ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!

ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!

ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ಇನ್ನು ನಟ ಪುನೀತ್ ಪುತ್ರಿ ದೃತಿ, ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೆಹಲಿಗೆ ಆಗಮಿಸಿರೋ ದೃತಿ, ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನ ಹತ್ತಿ, 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆ‌ಆಗಮಿಸೋ ಸಾಧ್ಯತೆ ಇದೆ. ಏರ್ಪೊಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುವ ಮಾಹಿತಿ ಸಿಕ್ಕಿದ್ದು‌. ಪುನೀತ್ ಪುತ್ರಿ ಆಗಮಿಸೋದು ಸಂಜೆಯಾಗುವ ಕಾರಣಕ್ಕೆ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಹಿಂದು ಸಂಪ್ರದಾಯದ ಪ್ರಕಾರ ಅಂತ್ತಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತೊಬ್ಬ “ಅಪ್ಪು” ಅಭಿಮಾನಿ ನೇಣಿಗೆ ಶರಣು..! ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ..! ಇದೇಲ್ಲಾ ಬೇಕಾ..?

ಮತ್ತೊಬ್ಬ “ಅಪ್ಪು” ಅಭಿಮಾನಿ ನೇಣಿಗೆ ಶರಣು..! ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ..! ಇದೇಲ್ಲಾ ಬೇಕಾ..?

ಬೆಳಗಾವಿ: ನಟ ಪುನೀತ್ ರಾಜಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಅಂತಾ ಪ್ರಾರ್ಥಿಸಿದ ಮಂತ್ರಾಲಯದ ಶ್ರೀಗಳು..!

ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಅಂತಾ ಪ್ರಾರ್ಥಿಸಿದ ಮಂತ್ರಾಲಯದ ಶ್ರೀಗಳು..!

ನಟ ಪುನೀತ್ ರಾಜಕುಮಾರ್ ನಿಧನ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಪುನೀತ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಪುನೀತ್ ಇನ್ನಿಲ್ಲ ಎನ್ನುವುದನ್ನ ಅರಗಿಸಿಕೊಳ್ಳುವುದು ಕಷ್ಟ, ಪುನೀತ್ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಡಾ.ರಾಜಕುಮಾರ ಕುಟುಂಬ ರಾಯರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ, ವಿಶೇಷ ಸಂದರ್ಭಗಳಲ್ಲಿ ಮಠಕ್ಕೆ ತಪ್ಪದೇ ಬಂದು ಹೋಗುತ್ತಾರೆ, ಮೂರು ಜನ ಅಣ್ಣತಮ್ಮಂದಿರು ಮಠದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವುದಾಗಿ ಪುನೀತ್ ಹೇಳಿದ್ದರು, ರಾಯರ ಆರಾಧನ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತೇವೆ ಎಂದಿದ್ದರು ಅಂತಾ ಶ್ರೀಗಳು ನೆನಪು ಹಂಚಿಕೊಂಡಿದ್ದಾರೆ. ಪುನೀತ್ ರಾಜ್‍ಕುಮಾರ್ ಚಿಕ್ಕವರಿದ್ದಾಗಿನಿಂದಲೂ “ವಾರ ಬಂತಮ್ಮ ಗುರುವಾರ ಬಂತಮ್ಮ” ಹಾಡನ್ನ ಹೇಳುತ್ತಿದ್ದರು. ಪುನೀತ್ ಅಗಲಿಕೆಯ ನೋವು ಭರಿಸುವಂತ ಶಕ್ತಿಯನ್ನ ಅವರ ಕುಟುಂಬಕ್ಕೆ ಭಗವಂತ ನೀಡಲಿ ಅಂತಾ ಶ್ರೀಗಳು ಪ್ರಾರ್ಥಿಸಿದ್ದಾರೆ.

ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?

ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಸ್ತಂಗತರಾಗಿದ್ದಾರೆ. ಅದ್ರಂತೆ ಇತ್ತಿಚೇಗಷ್ಟೇ ಕನ್ನಡ ಚಿತ್ರರಂಗ ಇನ್ನಿಬ್ಬರು ನಟರನ್ನು ಕಳೆದುಕೊಂಡಿದೆ. ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಕೂಡ ವಯಸ್ಸಲ್ಲದ ವಯಸ್ಸಲ್ಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾರದ ಸಂಗತಿ. ಅಂದಹಾಗೆ, ಇಲ್ಲಿ ಕಾಕತಾಳಿಯವೋ ಅಥವಾ ಕನ್ನಡ ಚಿತ್ರರಂಗದಲ್ಲಿ 17 ಅನ್ನೋ ಸಂಖ್ಯೆಯ ಅರಿಷ್ಟವೋ ಗೊತ್ತೇ ಆಗುತ್ತಿಲ್ಲ. ಯಾಕಂದ್ರೆ, ಇವತ್ತು ಅಸ್ತಂಗತರಾಗಿರೋ ಪುನೀತ್ ರಾಜಕುಮಾರ್, ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಇವ್ರೇಲ್ಲರ ಹುಟ್ಟಿದ ದಿನಾಂಕ 17… ಹೀಗಾಗಿ, ಈ ಮೂವರೂ ಅಕಾಲಿಕವಾಗಿ ನಿಧನರಾಗಿ, ನಮ್ಮನ್ನೇಲ್ಲ ಅಗಲಿರೋದು ಇಡೀ ಚಿತ್ರರಂಗವೇ ಕಂಬನಿ ಮಿಡಿಯುವಂತೆ ಮಾಡಿದೆ. ಈ ಕಾರಣಕ್ಕಾಗಿ ಇವ್ರ ಹುಟ್ಟಿದ ದಿನಾಂಕಕ್ಕೂ ಹಾಗೂ ಈ ಅಕಾಲಿಕ ಸಾವುಗಳಿಗೂ ಏನಾದ್ರೂ ಲಿಂಕ್ ಇದೆಯಾ..? ಏನೋ ಒಂಥರಾ ವಿಚಿತ್ರವಾಗಿದೆ ಅಲ್ವಾ..?

ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.

ನಟ ಪುನೀತ್ ಸಾವಿನ ಸುದ್ದಿಗೆ ಹೃದಯಾಘಾತ: ಮೃತಪಟ್ಟ ಅಪ್ಪು ಅಭಿಮಾನಿ..!!

ನಟ ಪುನೀತ್ ಸಾವಿನ ಸುದ್ದಿಗೆ ಹೃದಯಾಘಾತ: ಮೃತಪಟ್ಟ ಅಪ್ಪು ಅಭಿಮಾನಿ..!!

ಚಾಮರಾಜನಗರ: ಪುನೀತ್ ರಾಜಕುಮಾರ್ ನಿಧನ ವಿಷಯ ಕೇಳಿ ಹೃದಯಾಘಾತವಾಗಿ ಪುನೀತ್ ಅಭಿಮಾನಿ ಸಾವಿಗೀಡಾಗಿದ್ದಾನೆ‌. ಚಾಮರಾಜನಗರ ಜಿಲ್ಲೆ ಹನೂರು ತಾಲೋಕು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ, ಮುನಿಯಪ್ಪ(29) ಹೃದಯಾಘಾತದಿಂದ ಮೃತಪಟ್ಟ ಅಭಿಮಾನಿ. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಮುನಿಯಪ್ಪ, ಪುನೀತ್ ಸಾವಿನ ವಿಷಯ ಕೇಳುತ್ತಲೇ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಕೊನೆಯುಸಿರು ಎಳೆದಿದ್ದಾನೆ ಪುನೀತ್ ಅಭಿಮಾನಿ. ಪುನೀತ್ ಅವರ ಪ್ರತಿಯೊಂದು ಚಿತ್ರವನ್ನು ತಪ್ಪದೆ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದ, ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ ಮುನಿಯಪ್ಪ. ನಾಳೆ ಮರೂರು ಗ್ರಾಮದಲ್ಲಿ ಪುನೀತ್ ಅಭಿಮಾನಿಯ ಅಂತ್ಯಕ್ರಿಯೆ ನಡೆಯಲಿದೆ.

ಪುನೀತ್ ನಿವಾಸಕ್ಕೆ ಪಾರ್ಥೀವ ಶರೀರ, ಕುಟುಂಬಸ್ಥರಿಂದ ಪೂಜೆ, ಪತಿಯ ಶವ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತ ಪತ್ನಿ..!

ಪುನೀತ್ ನಿವಾಸಕ್ಕೆ ಪಾರ್ಥೀವ ಶರೀರ, ಕುಟುಂಬಸ್ಥರಿಂದ ಪೂಜೆ, ಪತಿಯ ಶವ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತ ಪತ್ನಿ..!

ನಟ ಪುನೀತ್ ರಾಜಕುಮಾರ ವಿಧಿವಶರಾದ ಹಿನ್ನೆಲೆಯಲ್ಲಿ ಅವ್ರ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಪುನೀತ್ ರಾಜಕುಮಾರ್ ನಿವಾಸಕ್ಕೆ ರವಾನಿಸಲಾಯಿತು. ಪುನೀತ್ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ರು. ನಂತರ ಸಾರ್ವಜನಿಕ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂ ಗೆ ಕೆಲವೇ ಕ್ಷಣಗಳಲ್ಲಿ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆ ಇದೆ.

ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!

ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!

ಬೆಂಗಳೂರು: ನಟ ಪವರ್ ಸ್ಟಾರ್, ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಮಾತನಾಡಿದ್ದಾರೆ. “ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗ್ಬೇಕಿತ್ತು, ಆದ್ರೆ ಅವನು ಮೊದಲು ಹೋಗಿದ್ದಾನೆ, ಅಪ್ಪ ಅಮ್ಮನ ಹತ್ರ ನನಗಿಂತ ಮುಂಚೆನೇ ಹೋಗಿಬಿಟ್ಟ” ಅಂತಾ ಪುನೀತ್ ರಾಜಕುಮಾರ್ ಹಿರಿಯ ಸಹೋದರ ನಟ ರಾಘವೇಂದ್ರ ರಾಜಕುಮಾರ್ ಬಾವುಕ ನುಡಿ ನುಡಿದಿದ್ದಾರೆ. ಅಭಿಮಾನಿಗಳೇ ಅಪ್ಪುವನ್ನು ಯಾವುದೇ ತೊಂದರೆ ಆಗದಂತೆ ಕಳಿಸಿಕೊಡೋಣ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರದ ಜೊತೆಗೆ ನಿಂತು, ನನ್ನ ತಮ್ಮನನ್ನು ಚೆನ್ನಾಗಿ ಕಳಿಸಿಕೊಡಿ. ಕಲಾವಿದರಿಗೆ ಸಾವಿಲ್ಲ, ಕಲಾವಿದರು ಸಿನಿಮಾಗಳ ಮೂಲಕ ಯಾವತ್ತಿಗೂ ಜೀವಂತವಾಗಿರ್ತಾರೆ. ಅಂತಾ ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ.

ನಟ ಪುನಿತ್ ರಾಜಕುಮಾರ್ ಇನ್ನು ನೆನಪು ಮಾತ್ರ..! ಬಾರದ ಲೋಕಕ್ಕೆ ತೆರಳಿದ “ಅಪ್ಪು”

ನಟ ಪುನಿತ್ ರಾಜಕುಮಾರ್ ಇನ್ನು ನೆನಪು ಮಾತ್ರ..! ಬಾರದ ಲೋಕಕ್ಕೆ ತೆರಳಿದ “ಅಪ್ಪು”

ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಹಾಗಂತ, ವಿಕ್ರಂ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಬೆಳಿಗ್ಗೆಯೆ ತೀವ್ರ ಹೃದಯಾಘಾತದಿಂದ ಪುನಿತ್ ರಾಜಕುಮಾರ್, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು‌. ಚಿಕಿತ್ಸೆ ಫಲಕಾರಿಯಾಗದೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪು ಕೊನೆಯುಸಿರು. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಪುನಿತ್ ವಿಧಿವಶರಾಗಿದ್ದಾರೆ. ಗಣ್ಯರ ದಂಡು ಆಸ್ಪತ್ರೆಯತ್ತ..! ಇನ್ನು ನಟ ಪುನಿತ್ ಆರೋಗ್ಯ ಸ್ಥಿತಿ ಗಂಭಿರವಾಗಿದೆ ಅಂತಾ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ಗಣ್ಯರ ದಂಡೇ ಹರಿದು ಬರ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ, ಚಿತ್ರರಂಗದ ಗಣ್ಯರು ಆಸ್ಪತ್ರೆ ಬಳಿ ಬೀಡು ಬಿಟ್ಟಿದ್ದಾರೆ. ಇನ್ನು ಅಪಾರ ಸಂಖ್ಯೆಯ ಅಭಿಮಾನಿ ಬಳಗ ದಾವಿಸಿಸಯತ್ತಿದ್ದು, ಆಸ್ಪತ್ರೆ ಹಾಗೂ ಪುನಿತ್ ನಿವಾಸದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!

ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!

ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ನಟ ಪುನಿತ್ ರಾಜಕುಮಾರ್ ಸ್ಥಿತಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಟ ಶಿವರಾಜ್ ಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಮಾಹಿತಿ ಲಭ್ಯವಾಗಿದೆ. ವಿಕ್ರಂ ಆಸ್ಪತ್ರೆಯ ವೈದ್ಯರಿಂದ ಅಪ್ಪುವಿನ ಆರೋಗ್ಯದ ಸಂಪೂರ್ಣ ಮಾಹಿತಿ ಪಡೆದುಕೊಂಡಿರೋ ಸಿಎಂ ಹಾಗೂ ಶಿವರಾಜ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟ ಚಿತ್ರಣ ನೀಡೋ ಸಾಧ್ಯತೆ ಇದೆ ಎನ್ನಲಾಗಿದೆ.

error: Content is protected !!