ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..!
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು...
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ....
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!
ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು...
ನಂದಿಕಟ್ಟಾದಲ್ಲಿ ನಾಯಿ ದಾಳಿಗೆ ಕೋತಿ ಮರಿ ಬಲಿ, ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ...
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ...
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ...









