ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕರೆತರಲಾಯಿತು.
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು. ವಿವಿಧ ವೇಷ ಭೂಷಣಗಳೊಂದಿಗೆ ದಲೈ ಲಾಮಾರವರ ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು.
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?
ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಹಂತಕರ ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸ್ರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ. ಚಂದ್ರಶೇಖರ್ ಗುರೂಜಿಯವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಹಂತಕರು, ಬಟ್ಟೆ ಬದಲಿಸಿ ಕಾರಲ್ಲೇ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿದ್ರು. ಇದೇ ವೇಳೆ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಹತ್ಯೆಯಾದ ಕೇವಲ 4 ಗಂಟೆಯಲ್ಲೇ ಹಂತಕರನ್ನು ಎಳೆದು ತಂದಿದ್ದಾರೆ ಪೊಲೀಸರು. ಆರೋಪಿಗಳಿಂದಲೇ ಕರೆ..! ಇನ್ನು, ಹಾಗೆ ಗುರೂಜಿಯ ಹತ್ಯೆಯ ನಂತರ ಹಂತಕರು ಹುಬ್ಬಳ್ಳಿ ಪೊಲೀಸರಿಗೆ ಖುದ್ದಾಗಿ ಪೋನ್ ಕರೆ ಮಾಡಿದ್ದರಂತೆ. ಮಾದ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಹಂತಕರು, ನಾವು ಬೆಳಗಾವಿ ಕಡೆಗೆ ಹೋಗುತ್ತಿದ್ದೇವೆ ಅಂತಾ ಹೇಳಿದ್ದರಂತೆ. ಹೀಗಾಗಿ, ತಕ್ಷಣವೇ ಹುಬ್ಬಳ್ಳಿ ಪೊಲೀಸ್ರು ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ರಾಮದುರ್ಗ ಪೊಲೀಸರು ಹಂತಕರನ್ನು ಬಂಧಿಸಿದ್ದಾರೆ. ಹಾಗಂತ, ಹುಬ್ಬಳ್ಳಿ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆಪ್ತರಿಂದಲೇ ಹತ್ಯೆಯಾದ್ರಾ ಚಂದ್ರಶೇಖರ ಗುರೂಜಿ..? ಬೇನಾಮಿ ಆಸ್ತಿಗಾಗಿ ಚುಚ್ಚಿ ಚುಚ್ಚಿ ಕೊಂದ್ರಾ ಹಂತಕರು..?
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯರ ಬೀಕರ ಹತ್ಯೆಯ ಹಿಂದೆ ಬೇನಾಮಿ ಆಸ್ತಿಯ ನೆರಳಿದೆ. ಬಹುತೇಕ ಆಪ್ತರೇ ಹಂತಕರು ಅನ್ನೋ ಪ್ರಾಥಮಿಕ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಅಷ್ಟಕ್ಕೂ, ಹಂತಕ ಆರೋಪಿಗಳು ಕಲಘಟಗಿ ತಾಲೂಕಿನ ದುಮ್ಮವಾಡದ ನಿವಾಸಿಗಳು ಎನ್ನಲಾಗಿದೆ. ಬೇನಾಮಿ ಆಸ್ತಿ ಕಾರಣವಾ..? ಇನ್ನು, ಚಂದ್ರಶೇಖರ್ ಗುರೂಜಿ ವನಜಾಕ್ಷಿಯ ಹೆಸರಿಗೆ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಹಾಗೆ ವನಜಾಕ್ಷಿ ಹೆಸರಲ್ಲಿ ಇದ್ದ ಆಸ್ತಿ ವಾಪಸ್ ಕೇಳಿದ್ದ ಕಾರಣಕ್ಕೆ ಇಂತಹ ಭೀಕರ ಹತ್ಯೆ ನಡೆದಿದೆ ಅನ್ನುವ ಮಾತುಗಳು ಕೇಳಿ ಬಂದಿದೆ.
ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬರ್ಬರ ಹತ್ಯೆ..! 60 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಹಂತಕರು..!
