ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Tag: Police news
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...
ನಂದಿಕಟ್ಟಾ ಗ್ರಾಮದಲ್ಲಿ ಬಾಲಕನಿಗೆ ಕಚ್ಚಿದ ಉರಿಮಂಡಲ ಹಾವು, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 16 ವರ್ಷದ ಬಾಲಕನಿಗೆ ಉರಿಮಂಡಲ ಹಾವು ಕಚ್ಚಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಕಟ್ಟಾ ಗ್ರಾಮದಲ್ಲಿ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಕಟ್ಟಿಗೆ ಮೇಲೆ ಕಾಲಿಟ್ಟ ಬಾಲಕ ನಂದನ್ ರವಿ ತೇರಗಾಂವ್(16) ಎಂಬುವವನಿಗೆ ಕಟ್ಟಿಗೆಯಡಿ ಇದ್ದ ಹಾವು ಕಾಲಿಗೆ ಕಚ್ಚಿದೆ. ತಕ್ಷಣವೇ ಬಾಲಕನನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಂದ ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಅಂತಾ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ....
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ. ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....
ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.