ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ ಅಣ್ಣ ಚಂದ್ರು ಆತನ ವಯಸ್ಸು 14 ಹೀಗಿರೋ ಇವ್ರೇಲ್ಲರ ಕತೆಯೂ ಅಷ್ಟೇ, ಇವ್ರೇಲ್ಲ ಈಗ ಅಕ್ಷರಶಃ ಅನಾಥರು. ಹೀಗಿರೋವಾಗಲೇ ಆ ಬಾಲಕನಿಗೆ ನಾಯಿಗಳ ಹಿಂಡು ದಾಳಿ ಮಾಡಿದೆ. ದುರಂತ ಅಂದ್ರೆ ಇದೇ ಅಲ್ವಾ..? ಹೀಗಿದ್ದಾಗಲೇ ಆ ಮೂಕ ಬಾಲಕ 7 ವರ್ಷ ವಯಸ್ಸಿನ ಗುತ್ತೆಪ್ಪನಿಗೆ ನಿನ್ನೆ ಬೀದಿನಾಯಿಗಳ ಹಿಂಡು ಮನಸೋ ಇಚ್ಚೆ ಕಚ್ಚಿ ಗಾಯಗೊಳಿಸಿವೆ. ಆಟವಾಡುತ್ತಿದ್ದಾಗ ದಾಳಿ ಮಾಡಿರೋ ನಾಯಿಗಳು ಬಡಬಾಲಕನಿಗೆ ಇನ್ನಿಲ್ಲದಂತೆ...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನೌಕರರ ವರ್ಗಾವಣೆಯಲ್ಲಿ ಪತಿ, ಪತ್ನಿಯರಿಗಷ್ಟೇ ಅಲ್ಲ ಪೊಲೀಸರಿಗೂ ವಿನಾಯಿತಿ ನೀಡಿ, 16A ತಿದ್ದುಪಡಿ ವಿರುದ್ಧ ಪೊಲೀಸ್ ಪೇದೆಗಳ ಮೂಕರೋಧನ..!
ಇದು ಸರ್ಕಾರಿ ನೌಕರರಿಗೆ ಬಹುದೊಡ್ಡ ಆಘಾತ ಅಂತಲೇ ಹೇಳಲಾಗ್ತಿದೆ. ಅದ್ರಲ್ಲೂ ನಮ್ಮ ರಕ್ಷಣೆಗಾಗಿ ಹಗಲಿರುಳು ರಜೆಯಿಲ್ಲದೇ ದುಡಿಯೋ ಪೊಲೀಸರಿಗೆ ಸರ್ಕಾರದ ಅದೊಂದು ಕಾನೂನು ಇಡಿ ಇಡಿಯಾಗಿ ನೋವು ಮತ್ತು ಆತಂಕಕ್ಕೆ ದೂಡಿದೆ ಅಂತಾ ಖುದ್ದು ಪೊಲೀಸ್ ಇಲಾಖೆಯ ಅಸಂಖ್ಯ ಪೇದೆಗಳು ಅಲವತ್ತುಕೊಂಡಿದ್ದಾರೆ. ರಾಜ್ಯ ಸರ್ಕಾರ ಸದ್ಯ 16 A ಕಾಲಂ ನ್ನು ತಿದ್ದುಪಡಿ ಮಾಡಿರೋದು ಸಾಕಷ್ಟು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಏನದು ತಿದ್ದುಪಡಿ..? ಈ ಹಿಂದೆ 16A ಕಾಲಂ ಅಡಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಬಲಿಷ್ಟ ಕಾನೂನು ಇತ್ತು. ಅದರ ಪ್ರಕಾರ ಅದ್ಯಾವುದೇ ಜಿಲ್ಲೆಯಲ್ಲಿ 7 ವರ್ಷ ಕಾರ್ಯನಿರ್ವಹಿಸಿದ್ರೆ ಆ ನಂತರದಲ್ಲಿ ತಮ್ಮ ಸ್ವಂತ ಜಿಲ್ಲೆ ಅಥವಾ ತಮಗಿಷ್ಟವಾದ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದಿತ್ತು. ಆದ್ರೆ, ಸದ್ಯ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರೋ ಕಾನೂನಿನ ಪ್ರಕಾರ ಇನ್ಮೇಲೆ ಪೊಲೀಸರು ಅದೇಲ್ಲಿ ನಿಯುಕ್ತಿ ಹೊಂದಿ ನೌಕರಿ ಪ್ರಾರಂಭಿಸಿದ್ದರೋ ಅದೇ ಜಿಲ್ಲೆಯಲ್ಲಿ ನಿವೃತ್ತಿ ಹೊಂದಬೇಕಿದೆ. ಹೀಗಾಗಿ, ದೂರದ ಜಿಲ್ಲೆಗಳಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸ್ತಿರೋ...
ಬಡ ಮಕ್ಕಳ ಗೋಳಿಗೆ ಸ್ಪಂಧಿಸಿದ್ರು ಸಿಡಿಪಿಓ ದೀಪಕ್ಕ, ಕಾರ್ಮಿಕರ ಮಕ್ಕಳಿಗೆ ದೊರೆಯಿತು ಆಸರೆ..!
ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ. ಪ್ರತೀ ವರ್ಷದ ಗೋಳು..! ಅಸಲು, ಸಿಡಿಪಿಓ ದೀಪಕ್ಕರ ಎದುರಿಗೇ ಕಂದಮ್ಮಗಳ ಪೋಷಕರು ಹೇಳಿದಂತೆ, ಇಲ್ಲಿನ ಅಂಗನವಾಡಿ ಕಾರ್ಯಕರ್ತರು ಇವರನ್ನ ಯಾರೂ ಕ್ಯಾರೇ ಮಾಡಿರಲಿಲ್ಲ. ಹಾಗೆ ನೋಡಿದ್ರೆ ಇದು ಇವತ್ತಿನ ಮಾತಲ್ಲ. ಪ್ರತೀ ವರ್ಷವೂ ಕಬ್ಬು ಕಟಾವಿಗೆ ಬರುವ ಕೂಲಿ ಕಾರ್ಮಿಕರು ತಮ್ಮೀಡಿ ಕುಟುಂಬವನ್ನೇ ಇಲ್ಲಿ ಹೊತ್ತು ತಂದಿರುತ್ತಾರೆ. ಈ ವೇಳೆ ಆ ಕುಟುಂಬಗಳಲ್ಲಿ ಪುಟ್ಟ ಪುಟ್ಟ ಮಕ್ಕಳೂ ಇರತ್ತೆ. ಪ್ರಾಥಮಿಕ ಶಾಲೆಯಲ್ಲಿ ಕಲಿಯಬೇಕಿದ್ದ...
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ ಬಡಕುಟುಂಬಗಳ ಕಂದಮ್ಮಗಳು ಮಳೆ, ಬಿಸಿಲು, ಚಳಿಯಲ್ಲೇ ನಡುಗುತ್ತಿವೆ. ಅಪೌಷ್ಟಿಕತೆಯ ಸುಳಿಗೆ ಸಿಕ್ಕು ನರಳುವ ಹಂತಕ್ಕೆ ಬಂದಿವೆ. ಪ್ರತಿ ವರ್ಷ ಮುಂಡಗೋಡ ತಾಲೂಕಿಗೆ ವಿಜಯಪುರ ಜಿಲ್ಲೆಯಿಂದ ಹಾಗೂ ಮಹಾರಾಷ್ಟ್ರದಿಂದ ಕಬ್ಬು ಕಟಾವು ಮಾಡಲು ಕೂಲಿಕಾರ್ಮಿಕರ ತಂಡಗಳು ಬರ್ತಿವೆ. ಅದು ಅವರ ಹೊಟ್ಟೆಪಾಡಿಗೆ ಅನಿವಾರ್ಯ. ಏನಿಲ್ಲವೆಂದರೂ ಮೂರ್ನಾಲ್ಕು ತಿಂಗಳು ತಾಲೂಕಿನಲ್ಲೇ ಇದ್ದು ಕಬ್ಬು ಕಟಾವು ಮಾಡುವ ಈ ಕಾರ್ಮಿಕರ ಜೊತೆ ಪುಟ್ಟ ಪುಟ್ಟ ಕಂದಮ್ಮಗಳೂ ಬಂದಿವೆ....
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಬಂದ್ ಆಗಿತ್ತು. ಅದೇಷ್ಟೋ ಬಡವರ ಹೊಟ್ಟೆಗಳು ತಣ್ಣಗಿದ್ದವು. ಅದಕ್ಕೇಲ್ಲ ಕಾರಣ ಹಿಂದಿನ ಎಸ್ಪಿ ಡಾ.ಸುಮನಾ ಪೆನ್ನೇಕರ್ ಮೇಡಮ್ಮಿನ ಖಡಕ್ ಆದೇಶ. ಆದ್ರೆ, ಯಾವಾಗ ಮೇಡಮ್ಮಿಗೆ ಎತ್ತಂಗಡಿ ಆಯ್ತೋ ಆ ಕ್ಷಣದಿಂದಲೇ ಇಲ್ಲಿನ ಮಟ್ಕಾ ಅಡ್ಡೆಗಳು ಮತ್ತೆ ಕಸಕಡ್ಡಿ ತೆಗೆದು, ಹೋಮ ಹವಣ ಹಾಕಿಸಿಕೊಂಡು ನಂಬರುಗಳ ಚಾರ್ಟ್ ಇಟ್ಕೊಂಡು ಕುಳಿತುಬಿಟ್ಟಿದ್ದಾರೆ. ಹೀಗಾಗಿ, ಮತ್ತೆ ಈಗ ತಾಲೂಕಿನ ಬಡವರ ಅದೇಷ್ಟೋ ಒಲೆಗಳು ತಣ್ಣಗಾಗುವ...
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಈ ಗೌರವ ಪ್ರಮಾಣ ಪತ್ರ ನೀಡಿದೆ.
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ ನಡೆಸಲಾಗುತ್ತದೆ ಅಂತಾ ಮಾಹಿತಿ ತಿಳಿದು ಬಂದಿದೆ.