NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದ್ರಲ್ಲಿ, 18 ಲಕ್ಷ ರೂ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ಪರಾರಿಯಾಗಿದ್ರು. ಹೀಗಾಗಿ, ಈ ಕೇಸಿಗೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸ್ರು ಐವರು ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ್ದರು. ಅವ್ರಷ್ಟೇ ಅಲ್ಲ..! ಅಸಲು, ಈ ಪ್ರಕರಣದಲ್ಲಿ ಅವ್ರಷ್ಟೇ ಅಲ್ಲ, ಇನ್ನಷ್ಟು ಜನ ಆರೋಪಿಗಳಿರುವ ಮಾಹಿತಿ ನಮ್ಮ ಪೊಲೀಸ್ರಿಗೆ ಇತ್ತು. ಹೀಗಾಗಿ, ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಬಂಧಿಯಾಗಿದ್ದರು. ತಾಲೂಕಾ ಕ್ರೀಡಾಂಗಣದಿಂದ ಸಂತೆ ಮಾರುಕಟ್ಟೆ ರಸ್ತೆ ಮೂಲಕ ಬರ್ತಿದ್ದ ದರ್ಗಾವಾಲೆಯ ಸ್ಕೂಟಿಗೆ ಹಿಂದಿನಿಂದಲೇ ಕಾರು ಡಿಕ್ಕಿ ಹೊಡೆಸಿ ಕೆಡವಿದ್ದರು. ನಂತರ ಕಾರಲ್ಲಿ ಅಪಹರಿಸಿ ಪರಾರಿಯಾಗಿದ್ದರು. ಬಹುಶಃ ಮೇಲ್ನೋಟಕ್ಕೆ ಇದೊಂದು ಭಯಾನಕ ಸಿನಿಮಾ ಶೈಲಿಯ ಅಟ್ಯಾಕ್ ಆಗಿತ್ತು. ಹೀಗಾಗಿ, ಬಹುತೇಕ ಇಡೀ ಮುಂಡಗೋಡ ಬೆಚ್ಚಿ ಬಿದ್ದಿತ್ತು. ಹಣಕ್ಕಾಗಿ ನಡೀತಾ..? ಅಸಲು, ನಿನ್ನೆ ನಡೆದ ಕಿಡ್ನ್ಯಾಪಿಂಗ್ ಕೇಸನ್ನು ನೋಡಿದ್ರೆ, ಇದು...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ, ವಾಹನದಲ್ಲಿ ಥೇಟು ಸಿನಿಮಾಸ್ಟೈಲಿನಲ್ಲೇ ಎತ್ತಿ ಹಾಕೊಂಡು ಪರಾರಿಯಾಗಿದ್ದಾರೆ ಎನ್ನಲಾಗ್ತಿದೆ. ಅದು ಪಕ್ಕಾ ರೌಡಿಗಳ ತಂಡ..? ಅಂದಹಾಗೆ, ಮುಂಡಗೋಡಿನ ಜಮೀರ್ ಅಹ್ಮದ್ ದರ್ಗಾವಾಲೆ ಅನ್ನೊ ವ್ಯಕ್ತಿಯೇ ಸದ್ಯ ಕಿಡ್ನ್ಯಾಪ್ ಆಗಿದ್ದಾರೆ. ಇವ್ರು ತನ್ನ ಸ್ನೇಹಿತನೊಂದಿಗೆ ಸ್ಕೂಟಿ ಮೇಲೆ ಸಂಜೆ 7.50 ರ ಸುಮಾರಿಗೆ ಸಂತೆ ಮಾರುಕಟ್ಟೆ ಹತ್ಯಿರದ ಶಾಸಕರ ಮಾದರಿ ಶಾಲೆ ಬಳಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ವಾಹನದ ಮೇಲೆ ಬಂದಿದ್ದ ರೌಡಿಗಳ...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸ್ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ, ತಕ್ಷಣವೇ ಮಗುವನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಹಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಮಾರ್ಗಮದ್ಯದಲ್ಲೇ ಬಾಲಕಿ ಸಾವನ್ನಪ್ಪಿದ್ದಳು. ಕಿಮ್ಸ್ ಗೆ ರವಾನಿಸಿದ ನಂತರ ವೈದ್ಯರು ಬಾಲಕಿ ಮೃತ ಪಟ್ಟಿರೋದನ್ನು ದೃಢಪಡಿಸಿದ್ದಾರೆ. ಪೊಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ನಡುವೆ ಈ ಘಟನೆ ನೋಡಿದಾಗ ನಮ್ಮ ಮುಂಡಗೋಡ ತಾಲೂಕಿನ ಅಂಗನವಾಡಿಗಳು ಅದೇಷ್ಟು ಸುರಕ್ಷಿತ..? ಅನ್ನೋ ಪ್ರಶ್ನೆ ಮೂಡಿದೆ..