Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
*****************
ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್,ರೋಟರಿ ಪಶ್ಚಿಮ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಕಾರ್ಯಕ್ರಮವನ್ನು ಜೂ.21 ರಂದು ಬೆಳಗ್ಗೆ 6.30 ಗಂಟೆಗೆ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
************
ಜೂ.22 ರಿಂದ ಜೂ.23 ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ..!
ಕಾರವಾರ; ನಾಗರೀಕ ಬಂದೂಕು ತರಬೇತಿ ಪಡೆಯಲು ಇಚ್ಛಿಸಿ ಅರ್ಜಿ ಸಲ್ಲಿಸಿರುವ ನಾಗರೀಕರಿಗೆ ಜೂ.22 ರಿಂದ ಜೂ.23 ರವರೆಗೆ ಶಿರಸಿ ತಾಲೂಕಿನ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ನಡೆಸಲಾಗುವುದು ಆದ್ದರಿಂದ ತರಬೇತಿಗಾಗಿ ಅರ್ಜಿ ಸಲ್ಲಿಸಿದ ನಾಗರೀಕರು ಜೂ. 22 ರಂದು ಬೆಳಗ್ಗೆ 8 ಗಂಟೆಗೆ ತರಬೇತಿಗೆ ಹಾಜರಾಗುವಂತೆ ಹಾಗೂ ತರಬೇತಿಗೆ ಸಂಬAಧಿಸಿದ ಹೆಚ್ಚಿನ ವಿವರಗಳಿಗಾಗಿ ಆರ್.ಪಿ.ಐ, ಡಿ.ಎ.ಆರ್, ಕಾರವಾರ ದೂರವಾಣಿ ಸಂಖ್ಯೆ: 9480805210 ನ್ನು ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*******
ವಿದ್ಯುತ್ ಅದಾಲತ್ ಹಾಗೂ ಗ್ರಾಹಕರ ಸಂವಾದ ಸಭೆ
ಕಾರವಾರ; ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಜೂ.21 ರಂದು ಬೆಳಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ- ವಿಭಾಗ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಈ ಕುರಿತು ಗ್ರಾಹಕರಿಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕಚೇರಿ ವೇಳೆಯಲ್ಲಿ 08386-(222034/224865/256177) ದೂರವಾಣಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕುಮಟಾ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
********
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ನೆರವು : ಅರ್ಜಿ ಆಹ್ವಾನ
ಕಾರವಾರ; ಪ್ರಸುತ್ತ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮುಖಾಂತರ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಜಿ ವ್ಯಾಸಂಗ ಮಾಡಲು ಹಣಕಾಸಿನ ನೆರವು ನೀಡಲಾಗುತ್ತದೆ. (ಶೈಕ್ಷಣಿಕ ವರ್ಷಕ್ಕೆ ಜಾಗತಿಕ ವಿಶ್ವ ಶ್ರೇಯಾಂಕ ಪಟ್ಟಿಯ ಅನುಸಾರ ಉನ್ನತ ಶಿಕ್ಷಣಕ್ಕಾಗಿ ಟಾಪ್ 500 ವಿಶ್ವವಿದ್ಯಾನಿಲಯಗಳನ್ನು ಪರಿಗಣಿಸಲಾಗುತ್ತದೆ).
ಕರ್ನಾಟಕ ರಾಜ್ಯ ನಿವಾಸಿಯಾದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು https://sevasindhu.karnataka.gov.in ಲಿಂಕ್ ಮೂಲಕ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಗರಿಷ್ಟ ವಯಸ್ಸು 38 ಮೀರಿರಬಾರದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ, ಆನ್ಲೈನ್ ಅರ್ಜಿ ಸಲ್ಲಿಸಿದ 1 ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇಲ್ಲಿಗೆ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಬೇಕು.
ಆನ್ಲೈನ್ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯನ್ನು ಅಥವಾ ವೆಬ್ಸೈಟ್ https://dom.karnataka.gov.in/ ಅಥವಾ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರವಾರ ದೂರವಾಣಿ ಸಂಖ್ಯೆ 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*********
ಕುಮಟಾ :ಜೂ.23 ಮತ್ತು 25 ರಂದು ಅಂಚೆ ವ್ಯವಹಾರ ಸ್ಥಗಿತ
ಕಾರವಾರ; ಅಂಚೆ ಇಲಾಖೆಯು ಪ್ರಸಕ್ತ ಉಪಯೋಗಿಸುತ್ತಿರುವ ಸಾಫ್ಟ್ವೇರ್ ಅನ್ನು ಬದಲಾವಣೆ ಮಾಡುತ್ತಿದ್ದು ಹೊಸ ಸಾಫ್ಟ್ವೇರ್ ಅಳವಡಿಕೆಯ ಪ್ರಕ್ರಿಯೆಯು ಕುಮಟಾ ಪ್ರಧಾನ ಅಂಚೆ ಕಚೇರಿಯ ಅಡಿಯಲ್ಲಿ ಬರುವ ಉಪ ಅಂಚೆ ಕಚೇರಿ ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಜೂ.23 ಮತ್ತು 25 ರವರೆಗೆ ನಡೆಯಲಿದ್ದು, ಆ ದಿನಗಳಲ್ಲಿ ಯಾವುದೇ ರೀತಿಯ ಅಂಚೆ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ.
