ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾರೀ ಗಾಳಿ ಮಳೆಗೆ ಮಲೆನಾಡು ಭಾಗ ಸಂಪೂರ್ಣ ತತ್ತರಿಸಿದೆ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಲ್ಲೇಲ್ಲಿ..? ಜಿಲ್ಲೆಯ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಮುಂಡಗೋಡ ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ 3 ದಿನಗಳಲ್ಲಿ ಸಿದ್ದಾಪುರ ತಾಲೂಕು ಒಂದರಲ್ಲೇ ಸುಮಾರು 375 ಮಿಲಿಮಿಟರ್ ಮಳೆ ದಾಖಲಾಗಿದೆ. ಅದ್ರಲ್ಲೂ ನಿನ್ನೆ ರಾತ್ರಿಯಿಂದ ಸಿದ್ದಾಪುರದಲ್ಲಿ 142.4 ಮಿಲಿಮಿಟರ್ ಮಳೆ ದಾಖಲಾಗಿದೆ. ಧರೆಗುರುಳಿದ ವಿದ್ಯುತ್ ಕಂಬಗಳು..! ಜಿಲ್ಲೆಯ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!
ಮುಂಡಗೋಡ: ತಾಲೂಕಿನಾಧ್ಯಂತ ಮಳೆರಾಯನ ಅರ್ಭಟ ಜೋರಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು, ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಸನವಳ್ಳಿ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ಮನೆಯ ಮುಂದೆ ಶೆಡ್ ನಲ್ಲಿ ನಿಂತಿದ್ದ ಟ್ರಾಕ್ಟರ್ ಮೇಲೆ ಮನೆಯ ಮೇಲ್ಚಾವಣಿ ಕಿಸಿದು ಬಿದ್ದಿದೆ. ಪರಿಣಾಮ ಟ್ರಾಕ್ಟರ್ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸನವಳ್ಳಿಯ ಶಿವಾನಂದ್ ನಾಗಪ್ಪ ಕೇರಿಹೊಲದವರ ಎಂಬುವರಿಗೆ ಸೇರಿದ ಟ್ರಾಕ್ಟರ್ ಇದಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಬಂದು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ. ಸೂಕ್ತ...
ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”
ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ...
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಾಟ: ಮೂವರು ಆರೋಪಿಗಳು ಅಂದರ್..!
ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಹಾನಗಲ್ ತಾಲೂಕಿನ ಮೌಲಾ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು. ಈ ಕುರಿತು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಡೇಲಕೊಪ್ಪ ಬಳಿ ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಶಿರಸಿ ರಸ್ತೆಯ ಹುಡೇಲಕೊಪ್ಪ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೊ ಪಿಕ್ ಅಪ್ ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ಅಟ್ಟಣಗಿಯ ರಾಜೇಶ್ ಚಲವಾದಿ(21) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಶ್ರೀಕಾಂತ್ ಅನ್ನೋ ಮತ್ತೋರ್ವ ಬೈಕ್ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಅಪಘಾತದ ತೀವ್ರತೆಗೆ ಬೊಲೆರೋ ಪಿಕ್...
