ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!
ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...
ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ...
ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!
ಕಳೆದ ಒಂದು ವಾರದಿಂದ ಮುಂಡಗೋಡ ತಾಲೂಕಿನ ಹುನಗುಂದಕ್ಕೆ ಸಾರಿಗೆ ಬಸ್ ಸಂಚಾರ ಬಹುತೇಕ ಸ್ಥಗಿತವಾಗಿದೆ. KSRTC ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿಗಳಿಂದ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಮುಂಡಗೋಡ ಸೇರಿದಂತೆ ವಿವಿದೆಡೆ ಪ್ರಯಾಣಿಸುವ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ. ಹೀಗಾಗಿ, ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿಭಟನೆ ನಡೆಸಿದ್ರು. ಹುನಗುಂದ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ವಿದ್ಯಾರ್ಥಿಗಳು ಬೆಳಗ್ಗಿನಿಂದಲೂ ಕಾಯ್ದು ಕುಳಿತಿದ್ದರು. ಆದ್ರೆ, ಬಸ್ ಬರಲೇ ಇಲ್ಲ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಸ್ ಬರದೇ ಇರುವ ಕಾರಣಕ್ಕೆ...
ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು
ಹಾವೇರಿ: ಪಂಪ್ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (26) ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ...
ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!
ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ...
ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ...
ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ...
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ...









