Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Post
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ...

Post
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.

Post
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ...

Post
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...

Post
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ:  ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಶಿರಸಿ : ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್‌ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ...

Post
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ. ದಿಟ್ಟ ಹೆಜ್ಜೆ..! ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ...

Post
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..!  ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!

ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!

ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..!...

Post
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!

ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!

ಮುಂಡಗೋಡ : ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ ಶೇರಖಾನೆ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ಅವರು ಹಾಗೂ ಡಾ.ಬಿ.ಪುಷ್ಪ ಅಮರನಾಥ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಇವರ ಆದೇಶದ ಮೇರೆಗೆ ಸಲ್ಮಾ ಕಿರಣ ಶೇರಖಾನೆ ಅವರನ್ನು ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಾತಿ ಮಾಡಲಾಗಿದೆ. ಅಖಿಲ ಭಾರತದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ...

Post
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!

ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!

ಕಾರವಾರ:ಮಾಜಿ ವಿಧಾನ ಪರಿಷತ್‌ ಸದಸ್ಯೆ ಶುಭಲತಾ ಅನ್ನೋಟಿಕರ್ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅನ್ನೋಟಿಕರ್ ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಇಂದು ಸಂಜೆ 5 ಘಂಟೆ 8 ನಿಮಿಷಕ್ಕೆ ವೇಳೆಗೆ ಶುಭಲತಾ ಅವರು ಮೃತಪಟ್ಟಿದ್ದಾರೆ. ಪತಿ ಶಾಸಕರಾಗಿದ್ದ ವಸಂತ್ ಅನ್ನೋಟಿಕರ್ ಹತ್ಯೆಯ ನಂತರ ಶುಭಲತಾ ಇಡೀ ಕುಟುಂಬದ ಜವಬ್ದಾರಿ ಹೊತ್ತಿದ್ದರು. ಕ್ಷೇತ್ರದಲ್ಲಿ ಅನ್ನೋಟಿಕರ್ ಅಭಿಮಾನಿಗಳ ಜೊತೆ ನಿಂತಿದ್ದ ಶುಭಲತಾರನ್ನ ವಿಧಾನ ಪರಿಷತ್‌...

error: Content is protected !!