ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಬಿಸಿಯೂಟದ ನೌಕರಿ ಬಿಕರಿಗಿದೆಯಾ..? ಇಂತಹದ್ದೊಂದು ಅನುಮಾನ ಅದೊಂದು ಆಡಿಯೋ ಕೇಳಿದ ಎಂತವ್ರಿಗೂ ಮೂಡದೇ ಇರಲ್ಲ. ಮುಂಡಗೋಡ ಪಟ್ಟಣ ಪಂಚಾಯತಿಯ ಸದಸ್ಯೆಯೊಬ್ಬರು ಮಾತನಾಡಿದ್ದು ಎನ್ನಲಾದ ಆಡಿಯೋ ಸದ್ಯ ಊರ ತುಂಬಾ ವೈರಲ್ ಆಗಿದೆ. ಖುಲ್ಲಂ ಖುಲ್ಲಾ ದಂಧೆನಾ..? ಅಷ್ಟಕ್ಕೂ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಎರಡು ಶಾಲೆಗಳಿಗೆ ಅವಶ್ಯವಿರುವ ಬಿಸಿಯೂಟದ ಸಿಬ್ಬಂದಿಯ ನೇಮಕದಲ್ಲಿ ಪಟ್ಟಣ ಪಂಚಾಯತಿಯ ಆ ಸದಸ್ಯೆ ಖುಲ್ಲಂ ಖುಲ್ಲಾ ವ್ಯವಹಾರಕ್ಕೆ ಇಳಿದು ಬಿಟ್ರಾ..? ಬಿಸಿಯೂಟದ ಸಿಬ್ಬಂದಿಗಳ ನೇಮಕಕ್ಕೆ, ಬರೋಬ್ಬರಿ ತಲಾ 50...
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಮುಂಡಗೋಡ ಸುದ್ದಿ
ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!
ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...
ಪಾಳಾ ಬಳಿ ಬೈಕ್ ಸವಾರನ ಮೇಲೆ ಉರುಳಿ ಬಿದ್ದ ಮರ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ ರಸ್ತೆ ಮೇಲೆ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮರ ಉರುಳಿಬಿದ್ದು ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಗಾಯಾಳುವನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುಂಡಗೋಡ ಪಿಎಸ್ ಐ ಪರಶುರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ದಾಸನಕೊಪ್ಪದ ಕಾಡಲ್ಲಿ ಇಂದೂರು ಹುಡುಗನ ಭಯಾನಕ ಹತ್ಯೆ, ಖಾಸಾ ಗೆಳೆಯನಿಂದ್ಲೇ ಮರ್ಡರ್ ಆದ್ನಾ ಮಲ್ಲಪ್ಪ..?
ಇಂದೂರಿನ ಹುಡುಗನೊಬ್ಬ ಬನವಾಸಿಯ ಕಾಡಲ್ಲಿ ಭಯಾನಕವಾಗಿ ಹತ್ಯೆಯಾಗಿದ್ದಾನೆ.. ಟ್ರ್ಯಾಕ್ಟರ್ ಸಾಲದ ಕಂತು ತುಂಬು ಅಂತಾ ಹೇಳಲು ಹೋದವನು ಹೆಣವಾದ್ನಾ..? ನಂಬಿಗಸ್ಥನಿಂದಲೇ ದ್ರೋಹ ಕಂಡು ಬನವಾಸಿಯ ಕಾಡಲ್ಲಿ ಬೆಂದು ಹೋದ್ನಾ..?ಹೀಗೆ ಕೊಳೆತು ದುರ್ನಾತ ಬೀರುತ್ತಿರೊ ಹುಡುಗನ ಶವದ ಸುತ್ತ ಹಲವು ಪ್ರಶ್ನೆಗಳು ಏಳುತ್ತಿವೆ. ಅಸಲು, ಮಲ್ಲಪ್ಪನ ಖಾಸಾ ಗೆಳೆಯ ಆರೀಫನೇ ಮರ್ಡರ್ ಮಾಡಿದ್ನಾ..? ಗೊತ್ತಿಲ್ಲ. ಆದ್ರೆ, ಅಂತಹ ಅನುಮಾನಗಳು ಬನವಾಸಿ ಪೊಲೀಸರಿಗಿದೆ. ಯಸ್, ಶಿರಸಿ ತಾಲೂಕಿನ ದಾಸನಕೊಪ್ಪ ಸಮೀಪದ ದನಗನಹಳ್ಳಿಯ ಆರೀಫ್ ಹುಸೇನ್ ಬಾಳಂಬೀಡ (30) ಎಂಬಾತ, ಇಂದೂರಿನ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಅರಶಿಣಗೇರಿಯ ವ್ಯಕ್ತಿ, ಶಿಗ್ಗಾವಿ ತಾಲೂಕಿನ ಗದ್ದೆಯಲ್ಲಿ ಹೆಣವಾದ, ಈ ಸಾವಿನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ಕೆಲಸಕ್ಕೆಂದು ಹೋಗಿದ್ದ ಅರಶಿಣಗೇರಿಯ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಶಿಗ್ಗಾವಿ ತಾಲೂಕಿನ ಕುನ್ನೂರು ಬಳಿಯ ಮಮದಾಪುರ ತಾಂಡಾದ ಗದ್ದೆಯಲ್ಲಿ ಶವವಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದವನಿಗೆ ವಿದ್ಯುತ್ ತಗುಲಿ ಸಾವಿಗೆ ಕಾರಣವಾಗಿದೆ ಅಂತಾ ಹೇಳಲಾಗ್ತಿದೆ. ಆದ್ರೆ, ಕುಟುಂಬಸ್ತರು ಈ ಸಾವಿನಲ್ಲಿ ಅನುಮಾನವಿದೆ ಅಂತಾ ಆರೋಪಿಸುತ್ತಿದ್ದಾರೆ. ಅಂದಹಾಗೆ, ಮೈಲಾರಗೌಡ ನಿಂಗನಗೌಡ ಪಾಟೀಲ್ (36), ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಈತ ನಿನ್ನೆ ಅಂದ್ರೆ ಬುಧವಾರ, ಅರಶಿಣಗೇರಿಯಿಂದ ಮಮದಾಪುರ ಬಳಿಯ ಗದ್ದೆಗೆ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಅದ್ಯಾವ ಕಾರಣಕ್ಕೊ ಏನೋ ವಿದ್ಯುತ್...
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...