ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಪುತ್ರಿ ಧೃತಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪುನೀತ್ ಪುತ್ರಿ ಆಗಮನವಾಗಿದ್ದು, ಧೃತಿಯಿದ್ದ ಏರ್ ಇಂಡಿಯಾ 502 ವಿಮಾನ ಲ್ಯಾಂಡಿಂಗ್ ಆಗಿದೆ. ವಿಮಾನ ನಿಲ್ದಾಣದಿಂದ ಧೃತಿಯನ್ನ ಕರೆದುಕೊಂಡು ಹೋಗಲು ಪೊಲೀಸ್ ಬೆಂಗಾವಲು ವಾಹನಗಳು ಬಂದಿವೆ., ಇನ್ನು ಕೆಲವೇ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಿನಿಂದ ಹೊರಬರಲಿರುವ ಪುನೀತ್ ಪುತ್ರಿ, ನೇರವಾಗಿ ಕಂಠೀರವ ಸ್ಟೇಡಿಯಂಗೆ ತೆರಳಲಿದ್ದಾರೆ.
Top Stories
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ; ಬಿಬಿಎಂಪಿ..!
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಮುಂಡಗೋಡಿನ ಸೂಕ್ಷ್ಮ ಸ್ಥಳಗಳಲ್ಲಿ ಶ್ವಾನ ದಳ ಪರಿಶೀಲನೆ, ಟಿಬೇಟಿಯನ್ ಕಾಲೋನಿಯಲ್ಲೂ ಕಟ್ಟೇಚ್ಚರ..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಹಾಗೇನೆ, ಟಿಬೇಟಿಯನ್ ಕಾಲೋನಿ ಸೇರಿದಂತೆ ತಾಲೂಕಿನ ಬಹುಮುಖ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಕಟ್ಟೇಚ್ಚರ ವಹಿಸಿದೆ. ಎಚ್ಚರಿಸಿದ್ದೇ ಕುಮಟಾ ಕೇಸ್..! ಅಂದಹಾಗೆ, ಇದು ಮುಂಡಗೋಡ ತಾಲೂಕಿಗಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಡೆಯೂ ಕಟ್ಟೇಚ್ಚರ ವಹಿಸಲಾಗಿದೆ. ಯಾಕಂದ್ರೆ, ಕುಮಟಾದ ಕಾಲೇಜು ಆವರಣದಲ್ಲಿ ಇತ್ತಿಚೆಗಷ್ಟೇ ಬಾಂಬ್ ಮಾದರಿಯ ವಸ್ತು ಸಿಕ್ಕು ಆತಂಕ ತಂದಿಟ್ಟಿತ್ತು. ಹೀಗಾಗಿ ಪೊಲೀಸ್ ಇಲಾಖೆ ಜಿಲ್ಲಾಧ್ಯಂತ ಕಟ್ಟೇಚ್ಚರ ವಹಿಸಿದೆ ಅಂತಾ ತಿಳಿದು ಬಂದಿದೆ. ಟಿಬೇಟಿಯನ್ ಕಾಲೋನಿ..! ನಿಜ ಅಂದ್ರೆ, ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಲ್ಲಿಯೂ ಸಹ ಇಂದು ಶ್ವಾನ ದಳ ತೀವ್ರ ತಪಾಸಣೆ ನಡೆಸಿತು. ಜೊತೆಗೆ ಬಾಂಬ್ ನಿಷ್ಕ್ರೀಯ ದಳದ ತಜ್ಞರು ಜೊತೆಯಲ್ಲಿದ್ದರು. ರಾಜ್ಯ, ಹೊರರಾಜ್ಯ, ಹೊರದೇಶಗಳಿಂದ ಜಿಲ್ಲೆಗೆ ಬರುವವರ ಮೇಲೆ ನಿಗಾ ಇಡಲಾಗಿದೆ...
ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!
ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ಇನ್ನು ನಟ ಪುನೀತ್ ಪುತ್ರಿ ದೃತಿ, ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೆಹಲಿಗೆ ಆಗಮಿಸಿರೋ ದೃತಿ, ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನ ಹತ್ತಿ, 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆಆಗಮಿಸೋ ಸಾಧ್ಯತೆ ಇದೆ. ಏರ್ಪೊಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುವ ಮಾಹಿತಿ ಸಿಕ್ಕಿದ್ದು. ಪುನೀತ್ ಪುತ್ರಿ ಆಗಮಿಸೋದು ಸಂಜೆಯಾಗುವ ಕಾರಣಕ್ಕೆ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಿಂದು ಸಂಪ್ರದಾಯದ ಪ್ರಕಾರ ಅಂತ್ತಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮತ್ತೊಬ್ಬ “ಅಪ್ಪು” ಅಭಿಮಾನಿ ನೇಣಿಗೆ ಶರಣು..! ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ..! ಇದೇಲ್ಲಾ ಬೇಕಾ..?
