ಮುಂಡಗೋಡ: ತಾಲೂಕಿನಲ್ಲಿ ಕುದುರೆ ಕಳ್ಳರು ಬಂದಿದ್ದಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ಇಲ್ಲಿ ಎಲ್ಲಿಂದಲೋ ಬಂದು ವಾಹನ ತಂದು ಕುದುರೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಸಂಚಾರಿ ಕುರುಬರು ಎಲ್ಲೆಂದರಲ್ಲಿ ಬಿಟ್ಟು ಹೋಗುತ್ತಿರೋ ಕುದುರೆಗಳನ್ಬು ಕಳವು ಮಾಡಿಕೊಂಡು ಹೋಗುವ ಗ್ಯಾಂಗ್ ಬಂದಿದೆಯಾ ಅನ್ನೋ ಅನುಮಾನಗಳು ಶುರುವಾಗಿದೆ. ಯಾಕಂದ್ರೆ ತಾಲೂಕಿನ ಟಿಬೇಟಿಯನ್ ಕಾಲೊನಿ ಸೇರಿದಂತೆ ಎಲ್ಲೆಂದರಲ್ಲಿ ತಿರುಗಾಡುವ ಕುದುರೆಗಳನ್ನು ಕಳ್ಳರು ಹಾಡಹಗಲೆ ಎತ್ತಾಕೊಂಡು ಹೋಗ್ತಿದಾರಾ ಅನ್ನೊ ಅನುಮಾನಗಳು ಶುರುವಾಗಿದೆ. ಹೀಗಾಗಿ, ಹಾಗೆ ಕಳ್ಳರ ಕೃತ್ಯಗಳನ್ನು ಕೆಲ ಯುವಕರ ಪಡೆ ನಿಯಂತ್ರಿಸಲು ಪಣ ತೊಟ್ಟು ನಿಂತಿದೆ.
Top Stories
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಮುಂಡಗೋಡಿನ ನ್ಯಾಸರ್ಗಿ ಬಳಿ ಭೀಕರ ಅಪಘಾತ, ಮರಕ್ಕೆ ಡಿಕ್ಕಿ ಹೊಡೆದ ಕಾರು, ಓರ್ವ ಗಂಭೀರ..!!
ಮುಂಡಗೋಡ; ತಾಲೂಕಿನ ನ್ಯಾಸರ್ಗಿ ಬಳಿ ಭೀಕರ ಅಪಘಾತವಾಗಿದೆ. ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ನ್ಯಾಸರ್ಗಿಯ ಅನ್ವರ್ ಷಹಜಹಾನ್ ದೊಡ್ಮನಿ(26) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ನ್ಯಾಸರ್ಗಿಯಿಂದ ಮುಂಡಗೋಡಿಗೆ ಕಾರಲ್ಲಿ ಬರುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮುಂಡಗೋಡಿನ 108 ಅಂಬ್ಯಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಕಾಲಿಗೆ ಭಾರೀ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. 108 ಅಂಬ್ಯುಲೆನ್ಸ್ ನ ಧನರಾಜ್ ಹಾಗೂ ಚಾಲಕ ಕೆಂಚೇಶ್ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ರು. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರಿನಲ್ಲಿ “ದೇವರ ಹಾವು” ಪ್ರತ್ಯಕ್ಷ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ನಡೆಯುತ್ತಿರೊ ಕಾಲುವೆ ಕಾಮಗಾರಿ ವೇಳೆ ಬೃಹತ್ ನಾಗರ ಹಾವು ಪ್ರತ್ಯಕ್ಷವಾಗಿ ಆತಂಕ ಮೂಡಿಸಿತ್ತು. ಜಲಾಶಯದ ಕಾಲುವೆ ಕಾಮಗಾರಿ ವೇಳೆ ಆಹಾರ ಅರಸಿ ಬಂದಿದ್ದ ಘಟ ಸರ್ಪ ನಿರಾತಂಕವಾಗಿ ಕಾಲುವೆಯಲ್ಲಿ ಆಟವಾಡುತ್ತಿತ್ತು. ಹೀಗಾಗಿ ಕೆಲಹೊತ್ತು, ಕಾರ್ಮಿಕರ ಆತಂಕಕ್ಕೆ ಕಾರಣವಾಗಿತ್ತು. ಹಾವನ್ನು ಸುರಕ್ಷಿತವಾಗಿ ಕಾಲುವೆಯಿಂದ ಹೊರಗೆ ಕಳಿಸುವಲ್ಲಿ ಜನರು ಯಶಸ್ವಿಯಾದ್ರು. ಅಲ್ಲದೆ ಈ ಹಾವು ದೇವರ ಹಾವು ಅಂತಾ ಅಲ್ಲಿದ್ದವರು ಕೈ ಮುಗಿದು ನಿಂತಿರೊ ದೃಷ್ಯ ಕಂಡು ಬಂತು. ಒಟ್ನಲ್ಲಿ ಹಾವು ಬಂದ ಕಾರಣಕ್ಕೆ ಸ್ಥಳದಲ್ಲಿ ಕೆಲಹೊತ್ತು ಆತಂಕಕ್ಕೆ ಕಾರಣವಾಯ್ತು.
