ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!

ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!

 ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ ಮಂಜುನಾಥನನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ 13 ದಿನಗಳ ನಂತ್ರ ಹಲ್ಲೆಗೊಳಗಾಗಿದ್ದ ವ್ಯಕ್ತಿ ಮಂಜುನಾಥ ಸಾವನ್ನಪ್ಪಿದ್ದ. ಎಸ್ಪಿ, ಡಿಸಿ ಭೇಟಿ..! ಯಾವಾಗ, ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿದ್ದ ದಲಿತ ವ್ಯಕ್ತಿ ಸಾವನ್ನಪ್ಪಿದ ವಿಷಯ ತಿಳಿದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನ್ಯಾಸರ್ಗಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅದ್ರಂತೆ ಇವತ್ತು ಡಿಸಿ ಗಂಗೂಬಾಯಿ...

ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!

ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!

ಮುಂಡಗೋಡಿನ ಟಿಬೇಟಿಯನ್‌ ಕ್ಯಾಂಪ್‌ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್‌ ಗಂಗಾರಾಮಸಿಂಗ್‌ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019 ರ ಜನವರಿಯಲ್ಲಿ ಟಿಬೇಟಿಯನ್‌ ಕ್ಯಾಂಪ್‌ ನಂಬರ್‌ 1 ರಲ್ಲಿ ಜಾಂಜ್‌ಚುಪ್‌ ರಾಚನ್‌ ತೇಂಜಿಂಗ್‌ ಎಂಬುವವರ ಮನೆಗೆ ರಾತ್ರಿ ನುಗ್ಗಿದ ನಾಲ್ವರು ಮನೆಯ ಯಜಮಾನ ಹಾಗೂ ಮಹಿಳೆಯ ಕೈ, ಬಾಯಿಗಳನ್ನು ಕಟ್ಟಿ, ಚಾಕು ತೋರಿಸಿ ಬೆದರಿಕೆ ಹಾಕಿದ್ದರು. ಜಾಂಜ್‌ಚುಪ್‌ ರಾಚನ್‌ ತೇಂಜಿಂಗ್‌ ಅವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿ 6 ಲಕ್ಷ ರೂ.ನಗದು, ಎರಡು ಐಫೋನ್‌, ಒಪ್ಪೊ ಕಂಪನಿಯ ಮೊಬೈಲ್‌, ಟ್ಯಾಬ್‌, ಸಿಸಿ ಟಿವಿಯ ಪ್ರೊಜೆಕ್ಟರ್‌,...

ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?

ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?

ಮುಂಡಗೋಡ ತಾಲೂಕಿನ ಶಿಂಗನಳ್ಳಿ ಜಲಾಶಯದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ, ಕೊಳೆತು ದುರ್ನಾತ ಬೀರುತ್ತಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡಿರೋ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟೇ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ‌. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!

ಕಾರವಾರ : ಜೀವದ ಹಂಗು ತೊರೆದು ಹಗಲು, ರಾತ್ರಿ ಸಮಾಜದ ಒಳಿತಿಗೋಸ್ಕರ ದುಡಿಯುತ್ತಿರುವ ಪತ್ರಕರ್ತ ಸಮೂಹಕ್ಕೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಉ. ಕ. ಜಿಲ್ಲಾಧ್ಯಕ್ಷ ಸದಾನಂದ ದೇಶಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ದೊರೆತು 77 ವರ್ಷ ಕಳೆದಿವೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ 90 ಶೇಕಡಾ ಪತ್ರಕರ್ತರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಪ್ರತಿ ದಿನ ಹಗಲು-ರಾತ್ರಿ ಎನ್ನದೆ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಪ್ರಾಣದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಸಹಸ್ರಾರು ಪತ್ರಕರ್ತರ ಬದುಕು ಇಂದು ಭಾಗಶಃ ಶೋಚನೀಯ ಸ್ಥಿತಿಯಲ್ಲಿದೆ. ಈ ನಡುವೆ ಕೆಲ ಆಯ್ದ ಪತ್ರಕರ್ತರಿಗೆ ಮಾತ್ರ ಸರ್ಕಾರದ ಸವಲತ್ತುಗಳು ಲಭ್ಯವಾಗುತ್ತಿದ್ದು, ಇನ್ನುಳಿದ 90 ಶೇಕಡಾ ಪತ್ರಕರ್ತರಿಗೆ ಸರ್ಕಾರದ ಸವಲತ್ತುಗಳು...

