Home ಅಪಘಾತ

Category: ಅಪಘಾತ

Post
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!

ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!

ಮುಂಡಗೋಡ ತಾಲೂಕು ಕಾತೂರಿನ ಆಲಳ್ಳಿ ರಸ್ತೆ ಪಕ್ಕದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ನಂದಿಪುರ ಗ್ರಾಮದ ಮಾರುತಿ ಕರಿಯಪ್ಪ ತಳವಾರ (26) ಎಂದು ಗುರುತಿಸಲಾಗಿದೆ. ಘಟನೆ ನಿನ್ನೆ ಸಂಜೆ ನಡೆದಿದ್ದು, ಮಾರುತಿ ಕಾತೂರಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ‘ಕಾತೂರಿಗೆ ಹೋಗಿ ಬರ್ತೀನಿ’ ಎಂದು ಮನೆಯಿಂದ ಹೊರಟಿದ್ದ ಮಾರುತಿ, ಬಳಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಸುದ್ದಿ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ. ಮಾರುತಿ ಉಡುಪಿಯ...

Post
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!

ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!

​ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಕ್ರಾಸ್ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ​ಹಾನಗಲ್ ತಾಲೂಕಿನ ಅಕ್ಕಿಆಲೂರು ಮೂಲದ ಮಹ್ಮದಗೌಸ್ ಇಸ್ಮಾಯಿಲ್ ಸಾಬ್ ಸವಣೂರು ಹಾಗೂ ಹಿಂಬದಿ ಸವಾರ ಮುಜರಮಿಲ್ ಗಾಯಗೊಂಡ ದುರ್ದೈವಿಗಳು. ಇವರಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಮುಜರಮಿಲ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಹೇಗಾಯ್ತು..? ಶಿರಸಿ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಮುಂಡಗೋಡ ಕಡೆಯಿಂದ ಲಕ್ಕೊಳ್ಳಿ...

Post
ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!

ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!

 ಮುಂಡಗೋಡ ತಾಲೂಕಿನ ಕಾವಲಕೊಪ್ಪ ತಿರುವಿನಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹಾನಗಲ್ ನಿಂದ ಮುಂಡಗೋಡಿಗೆ ಬರುತ್ತಿದ್ದ ಬಸ್ ಹಾಗೂ ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಭೀಕರ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಗಳು ನಜ್ಜು ಗುಜ್ಜಾಗಿವೆ. ಬಸ್ ಚಾಲಕ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು,...

Post
ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!

ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!

 ಯಲ್ಲಾಪುರ: ತಾಲೂಕಿನ ಅರತಿಬೈಲ್ ಘಾಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ​ಜಿಲ್ಲಾಧಿಕಾರಿ (ಡಿಸಿ) ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ದೀಪನ್ ಎಂ.ಎನ್., ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಸೇರಿದಂತೆ ಪ್ರಮುಖ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತ್ತಿರದಿಂದ ಅವಲೋಕಿಸಿದೆ. ​ಪ್ರವಾಸಕ್ಕೆ ಹೊರಟಿದ್ದವರು ಮಸಣಕ್ಕೆ.! ​ಧಾರವಾಡ ಮೂಲದ 9 ಜನರ ತಂಡವೊಂದು ಕ್ರೂಸರ್ ವಾಹನದಲ್ಲಿ...

Post
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!

ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!

 ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್..! ​ಧಾರವಾಡ ಮೂಲದ ಒಂಬತ್ತು ಮಂದಿ ಕ್ರೂಸರ್ ವಾಹನದಲ್ಲಿ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಿ ಎದುರಿನಿಂದ ಬಂದ ಲಾರಿಯೊಂದಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ...

Post
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್‌ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!

ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್‌ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!

ಕಾರನ್ನು ಓವರ್‌ಟೇಕ್ ಮಾಡಲು ಹೋಗಿ ಸ್ಕೂಟಿಯೊಂದು ಎದುರಿನಿಂದ ಬಂದ ಕೆಎಸ್ಆರ್‌ಟಿಸಿ (KSRTC) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ದುರ್ಘಟನೆ ರವಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ-52ರ ಚಿಕ್ಕಮಾವಳ್ಳಿ ಕ್ರಾಸ್ ಬಳಿ ನಡೆದಿದೆ. ​ಹಳೆ ಹುಬ್ಬಳ್ಳಿ ನಿವಾಸಿಗಳಾದ ಮಂಜುನಾಥ (27) ಹಾಗೂ ಸುಮೀತ್ (18) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ​ಅಪಘಾತ ನಡೆದಿದ್ದು ಹೇಗೆ? ​ಕಾರವಾರದಿಂದ ಸಿಂಧನೂರಿಗೆ ತೆರಳಿ ಮರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ (ನೊಂದಣಿ ಸಂಖ್ಯೆ: KA-31 F-1664) ಚಿಕ್ಕಮಾವಳ್ಳಿ ಕ್ರಾಸ್...