ಬೆಳಗಾವಿ: ನಟ ಪುನೀತ್ ರಾಜಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಅಂತಾ ಪ್ರಾರ್ಥಿಸಿದ ಮಂತ್ರಾಲಯದ ಶ್ರೀಗಳು..!
ನಟ ಪುನೀತ್ ರಾಜಕುಮಾರ್ ನಿಧನ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಪುನೀತ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಪುನೀತ್ ಇನ್ನಿಲ್ಲ ಎನ್ನುವುದನ್ನ ಅರಗಿಸಿಕೊಳ್ಳುವುದು ಕಷ್ಟ, ಪುನೀತ್ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಡಾ.ರಾಜಕುಮಾರ ಕುಟುಂಬ ರಾಯರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ, ವಿಶೇಷ ಸಂದರ್ಭಗಳಲ್ಲಿ ಮಠಕ್ಕೆ ತಪ್ಪದೇ ಬಂದು ಹೋಗುತ್ತಾರೆ, ಮೂರು ಜನ ಅಣ್ಣತಮ್ಮಂದಿರು ಮಠದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವುದಾಗಿ ಪುನೀತ್ ಹೇಳಿದ್ದರು, ರಾಯರ ಆರಾಧನ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತೇವೆ ಎಂದಿದ್ದರು ಅಂತಾ ಶ್ರೀಗಳು ನೆನಪು ಹಂಚಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಚಿಕ್ಕವರಿದ್ದಾಗಿನಿಂದಲೂ “ವಾರ ಬಂತಮ್ಮ ಗುರುವಾರ ಬಂತಮ್ಮ” ಹಾಡನ್ನ ಹೇಳುತ್ತಿದ್ದರು. ಪುನೀತ್ ಅಗಲಿಕೆಯ ನೋವು ಭರಿಸುವಂತ ಶಕ್ತಿಯನ್ನ ಅವರ ಕುಟುಂಬಕ್ಕೆ ಭಗವಂತ ನೀಡಲಿ ಅಂತಾ ಶ್ರೀಗಳು ಪ್ರಾರ್ಥಿಸಿದ್ದಾರೆ.
ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಸ್ತಂಗತರಾಗಿದ್ದಾರೆ. ಅದ್ರಂತೆ ಇತ್ತಿಚೇಗಷ್ಟೇ ಕನ್ನಡ ಚಿತ್ರರಂಗ ಇನ್ನಿಬ್ಬರು ನಟರನ್ನು ಕಳೆದುಕೊಂಡಿದೆ. ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಕೂಡ ವಯಸ್ಸಲ್ಲದ ವಯಸ್ಸಲ್ಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾರದ ಸಂಗತಿ. ಅಂದಹಾಗೆ, ಇಲ್ಲಿ ಕಾಕತಾಳಿಯವೋ ಅಥವಾ ಕನ್ನಡ ಚಿತ್ರರಂಗದಲ್ಲಿ 17 ಅನ್ನೋ ಸಂಖ್ಯೆಯ ಅರಿಷ್ಟವೋ ಗೊತ್ತೇ ಆಗುತ್ತಿಲ್ಲ. ಯಾಕಂದ್ರೆ, ಇವತ್ತು ಅಸ್ತಂಗತರಾಗಿರೋ ಪುನೀತ್ ರಾಜಕುಮಾರ್, ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಇವ್ರೇಲ್ಲರ ಹುಟ್ಟಿದ ದಿನಾಂಕ 17… ಹೀಗಾಗಿ, ಈ ಮೂವರೂ ಅಕಾಲಿಕವಾಗಿ ನಿಧನರಾಗಿ, ನಮ್ಮನ್ನೇಲ್ಲ ಅಗಲಿರೋದು ಇಡೀ ಚಿತ್ರರಂಗವೇ ಕಂಬನಿ ಮಿಡಿಯುವಂತೆ ಮಾಡಿದೆ. ಈ ಕಾರಣಕ್ಕಾಗಿ ಇವ್ರ ಹುಟ್ಟಿದ ದಿನಾಂಕಕ್ಕೂ ಹಾಗೂ ಈ ಅಕಾಲಿಕ ಸಾವುಗಳಿಗೂ ಏನಾದ್ರೂ ಲಿಂಕ್ ಇದೆಯಾ..? ಏನೋ ಒಂಥರಾ ವಿಚಿತ್ರವಾಗಿದೆ ಅಲ್ವಾ..?
