ಅಗ್ನಿಶಾಮಕ ಸಿಬ್ಬಂದಿ ಗಣೇಶ್ ಗೌಡರ್ ಗೆ, ಶಿಗ್ಗಾವಿ ಬಿಜೆಪಿಯಿಂದ ಸನ್ಮಾನ..!

ಅಗ್ನಿಶಾಮಕ ಸಿಬ್ಬಂದಿ ಗಣೇಶ್ ಗೌಡರ್ ಗೆ, ಶಿಗ್ಗಾವಿ ಬಿಜೆಪಿಯಿಂದ ಸನ್ಮಾನ..!

ಶಿಗ್ಗಾವಿ : ಪಟ್ಟಣದ ಶಾಸಕರ ಕಚೇರಿಯಲ್ಲಿ ಶಿಗ್ಗಾವಿಯ ಅಗ್ನಿಶಾಮಕ ಠಾಣೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗಣೇಶ್ ಎಂ ಗೌಡರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಪ್ರಯುಕ್ತ ಅವರನ್ನು ಭಾಜಪ ತಾಲೂಕಾದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಸನ್ಮಾನಿಸಿ, ಮಾತನಾಡಿದ ಶಿವಾನಂದ ಮ್ಯಾಗೇರಿ, ಅಗ್ನಿಶಾಮಕ ಮತ್ತು ತುರ್ತಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ನಾಗರೀಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಅವರ ಉತ್ತಮ ಕಾರ್ಯದ ನಿರ್ವಹಣೆಯನ್ನು ಪುರಸ್ಕರಿಸಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ ಅವರ ಸೇವೆ ತಾಲೂಕಿಗೆ ಮಾದರಿಯಾಗಿದೆ ಅದು ನಮ್ಮ ತಾಲೂಕಿನ ಹೆಮ್ಮೆ ಎಂದರು. ಈ ಸಂದರ್ಭದಲ್ಲಿ ಮುಖಂಡರುಗಳಾದ ಮಂಜುನಾಥ ಬ್ಯಾಹಟ್ಟಿ, ನರಹರಿ ಕಟ್ಟಿ, ರಮೇಶ ವನಹಳ್ಳಿ, ರೇಣುಕನಗೌಡ ಪಾಟೀಲ, ಶಿವರಾಜ ರಾಯಣ್ಣವರ, ಕಾಶೀನಾಥ ಕಳ್ಳಿಮನಿ, ವಿನಯ ಮುಂಡಗೋಡ, ಸಂತೋಷ ದೊಡ್ಡಮನಿ, ಮಲ್ಲಿಕಾರ್ಜುನ ಹಡಪದ ಸೇರಿದಂತೆ ಭಾಜಪದ ಕಾರ್ಯಕರ್ತರು ಇದ್ದರು.

“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ‌. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ ಖರೀಧಿಯ ನಾಟಕದಿಂದ ಹಿಡಿದು ಲಾಂಗು, ಮಚ್ಚು, ಆ್ಯಸಿಡ್ಡು ಅದು, ಇದು ಅಂತೇಲ್ಲ, ಖುದ್ದು ಖಾಕಿಗಳೇ ಕಂಗಾಲಾಗುವಂತ ಸಿನೀಮಿಯ ಕತೆ ಹೆಣೆಯಲಾಗಿತ್ತು. ಆದ್ರೆ ಆ ಘಟನೆಯ ಒಳನೋಟಗಳೇ ಬೇರೆಯದ್ದಿದೆ. ಒಳಸುಳಿಗಳೇ ವಿಚಿತ್ರ ಮತ್ತು ಆಘಾತಕಾರಿಯಾಗಿವೆ. ಹಾಗಂತ ಅಲ್ಲಿನ ಮಂದಿ ಮಾತಾಡಿಕೊಳ್ತಿದಾರೆ‌. ನಿಜ, ಆ ಘಟನೆ ಪೊಲೀಸರಿಗಷ್ಟೇ ಅಲ್ಲ ಸಾರ್ವಜನಿಕರಿಗೂ ಸಾಕಷ್ಟು ಪ್ರಶ್ನೆಗಳು ಏಳುವಂತೆ ಮಾಡಿದೆ‌. ಹೀಗಾಗಿ, ಆ ಎಲ್ಲ ಪ್ರಶ್ನೆಗಳ ಬಗ್ಗೆ ಇಲ್ಲಿ ಒಂದಿಷ್ಟು...

ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!

ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!

ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್‌ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ನರ್ಸಿಂಗ್‌, ಪ್ಯಾರಾ ಮೆಡಿಕಲ್‌ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಸಿಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹಲವು ಷರತ್ತುಗಳನ್ನು ವಿಧಿಸಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಕೊರೋನಾ ಮಾರ್ಗಸೂಚಿಗಳನ್ನು ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಅಲ್ಲದೇ ಕಾಲೇಜುಗಳಲ್ಲಿ ಆಫ್‌ಲೈನ್‌ ತರಗತಿಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಕಡ್ಡಾಯವಾಗಿ ಒಂದು ಡೋಸ್‌ ಕೊರೋನಾ ಲಸಿಕೆಯನ್ನು ಪಡೆದಿರಬೇಕು. ಕಾಲೇಜುಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾದ್ರೆ ಅಂತಹ ಸಂದರ್ಭದಲ್ಲಿ ಕಾಲೇಜುಗಳ ವಿರುದ್ದ ಕೊರೋನಾ ಸೋಂಕಿನ...

ಪೋಷಕರೇ ಗಮನಿಸಿ..! ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಆ ಬಾಲಕನ ಸ್ಥಿತಿ ಹೇಗಾಗಿದೆ ನೋಡಿ..!

ಪೋಷಕರೇ ಗಮನಿಸಿ..! ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಆ ಬಾಲಕನ ಸ್ಥಿತಿ ಹೇಗಾಗಿದೆ ನೋಡಿ..!

ಹಾವೇರಿ: ಕೊರೋನಾ ಹಿನ್ನೆಲೆಯಲ್ಲಿ ಸದ್ಯ ವಿದ್ಯಾರ್ಥಿಗಳಿಗೆ ಎಲ್ಲೆಡೆಯೂ ಆನ್ ಲೈನ್ ಕ್ಲಾಸ್ ಗಳು ಚಾಲ್ತಿಯಲ್ಲಿವೆ. ಹೀಗಾಗಿ, ಪೋಷಕರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ರೆ ಹಾಗೆ ಮೊಬೈಲ್ ಕೊಡುವ ಮುನ್ನ ಎಚ್ಚರಿಕೆ ವಹಿಸೋದು ತುಂಬಾ ಮುಖ್ಯ, ಯಾಕಂದ್ರೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಇಂದು ನಡೆದಿರೋ ಈ ಘಟನೆ ನಿಜಕ್ಕೂ ಭಯಾನಕ. ಏನದು ಘಟನೆ..? ಕೊರೋನಾ ಕಾಟದಿಂದ ಶಾಲೆಗಳು ತೆರೆಯದೇ ಇರೋ ಕಾರಣ ಆ ಬಾಲಕ ಮನೆಯಲ್ಲಿ ಹಾಯಾಗಿ ಎಲ್ಲಾ ಮಕ್ಕಳೊಂದಿಗೆ ಖುಷಿಯಾಗಿದ್ದ. ರಸ್ತೆಯಲ್ಲಿ ಯಾವುದೊ ಹಳೆಯ ವಸ್ತು ಸಿಕ್ಕಿತು ಅಂತಾ ಅದರೊಂದಿಗೆ ಬಾಲಕ ಆಟವಾಡ್ತಿದ್ದ ಅಷ್ಟೇ, ಕಣ್ಬಿಡುವಷ್ಟರಲ್ಲಿ ಕೈಯಲ್ಲಿದ್ದ ಹಳೆಯ ಮೊಬೈಲ್ ಬ್ಯಾಟರಿ ಸಿಡಿದು ಆ ಬಾಲಕ ಇದೀಗ ಆಸ್ಪತ್ರೆಯಲ್ಲಿ ನರಳುವಂತೆ ಮಾಡಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಅಂದಹಾಗೆ, ಆ ಬಾಲಕನ ಹೆಸರು ಕಾರ್ತಿಕ್ ಕಲಾದಗಿ ಅಂತಾ. ಈತನ ಈ ಸ್ಥಿತಿಗೆ ದಾರಿಯಲ್ಲಿ ಯಾರೊ ಬಿಸಾಡಿದ್ದ ಮೊಬೈಲ್...

ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..?  ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ ಅಂತಹದ್ದೊಂದು ಚಾರ್ಮು ಇವತ್ತಿಗೂ ಉಳಿಸಿಕೊಂಡು ಬಂದಿರೋ ಆ ಮುಖಂಡ ಈಗ ಮಮ್ಮಲ ಮರುಗುತ್ತಿದ್ದಾರೆ. ಯಾಕಂದ್ರೆ, ಕಾಂಗ್ರೆಸ್ ಪಡಸಾಲೆಯಲ್ಲಿ ತಾಲೂಕಿನ ಮಟ್ಟಿಗೆ ಪ್ರಶ್ನಾತೀತ ನಾಯಕ ಅಂತಾ ಕರೆಸಿಕೊಂಡು ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡು, ಉಳಿಸಿಕೊಂಡು ಬಂದಿದ್ದ ಎಲ್.ಟಿ.ಪಾಟೀಲ್ ಈಗ ಅದ್ಯಾಕೋ ಏನೋ ಬಿಜೆಪಿ ಅಂಗಳದಲ್ಲಿ ಸಿಕ್ಕು ನಲುಗುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಅದೊಂದು ಕಾಲವಿತ್ತು..! ನಿಜ, ಮುಂಡಗೋಡ ತಾಲೂಕಿನ ರಾಜಕೀಯ ಪಡಸಾಲೆಯಲ್ಲಿ ಪಾಟೀಲರದ್ದೇ...

