ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ ಕ್ಲಾಸ್ ನಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯ ಆತಂಕಕ್ಕೂ ಕಾರಣವಾಗಿತ್ತು. ನಿಜ ಅಂದ್ರೆ, ಶಿಕ್ಷಣ ಇಲಾಖೆಯ ದೊಡ್ಡ ದೊಡ್ಡ ತಾಲೂಕಾಧಿಕಾರಿಗಳೇ ಅಲ್ಲಿ ಹಾಜರಿದ್ರು. ಆದ್ರೂ ಆ ಅಧಿಕಾರಿಗಳ ಕಣ್ಣಿಗೆ ಇದೇಲ್ಲ ಕಾಣಲೇ ಇಲ್ಲ. ಅವ್ರು ಸಚಿವರ ಆಗಮನಕ್ಕಾಗಿ ಕಾಯುತ್ತ ಹರಟೆ ಹೊಡೆಯುವುದರಲ್ಲೇ ಬ್ಯುಸಿಯಾಗಿದ್ರು. ತುಂಡು ತುಂಡಾದ ವೈಯರ್..! ಅಂದಹಾಗೆ, ಸಚಿವರು ನೂತನವಾಗಿ ನಿರ್ಮಾಣಗೊಳ್ಳುತ್ತಿರೋ ಶಾಲಾ ಕಟ್ಟಡದ ಶಂಕು ಸ್ಥಾಪನೆಗೆ ಬಂದಿದ್ರು. ಹಾಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ...
Top Stories
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಪ್ರೊ ಬೈಕ್, ಬೆಳಗಾಗುವಷ್ಟರಲ್ಲೇ ಕಳ್ಳರು ಎಗರಿಸಿಕೊಂಡು ಹೋಗಿದ್ದರು. ಹೀಗಾಗಿ, ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿರಾಜ್ ಬೊಮ್ಮನಳ್ಳಿ ಕಳೆದು ಹೋಗಿದ್ದ ಬೈಕ್ ಹುಡುಕಿಕೊಡುವಂತೆ ಮನವಿ ಮಾಡಿದ್ದರು. ಹೀಗಾಗಿ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು ಬೈಕ್ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿ ತಂದಿದ್ದಾರೆ. ಈ ಪ್ರಕರಣವನ್ನು ಭೇದಿಸಲು ಎಸ್ಪಿ ಡಾ. ಸುಮನ ಪೆನ್ನೆಕರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್ ಬದರಿನಾಥ, ಶಿರಸಿ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಹೀಗಾಗಿ, ಕಾರಲ್ಲಿದ್ದ ಮಹಿಳೆಯರೂ ಸೇರಿ ಐವರು ಕಾರಲ್ಲೇ ಸಿಲುಕಿದ್ದಾರೆ. ಹೊರಬರಲು ಚೀರಾಟ ಶುರುವಿಟ್ಟಿದ್ದಾರೆ. ತಕ್ಷಣವೇ ಸ್ಥಳೀಯರು ಪಲ್ಟಿಯಾದ ಕಾರನ್ನು ಮೇಲಕ್ಕೆ ಎತ್ತಿ ಕಾರಲ್ಲಿದ್ದವರನ್ನು ರಕ್ಷಿಸಿದ್ದಾರೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನ ಎಂಜಿನ್ ನಲ್ಲಿ ಹೊಗೆ ತುಂಬಿಕೊಂಡು ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು, ಘಟನೆಯಲ್ಲಿ ತೀವ್ರ ಗಾಯದಿಂದ ಬಳಲುತ್ತಿದ್ದ ಮಹಿಳೆಯರೂ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!
ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆಯಲ್ಲಿ ನಿನ್ನೆ ನಡೆದಿದ್ದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕಿಮ್ಸ್ ನಲ್ಲಿ ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು ಕಂಡಿದ್ದಾರೆ. ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದು, ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. ಇನ್ನುಳಿದ ಐವರು ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಸಾವು ಕಂಡಿರೋ ಮೂವರಿಗೂ ಶೇ.80 ರಿಂದ 90 ರಷ್ಟು ಸುಟ್ಟ ಗಾಯಗಳಾಗಿದ್ದವು. ವೈದ್ಯರ ಸತತ ಪ್ರಯತ್ನದ ನಂತರವೂ ಚಿಕಿತ್ಸೆ ಫಲಿಸದೆ ಮೂವರೂ ಸಾವು ಕಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಫ್ಯಾಕ್ಟರಿಗೆ ಬೆಂಕಿ, 8 ಜನರಿಗೆ ಗಂಭೀರ ಗಾಯ, ನಾಲ್ವರು ಸಜೀವ ದಹನವಾದ್ರಾ..?
ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿರೋ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಗೆ ಬೆಂಕಿ ಬಿದ್ದಿದ್ದು ಬರೋಬ್ಬರಿ 8 ಜನರಿಗೆ ಗಂಭೀರ ಗಾಯವಾಗಿದೆ. ಇನ್ನೂ ನಾಲ್ವರು ಫ್ಯಾಕ್ಟರಿ ಒಳಗಡೆ ಸಿಲುಕಿ ಸಜೀವ ದಹನವಾಗಿರೋ ಅನುಮಾನವಿದೆ. ಬರ್ಥ ಡೇ ಪಾರ್ಟಿಯಲ್ಲಿ ಬಳಸುವ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಕಳೆದ ಒಂದು ಗಂಟೆಯ ಹಿಂದೆ ಘಟನೆ ನಡೆದಿದ್ದು, ಪ್ರತೀಕ್ಷಣವೂ ಸ್ಪೋಟದ ಶಬ್ದ ಕೇಳಿಸುತ್ತಿದೆ. ಬೆಂಕಿಯ ಕಡಿಮೆ ನ್ನಾಲಿಗೆ ಹರಡುತ್ತಿದೆ. ಹೀಗಾಗಿ, ಅಗ್ನಿಶಾಮಕ ಸಿಬ್ಬಂದಿಗೆ ಬೆಂಕಿ ನಂದಿಸುವ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಇನ್ನು ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25 ರಂದು ಸಭೆ ನಡೆಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 16 ರಂದು ಸುನಿಲ್ ಸಳಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ, ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ಮದ್ಯಂತರ ತಡೆಯಾಜ್ಞೆ ನೀಡಿದೆ. ಕೋರ್ಟ್ ಹೇಳಿದ್ದೇನು..? ನಾಗನೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಸುನೀಲ ವಾಗು ಸಳಕೆ ವಿರುದ್ಧದ ಅವಿಶ್ವಾಸ ಗೊತ್ತುವಳಿ ಪ್ರಕರಣವನ್ನು ಗುರುವಾರ ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠವು ಮಧ್ಯಂತರ...
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ. ಗಟ್ಟಿತನ..! ಅಸಲು, ಮುಂಡಗೋಡ ತಾಲೂಕಿನಲ್ಲಿ ಹಲವರ ಶ್ರಮದಿಂದ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲೂಕಿನ ಒಟ್ಟೂ 16 ಗ್ರಾಮ ಪಂಚಾಯತಿಗಳ ಪೈಕಿ ಬರೋಬ್ಬರಿ 7 ರಲ್ಲಿ ಕಾಂಗ್ರೆಸ್ ಬಾವುಟ ಹಾರಿತ್ತು. ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಸತ್ಯ ಅಂದ್ರೆ ಇದೇಲ್ಲ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ತೊರೆದು ಹೋದ ನಂತ್ರ, ಇನ್ನೇನು ಕಾಂಗ್ರೆಸ್ ಕತೆ ಮುಗಿದೇ ಹೋಗಿದೆ ಅನ್ನೋ ಸಂದರ್ಭದಲ್ಲೇ ಬಂದಿದ್ದ ಫಲಿತಾಂಶವಾಗಿತ್ತು. ತಾಲೂಕಿನಲ್ಲಿ ಕೈ...
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ ಅಂತಾ ತಿಳುವಳಿಕೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೆ, ಇಂದು ನಿಗದಿಯಾಗಿದ್ದ “ಅವಿಶ್ವಾಸ” ಸಭೆಗೆ ಬಿಜೆಪಿ ಬೆಂಬಲಿತ 9 ಜನ ಸದಸ್ಯರು ಹಾಜರಾಗಿದ್ದರು. ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಸೇರಿದ್ದ ಸದಸ್ಯರಿಗೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಎಸಿ ಯವರ ತಿಳುವಳಿಕೆ ಪತ್ರ ತಂದ ಹಿನ್ನೆಲೆಯಲ್ಲಿ ಸಭೆ ರದ್ದು ಪಡಿಸಿದ್ರು. ಈ ವೇಳೆ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಾಯ್. ಪಿ. ಪಾಟೀಲ್, ಯುವ ಮೋರ್ಚಾ ಸದಸ್ಯ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.