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬೀಕರ ಹತ್ಯೆಯಾಗಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲಿನಲ್ಲಿ ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಯಿಂದ ಕೊಲೆ ನಡೆದಿದೆ. ಕಾಲಿಗೆ ಬೀಳುವ ನೆಪದಲ್ಲಿ ಬಂದ ವ್ಯಕ್ತಿ ಕಾಲಿಗೆ ಬೀಳುತ್ತಿದ್ದಂತೆ, ಮತ್ತೊಂದು ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೇವಲ 40 ಸೆಕೆಂಡ್ ನಲ್ಲೆ 60 ಬಾರಿ ಎದೆಗೆ ಚೂರಿ ಇರಿತವಾಗಿದೆ. ಹೀಗಾಗಿ, ಸ್ಥಳದಲ್ಲೇ ಚಂದ್ರಶೇಖರ ಸ್ವಾಮೀಜಿ ಮೃತಪಟ್ಟಿದ್ದಾರೆ. ಕೊಲೆಗೆ ಕಾರಣವೇನು, ಕೊಲೆಗಾರರು ಯಾರು ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಬುರಾಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂದ್ರು, ವಿ.ಎಸ್.ಪಾಟೀಲ್, ಮಾಜಿ ಶಾಸಕರ ಮನದಾಳದ ಮಾತು ಎಂಥಾದ್ದು ಗೊತ್ತಾ..?
ಮುಂಡಗೋಡ: ತಮ್ಮ ಸುಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ತಮ್ಮ ಮನದಾಳದ ನೋವು ಹಂಚಿಕೊಂಡಿರೋ ಪಾಟೀಲರು, ಮಮ್ಮಲ ಮರುಗಿದ್ದಾರೆ. ಯಾವ ತಂದೆಗೂ ಈ ಪರಿಸ್ಥಿತಿ ಬರೋದು ಬೇಡ ಅಂತ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಸುಪುತ್ರನ ವಿರುದ್ಧವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ರಾ ವಿ.ಎಸ್.ಪಾಟೀಲ್..?
ವಿ.ಎಸ್.ಪಾಟೀಲ್, ಈ ಹೆಸ್ರು ಕೇಳಿದ್ರೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದ್ರಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ಅದೇನೋ ಒಂದು ಅಭಿಮಾನ. ಅದೇನೋ ಒಂದು ಪ್ರೀತಿ. ಅವರ ಅಪ್ಪಟ ಜವಾರಿ ಭಾಷೆಯ ಮಾತುಗಳು, ನೇರ ನುಡಿಗಳು, ನಿಷ್ಕಲ್ಮಶ ಮನಸ್ಸು ಹೀಗೆ ಅವ್ರನ್ನ ನಾನು ಇವತ್ತಿಗೂ ಒಬ್ಬ ರಾಜಕಾರಣಿ ಅಂತಾ ನೋಡಿಯೇ ಇಲ್ಲ. ಅವ್ರು ನಮ್ಮ ಮಾರ್ಗದರ್ಶಿ ಸ್ಥಾನದಲ್ಲಿ ಯಾವಾಗ್ಲೂ ಇರ್ತಾರೆ. ಹೀಗಿರೋ ಅವ್ರಿಗೆ ಇಂತಹದ್ದೊಂದು ಪರಿಸ್ಥಿತಿ ಬಂದಿದೆಯಾ..? ಆ ಮಟ್ಟಿಗಿನ ಅನಿವಾರ್ಯತೆ ಎದುರಾಗಿದೆಯಾ..? ನಿಜಕ್ಕೂ ವಿ.ಎಸ್.ಪಾಟೀಲರ ಮನಸ್ಸು ಈ ಮಟ್ಟಿಗೆ ನೋವು ಉಂಡಿದೆಯಾ..? ಛೇ ಯಾವ ತಂದೆಗೂ ಬೇಡ ಈ ಅವಸ್ಥೆ..! ನಿನ್ನೆ ರಾತ್ರಿಯಿಂದ ಬಹುತೇಕ ವಾಟ್ಸಾಪ್ ಗಳಲ್ಲಿ ಅದೊಂದು ಸಾರ್ವಜನಿಕ ಪ್ರಕಟಣೆಯ ನೋಟೀಸು ಹರಿದಾಡ್ತಿದೆ. ಮಾಜಿ ಶಾಸಕ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಲಿ ಅಧ್ಯಕ್ಷ ವಿ.ಎಸ್.ಪಾಟೀಲ್ ಲೆಟರ್ ಹೆಡ್ ನಲ್ಲೇ ಇಂತಹದ್ದೊಂದು ಪ್ರಕಟಣೆ ಹೊರಡಿಸಲಾಗಿದೆ. ತಮ್ಮ ಪುತ್ರನಿಗೆ ಯಾರೂ ನನ್ನ ಹೆಸರು ಹೇಳಿ ಬಂದ್ರೆ ಸಾಲ ಕೊಡಬೇಡಿ ಅಂತಾ ಉಲ್ಲೇಖಿಸಲಾಗಿರೋ ಪ್ರಕಟಣೆ...