ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
Top Stories
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
Tag: Publicfirstnewz
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
ಶಕ್ತಿ ಯೋಜನೆ ಎಫೆಕ್ಟ್; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ ಇದುವರೆಗೂ ಎಷ್ಟೇಲ್ಲ ಮಹಿಳೆಯರು ಪ್ರಯಾಣಿಸಿದ್ದಾರೆ ಗೊತ್ತಾ..?
ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆ ಎಲ್ಲಾ ಬಸ್ಗಳು ಫುಲ್ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!
ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...
ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಜಪ್ತಿ..!
ರಾಮನಗರ: ಜೋಯಿಡಾ ತಹಶೀಲ್ದಾರ್ ಹಾಗೂ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಮರಳು ವಶಪಡಿಸಿಕೊಂಡಿದ್ದಾರೆ. ಬರೋಬ್ಬರಿ 23 ಟಿಪ್ಪರ್ ನಷ್ಟು ಮರಳು ಜಪ್ತಿ ಪಡಿಸಿಕೊಂಡಿದ್ದು ಅಕ್ರಮಿಗಳ ಹೆಡೆಮುರಿ ಕಟ್ಟಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೈಜಗಾಂವ್, ಆಮ್ಸೆತ್, ಗೌಳಿವಾಡ ಮತ್ತು ಪಾಯಸವಾಡಿ ಗ್ರಾಮಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 23 ಟಿಪ್ಪರ್ ನಷ್ಟು, ಅಂದಾಜು 3 ಲಕ್ಷ 30 ಸಾವಿರ ರೂಪಾಯಿ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ. ಜೋಯಿಡಾ ತಹಶೀಲ್ದಾರ್ ಬಸವರಾಜ ತೆರನಹಳ್ಳಿ ಮಾರ್ಗದರ್ಶನದಲ್ಲಿ ರಾಮನಗರ...
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?
ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...