Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...
Top Stories
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
Category: ಅನ್ನದಾತನ ಅಂಕಣ
ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ
Agriculture News; ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ...
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ...
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಬಹುದೊಡ್ಡ ಸ್ಥಾನ ಪಡದಿದ್ದಾನೆ “ಮಹಾರಾಜ”ನಂತೆ ಘರ್ಜಿಸಿದ್ದಾನೆ..! ಯಸ್, ಅವನು ಹೋರಿ ಅಭಿಮಾನಿಗಳ ಪಾಲಿನ ಮಹಾದಂಡನಾಯಕ.. ಆತನಿಗೆ ಮುಂಡಗೋಡ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ...
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!
ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ...
ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ...









