂಗಿಲ್ಲ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿವಿ : ನೂತನ ಎಸ್ಪಿ ನಾರಾಯಣ್ ಮೊದಲ ಮಾತು

ಕಾರವಾರ: ಉತ್ತರ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಹೇಳಿದ್ರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದರು. ಇಲ್ಲಿ ಕೆಲಸ ಮಾಡೋದು ಸವಾಲು..! ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆ ಪ್ರಕೃತಿ ಸೌಂದರ್ಯದಿಂದ ಭರಿತವಾಗಿದೆ. ಗಡಿಭಾಗದ ಜಿಲ್ಲೆಯಾಗಿರುವುದರಿಂದ ಇಲ್ಲಿ ಕೆಲಸ ಮಾಡುವುದು ಸವಾಲಾಗಿದೆ, ಜಿಲ್ಲೆಯ ಎಲ್ಲರ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಜೊತೆಗೂಡಿ ಜನರಿಗೆ ಉತ್ತಮ ಸೇವೆ ನೀಡಲಾಗುವುದು ಎಂದರು. ನಾನು ಜಿಲ್ಲೆಗೆ ಹೊಸಬನಲ್ಲ..! ಉತ್ತರ ಕನ್ನಡ ಜಿಲ್ಲೆ ಹೊಸ ಜಿಲ್ಲೆಯಲ್ಲ. ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ. ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು,...

ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ NDRF ತಂಡ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್

ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ NDRF ತಂಡ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್

ಕಾರವಾರ; ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟಿವೆ. ಶುಕ್ರವಾರ ಈ ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ. 2 NDRF ತಂಡ.. ಈ ಎನ್.ಡಿ.ಆರ್.ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲ ಭಾಗದಲ್ಲಿ ನಿಯೋಜಿಸಲಾಗುವುದು. ಸದ್ಯ 7 ಕಾಳಜಿ ಕೇಂದ್ರ ಸ್ಥಾಪನೆ..! ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು...

ಜಾಗ್ರತೆಯಿರಲಿ..! ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ..!?

ಜಾಗ್ರತೆಯಿರಲಿ..! ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ..!?

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಗೆ ಮೊದಲ ಬಲಿಯಾಗಿದೆ. ಅಂಕೋಲದ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಡೆಂಗ್ಯೂ ನಿಂದ? ಸಾವನ್ನಪ್ಪಿದ್ದಾರೆ. ಒಂದು ವಾರದ ಹಿಂದೆ ಡೆಂಗ್ಯೂ ನಿಂದ ಬಳಲಿ, ಬೆಳಗಾವಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹರೇ ರಾಮ್ ಭಟ್, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ 119 ಜನರಲ್ಲಿ ಡೆಂಗ್ಯು ಪತ್ತೆ‌ಯಾಗಿದೆ.

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ದರ್ಶನ್ ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ದರ್ಶನ್ ಬಗ್ಗೆ ಪೋಸ್ಟ್ ಹಾಕಿದ ಮಾಜಿ ಸಂಸದೆ ಸುಮಲತಾ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಘಟನೆ ಬಗ್ಗೆ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ರೇಣುಕಾಸ್ವಾಮಿ ಕೊಲೆಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಕ್ಕೆ ನೋವನ್ನ ಭರಿಸುವ ಶಕ್ತಿ ದೇವರು ನೀಡಲಿ,ಅವರಿಗೆ ನ್ಯಾಯ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆ ನನ್ನ ಹೃದಯವನ್ನ ಛಿದ್ರಗೊಳಿಸಿದೆ, ಬಹಳ ದಿನ ಆಘಾತ ಹಾಗೂ ನೋವು ತಂದಿದೆ. ಸುಮಲತಾ ಹಾಗೂ ದರ್ಶನ್ ಸಂಬಂಧದ ಬಗ್ಗೆ ಕೂಡ ಫೋಸ್ಟ್..! ದರ್ಶನ್ ಸ್ಟಾರ್ ಆಗುವುದಕ್ಕೂ ಮೊದಲು ಪರಿಚಯ. ಸ್ಟಾರ್ ಗಿಂತ ನನ್ನ ಕುಟುಂಬದ ಸದಸ್ಯ, ಯಾವಾಗಲೂ ನನಗೆ ಮಗನಂತೆ. ನನಗೆ ತಾಯಿಯ ಗೌರವ ಮತ್ತು ಸ್ಥಾನ ಹಾಗೂ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅರ್ಭಟ, ಹಲವು ಶಾಲೆಗಳಿಗೆ ರಜೆ ಘೋಷಣೆ..! ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅರ್ಭಟ, ಹಲವು ಶಾಲೆಗಳಿಗೆ ರಜೆ ಘೋಷಣೆ..! ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..!

