ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಮಸ್ಲಿಂರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಬೇಕೆಂದು ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ. ಸೋಮವಾರ ನಗರದಲ್ಲಿ ಜರುಗಿದ ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಪದಾಧಿಕಾರಿಗಳು ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 90-95% ಮುಸ್ಲಿಂರು ಮತ ಹಾಕುತ್ತಿದ್ದಾರೆ. ಆದ್ರೆ, ಮುಸ್ಲಿಂರಿಗೆ ಪ್ರಮುಖ ಅಧಿಕಾರ ಸಿಗುತ್ತಿಲ್ಲ. ಅಖಂಡ ಧಾರವಾಡ ಜಿಲ್ಲೆಯಲ್ಲಿ ಸ್ಥಾನಿಕವಾಗಿ ಯಾರೊಬ್ಬ ಎಂಪಿ, ಎಂಎಲ್ಎ ಎಂಎಲ್ಸಿ, ನಿಗಮ ಮಂಡಳಿಗಳ ಅಧ್ಯಕ್ಷರು ಇಲ್ಲದ ಕಾರಣ ಬರುವ ಶಿಗ್ಗಾಂವ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿ ಸರ್ಕಾರ ಗೆಲ್ಲಿಸಿಕೊಂಡು ಬರಬೇಕು. ಇಲ್ಲದಿದ್ದರೆ ಮುಸ್ಲಿಂ ಸಮಾಜದ ಹೋರಾಟಕ್ಕೆ ಸಿದ್ದವಾಗಭೇಕಾಗುತ್ತದೆ ಎಂದು ಸಭೆಯು ನಿರ್ಣಯಿಸಿತು. ಮುಂದಿನ ದಿನಗಳಲ್ಲಿ ಶಿಗ್ಗಾಂವ್ ಸವಣೂರಲ್ಲಿ ಮುಸ್ಲಿಂ ಒಕ್ಕೂಟದ ಸಭೆಗಳನ್ನು ನಡೆಸಿ ಹೋರಾಟಕ್ಕೆ ಸಿದ್ದರಾಗಿ ಕಾಂಗ್ರೆಸ್ ಹೈಕಮಾಂಡಿಗೆ ಮನವಿ ಸಲ್ಲಿಸಬೇಕೆಂದು ಸಭೆಯು ತಿರ್ಮಾನಿಸಿತು. ಖಬರಸ್ತಾನ, ಮಸಿದಿ, ಮದರಸಾಗಳಿಗೆ...

ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯ‌ರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬಾಡಿಗೆಗೆ ಇಳಿಯುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಟ್ಯಾಕ್ಸಿ ಮಾಲೀಕರ ಸಂಘದ ಆಗ್ರಹ..!

ಬಾಡಿಗೆಗೆ ಇಳಿಯುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಟ್ಯಾಕ್ಸಿ ಮಾಲೀಕರ ಸಂಘದ ಆಗ್ರಹ..!

ಮುಂಡಗೋಡ: ಖಾಸಗಿ ಮಾಲೀಕತ್ವದ (ವೈಟ್ ಬೋರ್ಡ್) ಟ್ಯಾಕ್ಸಿ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಉಪಯೋಗಿಸುತ್ತಿರುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಟ್ಯಾಕ್ಸಿ ಮಾಲೀಕರ ಸಂಘದ ಸದಸ್ಯ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಖಾಸಗೀ ಮಾಲೀಕತ್ವದ ಟ್ಯಾಕ್ಸಿ ವಾಹನಗಳನ್ನು ಬೇಕಾಬಿಟ್ಟಿ ದರಗಳಲ್ಲಿ ಬಾಡಿಗೆಗೆ ಬಿಡುತ್ತಿದ್ದಾರೆ. ಇದ್ರಿಂದ ನಮ್ಮ ಬದುಕೇ ಮೂರಾಬಟ್ಟೆಯಾಗ್ತಿದೆ. ನಾವು ಸರ್ಕಾರಕ್ಕೆ ಕಾಲ ಕಾಲಕ್ಕೆ ಟ್ಯಾಕ್ಸ್ ಕಟ್ಟಿ, ಬಾಡಿಗೆಗಾಗಿ ವಾಹನಗಳನ್ನು ಬಿಡುತ್ತಿದ್ದೇವೆ. ಅದ್ರಿಂದ ಬಂದ ಬಾಡಿಗೆಯಲ್ಲೇ ಬದುಕು ನಡೆಸುತ್ತಿದ್ದೇವೆ ಹೀಗಿರುವಾಗ, ಖಾಸಗಿ (ವೈಟ್ ಬೋರ್ಡ್) ಮಾಲೀಕರು ನಮ್ಮ ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ‌ನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ, ಹೀಗಾಗಿ, ತಕ್ಷಣವೇ ಕ್ರಮ ಕೈಗೊಳ್ಳಬೇಕು ಅಂತಾ ಮನವಿಯಲ್ಲಿ ಆಗ್ರಹಿಸಿದ್ದಾರೆ. ಜುಲೈ 3 ರಿಂದ ಅನಿರ್ಧಿಷ್ಟಾವಧಿ ಧರಣಿ..! ಈ ಸಂಬಂಧ ಜುಲೈ 3 ರಿಂದ, ಮುಂಡಗೋಡ ತಹಶಿಲ್ದಾರರ ಕಚೇರಿ ಎದುರು, ಅನಿರ್ಧಿಷ್ಠಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದಾಗಿ, ಟ್ಯಾಕ್ಸಿ ಮಾಲೀಕರು,...

ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!

ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!

ಮುಂಡಗೋಡ ತಾಲೂಕಿನ ನ್ಯಾಸರ್ಗಿಯ ಗೌಳಿದಡ್ಡಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತನು ಶಿಗ್ಗಾವಿ ತಾಲೂಕಿನ ಹೊಸುರು ಗ್ರಾಮದವನು ಅಂತಾ ತಿಳಿದು ಬಂದಿದೆ. ಹೊಸೂರಿನ ವೀರಭದ್ರಪ್ಪ ಶೇಖರಯ್ಯ ಹಿರೇಮಠ(48), ಎಂಬುವವರೇ ಮೃತಪಟ್ಟ ಬೈಕ್‌ ಸವಾರನಾಗಿದ್ದಾನೆ. ಈತ ಮುಂಡಗೋಡಿನಿಂದ ನ್ಯಾಸರ್ಗಿ ಮಾರ್ಗವಾಗಿ ಹೊಸೂರಿಗೆ ಬೈಕ್ ಮೂಲಕ ಹೊರಟಿದ್ದ. ಈ ವೇಳೆ ನ್ಯಾಸರ್ಗಿ ಸಮೀಪದ ಗೌಳಿದಡ್ಡಿಯ ರಸ್ತೆ ತಿರುವಿನಲ್ಲಿ ಅಪಘಾತವಾಗಿದೆ ಅನ್ನೊ ಮಾಹಿತಿ ತಿಳಿದುಬಂದಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.

ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ

ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಅಭಿಷೇಕ ಬಸವಂತಪ್ಪ ಕುಟ್ರಿ ಮೃತಪಟ್ಟಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಷೇಕಙ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ಸದಾ ಹಸನ್ಮಖಿಯಾಗಿದ್ದ ಹುಡುಗ ಅಭಿಷೇಕ ಮುಂಡಗೋಡಿನ ಮಹಾರಾಜಾ ಮೊಬೈಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕಳೆದ ಎರಡು ಮೂರು ದಿನಗಳಿಂದ ಕೊಂಚ ಜ್ವರದಿಂದ ಬಳಲುತ್ತಿದ್ದ ಅಭಿಷೇಕ ಗೆ ಹುಬ್ಬಳ್ಳಿ ಕೀಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ನಂತ್ರ ಇಂದು ರವಿವಾರ ರಾತ್ರಿ ಸಾವನ್ನಪ್ಪಿದ್ದಾನೆ. ಅಭಿಷೇಕ ಕುಟ್ರಿ ಸಾವಿಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಬಳಗ ಸೇರಿ ಮುಂಡಗೋಡ ತಾಲೂಕಿನ ಹಲವು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ‌. ಇನ್ನು ಆಟದಲ್ಲಿ ತೊಡಗಿಸಿದ್ದ 39 ಸಾವಿರ ರೂ. ಹಣವನ್ನೂ ಜಪ್ತಿ ಮಾಡಲಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ ನೇತೃತ್ವದಲ್ಲಿ, ಪಿಎಸ್ಐ ಪರಶುರಾಮ್, ಪೇದೆಗಳಾದ ಮಂಜು ಚಿಂಚಲಿ, ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ್ ಮುಧೋಳ್, ಕೆಂಚೆಪ್ಪ, ರವಿ ಭಾಗಿಯಾಗಿದ್ರು ಎನ್ನಲಾಗಿದೆ.

ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

 ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ 108ರ ವಾಹನದ ಸ್ಟಾಪ್ ನರ್ಸ ಶಂಕರ್ ಲಮಾಣಿ, ಚಾಲಕರು ಟಿಟಿ ವಾಹನದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿ ಅವರಿಗೆ ಚಿಕಿತ್ಸೆ ‌‌ನೀಡಿ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಈ ಮೂವರು ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಚಿಕಿತ್ಸೆಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗಂಗಾಮದವರನ್ನು ತಿಳಿದು ಬಂದಿದೆ ಟಿಟಿ...