ಸೆ.17 ರಂದು ಹಲ್ಲೆಗೊಳಗಾಗಿದ್ದ ನ್ಯಾಸರ್ಗಿಯ ದಲಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..! ಬೀದಿಯಲ್ಲಿ ನಡೆದ ಜಗಳ ಸಾವಿನಲ್ಲಿ ಅಂತ್ಯವಾಯ್ತಾ..?

ಸೆ.17 ರಂದು ಹಲ್ಲೆಗೊಳಗಾಗಿದ್ದ ನ್ಯಾಸರ್ಗಿಯ ದಲಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..! ಬೀದಿಯಲ್ಲಿ ನಡೆದ ಜಗಳ ಸಾವಿನಲ್ಲಿ ಅಂತ್ಯವಾಯ್ತಾ..?

ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು ಕಂಡಿದ್ದಾನೆ. ಕಳೆದ ಸೆಪ್ಟೆಂಬರ್ 17 ರ ರಾತ್ರಿ ನಡೆದಿದ್ದ ಹಲ್ಲೆ ಪ್ರಕರಣ ಈಗ ಸಾವಿನಲ್ಲಿ ದಿಕ್ಕು ಬದಲಿಸಿದೆ. ಹಲ್ಲೆ ನಡೆದು 13 ದಿನಗಳ ನಂತರ ಮೃತಪಟ್ಟಿದ್ದಾನೆ. ನ್ಯಾಸರ್ಗಿಯ ಮಂಜುನಾಥ ದುರ್ಗಪ್ಪ ಬೋವಿ(57) ಎಂಬುವವನೇ ಸದ್ಯ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಕಳೆದ ಸೆಪ್ಟೆಂಬರ್ 17 ರಂದು ರಾತ್ರಿ 8 ಗಂಟೆಯ ಸುಮಾರಿಗೆ ನ್ಯಾಸರ್ಗಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ರಸ್ತೆಯಲ್ಲಿ ಹನುಮಂತ ಭೀಮಣ್ಣ ಹರಪನಹಳ್ಳಿ ಹಾಗೂ ಮೃತ ಮಂಜುನಾಥ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಪ್ರಾರಂಭವಾಗಿ, ಗಲಾಟೆಯಾಗಿತ್ತು. ಈ ವೇಳೆ ಹನುಮಂತ ಹರಪನಹಳ್ಳಿ ಈತನು ಮಂಜುನಾಥ್ ಮೇಲೆ ಜಾತಿ ನಿಂದನೆ ಮಾಡಿದ್ದೂ ಅಲ್ಲದೇ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಅಂತಾ ಗಾಯಾಳು ಮಂಜುನಾಥ ಬೋವಿವಡ್ಡರ್ ಪುತ್ರ ಮುಂಡಗೋಡ ಠಾಣೆಗೆ ದೂರು ನೀಡಿದ್ದ. ಹೀಗಾಗಿ, ಪ್ರಕರಣ ದಾಖಲಿಸಿಕೊಂಡಿದ್ದ ಮುಂಡಗೋಡ ಪೊಲೀಸರು ಜಾತಿನಿಂದನೆ ಸೇರಿದಂತೆ ಹಲ್ಲೆ ಪ್ರಕರಣದಡಿ ಆರೋಪಿ ಹನುಮಂತ ಹರಪನಳ್ಳಿ ಎಂಬುವವನನ್ನು ಬಂಧಿಸಿದ್ದರು‌....

ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!

ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!

ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ‌. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ ಮೂರು ತಿಂಗಳಿಂದ ಸಂಬಳ ನೀಡಿಯೇ ಇಲ್ಲ. ಸಂಬಳ ನೀಡಿ ಅಂತಾ ಕೇಳಲು ಹೋದ್ರೆ ನಮಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಕಾರ್ಮಿಕ ಮಹಿಳೆಯರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಗಾರ್ಮೆಂಟ್ ಮಾಲೀಕ ಹೊನ್ನಾವರ ತಾಲೂಕು ಮಂಕಿಯ ವೆಂಕಟೇಶ್ ನಾಯ್ಕ್, ಸುಪರ್ವೈಸರ್ ಗಳಾದ ಪ್ರಶಾಂತ್ ಜೀವಕ್ಕನವರ್ ಹಾಗೂ ಗಣೇಶ್ ಕುಂಬಾರ್ ಎಂಬುವವರ ಮೇಲೆ ದೂರು ದಾಖಲಿಸಿದ್ದಾರೆ. 30 ಕ್ಕೂ ಹೆಚ್ಚು...

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ, e ಸ್ವತ್ತು ಮಾಡಲು ಲಂಚ ಕೇಳಿದ್ದಕ್ಕೆ, ಖೆಡ್ಡಾ ತೋಡಿದ ಅಧಿಕಾರಿಗಳು..!