 ಉತ್ತರ ಕನ್ನಡದಲ್ಲಿ ಮಳೆಯ ಅರ್ಭಟ ಜೋರಾಗಿದೆ. ಪರಿಣಾಮ, ಹೊನ್ನಾವರ ತಾಲೂಕಿನ ಗುಂಡಬಾಳ ನದಿಯ ನೆರೆ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಅಧಿಕಗೊಳ್ಳುತ್ತಿದೆ. ಹೀಗಾಗಿ, ಹೊನ್ನಾವರ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಹೊರಡಿಸಿದ್ದಾರೆ. ಹೊನ್ನಾವರ ತಾಲೂಕಿನ ಜನತಾ ವಿದ್ಯಾಲಯ ಅನಿಲಗೋಡ್, ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ, ಗುಂಡ ಬಾಳ ನಂ-2, ಗುಂಡಿ ಬೈಲ್ ನಂ 2, ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ ವಲ್ಕಿ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..! ಗುಂಡ ಬಾಳ ನದಿಗೆ ಪ್ರವಾಹ ಹಿನ್ನಲೆಯಲ್ಲಿ, ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಹರಿಜನಕೇರಿ ಮತ್ತು ಹಿತ್ತಲಕೇರಿ ಮಜೇರಿಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಈ ಭಾಗದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾಳಜಿ ಕೇಂದ್ರ ತೆರೆಯಲಾಗಿದೆ ಅಂತಾ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ. ವಾಸ್ತವ್ಯ ಇರುವ...

ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ ಆಗಮನಕ್ಕೂ ಮುನ್ನವೇ ಎರಡು ಬಣಗಳ ನಡುವೆ ಕಿತ್ತಾಟ ಮಾಡಿಕೊಂಡಿವೆ. ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಣ ಮತ್ತು ಯಾಸೀರ್ ಖಾನ್ ಬಣದ ನಡುವೆ ಮಾತಿನ ಚಕಮಕಿ ನಡೆದಿದೆ. ಒಂದೆಡೆ, ಪ್ರವಾಸಿ ಮಂದಿರದ ಹೊರಗಡೆ ಬೆಂಬಲಿಗರೊಂದಿಗೆ ಅಜ್ಜಂಪೀರ್ ಖಾದ್ರಿ ಕುಳಿತಿದ್ದಾರೆ. ಅತ್ತ, ಪ್ರವಾಸಿ ಮಂದಿರದ ಒಳಗೆ ಕುಳಿತ ಯಾಸೀರ್ ಖಾನ್ ಪಠಾಣ್, ಮಾಜಿ ಎಂಎಲ್ ಸಿ ಸೋಮಣ್ಣ ಬೇವಿನಮರದ ಭಾರೀ ಚರ್ಚೆಯಲ್ಲಿ ತೊಡಗಿಕೊಂಡಿದ್ದಾರೆ.

ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ ಸಿಕ್ಕಿಬಿದ್ದಿದ್ದಾರೆ. ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಈ ಅಧಿಕಾರಿ ಇದೇ ರೀತಿ ಅನೇಕರಿಂದ ಲಂಚ ಪಡೆಯುತ್ತಿದ್ದ ಆರೋಪ ಕೂಡ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಇದೆ ವಿಚಾರವಾಗಿ ಕೆಲ ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಈತನಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

 ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ‌. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48) ನೀರು‌ ಪಾಲಾದವರಾಗಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಹ್ಮದ್ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆಯಿಂದಲೇ ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಡಾ. ವಿಷ್ಣುವರ್ಧನ್ ವರ್ಗ, ನೂತನ ಎಸ್ಪಿ ಯಾರು ಗೊತ್ತಾ..?

ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಡಾ. ವಿಷ್ಣುವರ್ಧನ್ ವರ್ಗ, ನೂತನ ಎಸ್ಪಿ ಯಾರು ಗೊತ್ತಾ..?

ಕಾರವಾರ: ಉತ್ತರ ಕನ್ನಡದ ಎಸ್ಪಿ ಡಾ.ವಿಷ್ಣುವರ್ಧನ್ ವರ್ಗವಾಗಿದ್ದಾರೆ. ನೂತನ ಎಸ್ಪಿಯಾಗಿ ನಾರಾಯಣ್ ಎಂ. ಅವರನ್ನು ಸರ್ಕಾರ ನೇಮಕ ಮಾಡಿದೆ‌. ಅಂದಹಾಗೆ, ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಲ್ಲಿ, ಉತ್ತರಕನ್ನಡ ಎಸ್ಪಿ ಆಗಿದ್ದ ಡಾ. ವಿಷ್ಣುವರ್ಧನ್ ಅವರನ್ನ ಸಹ ವರ್ಗಾವಣೆ ಮಾಡಲಾಗಿದೆ.   ಉತ್ತರಕನ್ನಡ ಹಾಲಿ ಎಸ್ಪಿ ಆಗಿದ್ದ ವಿಷ್ಣುವರ್ಧನ್ ಅವರನ್ನ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನಾರಾಯಣ್ ಎಂ ಅವರನ್ನ ನೇಮಕ ಮಾಡಲಾಗಿದೆ. ಇನ್ನು, ನಾರಾಯಣ್ ಎಂ. ರವರು 2012ರಲ್ಲಿ ಭಟ್ಕಳ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಉತ್ತರಕನ್ನಡ ಎಸ್ಪಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ. ಅದೃಷ್ಟವಶಾತ್ ಓರ್ವ ನದಿಯಿಂದ ಹೊರಗೆ ಬಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತೆಪ್ಪದಲ್ಲಿ ತೆರಳಿದವರು ಕೊಲ್ಹಾರ ಹಾಗೂ ಬಳೂತಿ ಗ್ರಾಮದವರು ಎನ್ನಲಾಗಿದೆ. ಕೋಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನೊರ್ಮಾಣವಾಗಿದೆ. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!