Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಉತ್ತರ ಕನ್ನಡ ಜಿಲ್ಲೆಯಾಧ್ಯಂತ ಮಳೆಯ ಅರ್ಭಟ..!

ಉತ್ತರ ಕನ್ನಡ ಜಿಲ್ಲೆಯಾಧ್ಯಂತ ಮಳೆಯ ಅರ್ಭಟ..!

ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣನ ಅರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡು ಭಾಗಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ ಗಳಲ್ಲಿ ನಿನ್ನೆಯಿಂದ ಗಾಳಿ, ಮಳೆಯ ಅರ್ಭಟ ಜೋರಾಗಿದ್ದು, ಎಡೆಬಿಡದೇ ಮಳೆ ಸುರಿಯುತ್ತಿದೆ. ಭರ್ಜರಿ ಮಳೆಗೆ ಮಲೆನಾಡು ಭಾಗದ ಹಲವು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇನ್ನು ಭಾರೀ ಮಳೆಯಿಂದ ಗದ್ದೆಗಳು ಜಲಾವೃತವಾಗಿದ್ದು ಅನ್ನದಾತನಿಗೆ ಸಂಕಷ್ಟ ಎದುರಾಗಿದೆ.

Post
ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!

ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!

ಚಡಚಣ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಪ್ರತಿಧ್ವನಿಸಿದೆ. ಆ ಗುಂಡಿನ ಸದ್ದಿಗೆ ಒ‌ಂದು ಕ್ಷಣ ಇಡೀ ಭೀಮಾತೀರದ ಮಂದಿಯೇ ಬೆಚ್ಚಿಬಿದ್ದಿದ್ದಾರೆ. ಅದೇಷ್ಟೋ ಗುಂಡಿನ ಸದ್ದುಗಳನ್ನು ಕೇಳಿದ್ದ ಇಲ್ಲಿನ ಮಂದಿಗೆ ಇವತ್ತು ಹಾರಿದ್ದ ಗುಂಡು ಮಾತ್ರ ಇನ್ನಿಲ್ಲದಂತೆ ಮೈ ನಡುಗಿಸಿ ಬಿಟ್ಟಿದೆ‌‌. ಯಾಕಂದ್ರೆ ಅಂತಹದ್ದೊಂದು ಗುಂಡು ಹಾರಿಸಿದ್ದು ಯಾವುದೇ ರೌಡಿಯಲ್ಲ, ಹಂತಕರೂ ಅಲ್ಲ ಬದಲಾಗಿ ಆತನೊಬ್ಬ ಪುಟ್ಟ ಬಾಲಕ, ಕೇವಲ ನಾಲ್ಕು ವರ್ಷ ವಯಸ್ಸಿನವನು. ಹೌದು, ಇಲ್ಲೊಬ್ಬ ಬಾಲಕ ಆಟವಾಡಲು ಹೋಗಿ ಇನ್ನಿಲ್ಲದ ಕಿತಾಪತಿ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ...

Post
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..!  26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!

ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!

ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...

Post
ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?

ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?

ಮುಂಡಗೋಡ: ತಾಲೂಕಿನ ಉಗ್ಗಿನಕೇರಿಯಲ್ಲಿ ನಡೆಯಬಾರದ ದುರಂತವೊಂದು ನಡೆದು ಹೋಗಿದೆ. ರಾತ್ರಿ ಕಾಡಿನಲ್ಲಿ ಮರ ಕಡಿಯಲು ಹೋಗಿದ್ದ ಅಂತಾ ಹೇಳಲಾದ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಪ್ರದೀಪ್ ಜುಜೇ ಸಿದ್ಧಿ(35) ಎಂಬುವ ವ್ಯಕ್ತಿ ಪ್ರಾಣ ಕಳೆದುಕೊಂಡವ. ಈತ ಸೋಮವಾರ ತಡರಾತ್ರಿ ತನ್ನ ಮತ್ತೊಬ್ಬ ಸಂಗಡಿಗನೊಂದಿಗೆ ಉಗ್ಗಿನಕೇರಿ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಮರ ಕಡಿದು ಮರದ ತುಂಡನ್ನು ಹೊತ್ತು ತರುತ್ತಿದ್ದಾಗ ಉಗ್ಗಿನಕೇರಿ ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ, ಕಾಡು ಪ್ರಾಣಿಗಳ ಹತೋಟಿಗೆ ಹಾಕಲಾಗಿದ್ದ ವಿದ್ಯುತ್ ಲೈನ್...

Post
ಮುಂಡಗೋಡಿನ ನವಚೇತನ “ಪದ್ಮಾಂಬಾ ಪುಟ್ಟಣ್ಣ” ಇನ್ನಿಲ್ಲ..!

ಮುಂಡಗೋಡಿನ ನವಚೇತನ “ಪದ್ಮಾಂಬಾ ಪುಟ್ಟಣ್ಣ” ಇನ್ನಿಲ್ಲ..!

ಮುಂಡಗೋಡ: ತಾಲೂಕಿನಲ್ಲಿ ಪದ್ಮಾಂಬಾ ಪುಟ್ಟಣ್ಣ ಅಂತಾನೇ ಖ್ಯಾತಿ ಪಡೆದಿದ್ದ ವೃಷಭರಾಜ್ ಅಂಗಡಿ(54) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪುಟ್ಟಣ್ಣ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮುಂಡಗೋಡಿನ ಹುಬ್ಬಳ್ಳಿ ರಸ್ತೆಯಲ್ಲಿರೋ ಪದ್ಮಾಂಬಾ ಬುಕ್ ಸ್ಟಾಲ್ ಮಾಲೀಕರಾಗಿದ್ದ ಪುಟ್ಟಣ್ಣ, ತಾಲೂಕಾ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು. ಮುಂಡಗೋಡಿನ ಪ್ರತಿಷ್ಟಿತ ನವಚೇತನ ಯುವಕ ಮಂಡಳದಲ್ಲಿ ಸಕ್ರೀಯರಾಗಿದ್ದ ಪುಟ್ಟಣ್ಣ ಹಲವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಇನ್ನು ಪುಟ್ಟಣ್ಣ ಅಂಗಡಿ ನಿಧನಕ್ಕೆ...

Post
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!

ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!

ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...

Post
ಹೆಂಡ್ತಿ ಬೇಕು ಹೆಂಡ್ತಿ ಅಂತಾ ಟವರ್ ಏರಿದ ಯುವಕ..! ಕೆಳಗಿಳಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು..!!

ಹೆಂಡ್ತಿ ಬೇಕು ಹೆಂಡ್ತಿ ಅಂತಾ ಟವರ್ ಏರಿದ ಯುವಕ..! ಕೆಳಗಿಳಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು..!!

ಹೆಂಡ್ತಿ ಬೇಕು ಹೆಂಡ್ತಿ ಅಂತಾ ಯುವಕನೋರ್ವ ಟವರ್ ಏರಿ ಕುಳಿತ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ಚಿರಂಜೀವಿ (23) ಎಂಬುವ ಯುವಕನೇ ಬೇಗ ಮದುವೆ ಮಾಡಿ ಅಂತ ಟವರ್ ಏರಿ ಕುಳಿತಿದ್ದವ. ಅಂದಹಾಗೆ ಈತನಿಗೆ ಈಗ ಹುಡುಗಿ ಫಿಕ್ಸ್ ಆಗಿದೆ. ಆದ್ರೆ ಲಾಕ್ ಡೌನ್ ಹಿನ್ನೆಲೆ ಮನೆಯಲ್ಲಿ ಬೇಗ ಮದುವೆ ಮಾಡಿಲ್ಲ. ಹೀಗಾಗಿ ತಾಳ್ಮೆ ಕಳೆದುಕೊಂಡ ಯುವಕ ನಂಗೆ ಈಗಲೇ ಹೆಂಡ್ತಿ ಬೇಕು ಹೆಂಡ್ತಿ ಅಂತಾ ಮನೆಯವರ ವಿರುದ್ಧ ಆಕ್ರೋಶಗೊಂಡಿದ್ದ. ಹೀಗಾಗಿ...

Post
ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!

ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!

ಮುಂಡಗೋಡ: ತಾಲೂಕಿನ ಅರಣ್ಯ ಲೂಟಿ ಆಗ್ತಿದೆ. ಔಷಧಿ ಸಸ್ಯಗಳೂ ಸೇರಿ ಇಲ್ಲಿನ ಅರಣ್ಯದಲ್ಲಿ ಹೇರಳವಾಗಿರೋ ಅರಣ್ಯ ಸಂಪತ್ತು ಕಳ್ಳರ ಪಾಲಾಗ್ತಿದೆ. ಹೀಗಿದ್ರೂ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡು ತೋರಿಸ್ತಿದಾರೆ ಅಂತಾ ಆರೋಪಿಸಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪರಿಸರ ಪ್ರೇಮಿಯೊಬ್ರು ಏಕಾಂಗಿಯಾಗಿ ಧರಣಿಗೆ ಕುಳಿತಿರೋ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ವೈಲ್ಡ್ ಲೈಫ್ ಗ್ರೂಪ್ ನ ಅಧ್ಯಕ್ಷ ಶಂಶುದ್ಧೀನ್ ಮಾರ್ಕರ್ ಎನ್ನುವವರೇ ಏಕಾಂಗಿಯಾಗಿ ಮುಂಡಗೋಡ ವಲಯ ಅರಣ್ಯಾಧಿಕಾರಿಗಳ ಕಛೇರಿ ಎದುರು ಧರಣಿ...

Post
ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!

ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!

ಶಿರಸಿ: ಸಾಮಾನ್ಯವಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದ್ರಲ್ಲೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಈಗಿನ ಉದ್ಯೋಗ ಕ್ಷೇತ್ರದಲ್ಲಿ ಬೇಸ್ ಅಂತಾನೆ ಪರಿಗಣಿಸಲ್ಪಟ್ಟಿದೆ. ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದಾದ ಖುಷಿಯಲ್ಲಿರುತ್ತಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಅಂತಾನೆ ಊಟ, ನಿದ್ದೆ ಬಿಟ್ಟು ಓದೋ ಉದಾಹರಣೆಗಳು ಕೂಡ ಇವೆ. ಅದ್ರಲ್ಲೂ ಈ ಕೋವಿಡ್ ಅನ್ನೋದು ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಧೋಗತಿಯಾಗಿದೆ. ಸರ್ಕಾರಗಳೂ ಕೂಡ ಪದೇ ಪದೇ ನಿರ್ಣಯಗಳನ್ನ ಬದಲಿಸುತ್ತಿರೋದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ...

Post
ನಾಳೆಯಿಂದ ಪರಿಷ್ಕೃತ ಲಾಕ್ ಡೌನ್ ಜಾರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏನಿರತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಡೀಟೇಲ್ಸ್..!

ನಾಳೆಯಿಂದ ಪರಿಷ್ಕೃತ ಲಾಕ್ ಡೌನ್ ಜಾರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏನಿರತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಡೀಟೇಲ್ಸ್..!

ಕಾರವಾರ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕ್ರತ ಆದೇಶದನ್ವಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಳೆ ಸೋಮವಾರದಿಂದ ಜೂನ್ 21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಆಹಾರ, ದಿನಸಿ, ಹಣ್ಣುಗಳು...

error: Content is protected !!