Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!

ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!

ಧಾರವಾಡ: ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಧಾರವಾಡ ತಾಲೂಕಿನ ಗರಗದ ಪ್ರಸಿದ್ಧ ಮಠವಾಗಿರೋ ಮಡಿವಾಳೇಶ್ವರ ಮಠದಲ್ಲಿ ಕಳೆದ 55 ವರ್ಷಗಳಿಂದ ಶ್ರೀಗಳು ಮಠದಲ್ಲಿ‌ದ್ದರು. ಅನಾರೋಗ್ಯದ ಹಿನ್ನೆಲೆ ಇಂದು ನಿಧನರಾಗಿದ್ದಾರೆ. ಇನ್ನು, ಕಳೆದ ವಾರವಷ್ಟೇ ಗರಗದ ಮಡಿವಾಳೇಶ್ವರರ ಜಾತ್ರೆ ಅದ್ದೂರಿಯಾಗಿ ನಡೆದಿತ್ತು. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

Post
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!

“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!

  ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...

Post
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

 ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ‌. ಇದನ್ನೇಲ್ಲ ಅಲ್ಲೇ...

Post
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...

Post
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.

Post
ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

 ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...

Post
8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

ಹಳಿಯಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದ ಆರೋಪಿ ಚಾಲಾಕಿ ಚಾಲಕನೊಬ್ಬ ಬರೋಬ್ಬರಿ ಎಂಟು ವರ್ಷಗಳ ನಂತ್ರ ಅರೆಸ್ಟ್ ಆಗಿದ್ದಾನೆ. ಭರ್ಜರಿ ಕಾರ್ಯಾಚರಣೆ ನಡೆಸಿರೊ ಹಳಿಯಾಳ ಪೊಲೀಸರು ಆರೋಪಿಯನ್ನು ಬೆಳಗಾವಿಯ ಸವದತ್ತಿಯಲ್ಲಿ ಪತ್ತೆ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಹೀಗಾಗಿ, ಹಳಿಯಾಳ ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣವೊಂದು ಇದೀಗ ಬಯಲಾಗಿದೆ. ಪಂಚಪ್ಪ ಅಯ್ಯಪ್ಪ ಪವಾಡಿ ಎಂಬುವವನನ್ನ ಎಳೆದು ತರಲಾಗಿದೆ. 2014 ರಲ್ಲಿ..! ಅಂದಹಾಗೆ, 31.10.2014 ರಲ್ಲಿ, ಅಂದ್ರೆ ಎಂಟು ವರ್ಷಗಳ ಹಿಂದೆ, ಹಳಿಯಾಳದ ಯಲ್ಲಾಪುರ...

Post
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್‌ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಶಿರಸಿ ಸಬ್ ಜೈಲಿನಿಂದ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ, ಅಷ್ಟಕ್ಕೂ ಆ ನಟೋರಿಯಸ್ ಪಡೆಯ ಸದಸ್ಯ ಸಿಕ್ಕಿದ್ದಾದ್ರೂ ಹೇಗೆ ಗೊತ್ತಾ..?

ಶಿರಸಿ ಸಬ್ ಜೈಲಿನಿಂದ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ, ಅಷ್ಟಕ್ಕೂ ಆ ನಟೋರಿಯಸ್ ಪಡೆಯ ಸದಸ್ಯ ಸಿಕ್ಕಿದ್ದಾದ್ರೂ ಹೇಗೆ ಗೊತ್ತಾ..?

ಶಿರಸಿ ಸಬ್ ಜೈಲಿನಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ರಾಬರಿ ಗ್ಯಾಂಗ್ ನ ಸದಸ್ಯ ಆರೋಪಿ, ಪ್ರಕಾಶ್ ಸಿದ್ದಿ ಮತ್ತೆ ತಗಲಾಕ್ಕೊಂಡಿದ್ದಾನೆ. ಇನ್ನೇನು ದಟ್ಟ ಕಾಡಿನಲ್ಲಿ ಲೀ‌ನವಾಗಲು ಹೊಂಚು ಹಾಕಿದ್ದ ರಾಬರಿ ಪಡೆಯ ವಾರಸುದಾರನನ್ನು ಬಲೆಗೆ ಕೆಡವಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯ ದಕ್ಷ ಪಿಎಸ್ಐ ಸೀತಾರಾಮ್ ಮತ್ತವರ ಟೀಂ, ಆರೋಪಿ ಪ್ರಕಾಶನ ರೆಕ್ಕೆ ಪುಕ್ಕಗಳನ್ನೇಲ್ಲ ಕಟ್ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಶಿರಸಿ ತಾಲೂಕಿನ ಜಡ್ಡಿಮನೆ ಹರೆಪಾಲ್ ಗ್ರಾಮದ ಅಂಚಿನಲ್ಲಿ ಆರೋಪಿ ಮತ್ತೆ ಸಿಕ್ಕಿ ಬಿದ್ದಿದ್ದಾನೆ. ಈ‌ ಮೂಲಕ ಆತಂಕಕ್ಕೆ...

Post
ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...