Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!

 ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ‌ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್‌ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....

Post
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!

ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!

ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ‌ ಮುಂಬಯಿಂದ ಎಳೆದು ತಂದಿದ್ದಾರೆ‌. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...

Post
ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!

ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!

 ಮುಂಡಗೋಡ ತಾಲೂಕಿನಲ್ಲಿ ಮತ್ತೆ ಶ್ರೀಗಂಧದ ಮರಗಳ್ಳರು ತಮ್ಮ ಕರಾಮತ್ತು ಶುರು ಮಾಡಿದ್ದಾರೆ. ರಾತ್ರಿ ನ್ಯಾಸರ್ಗಿಯಲ್ಲಿ ಕಳ್ಳರು ಮನೆಯ ಹಿತ್ತಲಿನಲ್ಲಿ ಇದ್ದ ಬೆಲೆಬಾಳುವ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ನಿತ್ಯ ನಿರಂತರವೆಂಬಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನಲ್ಲಿ ಅರಣ್ಯ ಸಂಪತ್ತು ಲೂಟಿಯಾಗ್ತಿದೆ. ಅಂದಹಾಗೆ, ನ್ಯಾಸರ್ಗಿ ಗ್ತಾಮದ ಪಿಎಸ್‌ ಸದಾನಂದ ಎಂಬುವವರ ಮನೆ ಪಕ್ಕದಲ್ಲಿನ ಶ್ರೀಗಂಧದ ಮರ ದೋಚಿದ್ದಾರೆ ಖದೀಮರು. ಲಕ್ಷ ಲಕ್ಷ ಬೆಲೆ ಬಾಳುವ ಗಂಧದ ಮರ ಕಡಿದುಕೊಂಡು ಹೋಗಿರೊ ಸುದ್ದಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ‌....

Post
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳ‌ಮದ್ಯೆ ಭಾರೀ ಕಾಳಗ..! ಗುಂಡೇಟು..!

NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳ‌ಮದ್ಯೆ ಭಾರೀ ಕಾಳಗ..! ಗುಂಡೇಟು..!

 NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳ‌ನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ‌. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...

Post
NMD ಜಮೀರ್ ಬಾಯ್ ಸೇಫ್..!  ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?

NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?

ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ‌. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...

Post
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್

ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್

ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...

Post
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ

ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್‌ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

Post
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ

ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ

 ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...

Post
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ‌. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ‌. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ‌. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...

Post
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ‌. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...

error: Content is protected !!