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.
ನಟ ಪುನೀತ್ ಸಾವಿನ ಸುದ್ದಿಗೆ ಹೃದಯಾಘಾತ: ಮೃತಪಟ್ಟ ಅಪ್ಪು ಅಭಿಮಾನಿ..!!
ಚಾಮರಾಜನಗರ: ಪುನೀತ್ ರಾಜಕುಮಾರ್ ನಿಧನ ವಿಷಯ ಕೇಳಿ ಹೃದಯಾಘಾತವಾಗಿ ಪುನೀತ್ ಅಭಿಮಾನಿ ಸಾವಿಗೀಡಾಗಿದ್ದಾನೆ. ಚಾಮರಾಜನಗರ ಜಿಲ್ಲೆ ಹನೂರು ತಾಲೋಕು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ, ಮುನಿಯಪ್ಪ(29) ಹೃದಯಾಘಾತದಿಂದ ಮೃತಪಟ್ಟ ಅಭಿಮಾನಿ. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಮುನಿಯಪ್ಪ, ಪುನೀತ್ ಸಾವಿನ ವಿಷಯ ಕೇಳುತ್ತಲೇ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಕೊನೆಯುಸಿರು ಎಳೆದಿದ್ದಾನೆ ಪುನೀತ್ ಅಭಿಮಾನಿ. ಪುನೀತ್ ಅವರ ಪ್ರತಿಯೊಂದು ಚಿತ್ರವನ್ನು ತಪ್ಪದೆ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದ, ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ ಮುನಿಯಪ್ಪ. ನಾಳೆ ಮರೂರು ಗ್ರಾಮದಲ್ಲಿ ಪುನೀತ್ ಅಭಿಮಾನಿಯ ಅಂತ್ಯಕ್ರಿಯೆ ನಡೆಯಲಿದೆ.
ಪುನೀತ್ ನಿವಾಸಕ್ಕೆ ಪಾರ್ಥೀವ ಶರೀರ, ಕುಟುಂಬಸ್ಥರಿಂದ ಪೂಜೆ, ಪತಿಯ ಶವ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತ ಪತ್ನಿ..!
ನಟ ಪುನೀತ್ ರಾಜಕುಮಾರ ವಿಧಿವಶರಾದ ಹಿನ್ನೆಲೆಯಲ್ಲಿ ಅವ್ರ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಪುನೀತ್ ರಾಜಕುಮಾರ್ ನಿವಾಸಕ್ಕೆ ರವಾನಿಸಲಾಯಿತು. ಪುನೀತ್ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ರು. ನಂತರ ಸಾರ್ವಜನಿಕ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂ ಗೆ ಕೆಲವೇ ಕ್ಷಣಗಳಲ್ಲಿ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆ ಇದೆ.
ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!
ಬೆಂಗಳೂರು: ನಟ ಪವರ್ ಸ್ಟಾರ್, ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಮಾತನಾಡಿದ್ದಾರೆ. “ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗ್ಬೇಕಿತ್ತು, ಆದ್ರೆ ಅವನು ಮೊದಲು ಹೋಗಿದ್ದಾನೆ, ಅಪ್ಪ ಅಮ್ಮನ ಹತ್ರ ನನಗಿಂತ ಮುಂಚೆನೇ ಹೋಗಿಬಿಟ್ಟ” ಅಂತಾ ಪುನೀತ್ ರಾಜಕುಮಾರ್ ಹಿರಿಯ ಸಹೋದರ ನಟ ರಾಘವೇಂದ್ರ ರಾಜಕುಮಾರ್ ಬಾವುಕ ನುಡಿ ನುಡಿದಿದ್ದಾರೆ. ಅಭಿಮಾನಿಗಳೇ ಅಪ್ಪುವನ್ನು ಯಾವುದೇ ತೊಂದರೆ ಆಗದಂತೆ ಕಳಿಸಿಕೊಡೋಣ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರದ ಜೊತೆಗೆ ನಿಂತು, ನನ್ನ ತಮ್ಮನನ್ನು ಚೆನ್ನಾಗಿ ಕಳಿಸಿಕೊಡಿ. ಕಲಾವಿದರಿಗೆ ಸಾವಿಲ್ಲ, ಕಲಾವಿದರು ಸಿನಿಮಾಗಳ ಮೂಲಕ ಯಾವತ್ತಿಗೂ ಜೀವಂತವಾಗಿರ್ತಾರೆ. ಅಂತಾ ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ.