ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ ತಾಲೂಕೂ ಇದಕ್ಕೆ ಹೊರತಾಗಿಲ್ಲ. ಆಸ್ಪತ್ರೆಗಳಲ್ಲಿ ವೈದ್ಯರು ಜ್ವರದಿಂದ ಬಳಲುತ್ತಿರೋ ಮಕ್ಕಳ ದೇಖರೇಕಿ ಮಾಡಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಎರಡನೇ ಅಲೆಯ ಹೊಡೆತ..! ಅಂದಹಾಗೆ, ಕಳೆದ ಎರಡನೇ ಅಲೆಯ ಹೊಡೆತಕ್ಕೆ ಮುಂಡಗೋಡ ತಾಲೂಕು ಇಡಿ ಇಡಿಯಾಗಿ ನರಳಿತ್ತು. ಅದೇಷ್ಟೋ ಜನ ಕೊರೊನಾ ಕಾಟಕ್ಕೆ ತುತ್ತಾಗಿ ಇನ್ನೂ ಅದರ ಸೈಡ್ ಎಫೆಕ್ಟ್ ನಿಂದ ಹೊರಬಂದಿಲ್ಲ. ನಿನ್ನೆಯಷ್ಟೇ ನನ್ನ ಜೊತೆ ಕೂತು ಟೀ ಕುಡಿದಿದ್ದಾ ರೀ, ಇವತ್ತು...
Top Stories
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಮನೆಯ ಛಾವಣಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ, ಹೇಗೆ ರಕ್ಷಣೆ ಮಾಡಿದ್ರು ನೋಡಿ..!
ಶಿರಸಿ: ಮನೆಯ ಛಾವಣಿಯಲ್ಲಿ ಅಡಗಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ ಸುರನಗದ್ದೆಯ ಮನೆಯ ಛಾವಣಿಯಲ್ಲಿ ಅಡಗಿದ್ದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು. ಉರಗ ತಜ್ಞ ಪ್ರಶಾಂತ ಹುಲೇಕಲ್, ಮನೆಯ ಛಾವಣಿಯಲ್ಲಿ ಹೆಂಚಿನಡಿ ಸೇರಿದ್ದ ಕಾಳಿಂಗ ಸರ್ಪವನ್ನು ಅತ್ಯಂತ ಸಾಹಸ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಹಿಡಿದರು. ನಂತರ ಶಿವಗಂಗಾ ಫಾಲ್ಸ ಬಳಿಯ ನಿರ್ಜನ ಪ್ರದೇಶದ ರಕ್ಷಿತಾರಣ್ಯದಲ್ಲಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಬಿಡಲಾಯಿತು. ಈ ಸಂದರ್ಭದಲ್ಲಿ ಹುಲೇಕಲ್ ವಲಯ ಆರ್.ಎಫ್.ಓ ಮಂಜುನಾಥ ಹೆಬ್ಬಾರ, ಡಿ.ವೈ.ಆರ್.ಎಫ್.ಓ ರಾಘವೇಂದ್ರ ಹೆಗಡೆ, ಅರಣ್ಯ ರಕ್ಷಕ ರಾಜೇಶ ನಾಯ್ಕ, ದಾವಲಸಾಬ ಎರಗಟ್ಟಿ, ವಾಹನ ಚಾಲಕ ನಾಗರಾಜ ಉಪಸ್ಥಿತರಿದ್ದರು.
ಮುಂಡಗೋಡಿನಲ್ಲಿ ಪೋಟೋ ಸ್ಟುಡಿಯೋ, ಮೊಬೈಲ್ ಅಂಗಡಿ ದೋಚಿದ್ದ ಕಳ್ಳ ಅಂದರ್..!
ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ. ಬಂಧಿತ ಅಂತರ್ ಜಿಲ್ಲಾ ಕಳ್ಳನಿಂದ ಪೇನಾಸಾನಿಕ್ ಎ.ಜಿ.ಎಸ್.ಸಿ-90 ವಿಡಿಯೋ ಕ್ಯಾಮರಾ, ನಿಕಾನ್ ಡಿ- 3500 ಡಿ.ಎಸ್.ಎಲ್.ಆರ್ ಫೋಟೋ ಕ್ಯಾಮರಾ, 20 ಮೊಬೈಲ್ ಗಳು ಹಾಗೂ ಮೊಬೈಲ್ ನ ಬಿಡಿ ಭಾಗಗಳು ಸೇರಿ, ಸುಮಾರು ಒಂದೂವರೇ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಡಿವೈಎಸ್ಪಿ ರವಿ ನಾಯ್ಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪಿಐ ಸಿದ್ಧಪ್ಪ ಎಸ್. ಸಿಮಾನಿ ರವರ ನೇತೃತ್ವದಲ್ಲಿ ಪಿಎಸ್ಐ ಬಸವರಾಜ ಮಬನೂರ, ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಧರ್ಮರಾಜ, ಸುರೇಶ್ ವಿ, ವಿನೋದಕುಮಾರ, ಅರುಣಕುಮಾರ ಬಿ,...
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ, ತಹಶೀಲ್ದಾರ ಕಚೇರಿಯೆದರು ಪ್ರತಿಭಟನೆ..!
ಮುಂಡಗೋಡ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ರು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಕರ್ತರು, 2ಎ ಮೀಸಲಾತಿಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು, ಆ ವೇಳೆ, ಸಿಎಂ ಆಗಿದ್ದ ಯಡಿಯೂರಪ್ಪ ಅವರು 2ಎ ಮೀಸಲಾತಿ ನೀಡಲು ಆರು ತಿಂಗಳು ಸಮಯ ಕೇಳಿದ್ದರು, ಆದ್ರೆ ಈಗ ಯಡಿಯೂರಪ್ಪರ ಸಮಯದ ಅವಧಿ ಮುಗಿದಿದೆ. ಈಗ ನೂತನವಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ, ಕೂಡಲೇ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಸಂಘದ ಮುಖಂಡರು ಹಾಗೂ ಸಮಾಜದ ಬಾಂಧವರು ಸರ್ಕಾರಕ್ಕೆ ಒತ್ತಾಯಿಸಿದ್ರು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಅಂತಾ ಇದೇ ವೇಳೆ ಎಚ್ಚರಿಸಿದ್ರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ರಾಮಣ್ಣ ಕುನ್ನೂರ್, ಗುಡ್ಡಪ್ಪ ಕಾತೂರು, ಶಿವಾನಂದ್ ನಿಡಗುಂದಿ, ಶೇಕಪ್ಪ ಹೊನ್ನಳ್ಳಿ, ಚಂದ್ರು ಹಡಪದ, ವಿನೋದ್ ಬಿಸನಳ್ಳಿ, ಮಲ್ಲಿಕಾರ್ಜುನ್ ಗೌಳಿ, ಸುರೇಶ್ ಗೌಳಿ,...
ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ದಾವಣಗೇರೆಯಲ್ಲಿ ಮನಕಲುಕುವ ದೃಷ್ಯ..!
