ಕಾರವಾರ: ಸಮುದ್ರದಲ್ಲಿ ಈಜಲು ಹೋದ ಇಬ್ಬರು ನೀರುಪಾಲಾಗಿ, ಮತ್ತಿಬ್ಬರನ್ನು ಸ್ಥಳೀಯರೇ ರಕ್ಷಣೆ ಮಾಡಿದ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಣಿ ಹಾಗೂ ಬೇಕರಿ ಮಂಜುನಾಥ್ ಸಾವು ಕಂಡವರು. ನಾಗರಾಜ ಹಾಗೂ ಪ್ರವೀಣ್ ರಕ್ಷಣೆಗೊಳಗಾದವರು. ಇನ್ನು ಸಮುದ್ರ ಪಾಲಾಗಿದ್ದ ಮಣಿ ಶವ ಪತ್ತೆಯಾಗಿದೆ. ಆದ್ರೆ, ಮಂಜುನಾಥ್ ಶವ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ, ಶವಕ್ಕಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗಿದೆ. ನಾಲ್ಕು ಜನ ಸ್ನೇಹಿತರು ಸೇರಿ ಶಿವಮೊಗ್ಗ ದಿಂದ ಮುರಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ರು.. ನಾಲ್ಕೂ ಜನ ಸಮುದ್ರದಲ್ಲಿ ಈಜುವಾಗ ಅಲೆಗೆ ಕೊಚ್ಚಿ ಹೋಗಿ ದುರಂತ ಸಂಭವಿಸಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.
Top Stories
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಆ ನೀಚ ಪತಿ ಕುಡಿದ ಮತ್ತಿನಲ್ಲಿ, ತನ್ನ ಪತ್ನಿಯ ಮೂಗನ್ನೇ ಕಚ್ಚಿ ತಿಂದುಬಿಟ್ಟ..!
ಆತ ಕುಡಿದ ಮತ್ತಿನಲ್ಲಿದ್ದ ಪತಿ, ಪತ್ನಿ ಮನೆಯಲ್ಲಿ ಬಂದು ಉಳಿದಿದ್ದ ಆತನದು ನಿತ್ಯದ ಕಾಯಕ ಕುಡಿತ ಮತ್ತು ಜಗಳ. ನಿತ್ಯ ಕುಡಿದು ಬಂದು ಬೈಯುತ್ತಲೇ ಇದ್ದರೂ ಸಹ ಪತ್ನಿ ಹೇಗೋ ಹೊಂದಿಕೊಂಡು ಹೊರಟ್ಟಿದ್ದಳು. ಇಂದಲ್ಲ ನಾಳೆ ನನ್ನ ಪತಿ ಸುಧಾರಿಸಿಯಾನೂ ಅಂತಾನೆ ಅವಳು ತಿಳಿದಿದ್ದಳು. ಆದ್ರೆ ಪತ್ನಿಯನ್ನ ಚೆನ್ನಾಗಿ ನೋಡಕೊಳ್ಳಬೇಕಾದ ದುರುಳ ಪತಿ ಮಾಡಿದ್ದು ಮಾತ್ರ ವಿಚಿತ್ರ ಕಾರ್ಯ..ಕುಡಿತದ ಮತ್ತಿನಲ್ಲೇ ತೇಲುತ್ತಿದ್ದ ಪತಿ ಮಾತ್ರ ಹೆಂಡತಿಯ ಮೂಗನ್ನೇ ಕಚ್ಚಿಬಿಟ್ಟಿದ್ದಾನೆ. ಹೌದು, ಹೀಗೆ ಸಂಪೂರ್ಣವಾಗಿ ರಕ್ತಸಿಕ್ತವಾಗಿರು ಮೂಗು..ಮೂಗಿನಿಂದ ನಿರಂತರವಾಗಿ ಸುರಿಯುತ್ತಿರುವ ರಕ್ತವನ್ನು ತಡೆಯುತ್ತ ನೋವಿನಿಂದ ನರಳುತ್ತಿರುವ ಈ ಮಹಿಳೆಯ ಹೆಸರು ಗೀತಾ ಅಂತ. ಈಕೆಯೇ ಈಗ ತನ್ನ ಪತಿಯಿಂದಲೇ ಮೂಗು ಕಚ್ಚಿಸಿಕೊಂಡ ಪತ್ನಿ. ಈಕೆಯ ಪತಿ ಉಮೇಶ ಗಂಡಗುದರಿ ಎಂಬಾತನೇ ಮೂಗು ಕಚ್ಚಿದ ಪತಿ. ಈ ಘಟನೆ ನಡೆದಿರೋದು ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ. ನಿನ್ನೆ ರಾತ್ರಿ ಗೀತಾಳೊಂದಿಗೆ ಮೊದಲಿಗೆ ಉಮೇಶ ಸಣ್ಣದಾಗಿ ಜಗಳ ತೆಗೆದಿದ್ದಾನೆ. ನಿತ್ಯ ಕುಡಿದು ಬಂದು ಇದೇ ರೀತಿ...
ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!
ಮುಂಡಗೋಡ: ತಾಲೂಕಿನ ಗುಂಜಾವತಿ ಸೇರಿದಂತೆ ಸುತ್ತ ಮುತ್ತಲ ಭಾಗಗಳಲ್ಲಿ ಕಾಡಾನೆ ಹಾವಳಿ ಶುರುವಾಗಿದೆ. ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ಈ ಭಾಗದ ರೈತರ ನಿದ್ದೆಗೆಡಿಸಿವೆ. ಗುಂಜಾವತಿ ಭಾಗದ ರೈತರ ಕಬ್ಬಿನ ಗದ್ದೆ ಹಾಗೂ ಅಡಿಕೆ ತೋಟಕ್ಕೆ ನುಗ್ಗಿರೋ ಕಾಡಾನೆಗಳು ಗಬ್ಬಿನ ಬೆಳೆಯನ್ನು ತಿಂದು ಹಾಕಿ, ಹಾನಿ ಮಾಡಿವೆ. ಇಲ್ಲಿನ ಗುರುಬಸಯ್ಯ ಎಂಬುವವರ 5 ಎಕರೆ ಕಬ್ಬಿನ ಗದ್ದೆಯಲ್ಲಿ ಬೆಳೆ ತಿಂದು, ನಾಶಗೊಳಿಸಿವೆ. ಇಷ್ಟೇಲ್ಲ ಆದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕಿದೆ. ಅಂದಹಾಗೆ, ಪ್ರತಿವರ್ಷವೂ ಈ ಭಾಗದಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನುಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಆದ್ರೂ ಆನೆಗಳ ಹಿಂಡುಗಳನ್ನು ನಿಗ್ರಹಿಸುವಲ್ಲಿ ಅರಣ್ಯ ಇಲಾಖೆ ಮುಂಜಾಗ್ರತೆ ವಹಿಸಬೇಕಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಇದು ಈ ಭಾಗದ ಅನ್ನದಾತರ ಆಗ್ರಹ.
ಧಾರವಾಡ ಯೋಗಿಶಗೌಡ ಹತ್ಯೆ ಕೇಸ್ ಗೆ ಮೇಜರ್ ಟ್ವಿಸ್ಟ್..!
