Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಶಿರಸಿಯಲ್ಲಿ ಒಂಟಿ‌ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!

ಶಿರಸಿಯಲ್ಲಿ ಒಂಟಿ‌ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!

ಶಿರಸಿ: ನಗರದ ಭತ್ತದ‌ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************

Post
ಕಾರವಾರದಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಹೆಬ್ಬಾರ್..!

ಕಾರವಾರದಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಹೆಬ್ಬಾರ್..!

ಕಾರವಾರ: 66 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದ್ರು‌. ತೆರೆದ ವಾಹನದಲ್ಲಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಚಿವ ಹೆಬ್ಬಾರ್, ಸಮಾರಂಭದಲ್ಲಿ ಭಾಷಣ ಮಾಡಿದ್ರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ್ , ಜಿಲ್ಲಾಧಿಕಾರಿ ಮುಲೈ ಮುಹಿಲಿನ್, ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸೇರಿ ಹಲವರು ಉಪಸ್ಥಿತರಿದ್ದರು‌. ಇನ್ನು, ಇಂದಿನ 66 ನೇ ರಾಜ್ಯೋತ್ಸವದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ...

Post
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.

Post
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.

Post
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.

Post
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!

ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!

ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...

Post
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ‌ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..

Post
ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಮುಂಡಗೋಡ: ತಾಲೂಕಿನ ಹುನಗುಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ‌ ಮರವಣಿಗೆ ನಡೆಸಿದ್ರು. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಕಿತ್ತೂರು ಚೆಮ್ಮಮ್ಮ, ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸೇರಿದಂತೆ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು. ಈ ವೇಳೆ ಶಾಲೆಯ ಶಿಕ್ಷಕರು,...

Post
ಕುಮಟಾದಲ್ಲಿ ಪತ್ತೆಯಾಗಿದ್ದು ಬಾಂಬ್ ಅಲ್ಲವಾ..?

ಕುಮಟಾದಲ್ಲಿ ಪತ್ತೆಯಾಗಿದ್ದು ಬಾಂಬ್ ಅಲ್ಲವಾ..?

ಕುಮಟಾ- ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ವಸ್ತು ಬಾಂಬ್ ಅಲ್ಲ, ನಕಲಿ ಬಾಂಬ್ ಅಂತಾ ತನಿಖೆಯ ನಂತರ ಖಚಿತಗೊಂಡಿದೆ. ಪತ್ತೆಯಾದ ವಸ್ತು ನಕಲಿ ಬಾಂಬ್ ಆಗಿದ್ದು, ವಸ್ತುವಿನಲ್ಲಿ ಯಾವುದೇ ರೀತಿಯ ಸ್ಪೋಟಕ‌ ಇರಲಿಲ್ಲ ಅಂತಾ, ವಸ್ತುವನ್ನ ಬಿಚ್ಚಿ ಪರಿಶೀಲನೆ ನಡೆಸಿದ ಮಂಗಳೂರಿನ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ತಿಳಿಸಿದ್ದಾರೆ. ನಿನ್ನೆ ಸಂಜೆ ವೇಳೆ ಪತ್ತೆಯಾಗಿದ್ದ ಬಾಂಬ್ ಮಾದರಿ ವಸ್ತುವಿನಿಂದ ಕುಮಟಾ ಪಟ್ಟಣದಲ್ಲಿ ಭಾರೀ ಆತಂಕ ಎದುರಾಗಿತ್ತು. ನಿನ್ನೆಯಿಂದಲೂ ಸ್ಥಳದಲ್ಲೇ ಪೊಲೀಸ್ ತಂಡ...

Post
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!

ಮುಂಡಗೋಡ: ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು, ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅನುಮತಿ ನೀಡಬೇಕೆಂದು, ಮುಂಡಗೋಡ ತಹಶೀಲ್ದಾರ್ ಮೂಲಕ ಮುಖ್ಯಂಮತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆಯಲ್ಲಿ ಅಯ್ಯಪ್ಪ ಬಜಂತ್ರಿ. ಶಿವಣ್ಣ ಕುಂದರಗಿ. ಪಿರಜ್ಜಾ ಸಾಗರ್. ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ. ನಿಗಪ್ಪ ಕುರಬರ, ಪ್ರಕಾಶ್ ಕೊರವರ್, ಕೈಲಾಶ್ ಗಜಕೋಷ್, ಸಂಕೇತ್ ಗೌಡರ್, ಶ್ರೀನಿವಾಸ್ ಹುಲಗೂರ್ ಸೇರಿ ಹಲವರು ಹಾಜರಿದ್ದರು.

error: Content is protected !!