ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ದ್ವಂಸ ಮಾಡಿರುವುದು ಖಂಡನೀಯ. ಪದೇ ಪದೇ ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರು ಈ ರೀತಿ ಕೃತ್ಯಗಳನ್ನು ಮಾಡುವ ಮೂಲಕ ಕನ್ನಡ ನೆಲದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇದರಿಂದ ನಮ್ಮ ಕನ್ನಡ ನಾಡಿಗೆ ಧಕ್ಕೆ ಉಂಟಾಗುತ್ತಿದೆ. ಇಂತಹ ಕೃತ್ಯಗಳನ್ನು ನೋಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೌನಕ್ಕೆ ಜಾರಿರುವುದು ಸರಿಯಲ್ಲ. ಕೂಡಲೇ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವುದರ ಜೊತೆಗೆ ಎಂಇಎಸ್...
Top Stories
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಎಂಇಎಸ್ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧ ಮುತ್ತಿಗೆ ಯತ್ನ, ತಡೆದ ಪೊಲೀಸರು..!
ಬೆಳಗಾವಿ: ಇಂದು ಕನ್ನಡಪರ ಸಂಘಟನೆಗಳ ಬೃಹತ್ ಹೋರಾಟ ಹಿನ್ನೆಲೆಯಲ್ಲಿ, ನಾಡದ್ರೊಹಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲಾಗಿದೆ. ಹಿರೇಬಾಗೇವಾಡಿ ಟೊಲ್ ಗೇಟ್ ಬಳಿ ಹೋರಾಟಗಾರರನ್ನ ತಡೆದಿರೊ ಪೊಲೀಸರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕನ್ನಡಪರ ಹೋರಾಟಗಾರ ವಶಕ್ಕೆ ಪಡೆದಿದ್ದಾರೆ. ಪ್ರವಿಣ ಶೆಟ್ಟಿ ಬಣದ ಕಾರ್ಯಕರ್ತರನ್ನು ನೂರಾರು ಕಾರ್ಯಕರ್ತರನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ.. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಲಘಟಗಿ ತಂಬೂರು ಕಾಡಿನಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ, ಹಲವರಿಗೆ ಗಾಯ..!
ಕಲಘಟಗಿ: ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಡೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ, ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲು ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮೇಶ್ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ, ಸುರೇಶ ಅರವಳ್ಳಿ, ಪರಶುರಾಮ, ಕೃಷ್ಣ ಪಮ್ಮಾರ ಅವರಿಗೆ ಆನೆಯು ಕ್ವಾರಿಯಿಂದ ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದಾರೆ. ಇನ್ನುಳಿದ ಸಿಬ್ಬಂದಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಎಲ್ಲ ಸಿಬ್ಬಂದಿಗಳನ್ನ ಸ್ಥಳೀಯ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ ರಾಜ್ಯಾದ್ಯಂತ ಸಮಾಜಬಾಂಧವರು ಆಗಮಿಸುತ್ತಿದ್ದಾರೆ ಕಾರಣ ಮುಂಡಗೋಡ ತಾಲೂಕಿನ ಸಮಾಜದ ಬಾಂಧವರೂ ಭಾಗಿಯಾಗುವಂತೆ ಮುಖಂಡ ಸಿದ್ದು ಹಡಪದ ಮನವಿ ಮಾಡಿದ್ದಾರೆ.
ಹಾವು ಹಿಡಿಯಲು ಹೋದವನಿಗೆ ಕಚ್ಚಿದ ಹಾವು, ಪೋಸು ಕೊಡುತ್ತಿದ್ದವ ಆಸ್ಪತ್ರೆ ಪಾಲು..!
ಯಾವೊಂದೂ ಮುಂಜಾಗ್ರತಾ ಕ್ರಮವಿಲ್ಲದೇ ಹಾವು ಹಿಡಿಯಲು ಹೋದ ವ್ಯಕ್ತಿಗೆ ಹಾವು ಕಚ್ಚಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸದಲ್ಲಿ ಘಟನೆ ನಡೆದಿದ್ದು, ರಾಜು ಕೌದಿ ಎಂಬ ವ್ಯಕ್ತಿಯೇ ಹಾವು ಕಚ್ಚಿಸಿಕೊಂಡಿದ್ದಾನೆ. ತಡಸ ಗ್ರಾಮದ ಇಟ್ಟಿಗೆ ಭಟ್ಟಿಯೊಂದರಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಹಿಡಿಯಲು ಮುಂದಾಗಿದ್ದ ರಾಜೂ ಕೌದಿ, ಕೋಲಿನಿಂದ ಇಟ್ಟಿಗೆ ಅಡಿಯಲ್ಲಿದ್ದ ನಾಗರಹಾವನ್ನು ಗಾಸಿಗೊಳಿಸಿದ್ದ. ಕೋಲಿನಿಂದ ಹಾವಿನ ಹೆಡೆಗೆ ಗಟ್ಟಿಯಾಗಿ ಹಿಡಿದು, ಆ ನಂತರದಲ್ಲಿ ಕೈಯಿಂದ ಹಿಡಿದುಕೊಂಡಿದ್ದ. ಈ ವೇಳೆ ಹಾವು ಆತನ ಕೈಗೆ ಬಲವಾಗಿ ಕಚ್ಚಿದೆ. ಪರಿಣಾಮ ಸಧ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಟ್ನಲ್ಲಿ, ಹಾವು ಹಿಡಿಯೊ ಸಾಹಸ ಮಾಡಲು ಹೋದ ವ್ಯಕ್ತಿ ಪೌರುಷ ತೋರಲು ಹೋಗಿ ಆಸ್ಪತ್ರೆ ಪಾಲಾಗಿದ್ದಾನೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡಿ.22 ಕ್ಕೆ ಅರಣ್ಯ ಅತಿಕ್ರಮಣದಾರ ರಿಂದ “ಬೆಳಗಾವಿ ಚಲೋ”
ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ. 22 ರಂದು ‘ಬೆಳಗಾವಿ ಚಲೋ’ ಏರ್ಪಡಿಸಲಾಗಿದೆ ಅಂತಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ತಿಳಿಸಿದರು.
ನಂದಿಕಟ್ಟಾದಲ್ಲಿ ನಟ ಪುನೀತ್ ನೆನಪಲ್ಲಿ, ಮುಕ್ತ ಕಬಡ್ಡಿ ಪಂದ್ಯಾವಳಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು ಪದ್ಯಾವಳಿಯಲ್ಲಿ ಯಾರು ಬಹುಮಾನ ಪಡೆಯುತ್ತಾರೋ ಕಾದು ನೋಡಬೇಕಿದೆ.
ಅತ್ತಿವೇರಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆ ತೆರವು..!
ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು. ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಸೇರಿದಂತೆ ಸಿಬ್ಬಂದಿಗಳು ಅಕ್ರಮ ಮನೆ ತೆರವು ಕಾರ್ಯಾಚರಣೆ ಮಾಡಿದ್ರು.
ವಡಗಟ್ಟಾ ಬಳಿ ಬೈಕ್ ಗೆ ಅಡ್ಡ ಬಂದ ಕಾಡುಹಂದಿ, ಬೈಕ್ ಬಿದ್ದು, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರಿನಲ್ಲಿ ಪರಿಷತ್ ಗೆಲುವಿಗೆ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.