ಕೂರ್ಲಿ ಗ್ರಾಮದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ಜಾನುವಾರು ಪ್ರದರ್ಶನ..!
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂರ್ಲಿ ಗ್ರಾಮದಲ್ಲಿ ಪಶುಸಂಗೋಪನಾ ಇಲಾಖೆಯಿಂದ ಜಾನುವಾರು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಜಾನುವಾರು ಪ್ರದರ್ಶನದಲ್ಲಿ ಉತ್ತಮ ಜಾನುವಾರುಗಳಿಗೆ ಬಹುಮಾನ ನೀಡಲಾಯಿತು. ಇನ್ನು ಜಾನುವಾರುಗಳಿಗೆ ಕಾಲುಬಾಯಿ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಿ, ಲಸಿಕೆ ಹಾಕಿಸಬೇಕು. ಜಾನುವಾರುಗಳ ಆರೋಗ್ಯ ಕಾಪಾಡಲು ಕೊಟ್ಟಿಗೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಜಾನುವಾರುಗಳಿಗೆ ಕಿವಿಓಲೆ(ಗುರುತಿನ ಸಂಖ್ಯೆ) ಹಾಕಿಸಿಕೊಳ್ಳುವುದು ಕಡ್ಡಾಯವಾಗಿದ್ದು, ವಿವಿಧ ಯೋಜನೆಗಳಡಿ ಸಿಗುವ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಜಾನುವಾರುಗಳ ಸಂತತಿ ಹೆಚ್ಚಾದರೆ, ರೈತರಿಗೆ ಅನುಕೂಲವಾಗುತ್ತದೆʼ ಅಂತಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಪಶುವೈದ್ಯರಾದ ಡಾ.ಜಯಚಂದ್ರ ಕೆಂಪಶಿ, ಡಾ. ಪ್ರಸನ್ನ ಹೆಗಡೆ ರೈತರಿಗೆ ಮಾರ್ಗದರ್ಶನ ನೀಡಿದ್ರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳಾದ ಸುರೇಶ್ ಡೋರಿ, ಮುತ್ತುರಾಜ ತಟ್ಟಿ, ಸಂತೋಷ ಅಡೂರು, ಮಹಮ್ಮದ್ ರಫೀಕ್ ಮರಗಡಿ, ಫಕ್ಕಿರೇಶ್ ನೆಗೋನಿ ಉಪಸ್ಥಿತರಿದ್ದರು.
ಅಗಡಿ ಚೆಕ್ ಪೊಸ್ಟ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಒದ್ದಾಡಿದ ಸವಾರ, ಆಸ್ಪತ್ರೆಗೆ ರವಾನೆ..!
ಮುಂಡಗೋಡ; ತಾಲೂಕಿನ ಕಲಘಟಗಿ ರಸ್ತೆಯ ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಬೆಂಡ್ಲಗಟ್ಟಿ ಗ್ರಾಮದವನು ಅಂತಾ ಹೇಳಲಾಗಿರೋ ವ್ಯಕ್ತಿ ಬೈಕ್ ನಿಂದ ಬಿದ್ದು ಒದ್ದಾಡುತ್ತಿದ್ದಾನೆ. ಈ ವೇಳೆ ಸ್ಥಳೀಯರು ಅಂಬ್ಯುಲೆನ್ಸ್ ಗೆ ಕಾಲ್ ಮಾಡಿ ಗಾಯಾಳು ವ್ಯಕ್ತಿಯ ಚಿಕಿತ್ಸೆಗೆ ರವಾನಿಸಲು ರೆಡಿಯಾಗಿದ್ದಾರೆ. ಆದ್ರೆ ಇದೇ ವೇಳೆ ಪೊಲೀಸರ ವಾಹನ ಬಂದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದೆ.
