Home ರಾಜ್ಯ

Category: ರಾಜ್ಯ

Post
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

 ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...

Post
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌..!

ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌..!

ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್‌ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹಿನ್ನೆಲೆ ಗಾಯಕ ಸೋನು...

Post
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...

Post
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ

ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ

ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ...

Post
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!

ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ...

Post
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ..!

ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ..!

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ,...

Post
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!...

Post
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ

ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ

ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಜಿಲ್ಲೆಗಳಾದ...

Post
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!

ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!

ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು...

Post
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

ಹುಬ್ಬಳ್ಳಿ: ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.  ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಭಾರತ ಕೊಡುತ್ತದೆ...

error: Content is protected !!