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ, e ಸ್ವತ್ತು ಮಾಡಲು ಲಂಚ ಕೇಳಿದ್ದಕ್ಕೆ, ಖೆಡ್ಡಾ ತೋಡಿದ ಅಧಿಕಾರಿಗಳು..!

ಈ ಸ್ವತ್ತು ಮಾಡಿಸಲು ಲಂಚ ಪಡೆದ ಹಿರೇಕೆರೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ್ ಪಂಚಾಯತ ಕಚೇರಿಯಲ್ಲೇ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಿರೇಕೆರೂರು ಪಟ್ಟಣದ ಸ್ವಿವಿಲ್ ಇಂಜನಿಯರ ಮೊಹಮ್ಮದ್‌ ಆಖಿಬ ಮತ್ತೂರು ಅವರ ಈ ಸ್ವತ್ತು ಮಾಡಿಸಲು ಮುಖ್ಯಾಧಿಕಾರಿ ಪಂಪಾಪತಿ ನಾಯ್ಕಗೆ ಮೊದಲು 10ಸಾವಿರ ರೂಪಾಯಿಗಳನ್ನು ಪಡೆದುಕೊಂಡಿದ್ದು, ನಂತರ ಸೆ.30ರಂದು ಮತ್ತೆ 10ಸಾವಿರ ರೂಗಳ ಲಂಚಕ್ಕೆ ಬೇಡಿಕೆಯಿಟ್ಟ ವೇಳೆ ಅವರ ಕಚೇರಿಯಲ್ಲಿ ಲೋಕಾಯುಕ್ತರು ದಾಳಿ ಮಾಡಿ ಪಂಪಾಪತಿ ನಾಯ್ಕರನ್ನು ಟ್ರ್ಯಾಪ್ ಮಾಡಿದ್ದಾರೆ. ಸದರಿ ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಾವೇರಿ ಜಿಲ್ಲೆಯ ಲೋಕಾಯುಕ್ತರು ಕೈಗೊಂಡು, ಆರೋಪಿ ಪಂಪಾಪತಿ ನಾಯ್ಕನನ್ನು ಹಿರೇಕೆರೂರು ಪಟ್ಟಣ ಪಂಚಾಯತಿಯಲ್ಲಿ ಬಂಧಿಸಿದ್ದಾರೆ. ಪ್ರಸ್ತುತ ಹಿರೇಕೆರೂರು ಪಟ್ಟಣದಲ್ಲಿಯೇ ಇರುವ ಅವರ ವಸತಿ ಗೃಹದಲ್ಲಿ, ಕಛೇರಿಯಲ್ಲಿಯೂ ಶೋಧನೆ ಕೈಗೊಂಡು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ. ವಸತಿ ಗೃಹದಲ್ಲಿ ಸುಮಾರು 3.5 ಲಕ್ಷ ರೂ. ಹಾಗೂ ಇತರೆ ದಾಖಲಾತಿಗಳು ದೊರೆತಿರೋ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

ಶಿರಸಿ- ಕುಮಟಾ ರಸ್ತೆಯ, ದೇವಿಮನೆ ಘಟ್ಟದಲ್ಲಿ ಪುರುಷನ ಅಪರಿಚಿತ ಶವ ಪತ್ತೆ, ಕೊಲೆ ಮಾಡಿ ಬೀಸಾಡಿ ಹೋದ್ರಾ ಹಂತಕರು..?

ಶಿರಸಿ- ಕುಮಟಾ ರಸ್ತೆಯ, ದೇವಿಮನೆ ಘಟ್ಟದಲ್ಲಿ ಪುರುಷನ ಅಪರಿಚಿತ ಶವ ಪತ್ತೆ, ಕೊಲೆ ಮಾಡಿ ಬೀಸಾಡಿ ಹೋದ್ರಾ ಹಂತಕರು..?