Post
ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ

ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ

ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮದ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ಜೋಗೇಶ್ವರ ಹಳ್ಳದ ವೃದ್ಧನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ​ಜೋಗೇಶ್ವರಹಳ್ಳದ ನಿವಾಸಿ ಮುರುಗಯ್ಯ ಚನ್ನವೀರಯ್ಯ ಹಿರೇಮಠ (63) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮಗ ಹೇಳೋ ಪ್ರಕಾರ ಏನಾಯ್ತು..? ​ಮೃತರ ಮಗನಾದ ನಾಗರಾಜ ಮುರುಗಯ್ಯ ಹಿರೇಮಠ (30) ಅವರು ಮುಂಡಗೋಡ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ಅವರ ತಂದೆ ಮುರುಗಯ್ಯನವರು ದಿನಾಂಕ 04/07/2026 ರಂದು ರಾತ್ರಿ 09:00 ಗಂಟೆಗೆ ಮನೆಯ ಹಿತ್ತಲಿನಲ್ಲಿ ಮಲಗಿಕೊಂಡಿದ್ದರು. ಆದರೆ, ದಿನಾಂಕ...

Post
ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!

ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!

ಅಂಕೋಲಾ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಾಲೂಕಿನ ವರದರಾಜ್ ಹೋಟೆಲ್ ಸಮೀಪ ನಡೆದಿದೆ. ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವರನ್ನು ಎಸ್ಕಾರ್ಟ್ ಮಾಡಿಕೊಂಡು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿ ಸವಾರ, ಅಲಗೇರಿ ಮೂಲದ ಸಂದೀಪ್ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸಚಿವ ಯು.ಟಿ. ಖಾದರ್ ಅವರು ವಾಹನ ನಿಲ್ಲಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿ,...

Post
ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿ..? ದೇವರಿಗಂತ ಹೂವು ಕೀಳಲು ಹೋದ ಪೂಜಾರಿ ಹೆಣವಾದ..! ಶಾಲಾ ಆವರಣದ ಬೇಲಿಯಲ್ಲೇ ವಿದ್ಯುತ್..!

ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿ..? ದೇವರಿಗಂತ ಹೂವು ಕೀಳಲು ಹೋದ ಪೂಜಾರಿ ಹೆಣವಾದ..! ಶಾಲಾ ಆವರಣದ ಬೇಲಿಯಲ್ಲೇ ವಿದ್ಯುತ್..!

ಮುಂಡಗೋಡ ತಾಲೂಕಿನ ಜೋಗೀಶ್ವರ ಹಳ್ಳ ಗೌಳಿದಡ್ಡಿಯಲ್ಲಿ ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿಯಾದ್ನಾ..? ಅನ್ನೋ ಪ್ರಶ್ನೆ ಮೂಡಿದೆ. ಹೂವು ಕೀಳಲು ಶಾಲಾ ಆವರಣಕ್ಕೆ ಹೋದವನು ಹೆಣವಾಗಿದ್ದಾನೆ. ಕಿರಿಯ ಪ್ರಾಥಮಿಕ ಶಾಲೆಯ ತಂತಿ ಬೇಲಿ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಅಂತಾ ಗ್ರಾಮಸ್ಥರು ಹೇಳ್ತಿದಾರೆ. ಅರ್ಥಾತ್‌, ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲೇ ಘಟನೆ ನಡೆದಿದ್ದು ಭಾರೀ ಆತಂಕಕ್ಕೆ ಕಾರಣವಾಗಿದೆ. ಜೋಗೇಶ್ವರ ಹಳ್ಳ ಗೌಳಿ ದಡ್ಡಿಯ ಈಶ್ವರ ದೇವಸ್ಥಾನದ ಪೂಜಾರಿ, ಜಾನು ಸಾವು ಕೋಕರೆ (26) ಎಂಬುವವನೇ...

Post
ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!

ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!

 ಮುಂಡಗೋಡ ತಾಲೂಕಿನ ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯವಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು KSRTC ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದಿದ್ದಾರೆ. ಇನ್ನು, ಮಳಗಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯೂಸಿ ವಿದ್ಯಾರ್ಥಿನಿ ಮಂಜುಳಾ ವಿಠ್ಠಲ ಗಾವಡೆ ಎಂಬುವವಳೆ ಗಾಯಗೊಂಡಿರೋ ವಿದ್ಯಾರ್ಥಿನಿಯಾಗಿದ್ದಾಳೆ. ಅಸಲು, ತುಂಬಿ ತುಳುಕುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿಗಳು ಹತ್ತುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿ ಬಸ್ ನಿಂದ ಕೆಳಗೆ ಬಿದ್ದಿದ್ದಾಳೆ. ನಂತರ ಬಸ್...