Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮಳಗಿ ಧರ್ಮಾ ಜಲಾಶಯದಲ್ಲಿ ಶಿರಸಿಯ ವ್ಯಕ್ತಿ ನೀರುಪಾಲು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ..!

ಮಳಗಿ ಧರ್ಮಾ ಜಲಾಶಯದಲ್ಲಿ ಶಿರಸಿಯ ವ್ಯಕ್ತಿ ನೀರುಪಾಲು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ..!

ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ‌ನೀರು ಪಾಲಾಗಿದ್ದಾನೆ. ನಾಲ್ಕೈದು ಸ್ನೇಹಿತರೊಂದಿಗೆ ಜಲಾಶಯಕ್ಕೆ ಬಂದಿದ್ದ ಶಿರಸಿಯ ವ್ಯಕ್ತಿ ನೀರಲ್ಲಿ ಮುಳುಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗ್ತಿದೆ. ಶಿರಸಿ ಸಮೀಪದ ಅಂಡಗಿಯ ಅಜೀದ್ ಗುಡೂಸಾಬ್(34) ಎಂಬುವ ವ್ಯಕ್ತಿಯೇ ಜಲಾಶಯದಲ್ಲಿ ನಾಪತ್ತೆಯಾಗಿದ್ದಾನೆ. ಈತ ಇಂದು ಶಿರಸಿಯಿಂದ ತನ್ನ ಸ್ನೇಹಿತರ ಜೊತೆ ಮಳಗಿಯ ಧರ್ಮಾ ಜಲಾಶಯದ ಸೊಬಗು ಸವಿಯಲು ಬಂದಿದ್ದ. ಈ ವೇಳೆ ಈಜಲು ನೀರಿಗೆ ಇಳಿದ ಸಂದರ್ಭದಲ್ಲಿ ನೀರಲ್ಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ, ತಕ್ಷಣವೇ ಮುಂಡಗೋಡ...

Post
ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!

ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!

ಮುಂಡಗೋಡ ತಾಲೂಕಿನ ಇಂದೂರಿನ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರಲ್ಲಿ ಹಣ ವಸೂಲಿ ದಂಧೆ ಶುರುವಿಟ್ಟಿದ್ದಾನೆ ಆತನಿಂದ ಸಾರ್ವಜನಿಕರು ಎಚ್ಚರದಿಂದ ಇರಿ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಎಚ್ಚರಿಸಿದ್ದಾರೆ. ಇಂದೂರು ಗ್ರಾಮದ ಹಜರತ್ ಅಲಿ ಬಾಷಾಸಾಬ ಜಾತಗಾರ, ಎಂಬುವವನೇ ಸದ್ಯ ವಂಚಿಸಿರೋ ಆರೋಪ ಹೊತ್ತಿದ್ದು. ಇಂದೂರ ಗ್ರಾಮದ ಮನೆಗಳ ನಿವೇಶನ ಸಕ್ರಮ ಮಾಡುವ ಕುರಿತಾಗಿ 4 ಜನ ಸಾರ್ವಜನಿಕರಿಂದ ತಲಾಟಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ ಹೆಸರು ದುರುಪಯೋಗ ಮಾಡಿ, ಸುಳ್ಳು ಹೇಳಿ, ಹಣ ವಸೂಲಿ ಮಾಡಿದ್ದಾನೆ ಅಂತಾ ಖುದ್ದು...

Post
ಮುಂಡಗೋಡ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ...

Post
ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!

ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!

ಮುಂಡಗೋಡ ಹಾಗೂ ಮಂಚಿಕೇರಿ ಅರಣ್ಯ ಅಧಿಕಾರಿಗಳ ಬ್ರಿಲ್ಲಿಯಂಟ್ ಕಾರ್ಯಾಚರಣೆ ಸಕ್ಸೆಸ್ ಆಗಿದೆ. ಪರಿಣಾಮ ಖತರ್ನಾಕ ಅರಣ್ಯ ರಾಬರಿ ಗ್ಯಾಂಗ್ ಅಂದರ್ ಆಗಿದೆ. ಅಕ್ಟೋಬರ್ 7 ರ ಆಸುಪಾಸಿನಲ್ಲಿ ಮುಂಡಗೋಡ ತಾಲೂಕಿನ ಹಲವು ಕಡೆ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಕೇಸಿನಲ್ಲಿ ಬೇಕಾಗಿದ್ದ ಅರಣ್ಯ ಸ್ಮಗ್ಲಿಂಗ್ ಕ್ರಿಮಿಗಳನ್ನು ಬಹುತೇಕ ಅಂದರ್ ಮಾಡಲಾಗಿದೆ. ದೂರದ ಮದ್ಯ ಪ್ರದೇಶದಿಂದ ಬಂದು ಪಟ್ಟಣಗಳು, ಹಳ್ಳಿಗಳ ಹೊರಗೆ ಟೆಂಟ್ ಹಾಕಿ ಸಂಚು ರೂಪಿಸೋ ಭಯಾನಕ ಸ್ಮಗ್ಲಿಂಗ್ ಪಡೆಯನ್ನ ಮೊದಲ ಬಾರಿಗೆ ಹೆಡೆಮುರಿ ಕಟ್ಟಲಾಗಿದೆ. ಅಷ್ಟಕ್ಕೂ...