ಶಿರಸಿ- ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಸ್ಥಿತಿ ಕಂಡ ಪೊಲೀಸರು ಇದೊಂದು ಮರ್ಡರ್ ಅನ್ನೋ ಅನುಮಾನ ವ್ಯಕ್ತ ಪಡಿಸ್ತಿದಾರೆ. ಅಂದಾಜು, 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಸಾವನ್ನಪ್ಪಿರುವ ವ್ಯಕ್ತಿಯ ತಲೆ ಹಿಂಬದಿಯಲ್ಲಿ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಯಾರೋ, ಎಲ್ಲಿಯೊ ಕೊಲೆ ಮಾಡಿ, ಇಲ್ಲಿ ತಂದು ಎಸೆದು ಹೋಗಿರಬಹುದಾದ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಬಿಳಿ ಶರ್ಟ ಹಾಗೂ ಲುಂಗಿ ಹಾಕಿದ್ದು, ಶರ್ಟನಲ್ಲಿ ಬಸ್ ಟಿಕೆಟ್ ಸಹ ಪತ್ತೆಯಾಗಿದೆ. ಗಜೇಂದ್ರಗಡಕ್ಕೆ..! ಅಂದಹಾಗೆ, ಮೃತ ವ್ಯಕ್ತಿ ಕಳೆದ ಗುರುವಾರ 28 ರಂದು ಮುಶಿಗೇರಿ ಯಿಂದ ಗಂಜೇಂದ್ರಗಡಕ್ಕೆ ಪ್ರಯಾಣಿಸಿರುವ ಟಿಕೆಟ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಈಗಾಗಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ಶಿರಸಿ: ಇಲ್ಲೊಬ್ಬ ಅಸಾಮಿ ಅದೇನೋ ಇರಲಾರದೇ ಇರುವೆ ಬಿಟ್ಕೊಂಡಂಗೆ ಮಾಡಿಕೊಂಡಿದ್ದಾನೆ. ಈದ್ ಮಿಲಾದ್ ಹಬ್ಬದ ದಿನ ತನ್ನ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಿ ಅವಮಾನ ಮಾಡಿದ್ದಾನೆ ಅಂತಾ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಧ್ವಜ ಹಾರಿಸಲು, ರಾಷ್ಟ್ತಧ್ವಜದಲ್ಲಿ,ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಹಾಕಿ ಧ್ವಜಕ್ಕೆ ಅವಮಾನ ಮಾಡಿದ್ದಾನೆ. ಉಮರ್ ಫಾರೂಕ್ ಅಬ್ದುಲ್ ಖಾದರ ಶೇಖ್ (38), ಬಂಧಿತ ವ್ಯಕ್ತಿಯಾಗಿದ್ದು, ಈತ ಮನೆಯ ಮೇಲೆ ರಾಷ್ಟ್ರ ಧ್ವಜವನ್ನ ಹಾರಿಸಿದ್ದಾನೆ. ಹಾರಿಸಿರುವ ರಾಷ್ಟ್ರ ಧ್ವಜಕ್ಕೆ ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಚಿತ್ರವನ್ನ ಅಂಟಿಸಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದ, ಈತ ಮನೆಯ ಹಂಚಿನ ಮೇಲ್ದಾವಣಿಯ ಮೇಲ್ದಾಗದಲ್ಲಿ ಒಂದು ಕಂಬಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣದ ಬಟ್ಟೆಯಲ್ಲಿ ರಾಷ್ಟ್ರಧ್ವಜವನ್ನು ಮಾಡಿ ಅದರ ಮಧ್ಯದಲ್ಲಿ ಅಶೋಕ ಚಕ್ರ ಇರುವ ಜಾಗದಲ್ಲಿ ಮುಸ್ಲಿಂ ಧರ್ಮದ ಮದಿನಾ ಗುಂಬಸಿನ ಚಿತ್ರ ಹಾಕಿ ಮುಸ್ಲಿಂ ಧರ್ಮದ ಘೋಷಣೆ ಬರೆದಿದ್ದ. ಇಂತಹ ರಾಷ್ಟ್ರಧ್ವಜವನ್ನು ಎಲ್ಲರಿಗೂ ಕಾಣುವಂತೆ ಹಾರಿಸಿ...

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg 28grm ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಏನಿಲ್ಲವೆಂದ್ರೂ 80 ಸಾವಿರ ರೂಪಾಯಿ. ಸಿಪಿಐ ಬರಮಪ್ಪ ಲೋಕಾಪುರ್ ನೇತೃತ್ವದಲ್ಲಿ ಪಿಎಸ್ಐ ಯಲ್ಲಾಲಿಂಗ ಕುನ್ನೂರು, ಕ್ರೈಂ ಪಿಎಸ್ ಐ ಹನ್ಮಂತಪ್ಪ ವಡಗುಂಟಿ, ಸಿಬ್ಬಂದಿಗಳಾದ ತಿರುಪತಿ ಹುನ್ನಳ್ಳಿ, ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಿಗೆರ್, ಬಸವರಾಜ್ ಲಮಾಣಿ, ಸಂಜು ರಾಠೋಡ್, ಗುರುರಾಜ್ ದಾಳಿಯಲ್ಲಿ ಭಾಗಿಯಾಗಿದ್ರು.

error: Content is protected !!