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!

ಮುಂಡಗೋಡ: ಜು,19 ರಿಂದ ನಡೆಯಲಿರುವ SSLC ಪರೀಕ್ಷೆಗೆ ಹಾಜರಾಗೋ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಎರಡು ಪದರುಗಳಿರುವ ಮಾಸ್ಕ್ ಗಳನ್ನು ಸರಕಾರಿ ನೌಕರರ ಸಂಘ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಯಿತು. ಕೊವೀಡ-19 ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ‌. ಹೀಗಾಗಿ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಹಾಗೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೂ ಪ್ರಯೋಜನವಾಗಲಿ ಅಂತಾ, ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನಲ್ಲಿ ಈ ಬಾರಿ ಸುಮಾರು 1440 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ನೌಕರರ ಸಂಘದ ಅಧ್ಯಕ್ಷ ದಯಾನಂದ ನಾಯ್ಕ, ಕಾರ್ಯದರ್ಶಿ ಗಣೇಶ, ಖಜಾಂಚಿ ವೀಣಾ ರಾಠೋಡ, ಉಪಾಧ್ಯಕ್ಷ ವಸಂತ್ ರಾಠೋಡ,ಸುರೇಶ್ ಪುಜಾರ, ಸುಬಾಷ್ ಡೊರಿ, ಹನಮಂತ ತಳವಾರ, ನಾಗರಾಜ ನಾಯ್ಕ, ಅಶೋಕ ಗುಡಿಸಾಗರ, ಖಜಾನೆ ಅಧಿಕಾರಿ ರಝಿಯಾ ಬೇಗ, ಗದಿಗೆಪ್ಪ, ಪ್ರಶಾಂತ ಸಾವಳಗಿ ಸೇರಿ ಮುಂತಾದವರು ಭಾಗಿಯಾಗಿದ್ದರು.

ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆ, ವರ್ತಿಕಾ ಕಟಿಯಾರ್ ನೂತನ ಎಸ್ಪಿ..!

ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆ, ವರ್ತಿಕಾ ಕಟಿಯಾರ್ ನೂತನ ಎಸ್ಪಿ..!

ಬೆಂಗಳೂರು : ರಾಜ್ಯ ಸರ್ಕಾರದಿಂದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವ ಪ್ರಕಾಶ್ ದೇವರಾಜು ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಇನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ದಿವ್ಯಾ ಶರಾ ಥಾಮಸ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಸಂಗೀತಾ ಜಿ ಅವರನ್ನು ನೇಮಿಸಿದೆ. ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಅನುಪಮ್ ಅಗರ್ವಾಲ್ ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೆಚ್ ಡಿ ಆನಂದ್ ಕುಮಾರ್ ಅವರನ್ನು ನೇಮಕ ಮಾಡಿದೆ.

ಕೇಳಿದ್ದು 48 ಗಂಟೆ ಟೈಮ್, ಆದ್ರೆ ಮನೆಬಾಗಿಲಿಗೇ ಬಂದಿದ್ದು 16 ಗಂಟೆಯಲ್ಲೇ..! ಇದು ಹೆಬ್ಬಾರ್ ಸ್ಟೈಲ್..!!

ಕೇಳಿದ್ದು 48 ಗಂಟೆ ಟೈಮ್, ಆದ್ರೆ ಮನೆಬಾಗಿಲಿಗೇ ಬಂದಿದ್ದು 16 ಗಂಟೆಯಲ್ಲೇ..! ಇದು ಹೆಬ್ಬಾರ್ ಸ್ಟೈಲ್..!!

