ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಕಾರವಾರದ ಕದಂಬ ನೌಕಾನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್..!
ಕಾರವಾರ: ಭಾರತೀಯ ನೌಕಾಪಡೆಯು ವಿಶ್ವದಲ್ಲಿ ಅತ್ಯುತ್ತಮವಾದ ಗೌರವ ಹೊಂದಿದೆ. ಅಮೆರಿಕದ ನೌಕಾಪಡೆಯು ಭಾರತೀಯ ನೌಕಾಪಡೆಯೊಂದಿಗೆ ಸಹಯೋಗ ಹೊಂದಲು ಉತ್ಸುಕವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿ ನೌಕಾ ಸಿಬ್ಬಂದಿಗಳ ಕುಟುಂಬದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತದ ಕಡಲು ನೌಕಾದಳದಿಂದಾಗಿ ಸುರಕ್ಷಿತವಾಗಿದೆ. ದೇಶದ ಗಡಿಗಳು ಸುರಕ್ಷಿತವಾಗಿವೆ. ಇದರಲ್ಲಿ, ದೇಶದ ರಕ್ಷಣೆಯಲ್ಲಿ ತೊಡಗಿರುವ ಮೂರೂ ಪಡೆಗಳ ಕೊಡುಗೆಯಿದೆ. ಹಾಗಾಗಿ ಪ್ರಜೆಗಳಲ್ಲಿ ನಿಮ್ಮೆಲ್ಲರ ಬಗ್ಗೆ ಇರುವ ಗೌರವ ಮತ್ತು ಹೆಮ್ಮೆಯನ್ನು...
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಗಣೇಶಪುರದಲ್ಲಿ ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಸೇರಿ, ಇಬ್ಬರ ಮೇಲೆ ಕೇಸ್ ದಾಖಲು..!
ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...