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಮುಂಡಗೋಡ ತಾಲೂಕಿನ ಇಂದೂರು ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ತಾಲೂಕಿನಲ್ಲೇ ಭಾರೀ ಸದ್ದು ಮಾಡಿದ್ದ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಚುನಾವಣೆ, ನಿಜಕ್ಕೂ ಯಾರೂ ನಿರೀಕ್ಷಿಸದ ಅಚ್ಚರಿ ಫಲಿತಾಂಶ ನೀಡಿದೆ. ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಿವರಾಮ್ ಹೆಬ್ಬಾರರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರ ಸೋಲಿನೊಂದಿಗೆ ಭಾರೀ ಅಚ್ಚರಿಗೆ ಕಾರಣವಾಗಿದೆ. ಅಸಲು, ತೀವ್ರ ತುರುಸು ಪಡೆದಿದ್ದ ಇಂದೂರು ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ “ಮಹಾದಂಡನಾಯಕ” ರವಿಗೌಡ ಪಾಟೀಲ್ ಸೋಲು ಕಂಡಿದ್ದರೂ, ಇನ್ನುಳಿದ ಬಹುತೇಕ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ರೈತ ಹಿತರಕ್ಷಣಾ ಒಕ್ಕೂಟ ಕೇವಲ 3 ಸ್ಥಾನ ಪಡೆಯುವಲ್ಲಿ ಏದುಸಿರು ಬಿಟ್ಟಿದೆ. ಆದ್ರೆ, ಇದ್ರಲ್ಲಿ ಪಾಟೀಲರ ಎದುರು ಸೆಡ್ಡು ಹೊಡೆದು ಗೆದ್ದಿ ಬಂದಿರೋ ದೇವು ಕೆಂಚಗೊಣ್ಣವರ ಗೆಲುವಿನ ಸಂಭ್ರಮ ಕಾಂಗ್ರೆಸ್ ಸಂಭ್ರಮವನ್ನೂ ಮೀರಿಸಿದೆ. ಒಂದರ್ಥದಲ್ಲಿ ದೇವು ಕೆಂಚಗೊಣ್ಣವರ್ ಸದ್ಯ ತಾಲೂಕಿನ ರಾಜಕೀಯ ಪಡಸಾಲೆಯ ಬಹು ಚರ್ಚಿತ ವ್ಯಕ್ತಿಯಾಗಿದ್ದಾರೆ. ಅಂದಹಾಗೆ, ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ...
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಭಾರೀ ಕುತೂಹಲ ಕೆರಳಿಸಿದ್ದ ಇಂದೂರು ಹಾಗೂ ಚಿಗಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮ್ ಹೆಬ್ಬಾರರ ಪರಮಾಪ್ತ ರವಿಗೌಡ ಪಾಟೀಲರು ಹಾಗೂ ಮತ್ತೋರ್ವ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಲ್.ಟಿ. ಪಾಟೀಲ್ ಸ್ಪರ್ಧಿಸಿದ್ದ ಈ ಎರಡೂ ಕ್ಷೇತ್ರಗಳು ಎಲ್ಲರ ಗಮನ ಸೆಳೆದಿತ್ತು. ಆದ್ರೆ, ಅಚ್ಚರಿಯೆಂಬಂತೆ ಇಂದೂರು ಸೊಸೈಟಿಯಲ್ಲಿ ರವಿಗೌಡ ಪಾಟೀಲರು ಸೋಲು ಕಂಡಿದ್ದಾರೆ. ಚಿಗಳ್ಳಿಯಲ್ಲಿ ಎಲ್ಟಿ ಪಾಟೀಲರು ಜಯಭೇರಿ ಬಾರಿಸಿದ್ದಾರೆ. ಅಂದಹಾಗೆ, ಇಂದೂರು ಸೊಸೈಟಿಯಲ್ಲಿ ಸ್ಪರ್ಧಿಸಿದ್ದ ರವಿಗೌಡ ಪಾಟೀಲರು ಎದುರಾಳಿ ದೇವು ಕೆಂಚಗೊಣ್ಣವರ್ ಎದುರು 54 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 414 ಮತಗಳನ್ನು ದೇವು ಕೆಂಚಗೊಣ್ಣವರ್ ಪಡೆದ್ರೆ, ಕೇವಲ 360 ಮತಗಳನ್ನು ಪಡೆದು ರವಿಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ. ಇನ್ನಷ್ಟು ಮಾಹಿತಿ ನೀಡಲಾಗುವುದು..!