ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ 17 ವರ್ಷದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ.ಇಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ರೂಪಾ ಬಸವರಾಜ್ ಹಳಿಯಾಳ (17) ಎಂಬ ಯುವತಿಯೇ ನೇಣಿಗೆ ಶರಣಾಗಿದ್ದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.
Top Stories
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
Tag: mundgod news
ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!
ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ...
ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು...
ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!
ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...
ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ...
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ...
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.