ಇಂದೂರು ಗ್ರಾಪಂ ನಲ್ಲಿ ಉದ್ಯೋಗ ಖಾತ್ರಿಯಲ್ಲಿ ಚೊಂಬಾಟ..! ತಾಲೂಕಿನಲ್ಲಿ ಅವನೊಬ್ಬ ನುಂಗಣ್ಣನಿಂದ ಇಡೀ ಯೋಜನೆಯೇ ಉಳ್ಳವರ ಪಾಲಾಗ್ತಿದೆಯಾ..?

ಇಂದೂರು ಗ್ರಾಪಂ ನಲ್ಲಿ ಉದ್ಯೋಗ ಖಾತ್ರಿಯಲ್ಲಿ ಚೊಂಬಾಟ..! ತಾಲೂಕಿನಲ್ಲಿ ಅವನೊಬ್ಬ ನುಂಗಣ್ಣನಿಂದ ಇಡೀ ಯೋಜನೆಯೇ ಉಳ್ಳವರ ಪಾಲಾಗ್ತಿದೆಯಾ..?

ಮುಂಡಗೋಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಬಹುತೇಕ ಹಳ್ಳ ಹಿಡಿತಿದೆಯಾ..? ಅವನೊಬ್ಬ ಬಕಾಸುರ ಬಗಬಂಡಿಯಿಂದ ಬಡ ಕೂಲಿ ಕಾರ್ಮಿಕರಿಗೆ ಬದುಕಾಗಬೇಕಿದ್ದ ಉದ್ಯೋಗ ಖಾತ್ರಿ ಯೋಜನೆ, ಕೆಲ ಆಸೆ ಬುರುಕ ಗ್ರಾಮ ಪಂಚಾಯತಿ ಮೆಂಬರುಗಳಿಗೆ ರೊಕ್ಕ ಗಳಿಸುವ ಅಡ್ಡ ಕಸುಬು ಆಗ್ತಿದೆಯಾ..? ಇಂತಹದ್ದೊಂದು ಅನುಮಾನ ಇಂದೂರಿನ ಈ ಗ್ರಾಮ‌ ಪಂಚಾಯತಿ ಸದಸ್ಯನ ಮಾತುಗಳನ್ನು ಕೇಳಿದ್ರೆ ಎಂತವರಿಗೂ ಅರ್ಥವಾಗ್ತಿದೆ. ಅದು ಇಂದೂರು ಪಂಚಾಯತಿ..! ಯಸ್, ಇಂದೂರು ಗ್ರಾಮ ಪಂಚಾಯತಿ ತಾಲೂಕಿನಲ್ಲಿ ಇದುವರೆಗೂ ಒಂದಿಷ್ಟು ಮಾನ ಮರ್ಯಾದೆ ಅಂತಾ ಇಟ್ಕೊಂಡು ಹೆಸರುವಾಸಿಯಾಗಿತ್ತು. ಆದ್ರೆ, ಈಗ ಅದೇ ಗ್ರಾಮ ಪಂಚಾಯತಿಯ ಗೌರವಾನ್ವಿತ ಸದಸ್ಯರುಗಳು, ಸಿಬ್ಬಂದಿಗಳೇ ಅಲ್ಲಿನ ಅಸಲೀ ಹೂರಣ ಬಿಚ್ಚಿಟ್ಟಿದ್ದಾರೆ. ಬಡ ಕೂಲಿ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರೋ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯನ್ನು ಹೇಗೇಲ್ಲ ಹಳ್ಳಹಿಡಿಸಿದ್ದಾರೆ ಅಂತಾ ಖುದ್ದು, ಪಂಚಾಯತಿ ಸದಸ್ಯರೇ ಆರೋಪಿಸಿದ್ದಾರೆ. ಅಸಲು, ಸರ್ಕಾರ ಬಡ ಕೂಲಿ ಕಾರ್ಮಿಕರಿಗಾಗೇ ರೂಪಿಸಿರೋ ಮಹತ್ವದ ಈ ಯೋಜನೆ, ಬಡ ಕೂಲಿ ಕಾರ್ಮಿಕರ ಬದಲಾಗಿ ಜೆಸಿಬಿ ಮಾಲೀಕರ ಪಾಲಾಗುತ್ತಿದೆ. ಅದ್ರಲ್ಲೂ...

ಮುಂಡಗೋಡ ಪೊಲೀಸಪ್ಪನ ವಿರುದ್ಧ 420 ಕೇಸ್, ಆತ ಹಾಸನದ ಯುವತಿಗೆ ಹಾಕಿದ್ದು, 18 ಲಕ್ಷದ ನಾಮ..!