ಕೊರೋನಾ 3 ನೇ ಅಲೆ ಅನ್ನೋದೇ ಶುದ್ಧ ಸುಳ್ಳು; ಅದು ಮಿಸ್ಸಿ ರೋಗ: ಸಚಿವ ಈಶ್ವರಪ್ಪ
ಶಿರಸಿ: ಕೊರೊನಾ 3 ನೇ ಅಲೆ ಬರುತ್ತೆ ಅನ್ನೋದು ಶುದ್ಧ ಸುಳ್ಳು. ಕೊರೊನಾ 3 ನೇ ಅಲೆ ಅಲ್ಲ ಅದು. ಅದೊಂದು ಮಿಸ್ಸಿ ಅನ್ನೋ ಕಾಯಿಲೆ. ಇದು ಉಸಿರಾಟ ಅಥವಾ ಸ್ಪರ್ಶದಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡೋದಿಲ್ಲ ಅಂತ ಶಿರಸಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ, ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮಕ್ಕಳಿಗೆ 3 ನೇ ಅಲೆಯಿಂದ ತೊಂದರೆಯಾಗುತ್ತೆ, 3 ನೇ ಅಲೆ ಭೀಕರವಾಗಿರಲಿದೆ ಅನ್ನೋದೆಲ್ಲ ಊಹಾಪೋಹ. ಇದು ಮಿಸ್ಸಿ ಅನ್ನೋ ಖಾಯಿಲೆ. ಇದು ಹರಡೋದಿಲ್ಲ. ಇದಕ್ಕೆ ಮಾಸ್ಕ್, ಸಾಮಾಜಿಕ ಅಂತರ ಇವ್ಯಾವುದರ...
ಮಳೆ ಬಂದ್ರೆ ಸಾಕು ಕೆರೆಯಂತಾಗತ್ತೆ ಬಂಕಾಪುರ ರಸ್ತೆ: ಅಧಿಕಾರಿಗಳೇ ಶಾಶ್ವತ ಕ್ರಮ ಕೈಗೊಳ್ಳಲು ಇನ್ನೇಷ್ಟು ದಿನ ಬೇಕು..?
ಮುಂಡಗೋಡ: ಪಟ್ಟಣದಲ್ಲಿ ಮಳೆ ಬಂದ್ರೆ ಸಾಕು ಬಂಕಾಪುರ ರಸ್ತೆಯ ಜನ ಅಂಗೈಯಲ್ಲಿ ಜೀವ ಹಿಡಿದು ಬದುಕುವ ಸ್ಥಿತಿ ಇದೆ. ಪ್ರತೀ ವರ್ಷವೂ ಇಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಹಿಡಿಶಾಪ ಹಾಕುವುದು ಬಿಟ್ಟರೆ ಬೇರೆ ಏನೂ ಮಾಡಲು ಸಾಧ್ಯವಾಗ್ತಿಲ್ಲ. ಹೌದು ನಿನ್ನೆಯಿಂದ ತಾಲೂಕಿನಲ್ಲಿ ಭಾರೀ ಮಳೆಯಾಗ್ತಿದೆ. ಮುಂಡಗೋಡ ಪಟ್ಟಣದಲ್ಲೂ ಮಳೆರಾಯನ ಅರ್ಭಟ ನಿಂತಿಲ್ಲ. ಹೀಗಾಗಿ ಮಳೆರಾಯ ಮುಂಡಗೋಡ ಮಂದಿಗೆ ಇನ್ನಿಲ್ಲದ ಕಿರಿಕಿರಿ ತಂದಿಟ್ಟಿದ್ದಾನೆ. ಅದ್ರಲ್ಲೂ ಪಟ್ಟಣದ ಬಂಕಾಪುರ ರಸ್ತೆಯ ಜನರ ಗೋಳು ಹೇಳತೀರದ್ದು. ಯಾಕಂದ್ರೆ ಇಲ್ಲಿ ಒಂದು ಜೋರು ಮಳೆ...
ತೋಟಕ್ಕೆ ಹಾಕಿದ್ದ ವಿದ್ಯುತ್ ಬೇಲಿಗೆ ತಾಗಿ ವ್ಯಕ್ತಿ ದಾರುಣ ಸಾವು..!
ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ. ಲವ ಗೌಡ (38) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಾಡು ಪ್ರಾಣಿ ಹಾವಳಿಯಿಂದ ತೋಟವನ್ನು ರಕ್ಷಿಸಿಕೊಳ್ಳುವ ಉದ್ದೇಶಕ್ಕೆ ಹಾಕಿದ್ದ ಐಬೇಕ್ಸ್ ಬೇಲಿಗೆ ತಗುಲಿ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