ಕುಮಟಾ ತಾಲೂಕಿನ ಬಂಕಿಕೊಡ್ಲ, ಚಂದಾವರ, ಗೋಕರ್ಣ, ಗುಡೇಅಂಗಡಿ, ಹೆಗಡೆ ಹೆರವಟ್ಟ, ಹಿರೇಗುತ್ತಿ, ಮಾದನಗೇರಿ, ಮಿರ್ಜಾನ, ಕುಮಟಾ ಕೆನರಾ ಕಾಲೇಜು ರಸ್ತೆ ಕುಮಟಾ, ಕುಮಟಾ ಕಚೇರಿ, ತಡತೋಕ ಮತ್ತು ಹೊನ್ನಾವರ ತಾಲೂಕಿನ ಗೇರಸೋಪ್ಪ, ಜ್ಯೋತಿನಗರ, ಹಡಿನಬಾಳ, ಹಳದೀಪುರ, ಹೊನ್ನಾವರ, ಹೊಸಾಡ, ಕರ್ಕಿ, ಕಾಸರಕೋಡು, ಮಂಕಿ, ಮೆಲಿನ್ ಇಡಗುಂಜಿ, ಪ್ರಭಾತನಗರ ಹಾಗೂ ಭಟ್ಕಳ ತಾಲೂಕಿನ ಭಟ್ಕಳ ಬಜಾರ್, ಭಟ್ಕಳ, ಕಾಯ್ಕಿಣಿ, ಮುರ್ಡೇಶ್ವರ, ಶಿರಾಲಿ ಬಜಾರ್, ಶಿರಾಲಿ ಅಂಚೆ ಕಚೇರಿ ಮತ್ತು ಇವುಗಳ ಅಡಿ ಬರುವ ಶಾಖಾ ಅಂಚೆ ಕಚೇರಿಗಳಲ್ಲಿ ಮೂರು ದಿನಗಳ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದ್ದು ಅಂಚೆ ಗ್ರಾಹಕರು ಸಹಕರಿಸುವಂತೆ ಕಾರವಾರ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*********
ಕುಮಟಾ: ವಸತಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ; ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ 2.0 ಯೋಜನೆಯಡಿ ನಗರದ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ (ಕಚ್ಚಾ ಮನೆ ಹೊಂದಿರುವ) ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ Unified web portal ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕುಮಟಾ ಪುರಸಭಾ ವ್ಯಾಪ್ತಿಯೊಳಗಿನ ಎಲ್ಲಾ ವಾರ್ಡಗಳಲ್ಲಿರುವ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ https//pmay.urban.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. (ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ) ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ವಸತಿ ಶಾಖೆಯನ್ನು ಸಂಪರ್ಕಿಸುವAತೆ ಕುಮಟಾ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***********
ವಿದ್ಯುತ್ ಅದಾಲತ್ ಹಾಗೂ ಗ್ರಾಹಕರ ಸಂವಾದ ಸಭೆ
ಕಾರವಾರ; ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಜೂ.21 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***********
ವಿಶ್ವ ತಂಬಾಕು ರಹಿತ ದಿನ ಆಚರಣೆ
ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕು.ಕ. ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಗುರುವಾರ ಆಯೋಜಿಸಲಾದ ‘ವಿಶ್ವ ತಂಬಾಕು ರಹಿತ ದಿನವನ್ನು’ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಉದ್ಘಾಟಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಅರ್ಚನಾ ನಾಯಕ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ಧ್ಯೇಯ ವಾಕ್ಯ “ಆಕರ್ಷಕ ಉತ್ಪನ್ನಗಳು-ಕರಾಳ ಉದ್ದೇಶಗಳು, ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡ ಬಿಚ್ಚಿಡುವುದರ” ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರೇಮಕುಮಾರ ನಾಯ್ಕ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರವಾರದ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಫಾದರ್ ಸ್ಟಾö್ಯನಿ ಪಿಂಟೋ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸುಧೀತಾ ಪೆಡ್ನೇಕರ ಮತ್ತು ಸಮಾಜ ಕಾರ್ಯಕರ್ತ ಗೋರೇಸಾಬ ನದಾಫ ರವರು ಉಪಸ್ಥಿತರಿದ್ದರು. ವೃಂದಾ ತಾಮ್ಸೆ ವಂದಿಸಿದರು.
********
ನವೋದಯ ವಿದ್ಯಾಲಯ: 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ; ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು, ಆನ್ಲೈನ್ www.navodaya.gov.in ನಲ್ಲಿ ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದ್ದು, ಡಿಸೆಂಬರ್ 13 ರಂದು ಸದರಿ ಪರೀಕ್ಷೆಯು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.