ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...
Top Stories
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಚರಣೆ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ...
ನಿರಂತರ ಮಳೆ ಹಿನ್ನೆಲೆ ದೇವಿಮನೆ ಬಳಿ ಗುಡ್ಡ ಕುಸಿತ, ಶಿರಸಿ- ಕುಮಟಾ ರಸ್ತೆ ಬಂದ್..!
ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!
ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಗೆ ಇಳಿದ ಘಟನೆ ಎಕ್ಕಂಬಿ ಸಮೀಪ ನಡೆದಿದೆ. ಶ ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ಬಸ್, ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮದ್ಯೆ ರಸ್ತೆ ಬದಿಯ ಗಟಾರಕ್ಕೆ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನ ಸೆಂಟ್ರಿಂಗ್ ಬೊಲ್ಟ್ ಕಟ್ಟಾಗಿ ಘಟನೆ ನಡೆದಿದೆ ಅಂತಾ ಹೇಳಲಾಗ್ತಿದೆ. ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ...
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ...
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!
ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ
ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...









