Home Publicfirstnewz

Tag: Publicfirstnewz

Post
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...

Post
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!

ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್‌ಬುಕ್‌ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್‌ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...

Post
ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!

ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!

ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...

Post
ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್  ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!

ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್ ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!

ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...

Post
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾ‌ನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...

Post
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...

Post
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...

Post
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...

Post
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

Post
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!

ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ‌. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!