Post
ಶಿರಸಿ ಸಮೀಪ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸ್ಥಳದಲ್ಲೇ ಸಾವು..!

ಶಿರಸಿ ಸಮೀಪ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸ್ಥಳದಲ್ಲೇ ಸಾವು..!

ಶಿರಸಿ ಸಮೀಪ ಭೀಕರ ಅಪಘಾತವಾಗಿದೆ. ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ, ಮದುವೆಗಾಗಿ ಬಂದಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಒಟ್ಟೂ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬಂಡಲ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ತಿಳಿದು ಬಂದಿದೆ. ಇವ್ರು ಶಿರಸಿಯಲ್ಲಿ ನಡೆಯುವ ಮದುವೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವರಾಗಿದ್ದಾರೆ. ಅಪಘಾತದಲ್ಲಿ ರಾಮಕೃಷ್ಣ...

Post
ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ..! ಹೆಬ್ಬಾಳ್ಕರ್ ಸಹೋದರನ ಆಪ್ತರಿಂದಲೇ ನಡೀತಾ ಕೃತ್ಯ..?

ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ..! ಹೆಬ್ಬಾಳ್ಕರ್ ಸಹೋದರನ ಆಪ್ತರಿಂದಲೇ ನಡೀತಾ ಕೃತ್ಯ..?

ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತವಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (55) ಮೇಲೆ ಚಾಕು ಇರಿತವಾಗಿದೆ. ಬೆಳಗಾವಿ ಜಯ ನಗರದ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದೆ. ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಪೃಥ್ವಿ ಸಿಂಗ್ ರನ್ನು ದಾಖಲಿಸಲಾಗಿದೆ. ಇನ್ನು ಕೆಎಲ್ಇ ಆಸ್ಪತ್ರೆಗೆ ಎಂಎಲ್‌ಸಿ ಚೆಲುವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿದ್ದಾರೆ. ಪೃಥ್ವಿ ಸಿಂಗ್ ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅತ್ಯಾಪ್ತರಾಗಿದ್ದಾರೆ....

Post
ಹಳಿಯಾಳ ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಇಬ್ಬರು ಯುವಕರ ದಾರುಣ ಸಾವು..!

ಹಳಿಯಾಳ ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಇಬ್ಬರು ಯುವಕರ ದಾರುಣ ಸಾವು..!

ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಯುವಕ ಮಂಜುನಾಥ ಇಂಗಳಗಿ (23) ಎನ್ನುವಾತ ಕಾಳಗಿನಕೊಪ್ಪ ಗ್ರಾಮದಿಂದ ಮುರ್ಕವಾಡಕ್ಕೆ ತೆರಳುವ ರಸ್ತೆ ಮಧ್ಯೆ ಬೆಳಗಿನ ಜಾವ ವಾಕಿಂಗ್ ತೆರಳಿದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಪ್ರಾಣ ಬಿಟ್ಟಿದ್ದು, ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿದೆ. ಎರಡನೇ ಘಟನೆಯಲ್ಲಿ ಪಟ್ಟಣದ ಪೋಲಿಸ್ ಠಾಣೆಯ ಅನತಿ ದೂರದಲ್ಲಿರುವ ಕಾರ್ಮೆಲ್ ಶಾಲೆಗೆ ತೆರಳುವ ತಿರುವಿನಲ್ಲಿಯ ರಾಜ್ಯ...

Post
ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!

ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!

ದಾವಣಗೆರೆ ನಗರ ಹೊರಭಾಗದ ರಾ.ಹೆದ್ದಾರಿ 48 ರಲ್ಲಿ ಭೀಕರ ಅಪಘಾತವಾಗಿದೆ. ಕಾರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯವಾಗಿದೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಹಾವೇರಿ ರಾಣೆಬೆನ್ನೂರು ಮೂಲದ ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಕ್ಕ ಶೆಟ್ಟರ್ ಮೃತ ದುರ್ದೈವಿಗಳು. ಇನ್ನುಳಿದಂತೆ...

Post
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!

ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...

Post
ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಕುಂದಾನಗರಿ 12ನೇ ಅಧಿವೇಶನಕ್ಕೆ ಸಜ್ಜುಗೊಂಡಿದೆ. ಹೀಗಾಗಿ, ಬೆಳಗಾವಿ ನಗರ ಸೇರಿದಂತೆ, ಸುವರ್ಣ ವಿಧಾನಸೌಧದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಅಧಿವೇಶನದ ಭದ್ರತೆಗೆ ಐದು ಸಾವಿರ ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಡಿಸಿಪಿ, 5ಜನ ಎಸ್‌ಪಿ, 12 ಎಎಸ್‌ಪಿ, 42 ಡಿವೈಎಸ್‌ಪಿ, 100 ಸಿಪಿಐ, 250 ಪಿಎಸ್ಐ, ಮೂರುವರೆ ಸಾವಿರ ಪೇದೆಗಳು, 35 ಕೆಎಸ್ಆರ್‌ಪಿ ತುಕಡಿ, ಬಾಂಬ್...