ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Tag: uttara kannada news
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!
ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ...
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?
ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ ಪ್ರಧಾನಿ ಮೋದಿ..! ಅಷ್ಟಕ್ಕೂ...
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...