ಶಿರಸಿ : ಸಚಿವ ಶಿವರಾಮ್ ಹೆಬ್ಬಾರ್ ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ‌. ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಘಟನೆ ನಡೆದು ಕೇವಲ 16 ಗಂಟೆಯೊಳಗೆ ನೊಂದ ಕುಟುಂಬಕ್ಕೆ ಪರಿಹಾರದ ಮೊತ್ತ ತಲುಪಿಸಿದ್ದಾರೆ. 48 ಅಲ್ಲ 16 ಗಂಟೆ..! ಅಂದಹಾಗೆ, ನಿನ್ನೆ ಮಂಗಳವಾರ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಯಶೋದಾ ಬಂಗಾರಿ ಗೌಡ ಮೃತಪಟ್ಟಿದ್ರು. ಅದ್ಯಾವುದೋ ಬೇರೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದ ಸಚಿವ ಶಿವರಾಮ್ ಹೆಬ್ಬಾರ್ ಕಾರ್ಯಕ್ರಮ ಮೊಟಕುಗೊಳಿಸಿ ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ರು, ಸಾಂತ್ವನ ಹೇಳಿದ್ರು. ಮುಂದಿನ 48 ಗಂಟೆಯೊಳಗೆ ಪರಿಹಾರದ ಹಣ ಕೈಗಿಡುತ್ತೇನೆ ಅಂತಾ ಮಾತು ಕೊಟ್ಟಿದ್ರು.. ಆ ಮಾತಿನಂತೆ ಇಂದು ಖುದ್ದಾಗಿ ತೆರಳಿ ನೊಂದ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದಾರೆ. ಇದೇ ಅಲ್ವಾ ಭರವಸೆ..? ನಿಜ, ಯಲ್ಲಾಪುರ ಕ್ಷೇತ್ರದಲ್ಲಿ ಇದೊಂದೇ ಪ್ರಕರಣವಲ್ಲ, ಬದಲಾಗಿ ಕ್ಷೇತ್ರದಲ್ಲಿ ಕಳೆದ ಬಾರಿ...

ಜುಲೈ 17 ರವರೆಗೆ ಭಾರೀ ಮಳೆ ಮುನ್ಸೂಚನೆ..! ಕರಾವಳಿಯಲ್ಲಿ ಆರೆಂಜ್ ಅಲರ್ಟ್..!!

ಜುಲೈ 17 ರವರೆಗೆ ಭಾರೀ ಮಳೆ ಮುನ್ಸೂಚನೆ..! ಕರಾವಳಿಯಲ್ಲಿ ಆರೆಂಜ್ ಅಲರ್ಟ್..!!

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 15 ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆದ್ರೆ ಜುಲೈ ತಿಂಗಳಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮಳೆ ಯ ಆರ್ಭಟ ಇನ್ನಷ್ಟು ದಿನಗಳ ವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಹಾಗೂ...

ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯ ಬಡ ಕುಟುಂಬದ ಕಣ್ಣೀರು ಒರೆಸಿದ ಸಚಿವ..! ಮಾನವೀಯತೆ ಅಂದ್ರೆ ಇದೇ ಅಲ್ವಾ..?

ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯ ಬಡ ಕುಟುಂಬದ ಕಣ್ಣೀರು ಒರೆಸಿದ ಸಚಿವ..! ಮಾನವೀಯತೆ ಅಂದ್ರೆ ಇದೇ ಅಲ್ವಾ..?

ಶಿರಸಿ: ಮನೆ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮ ವಿಶೇಷ ಚೇತನ ಮಹಿಳೆಯೊರ್ವಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ‌ ಗುಡ್ನಾಪುರದ ಮುಂಡಗೆಹಳ್ಳಿಯಲ್ಲಿ ನಡೆದಿದೆ. ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಗೆಹಳ್ಳಿಯ 45 ವರ್ಷ ವಯಸ್ಸಿನ ಯಶೋಧಾ ಬಂಗಾರಿ ಗೌಡ ಮೃತಪಟ್ಟ ವಿಶೇಷ ಚೇತನ ಮಹಿಳೆ. ಈಕೆ ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಳೆಯದಾಗಿದ್ದ ಗೋಡೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾವಿಸಿ ಬಂದ್ರು ಸಚಿವ್ರು..! ಮದಹಾಗೆ, ಬನವಾಸಿ ಭಾಗದಲ್ಲಿ ಇಂದು ಕಾರ್ಯಕ್ರಮದ ನಿಮಿತ್ತ ಹಾಜರಿದ್ದ ಸಚಿವ ಶಿವರಾಮ್ ಹೆಬ್ಬಾರ್, ಮಹಿಳೆ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಬಂದ್ರು. ಅಕ್ಷರಶಃ ಕಣ್ಣೀರಲ್ಲಿ ಮುಳುಗಿ ಹೋಗಿದ್ದ ಮೃತ ಮಹಿಳೆಯ ಕುಟುಂಬಕ್ಕೆ ಸಾಂತ್ವನದ ಮಾತು ಹೇಳಿದ್ರು. ಕುಟುಂಬದ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ್ರು, ನಾನು ನಿಮ್ಮ ಜೊತೆಲಿದ್ದಿನಿ ಭಯ ಪಡಬೇಡಿ ಅಂತಾ ದೈರ್ಯ ತುಂಬಿದ್ರು. ಜಸ್ಟ್ 48 ಗಂಟೆ...

error: Content is protected !!