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯೇ ಈಗ ಖುದ್ದು ವಿನಯ ಕುಲಕರ್ಣಿ ವಿರುದ್ಧವೇ ಪರೋಕ್ಷ ಹೇಳಿಕೆ ನೀಡಿದ್ದು, ಇಷ್ಟು ದಿನ ಹೇಳದೇ ಇರೋ ಸತ್ಯಗಳನ್ನೆಲ್ಲ ಇನ್ನು ಮುಂದೆ ಹೇಳುವೆ ಅಂತಾ ಹೇಳಿದ್ದಾನೆ. ಮತ್ತೊಂದು ಕಡೆ ನಿನ್ನೆಯಷ್ಟೇ ಸಿಬಿಐ ಬಂಧಿಸಿದ್ದ ಸೋಮು ನ್ಯಾಮಗೌಡನಿಗೆ ಇವತ್ತು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಕೊಲೆ ಕೇಸ್ನ ಪೊಲೀಸ್ ತನಿಖೆಯಲ್ಲಿ ಮೊದಲ ಆರೋಪಿಯಾಗಿದ್ದ ಬಸವರಾಜ ಮುತ್ತಗಿ ಹಾಗೂ ಮುತ್ತಗಿಯ ಐವರು ಸ್ನೇಹಿತರು, ಇಷ್ಟು ದಿನ ಸಿಬಿಐ ವಿಚಾರಣೆ ಎದುರಿಸುತ್ತಲೇ ಬಂದಿದ್ದರು. ಈಗ ಏಕಾಏಕಿಯಾಗಿ ರಾಜಕೀಯಕ್ಕೆ ಯೋಗೀಶಗೌಡ ಹತ್ಯೆಯಾಗಿದೆ ಎನ್ನುವುದು ಸಿಬಿಐ ತನಿಖೆಯಿಂದ ಎಲ್ಲರಿಗೂ ಬಯಲಾಗಿದೆ. ಹೀಗಾಗಿ ನಾವು ಹಾಗೂ ನಮ್ಮ ಜೊತೆ ಇರುವವರೆಲ್ಲ ಬಡ ಹುಡುಗರು, ಅವರನ್ನು ಬಲಿ ಪಶು ಮಾಡಲು, ಬಳಸಿಕೊಂಡಿದ್ದಾರೆ ಎಂದು...
ಪಿಡಿಓ ಮತ್ತು ಗುತ್ತಿಗೆದಾರ ಬಡಿದಾಡಿಕೊಂಡ ದೃಷ್ಯ ಹೇಗಿದೆ ಗೊತ್ತಾ..?
ಶಿಗ್ಗಾವಿ: ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗುತ್ತಿಗೆದಾರನ ನಡುವೆ ಕೈ-ಕೈ ಮಿಲಾಯಿಸಿದ ಘಟನೆ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಓ ಅಶೋಕ್ ಗೋಂದಿ ಅವರನ್ನು ಪಂಚಾಯಿತಿಯ ಗುತ್ತಿಗೆ ಕೆಲಸದ ವಿಷಯವಾಗಿ ಗುತ್ತಿಗೆದಾರ ಮಂಜುನಾಥ ಕಂಕನವಾಡಿ ಅವರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿ, ಬಾಯಿಗೆ ಬಂದಹಾಗೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ. ಘಟನೆ ನಡೆದು ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿ ರಾಜಿ ಸಂಧಾನ ಮಾಡಿಕೊಂಡ ನಂತರ ಬಹಿರಂಗವಾಗಿದೆ. ಪಂಚಾಯತಿಯ ಎನ್.ಆರ್.ಇ.ಜಿ ಕೆಲಸಗಳಿಗಾಗಿ ಗುತ್ತಿಗೆ ಪಡೆದ ಮಂಜುನಾಥ್ ಕೆಲಸದ ವಿಷಯವಾಗಿ ಕೇಳಿದ್ದಾನೆ ಆಗ ಪಿಡಿಓ ಅಶೋಕ್ ಗೋಂದಿ ಮಳೆಗಾಲವಿದೆ ಕೆಲಸ ಮಾಡಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿ ಇನ್ನೊಬ್ಬ ಗುತ್ತಿಗೆದಾರನಿಗೆ ಗುತ್ತಿಗೆ ಕೆಲಸ ಮಾಡಲು ಹೇಳಿ ನನಗೆ ಏಕೆ ಬೇಡ ಎನ್ನುತ್ತೀರಿ ? ಎಂದು ಪ್ರಶ್ನಿಸಿದಾಗ ಈ ರೀತಿಯ ಮಾತಿನ ಚಕಮಕಿ ನಡೆದಿದೆ...
ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!
ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ ಇಲ್ಲಿ ಬಿಜೆಪಿ ಪ್ರಭಾವ ತುಸು ಜಾಸ್ತಿನೇ ಇದೆ. ಆದ್ರೆ ಸ್ಥಳೀಯ ಮಟ್ಟದ ಆಂತರಿಕ ಬೇಗುದಿ ಅನ್ನೋದು, ಬಹುಶಃ ಇಲ್ಲಿನ ಬಿಜೆಪಿಗೆ ಒಂದಿಷ್ಟು ಹಿನ್ನಡೆ ತಂದಿದೆ. ಇದು ಇತ್ತಿಚೆಗಷ್ಟೇ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಗಜ್ಜಾಹೀರಾಗಿದೆ. ಎಡಗೈಯನ್ನ ಬಲಗೈ, ಬಲಗೈಯನ್ನ ಎಡಗೈ ನಂಬದ ಸ್ಥಿತಿಯಲ್ಲಿ ಬಿಜೆಪಿ ಪರದಾಡಿದೆ ಈ ಕಾರಣಕ್ಕಾಗೇ, ಅನಾಯಾಸವಾಗಿ ದಕ್ಕಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಇಲ್ಲಿನ ಬಿಜೆಪಿಗರಿಗೆ ಕೈತಪ್ಪಿ ಹೋಗಿದೆ. ತಾಪಂ...
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ ಇಬ್ಬರು ಆಕಾಂಕ್ಷಿಗಳ ನಡುವೆ ಮಾತ್ರ ಕೊಂಚ ಜಾಸ್ತಿ ಪೈಪೋಟಿ ಏರ್ಪಟ್ಟಿದ್ದು, ಆ ಇಬ್ಬರಲ್ಲಿ, ಒಬ್ಬರಿಗೆ ಟಿಕೆಟ್ ಪಕ್ಕಾ ಅನ್ನಲಾಗ್ತಿದೆ. ಕಲ್ಲನಗೌಡ್ರು ಕಣಕ್ಕಿಳಿತಾರಾ..? ನಂದಿಕಟ್ಟಾ ಗ್ರಾಮ ಪಂಚಾಯತಿಗೆ ಎರಡೆರಡು ಬಾರಿ ನಿಂತು ಜಯಭೇರಿ ಬಾರಿಸಿದ್ದ ಕಲ್ಲನಗೌಡ ಬಸನಗೌಡ್ರು ಅದ್ಯಾಕೋ ಏನೋ ಈ ಬಾರಿ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಮಕಾಡೆ ಮಲಗಿದ್ರು. ಯಾಕೋ ಗೊತ್ತಿಲ್ಲ, ನಂದಿಕಟ್ಟಾ ಗ್ರಾಮದಲ್ಲಿ ಅವ್ರ ವಾರ್ಡಿನ ಜನ ಅವರನ್ನ ಬೆಂಬಲಿಸಲೇ...
ಸದಾನಂದಗೌಡ ಸಿಎಂ ಪಟ್ಟಕ್ಕೇರೋದು ಪಕ್ಕಾನಾ..? ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು..?
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ ಎನ್ನಲಾಗ್ತಿದೆ. ಯಡಿಯೂರಪ್ಪ ಹುದ್ದೆಯಿಂದ ಕೆಳಗಿಳಿದ್ರೆ ಸಿಎಂ ಯಾರು ಅನ್ನೋ ಪ್ರಶ್ನೆಗೆ ಹೈಕಮಾಂಡ್ ಪರೋಕ್ಷವಾಗಿ ಉತ್ತರ ನೀಡಿದ್ದು, ಸಂಸದ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ ಅನ್ನುವಂತಾಗಿದೆ. ಬಿಜೆಪಿ ಒಡೆದ ಮನೆ..! ನಾಯಕತ್ವದ ವಿಚಾರದಲ್ಲಿಯೇ ಬಿಜೆಪಿ ಸದ್ಯ ಒಡೆದ ಮನೆ. ಸಿಎಂ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ವಿರೋಧಿ ಪಾಳಯ ಶತಾಯಗತಾಯ ಪ್ರಯತ್ನ ನಡೆಸ್ತಿದೆ. ಈ ನಡುವಲ್ಲೇ ಯಡಿಯೂರಪ್ಪ ಅವರನ್ನು ಗೌರವಯುತವಾಗಿ ಬೀಳ್ಕೊಡಲು ಹೈಕಮಾಂಡ್ ಮುಂದಾಗಿದೆ. ರಾಜ್ಯದಲ್ಲಿ ಸಿಎಂ ಹುದ್ದೆಗೆ ಒಂದಿಷ್ಟು ಮಂದಿಯ ಹೆಸರು ಕೇಳಿಬರುತ್ತಿದೆ. ಆದ್ರೆ ಆ ಹೆಸರುಗಳ ಕುರಿತು ಪಕ್ಷದಲ್ಲಿಯೇ ವಿರೋಧವಿದೆ. ಬಣದ ಶಾಸಕರನ್ನು ಸಿಎಂ ಹುದ್ದೆಯಲ್ಲಿ ಕೂರಿಸಿದ್ರೆ ಸರಕಾರಕ್ಕೆ ಡ್ಯಾಮೇಜ್ ಆಗೋದು ಖಚಿತ. ಇನ್ನೊಂದೆಡೆ ಪಕ್ಷದ ಬಂಡಾಯ ನಾಯಕರ ಜೊತೆಗೆ ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲೇ ಬೇಕಾದ ಸ್ಥಿತಿಯಲ್ಲಿದೆ ಬಿಜೆಪಿ. ಹೀಗಾಗಿ ಬಂಡಾಯದ ಜೊತೆಗೆ ಪಕ್ಷವನ್ನು ಮುನ್ನಡೆಸುವ ಸಮರ್ಥರನ್ನು...
ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ ಹಾಕಿ ಸನ್ಮಾನಿಸಿದ್ರು. ಕೆಲಹೊತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ಡಿಕೆಶಿ ಮುಂದೆ ಪ್ರಯಾಣ ಬೆಳೆಸಿದ್ರು.
ಬೆಲೆ ಏರಿಕೆ ವಿರುದ್ಧ ಕಲಘಟಗಿಯಲ್ಲಿ ಸಂತೋಷ್ ಲಾಡ್ ನೇತೃತ್ವದಲ್ಲಿ ಬೃಹತ್ ಸೈಕಲ್ ಜಾಥಾ..!
ಕಲಘಟಗಿ: ಪೆಟ್ರೊಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಸೈಕಲ್ ಜಾಥಾವನ್ನ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಮಾಡಲಾಯಿತು. ಸೈಕಲ್ ಜಾಥಾ ಜೊತೆಗೆ ಸಂತೋಷ್ ಲಾಡ್ ಒಂಟೆ, ಕುದುರೆ ಹಾಗೂ ಎತ್ತಿನ ಬಂಡಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದು ರಾಜ್ಯದಲ್ಲೇ ವಿನೂತನವಾಗಿತ್ತು. ಅಲ್ಲದೇ ಎತ್ತಿನ ಬಂಡೆಯ ಮೇಲೆ ಬೈಕ್ ಇಟ್ಟು ಆಕ್ರೋಶವನ್ನ ಲಾಡ್ ವ್ಯಕ್ತ ಪಡಿಸಿದರು, ಇನ್ನು ಬಡವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಅಂತಾ, ಕೇಂದ್ರ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ದಾಸ್ತಿಕೊಪ್ಪ ಪೆಟ್ರೊಲ್ ಬಂಕ್ ನಿಂದ ತಹಶೀಲ್ದಾರ್ ಕಚೇರಿವರೆಗೆ ನಡೆದ ಜಾಥಾದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ರು. ಎತ್ತಿನ ಬಂಡಿಯ ಮೇಲೆ ಬೈಕ್ಗಳನ್ನಿಟ್ಟು ಜನರು ಆಕ್ರೋಶ ವ್ಯಕ್ತಪಡಿಸಿದರು.