ಮುಂಡಗೋಡ ಪೊಲೀಸಪ್ಪನ ವಿರುದ್ಧ 420 ಕೇಸ್, ಆತ ಹಾಸನದ ಯುವತಿಗೆ ಹಾಕಿದ್ದು, 18 ಲಕ್ಷದ ನಾಮ..!

ಇದು ಮುಂಡಗೋಡ ಪೊಲೀಸಪ್ಪನ ಘನಂಧಾರಿ ಕೆಲಸ. ಯುವತಿಯೋರ್ವಳಿಗೆ ಅನಾಮತ್ತಾಗಿ ಲಕ್ಷ ಲಕ್ಷ ಹಣ ಮುಂಡಾಮೋಚಿದ ನಯವಂಚಕತನದ ಸ್ಟೋರಿ. ಈತನಿಗೆ ಈ ಹಿಂದೆಯೇ ಇಲ್ಲಿನ ಇಲಾಖೆಯ ಹಿರಿಯರು ಒಂದಿಷ್ಟು ಕಿವಿ ಹಿಂಡಿದ್ದಿದ್ರೆ ಬಹುಶಃ ಇವತ್ತು ಇಡೀ ಇಲಾಖೆಗೆ ಆಗಿರೋ ಮುಜುಗರ ಒಂದಿಷ್ಟು ತಪ್ಪುತ್ತಿತ್ತೋ ಏನೋ. ಆದ್ರೆ, ಯಾರಂದ್ರೆ ಯಾರೂ ಈತನ ಅಡ್ನಾಡಿ ಕೆಲಸಗಳ ವಿರುದ್ಧ ಧನಿ ಎತ್ತಲೇ ಇಲ್ಲ‌. ಹೀಗಾಗಿ ಇವತ್ತು ಅದೊಂದು ಅಮಾಯಕ ಹೆಣ್ಣು ಜೀವ ಮುಂಡಗೋಡ ಠಾಣೆಯ ಮೆಟ್ಟಿಲೇರಿ FIR ದಾಖಲಿಸಿದೆ. ತನಗೆ ಆಗಿರೋ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದಿದೆ. ಅಸಲು, ಈಗಲೂ ಆಕೆಗೆ ಖಡಾಖಂಡಿತವಾದ ನ್ಯಾಯ ಸಿಕ್ಕತ್ತೆ ಅನ್ನೋ ಭರವಸೆನೇ ಉಳಿದಿಲ್ಲ. ಬರೋಬ್ಬರಿ 18 ಲಕ್ಷ..! ಸದ್ಯ ಮುಂಡಗೋಡ ಠಾಣೆಯಲ್ಲಿ ಹಾಸನದ ಯುವತಿಯೋರ್ವಳು ಗಿರೀಶ್ ಅನ್ನೊ ಪೊಲೀಸಪ್ಪನ ವಿರುದ್ಧ ವಂಚನೆಯ ಕೇಸ್ ದಾಖಲಿಸಿದ್ದಾರೆ. ಬರೋಬ್ಬರಿ 18 ಲಕ್ಷಗಳನ್ಜು ವಂಚಿಸಿರೋ ಆರೋಪ ಆತನ ಮೇಲಿದೆ. ಯುವತಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಂತೆ ಆರೋಪಿ ಪೊಲೀಸಪ್ಪ ನಾಪತ್ತೆಯಾಗಿದ್ದಾನೆ ಅನ್ನೋ ಮಾಹಿತಿ ಇದೆ. ಹೀಗಾಗಿ, ತನ್ನ...

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?

ಶಿವಮೊಗ್ಗ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧನವಾಗಿದೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು, ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್ ಪೊಲೀಸರ ಅತಿಥಿಯಾಗಿದ್ದಾನೆ. ಅಂದಹಾಗೆ, ಇದೇ ಜೂ. 28 ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಅದಕ್ಕೂ ಮೊದಲೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ಪೊಲೀಸರಿಂದ ಬಂಧನವಾಗಿದೆ. ಮಹಿಳೆಯೊಬ್ಬರಿಗೆ ಬಳಸಿಕೊಂಡಿರುವ ಆರೋಪ ಹೊತ್ತಿರೋ ಅರುಣ್, ತನಗೆ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಮಹಿಳೆ ಆರೋಪಿಸಿ ಕೇಸು ದಾಖಲಿಸಿದ್ದಾರೆ. http://*Exclusive* *ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..?* *ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..?* *ಅಷ್ಟಕ್ಕೂ ಅವ್ರದ್ದೇನಾ ಈ ಫೋನ್ ಸಂಭಾಷಣೆ ಆಡಿಯೋ..?* *ಪಬ್ಲಿಕ್ ಫಸ್ಟ್ ನ್ಯೂಸ್* *https://publicfirstnewz.com/?p=33381*

error: Content is protected !!