Home ಉತ್ತರ ಕನ್ನಡ

Category: ಉತ್ತರ ಕನ್ನಡ

Post

ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ದಿನಸಿ ವಿತರಣೆ..! ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..!!

ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿದ್ದ ಸುದ್ದಿ ಗುರುವಾರ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರವಾಗಿತ್ತು.. ಅಂತಹದ್ದೊಂದು ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ತಾಲೂಕಿನ ಹಲವು ಹೃದಯವಂತರು ಸ್ಪಂಧಿಸಿದ್ದಾರೆ.. ಟಿಬೇಟಿಯನ್ ಕರ್ಮಾ ಪೌಂಡೇಶನ್ ವತಿಯಿಂದ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಆಂದ್ರ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿದ್ದಾರೆ.. ಅಂದಹಾಗೆ, ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬ, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು...

Post

ಹಳಿಯಾಳ: ಗುಂಡಳ್ಳಿ ಗ್ರಾಪಂ ವ್ಯಾಪ್ತಿಯ ತಾಂಡಾದಲ್ಲಿ ಮಾಸ್ಕ್ ಸ್ಯಾನಿಟೈಸರ್ ವಿತರಣೆ..!

ಹಳಿಯಾಳ: ತಾಲೂಕಿನ ಗುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಮಾಸ್ಕ್, ಸ್ಯಾನಿಟೈಸರ್, ದಿನನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನಿಲ್ ಹೆಗಡೆಯವರ ಸಲಹೆ ಮೇರೆಗೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಎಂ.ಪಾಟೀಲ್ ಹಾಗೂ ಪಂಚಾಯತಿ ಸದಸ್ಯೆ ಪುಷ್ಪಾ ಪಾಟೀಲ್ ವಾರ್ಡಿನ ಜನರಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಿಸಿದ್ರು.. ಅತಿಹೆಚ್ಚು ಕೂಲಿ ಕಾರ್ಮಿಕರು, ದಲಿತರು, ಲಂಬಾಣಿಗಳು ವಾಸಿಸುತ್ತಿರುವ ಗುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಜನರಿಗೆ ವಿತರಿಸಿದ್ರು.. ಈ...

Post

ಮುಂಡಗೋಡಿಗೆ ದೇಶಪಾಂಡೆಯವರ ಗಿಫ್ಟ್..! PPE ಕಿಟ್, ಔಷಧಿ, ಮಾಸ್ಕ್, ಅಂಬ್ಯುಲೆನ್ಸ್ ಹಸ್ತಾಂತರ..!

ಮುಂಡಗೋಡ-ತಹಶೀಲ್ದಾರ ಕಚೇರಿ ಆವರಣದಲ್ಲಿ ಇಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ, ಹಾಗೂ ಅವರ ಪುತ್ರ ಪ್ರಶಾಂತ್ ದೇಶಪಾಂಡೆ, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿಗೆ ಹಲವು ಸೌಲಭ್ಯಗಳನ್ನು ಒದಗಿಸಿದ್ರು.. ಮುಂಡಗೋಡ ತಾಲೂಕಿನ ತಹಶಿಲ್ದಾರ್ ಶ್ರೀಧರ್ ಮುಂದಲಮನಿಯವರ ಮೂಲಕ 500 ಔಷಧಿ ಕಿಟ್, ಹಾಗೂ 320 ಆಕ್ಸಿ ಮೀಟರ್, 500 n95 ಮಾಸ್ಕ್, 250 ಪಿಪಿಇ ಕಿಟ್ ಹಾಗೂ 1 ಉಚಿತ ಅಂಬ್ಯುಲೆನ್ಸ್ ವಾಹನ ಹಸ್ತಾಂತರಿಸಿದ್ರು.. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ದೇಶಪಾಂಡೆ,...

Post

ಮುಂಡಗೋಡ: 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ..!

ಮುಂಡಗೋಡ- ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು..! ಬೆಳಿಗ್ಗೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯಾ ವ್ಯಾಪ್ತಿಯ ಗ್ರಾಮಗಳ 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದರು.. ತಮ್ಮ ವಿಕಲಚೇತನದ ಗುರುತಿನ ಪ್ರಮಾಣಪತ್ರ, ಆಧಾರ್ ಕಾರ್ಡ್ ನೊಂದಿಗೆ ಬಂದು 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದ್ರು.. ತಾಲೂಕಾಡಳಿತ ಶುಕ್ರವಾರದ ಇಡೀ ದಿನ ಮುಂಡಗೋಡ ತಾಲೂಕಿನಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನ...

Post
ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!

ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!

ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ...

Post

ಮಾಜಿ ಪಪಂ ಸದಸ್ಯ ಎಂ.ಕೆ. ಪಠಾಣ್ ಸ್ಮರಣಾರ್ಥ ಮಾಸ್ಕ್, ಸ್ಯಾನಿಟೈಸರ್ ವಿತರಣೆ..!

ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.! ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..

Post

ತಾಲೂಕಿಗೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸಿದ ಪ್ರಶಾಂತ್ ದೇಶಪಾಂಡೆ..!

ಮುಂಡಗೋಡ ತಾಲೂಕಿನ ಕೊರೋನಾ ಪೀಡಿತರ ಸಹಾಯಕ್ಕಾಗಿ ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದಾರೆ.. ಸುಸಜ್ಜಿತ ವ್ಯವಸ್ಥೆ ಇರೋ ಅಂಬ್ಯುಲೆನ್ಸ್ ವಾಹನವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ನೀಡುತ್ತಿದ್ದಾರೆ.. ತಾಲೂಕಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಚಿಕಿತ್ಸೆಗಾಗಿ ಕರೆದೊಯ್ಯಲು ಅಂಬ್ಯುಲೆನ್ಸ್ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನರಿತ ಪ್ರಶಾಂತ್ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದು ಸಮಯೋಚಿತವಾಗಿದೆ ಅಂತಾ ಜನರ ಅಭಿಪ್ರಾಯವಾಗಿದೆ..

Post

ಕಾರ್ಮಿಕರು ಹಾಗೂ ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಿದ್ದಂತೆ- ಶಿವರಾಮ್ ಹೆಬ್ಬಾರ್

ಬೆಂಗಳೂರು : ಕಾರ್ಮಿಕರು ಮತ್ತು ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಂತೆ ಕಾರ್ಯ ನಿರ್ವಹಿಸಿ, ಕೋವಿಡ್ ಮುಕ್ತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು. ಬೆಂಗಳೂರಿನ CRDEI ಪ್ರೆಸ್ಟೀಜ್ ಗ್ರೂಫ್, ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಇವರ ಸಹಭಾಗಿತ್ವದಲ್ಲಿ ಬೆಂಗಳೂರು ನಗರದಲ್ಲಿ ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸುವ ಅವರವರ ಸ್ಥಳಗಳಲ್ಲಿಯೇ, ಅವರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವ್ರು ಮಾತಾನಾಡುತ್ತಿದ್ರು. ಕಾರ್ಮಿಕರಿಗೆ...

Post
ಚೌಡಳ್ಳಿ ಗ್ರಾಮದ ಗೋಸಾವಿ ಜನಾಂಗದವ್ರಿಗೆ ಆಹಾರ ನೀಡಿದ ಬಸಯ್ಯಸ್ವಾಮಿ..!

ಚೌಡಳ್ಳಿ ಗ್ರಾಮದ ಗೋಸಾವಿ ಜನಾಂಗದವ್ರಿಗೆ ಆಹಾರ ನೀಡಿದ ಬಸಯ್ಯಸ್ವಾಮಿ..!

ಮುಂಡಗೋಡ- ತಾಲೂಕಿನ ಚೌಡಳ್ಳಿ ಗ್ರಾಮದ ಬಸವನಗರ ಪ್ಲಾಟ್ ನಲ್ಲಿ ಇರುವ ಗೋಸಾವಿ ಜನಾಂಗದವರು ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿದ್ದಾರೆ.. ಹೀಗಾಗಿ ಇಂದು ಈ ಕುಟುಂಬಗಳಿಗೆ, ಬಸಯ್ಯಸ್ವಾಮಿ ಹಿರೇಮಠ ಕುಟುಂಬದವರು, ಸಂಕಷ್ಟದಲ್ಲಿದ್ದ ಸುಮಾರು 300 ಜನರಿಗೆ ಆಹಾರದ ವ್ಯವಸ್ಥೆ ಮಾಡಿದ್ರು.. ಪ್ರತಿಯೊಂದು ಕುಟುಂಬಕ್ಕೂ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.. ಹೀಗಾಗಿ ಈ ಕುಟುಂಬದವರ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ..

Post
ರಾಜ್ಯದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನಿಶ್ಚಿತ..!

ರಾಜ್ಯದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನಿಶ್ಚಿತ..!

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದ್ರೆ ಮಹಾಮಾರಿ ನಿತ್ಯವೂ ಮರಣ ಮೃದಂಗವನ್ನು ಬಾರಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೂ ಲಾಕ್ ಡೌನ್ ಫಿಕ್ಸ್ ಆಗುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.. ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅರ್ಧ ಲಕ್ಷದಷ್ಟು ಸೋಂಕು ಪತ್ತೆಯಾಗುತ್ತಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿತ್ತು. ಲಾಕ್ ಡೌನ್ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕೊಂಚ ಇಳಿಕೆ ಕಾಣುತ್ತಿದೆ. ರಾಜ್ಯದಲ್ಲೀಗ ಸರಿಸುಮಾರು 25 ಸಾವಿರದಷ್ಟು ಸೋಂಕು ಪತ್ತೆಯಾಗುತ್ತಿದೆ. ಆದರೆ...

error: Content is protected !!