ಬೆಂಗಳೂರು ಆತ್ಮಹತ್ಯೆ ಘಟನೆ ಮಾಸುವ ಮುನ್ನವೆ ದಾವಣಗೆರೆಯಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿದ್ದಾರೆ. ದಾವಣಗೆರೆಯ ಭಾರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಕೃಷ್ಣಾನಾಯ್ಕ್ (35)ಆತನ ಪತ್ನಿ ಸರಸ್ವತಿ ಬಾಯಿ, ಎಂಟು ವರ್ಷದ ಮಗು ಧ್ರುವ ಮೃತಪಟ್ಟವರು. ಭಾರತ್ ಕಾಲೋನಿ ಶೇಖರಪ್ಪ ಬಿ ಬ್ಲಾಕ್ ನಲ್ಲಿ ವಾಸವಾಗಿದ್ದ ಕೃಷ್ಣನಾಯ್ಕ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರು. ಕೃಷ್ಣಾನಾಯ್ಕ್ ರಿಗೆ ಸಹ ಆರೋಗ್ಯ ಸಮಸ್ಯೆ ಇತ್ತು, ಕೃಷ್ಣನಾಯ್ಕ್ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು.ಅನಾರೋಗ್ಯ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಓದುತ್ತಿದ್ದ ಎಂಟು ವರ್ಷ ವಯಸ್ಸಿನ ಧ್ರುವ ಹಾಗೂ ತಾಯಿ ಸರಸ್ವತಿ ಮಲಗಿದ್ದ ಸ್ಥಿತಿಯಲ್ಲೇ ಶವವಾಗಿದ್ದಾರೆ. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕೃಷ್ಣಾನಾಯ್ಕ್ ಶವ ಪತ್ತೆಯಾಗಿದೆ. ಮನೆ ಕಡೆ ಆರ್ಥಿಕವಾಗಿ ಚೆನ್ನಾಗಿದ್ದರೂ ಆರೋಗ್ಯ ಕೈಕೊಟ್ಟ ಹಿನ್ನೆಲೆ ಈ ನಿರ್ಧಾರ ಕೈಗೊಂಡ್ರಾ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು ಜಿಲ್ಲೆಗೆ ಬಿಜೆಪಿ ರಾಜ್ಯ, ಹಾಗೂ ರಾಷ್ಟ್ರ ನಾಯಕರ ದಂಡೆ ಹರಿದು ಬರಲಿದೆ. ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಹಾಗೂ ಮುಂಬರುವ 2023 ರ ವಿಧಾನ ಸಭಾ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಬೂತ್ ಮಟ್ಟದಿಂದ ಪಕ್ಷವನ್ನ ಬಲ ಪಡಿಸಲು ಈಗಲೇ ತಂತ್ರ ಹೆಣೆಯುತ್ತಿದ್ದಾರೆ. ಬೆಣ್ಣೆ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಕಾರ್ಯ ಕಾರಿಣಿ ಸಭೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿ...
ಸಿನಿಮೀಯ ರೀತಿಯಲ್ಲಿ ಕಳ್ಳನ ಕೈಚಳಕ, ಜ್ಯುವೇಲ್ಲರಿ ಮಾಲೀಕನಿಂದ ಚಿನ್ನದ ಸರ ಕಸಿದು ಪರಾರಿ..!
ಶಿರಸಿ: ಸಿನಿಮೀಯ ರೀತಿಯಲ್ಲಿ ಚಿನ್ನದ ಸರ ಅಪಹರಣ ಮಾಡಿದ ಘಟನೆ, ಶಿರಸಿಯ ರತ್ನದೀಪ ಜ್ಯುವೆಲರ್ಸ್ ನಲ್ಲಿ ನಡೆದಿದೆ. ಚಿನ್ನದ ಸರ ಖರೀದಿಯ ನೆಪದಲ್ಲಿ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ ವ್ಯಕ್ತಿ, ಚಿನ್ನದ ಸರ ತೋರಿಸುವಂತೆ ಕೇಳಿದ್ದಾನೆ. ಅಂಗಡಿಯಾತ ಚಿನ್ನದ ಸರ ತೋರಿಸುತ್ತಿದ್ದಾಗಲೇ ಸರ ಕಸಿದುಕೊಂಡ ಕಳ್ಳ ಕಾಲ್ಕಿತ್ತಿದ್ದಾನೆ. ಚಿನ್ನದ ಸರದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾನೆ. ಕಳ್ಳನ ಸಂಪೂರ್ಣ ಕೃತ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಚಾಲಾಕಿ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.
ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!
ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು. ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.
ಯಲ್ಲಾಪುರದ ತುಡುಗುಣಿ ಕಾಡು ಮನೆಯಲ್ಲಿ ಮಹಿಳೆಯ ಭೀಕರ ಹತ್ಯೆ..! ಅಷ್ಟಕ್ಕೂ ಹಂತಕನ ನೆರಳು ಅದೇನಾ..?