ಮುಂಡಗೋಡ ಯುವಕರ ಮಾನವೀಯ ಕಾರ್ಯ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಚರ್ಮ ರೋಗದಿಂದ ಬಳಲುತ್ತಿದ್ದ ಆಕಳಿಗೆ ಇಲ್ಲಿನ ಯುವಕರ ಬಳಗ ಚಿಕಿತ್ಸೆ ನೀಡಿ ಮಾನವೀಯತೆ ತೋರಿದೆ. ತೀವ್ರವಾದ ಚರ್ಮರೋಗದಿಂದ ಬಳಲುತ್ತಿದ್ದ ಆಕಳು ಪರದಾಡುತ್ತಿತ್ತು. ಇದನ್ನು ಕಂಡ ಯುವಕರ ಪಡೆ ತಕ್ಷಣವೇ ಆಕಳನ್ನು ಹಿಡಿದು ಕಟ್ಟಿ, ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕರ ಕರೆಗೆ ಓಗೋಟ್ಟು ತಕ್ಷಣವೇ ಹಾಜರಾದ ಪಶು ವೈದ್ಯ ಅವಿನಾಶ್ ಪೂಜಾರ್ ಕರ್ತವ್ಯ ಪ್ರಜ್ಞೆ ತೋರಿದ್ದಾರೆ. ಕಳೆದ ವಾರವಷ್ಟೇ ಅನಾರೋಗ್ಯದಿಂದ ಬಳಲಿ ನಿತ್ರಾಣಗೊಂಡಿದ್ದ ಆಕಳ ಕರುವಿಗೆ ಚಿಕಿತ್ಸೆ ನೀಡಿದ್ದ ಇದೇ ಯುವಕರ ತಂಡ ಕರುವನ್ನು ಬದುಕಿಸಲು ಹರಸಾಹಸ ಪಟ್ಟಿತ್ತು. ಹೀಗಾಗಿ, ಮುಂಡಗೋಡಿನ ಯುವಕರ ಮಾನವೀಯ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಆದ್ರೆ, ಮೊಬೈಲ್ ಕಳ್ಳ ಎಲ್ಲಿಯವನು ಏನು ಕತೆ ಅಂತಾ ಮಾಹಿತಿ ಲಭ್ಯವಾಗಿಲ್ಲ.
ಇಂದೂರಿನಲ್ಲಿ ನೇಣಿಗೆ ಶರಣಾದ 17 ವರ್ಷದ ಯುವತಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ 17 ವರ್ಷದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ.ಇಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ರೂಪಾ ಬಸವರಾಜ್ ಹಳಿಯಾಳ (17) ಎಂಬ ಯುವತಿಯೇ ನೇಣಿಗೆ ಶರಣಾಗಿದ್ದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.
ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!
ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ ಮಾಡಿ ಆಗಿದೆ. ಆದ್ರೆ, ಇದಕ್ಕೊಪ್ಪದ ಮತ್ತೊಂದು ಬಣ, ಕಳೆದ ಹಲವು ದಿನಗಳಿಂದ ಉತ್ತರಾಧಿಕಾರಕ್ಕಾಗಿ ಅಲೆದಾಡುತ್ತಿರು ಸೋಮಶೇಖರ ಸ್ವಾಮೀಜಿಯವರನ್ನು ತಂದು ಪಟ್ಟಕ್ಕೇರಿಸಲು ಮುಹೂರ್ತ ಫಿಕ್ಸ್ ಮಾಡಿದೆ. ಇವತ್ತು ಮತ್ತು ನಾಳೆ ಅಂದ್ರೆ ಫೆ.9 ಮತ್ತು 10 ರಂದು ಪಟ್ಟಾಧಿಕಾರದ ಕಾರ್ಯಕ್ರಮ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಶಾಸ್ತ್ರಿ ವಿರುದ್ದ ಕಿಡಿ..! ಈ ಕಾರ್ಯಕ್ರಮ ಬಹುತೇಕ ರಂಬಾಪುರಿ ಪೀಠದ ಜಗದ್ಗುರುಗಳ ಸಾನಿಧ್ಯದಲ್ಲೇ ನಡೆಯತ್ತೆ ಅನ್ನೋ ಮಾತುಗಳಿವೆ. ಹೀಗಾಗಿ, ಈ...
ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋಗಿ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.