ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ ಕಡಿಮೆ ಒಂದು ವರ್ಷ ಆಗ್ತಾ ಬಂತು, ಮುಂಡಗೋಡ ತಾಲೂಕಿನಾಧ್ಯಂತ ಮುಂದಿನ ವಿಧಾನಸಭಾ ಚುನಾವಣೆಗೆ ನಾನೇ ಜೆಡಿಎಸ್ ಅಭ್ಯರ್ಥಿ ಅಂತಾ ಎಲ್ಲಾ ಕಡೆ ಹೇಳಿಕೊಂಡು ತಿರುಗಾಡಿದ್ದವರು ಇವ್ರು. ಹೆಸ್ರು ಸಂತೋಷ ರಾಯ್ಕರ್ ಅಂತಾ. ಮೊದ ಮೊದಲು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದವರು. ನಂತರ ಅದೇನಾಯ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ತೆನೆಹೊತ್ತ ಮಹಿಳೆಯನ್ನ ವರಿಸಿಕೊಂಡ್ರು. ಆ ಬಳಿಕ ಬಹುತೇಕ ಗ್ರಾಮಗಳಲ್ಲಿ ಹಬ್ಬ ಹರಿದಿನಗಳಿಗೆ ಶುಭಾಶಯಗಳ ಪ್ಲೆಕ್ಸು, ಬ್ಯಾನರು ಕಟ್ಟಿ...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..? ಅಂದಹಾಗೆ, ಅಕ್ಷರಶಃ ರಾಂಗ್ ರೂಟ್ ನಲ್ಲಿದ್ದ KA 33 M 4620 ನೋಂದಣಿ ಸಂಖ್ಯೆಯ ಕಾರು, ಬೈಕುಗಳಿಗೆ ಡಿಕ್ಕಿಹೊಡೆದಿದೆ, ಕಾರಿನಲ್ಲಿದ್ದವರು ಅಪಘಾತವಾದ ತಕ್ಷಣವೇ ಕಾರು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಮತ್ತಿಬ್ಬರು ಯುವಕರು ಇದ್ದರು ಎನ್ನಲಾಗಿದೆ. ಕಾರಿನಲ್ಲಿ ಎಣ್ಣೆ ಬಾಟಲಿಗಳು, ಕಾಂಡೋಮ್ ಪಾಕೇಟ್ಸ್ ಸಿಕ್ಕಿದ್ದು ಕುಡಿದ ನಶೆಯಲ್ಲೇ ಅತಿ ವೇಗದಲ್ಲಿ ಕಾರು ಚಲಾಯಿಸಿ ಅಪಘಾತ ಪಡಿಸಿದ್ದಾರೆ ಅಂತಾ ಸ್ಥಳೀಯರು...
ಮುಂಡಗೋಡಿನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ರಾಜ್ಯೋತ್ಸವ, ಧ್ವಜಾರೋಹಣ ಮಾಡಿದ ಪಿಐ ಸಿಮಾನಿ
ಮುಂಡಗೋಡ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕಾ ಘಟಕದ ವತಿಯಿಂದ ಇಲ್ಲಿನ ಶಿವಾಜಿ ವೃತ್ತದಲ್ಲಿ ಕನ್ನಡ ದ್ವಜಾರೋಹಣ ನೆರವೇರಿಸಲಾಯಿತು. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ್ರು. ವಿವಿಧ ರಾಜ್ಯದೆಡೆಯಿಂದ ಬಂದ ಪ್ರತಿಯೊಬ್ಬರೂ ಈ ನಾಡಿನ ಋಣ ತೀರಿಸುವ ಕೆಲಸ ಮಾಡಬೇಕಿದೆ ಇಲ್ಲಿ ದೊರಕುವ ಶಾಂತಿ ಸಂಹಿತೆ ದೇಶದ ಇತರೆ ಕಡೆ ಕಾಣಸಿಗುವುದಿಲ್ಲ ಎಂದ ಅವರು, ತಾಲೂಕಿಗೆ ನೂತನವಾಗಿ ಆಗಮಿಸಿರುವ ಪ್ರವೀಣ ಶೆಟ್ಟಿ ಬಣದಿಂದ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ ನ್ಯಾಯಕ್ಕಾಗಿ ಬಡವರ ಪರವಾಗಿ ಹೋರಾಡಿ ಭ್ರಷ್ಟತೆ ಹೋಗಲಾಡಿಸಲು ಪಣ ತೊಡಲು ಕರೆ ನೀಡಿದ್ರು. ಈ ವೇಳೆ ದಲಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ ದೈವಜ್ಞ, ನಿವೃತ್ತ ಶಿಕ್ಷಕ ಬಸವರಾಜ ಹೂಗಾರ, ನಿವೃತ್ತ ಶಿರಸ್ತೇದಾರ್ ತಳವಾರ, ಸಂಗಮೇಶ್ವರ್ ಸೊಸೈಟಿ ಅಧ್ಯಕ್ಷ ಸಂಗಮೇಶ್ವರ್ ಕೋಳೂರ, ರಕ್ಷಣಾ ವೇದಿಕೆ ರೈತ ಘಟಕದ ಅಧ್ಯಕ್ಷ ರಾಮುಗೌಳಿ, ಸಂಘಟನಾ ಕಾರ್ಯದರ್ಶಿ ಮಣಿಕಂಠ...
ಬಾಚಣಕಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್ ಅಕಾಲಿಕ ನಿಧನ
ಮುಂಡಗೋಡ ತಾಲೂಕಿನ ಬಾಚಣಕಿಯ ಹಿರಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್(70) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರು ಎಳೆದಿರೋ ಬರಮಪ್ಪ ಜನಾನುರಾಗಿಯಾಗಿದ್ದರು. ಮಂಗಳವಾರ ಮದ್ಯಾಹ್ನ ಮನೆಯಲ್ಲಿ ಊಟ ಮುಗಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಬರಮಪ್ಪ, ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ಅಸು ನೀಗಿದ್ದಾರೆ. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಇನ್ನು ಬರಮಪ್ಪ ಏಗಪ್ಪನವರ್ ನಿಧನಕ್ಕೆ ತಾಲೂಕಿನ ಜೈನ ಸಮಾಜ ಕಂಬನಿ ಮಿಡಿದಿದೆ.
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರು ಬ್ಯುಸಿಯಾಗಿದ್ದ ಕಾರಣಕ್ಕೆ ಪಕ್ಷ ಸೇರುವ ದಿನಾಂಕ ಮಾತ್ರ ಬಾಕಿ ಉಳಿಸಿಕೊಳ್ಳಲಾಗಿತ್ತು. ಇವತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಹಲವು ಮುಖಂಡರ ಜೊತೆ ಡಿಕೆಶಿ ನಿವಾಸದಲ್ಲೇ ಭೇಟಿಮಾಡಿದ ವಿ.ಎಸ್.ಪಾಟೀಲ್, ಕಾಂಗ್ರೆಸ್ ಸೇರ್ಪಡೆಯ ದಿನಾಂಕ ಪಿಕ್ಸ್ ಮಾಡಿಕೊಂಡಿದ್ದಾರೆ. ಮೊದಲು ಸೇರ್ಪಡೆ ನಂತ್ರ ಸಮಾವೇಶ..! ಬೆಂಗಳೂರಿನಲ್ಲಿ ನಡೆದ ಡಿಕೆಶಿ ಭೇಟಿ ವೇಳೆ ಚರ್ಚಿತವಾದಂತೆ, ನವೆಂಬರ್ 4 ರಂದು ಕೆಪಿಸಿಸಿ ಕಚೇರಿಯಲ್ಲೇ ಪಕ್ಷ ಸೇರ್ಪಡೆ ಕಾರ್ಯಕ್ರಮ...
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ಪರವಾಗಿ ಸಾಧಕ ಸಹದೇವಪ್ಪ ನಡಗೇರಿಯವರಿಗೆ ಅಭಿನಂದನೆಗಳು
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ ಇಟ್ಟಿದ್ದ ಸುಮಾರು 30 ಸಾವಿರ ಹಣವನ್ನು ಕಳ್ಳತನ ಮಾಡಿಕೊಂಡಿದ್ದಾರೆ. ಈ ವೇಳೆ ಮನೆಯಲ್ಲಿನ ಪಾತ್ರೆಗಳ ಶಬ್ಧವಾಗಿದೆ. ಹೀಗಾಗಿ, ಅಕ್ಕಪಕ್ಕದ ಜನ ಈ ಮನೆಲಿ ಯಾರೋ ಒಳನುಗ್ಗಿದ್ದಾರೆ ಅಂತ ಅನುಮಾನಿಸಿ ಮನೆಯ ಮಾಲೀಕರಿಗೆ ತಿಳಿಸಿದ್ದಾರೆ. ಅಲ್ಲದೇ ಮನೆಯ ಬಾಗಿಲು ತೆರೆದು ನೋಡಿದಾಗ ಇಬ್ಬರು ಬಾಲಕರು ಕೃತ್ಯದಲ್ಲಿ ಭಾಗಿಯಾಗಿರೋದು ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಅವ್ರನ್ನ ಹಿಡಿಯಲು ಗ್ರಾಮಸ್ಥರು ಬೆನ್ನತ್ತಿದ್ದಾರೆ. ಆದ್ರೆ ತಕ್ಷಣವೇ ಆ ಇಬ್ಬರು ಬಾಲಕರು...
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನೀಲ್ ಕುನುಗೋಲು ನೀಡಿರುವ ವರದಿ ಆಧರಿಸಿ ಚರ್ಚೆ ಮಾಡಿದ ನಾಯಕರು ಸುಲಭವಾಗಿ ಗೆಲುವು ಸಾಧಿಸಬಹುದಾದ ಕ್ಷೇತ್ರಗಳನ್ನು ಎ ಕೆಟಗೆರಿಗೆ ಸೇರಿಸಿ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲು ಪ್ಲ್ಯಾನ್ ಮಾಡಲಾಗಿದೆ. “ಬಿ” ಕೆಟೆಗರಿ ಗೆಲ್ಲುವ ಅವಕಾಶಗಳು ಹೆಚ್ಚಿರುವ ಕ್ಷೇತ್ರಗಳನ್ನು ಬಿ ಕೆಟಗೆರಿಯಲ್ಲಿ ಸೇರಿಸಿದ್ದು, ಎರಡನೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಮತ್ತು ಗೆಲುವು ಕಷ್ಟ ಎನಿಸಿಕೊಳ್ಳುವ ಕ್ಷೇತ್ರಗಳನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ....
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.