ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Tag: uttara kannada news
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!
ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿಮಾಡುತ್ತಿದ್ದಾರೆ.
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ...
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ...
ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!
ಮುಂಡಗೋಡ: ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ವಿಚಾರ ಕೊನೆಗೂ ಬಗೆ ಹರಿದಂತಾಗಿದೆ. ಕೊಟ್ಟ ಮಾತಿನಂತೆ ಇಂದು ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ನೀಡಿದ್ದಾರೆ. ಅದ್ರಂತೆ ಉಪಾಧ್ಯಕ್ಷ ಸಿಖಂದರ್ ಬಂಕಾಪುರ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷದ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಸಾಕಷ್ಟು ಬಾರಿ ಸಭೆಗಳು ನಡೆದಿದ್ದವು. ಒಪ್ಪಂದದಂತೆ...