ಯಲ್ಲಾಪುರ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೀಕರ ಹತ್ಯೆಯಾಗಿದೆ. ಮಹಿಳೆಯೋರ್ವಳನ್ನ ಆಗಂತುಕರು ಭೀಕರವಾಗಿ ಹತ್ಯೆ ಮಾಡಿ ಹೋಗಿದ್ದಾರೆ. ಯಲ್ಲಾಪುರ-ಶಿರಸಿ ಗಡಿಭಾಗದ ತುಡುಗುಣಿಯಲ್ಲಿ ಇಂತಹದ್ದೊಂದು ಹತ್ಯೆ ನಡೆದಿದ್ದು, ಇಡೀ ಯಲ್ಲಾಪುರ ತಾಲೂಕೇ ಬೆಚ್ಚಿ ಬೀಳುವಂತೆ ಮಾಡಿದೆ. ಅಂದಹಾಗೆ, ಇಲ್ಲಿ ಹೀಗೆ ಭೀಕರ ಹತ್ಯೆಯಾಗಿ ಬಿದ್ದವಳ ಹೆಸರು, ಸರೋಜಾ ನಾಯರ್, ವಯಸ್ಸು ಈಗಿನ್ನು 35 ರ ಆಸು ಪಾಸು. ತುಡುಗುಣಿಯ ಕಾಡಿನಲ್ಲಿರೋ ಮನೆಯಲ್ಲಿ ವಾಸವಿದ್ದ ಈಕೆಯನ್ನ ನಿನ್ನೆ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ನಿಮಗೆ ಗೊತ್ತಿರಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಕ್ಷ ಪೊಲೀಸ್ ಪಡೆ ಇದೆ. ಕೊಲೆಯ ರಹಸ್ಯ ಕೆಲವೇ ಗಂಟೆಗಳಲ್ಲಿ ಬಟಾಬಯಲಾಗಲಿದೆ. ಅದ್ಯಾವನೇ ಇರಲಿ, ಅದೇಂತವನೇ ಹಂತಕ ಇದ್ರೂ ಕೆಲವೇ ಗಂಟೆಗಳಲ್ಲಿ ಹೆಡೆಮುರಿ ಕಟ್ಟೋದು ಮಾತ್ರ ಪಕ್ಕಾ. ಅನೈತಿಕ ಮರ್ಡರಾ.? ಹಾಗೆ, ಕಾಡಿನಲ್ಲಿರೋ ಮನೆಯಲ್ಲಿ ಮಹಿಳೆಯೊಬ್ಬಳ ಭೀಕರ ಹತ್ಯೆಯಾಗಿದೆ ಅಂದ್ರೆ, ಅದರ ಹಿಂದೆ ಅದ್ಯಾವನೋ ಎಡಬಿಡಂಗಿ, ಪಾಗಲ್ ಪ್ರೇಮಿಯ ಹುಚ್ಚುತನ ಕೆಲಸ...
ಕಟ್ಟಿಗೆ ತುಂಬಿದ್ದ ಲಾರಿ ಪಲ್ಟಿ, ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ..!
ಯಲ್ಲಾಪುರ: ಕಟ್ಟಿಗೆ ತುಂಬಿದ್ದ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿ, ವಾಹನ ದಟ್ಟಣೆ ಹೆಚ್ಚಿದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾದ ಘಟನೆ, ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ. ಅಂಕೋಲಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಲಾರಿ, ಘಟ್ಟದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಗೆ ಪಲ್ಟಿಯಾದ ಲಾರಿ ಎದುರಲ್ಲೇ ಮತ್ತೊಂದು ಲಾರಿ, ಕೆಟ್ಟು ನಿಂತಿದೆ. ಪರಿಣಾಮ, ಅರಬೈಲ್ ಘಟ್ಟದಲ್ಲಿ ಸರಕು ಸಾಗಣೆ ಲಾರಿಗಳು ಸಾಲುಗಟ್ಟಿ ನಿಂತಿವೆ. ಮಳೆಯ ಅಬ್ಬರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಂಕೋಲಾ ಯಲ್ಲಾಪುರ ಮಾರ್ಗವಾಗಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ.