ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%

ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್

ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್

  ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರಿಗೆ ಮೊದಲು ಜೀವರಕ್ಷಣೆ ಗ್ಯಾರಂಟಿ ನೀಡುವುದು ಅವಶ್ಯವಿದೆ. ನೇಹಾ ಹಿರೇಮಠ ಹತ್ಯೆ ಮಾಡಿದವನಿಗೆ ಕಠಿಣ ಶಿಕ್ಷೆ ನೀಡುವ ಬದಲಾಗಿ ಕಾಂಗ್ರೆಸ್ ಅಪರಾಧಿಗೆ ರಕ್ಷಣೆ ನೀಡಿದೆ. ಮಹಿಳೆಯರಿಗೆ ಜೀವ ರಕ್ಷಣೆ ಇಲ್ಲ. ಹಿಂದು ಮುಸ್ಲಿಮರ ನಡುವೆ ಭೇದ ಹುಟ್ಟಿಸಿ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಓಲೈಕೆ ರಾಜಕಾರಣದಿಂದ ಕಾಂಗ್ರೆಸ್ ಜನರನ್ನು ಮರಳು ಮಾಡುತ್ತಿದ್ದಾರೆ. ಮೋದಿಯವರು ಬಂದ ನಂತರ ದೇಶ...

ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!

ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!

 ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಇನ್ನು ಕಾಂಗ್ರೆಸ್ ಪಕ್ಷದ ಮುಖಂಡರನ್ನೇ ಗುರಿಯಾಗಿಸಿ IT ದಾಳಿ ನಡಿದಿದೆಯಾ ಅನ್ನೋ ಪ್ರಶ್ನೆ ಎದುರಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ

ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು  ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರ ಪರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರಚಾರ ನಡೆಸಲಿದ್ದಾರೆ. ಚುನಾವಣೆ ಉಸ್ತುವಾರಿ ಸಚಿವ ಕೆ. ಎ. ಜಾರ್ಜ್, ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ನಾವೇ ಗೆಲ್ತಿವಿ..! ಈ ಸಮಾರಂಭದಲ್ಲಿ ಇಪ್ಪತೈದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಓಡಾಡಿದ್ದೇನೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ....

ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು

ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು

 ಬನವಾಸಿ: ಪಕ್ಷ ಬದಲಾಯಿಸುವವರ ಬಗ್ಗೆ ಎಚ್ಚರವಹಿಸಬೇಕಿದೆ. ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ, ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲಕುಮಾರ ಟಾಂಗ್ ನೀಡಿದ್ರು. ಬುಧವಾರ ಬನವಾಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬಿಜೆಪಿಯು ಕಾರ್ಯಕರ್ತರ ಆಧಾರ ಪಕ್ಷವಾಗಿದ್ದು, ಬಿಜೆಪಿಯಿಂದ ಎಲ್ಲ ಅವಕಾಶ ಸಿಕ್ಕಿದೆ. ಲಾಭ ಪಡೆದುಕೊಂಡಿರುವುದು ಬಿಜೆಪಿಯಿಂದ. ಯಾಕೆ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು. ಈ ಚುನಾವಣೆ ಭಾರತ ಭವಿಷ್ಯ ಹಾಗೂ ಬದುಕಿನ ನಡುವಿನ ಚುನಾವಣೆಯಾಗಿದ್ದು, ನರೇಂದ್ರ ಮೋದಿ ಮೂರನೆಯ ಬಾರಿಗೆ ಪ್ರಧಾನಿಯಾಗಬೇಕಿರುವುದು ಅನಿವಾರ್ಯ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅವರ ಬಲ ನೀಡಲು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಜತೆ ಬಿಜೆಪಿ ಬೆಂಬಲಿಸಬೇಕು ಎಂದು ಹೇಳಿದರು. ಈ ವೇಳೆ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಸೇರಿದಂತೆ ಮತ್ತಿತರರು ಇದ್ದರು.

ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ

ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

 ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಗಿದೆ. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ‌ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ ಹಾಕಿ ಬಂದ್‌ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇನ್ನು ಹಂತಕ ಫಯಾಜ್‌‌ನಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಬಂದ್‌‌ಗೆ ಕರೆ ನೀಡಿದ್ದು, ಬಂದ್ ಹಿನ್ನೆಲೆಯಲ್ಲಿ ಮಾರುಕಟ್ಟೆಯ ಪ್ರದೇಶಗಳು ಬಿಕೋ ಎನ್ನುತ್ತಿವೆ.

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ‌ ಕಾಲೇಜ್ ನಲ್ಲಿ‌ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಸಂಬಂಧಿಗಳು ಆಗಮಿಸಿದ್ದರು. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆ ಮಾಡಲಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ್ದ ಕುಟುಂಬಸ್ಥರು‌. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ಎಸ್ಕೇಪ್ ಆದ ದುಷ್ಕರ್ಮಿಗಳು. ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಅಂತಾ ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ. ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸಲಾಗಿದೆ....

ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ,  ಯುವಕನ ಬಂಧನ..! ಪ್ರತಿಭಟನೆ

ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ

ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್‌ನ್‌ನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್‌ನನ್ನು ಬಂಧಿಸಿದ್ದಾರೆ.  ಪ್ರತಿಭಟನೆ..! ಇನ್ನು, ಘಟನೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಹು-ಧಾರವಾಡ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ...

error: Content is protected !!